ರಾಜ್ಯ

ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೃತ್ಯು !

ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೀನುಗಾರರು ಮೃತಪಟ್ಟ ಘಟನೆ ಶಿರೂರು ಕಳುವಿಷ್ಣುವಿನಲ್ಲಿ ನಡೆದಿದೆ. ಹಡವಿನಕೋಣೆ ಶಿರೂರಿನ ಅಬ್ದುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಟಾಯೂಸುಫ್ (48) ಮೃತಪಟ್ಟವರು ಎಂದು ಗುರತಿಸಲಾಗಿದೆ. ಶಿರೂರು ಕಳುಹಿತ್ತುವಿನಿಂದ ಮೀನುಗಾರಿಕೆ ತೆರಳಿದ್ದ ಮೂರು ಜನ ಮೀನುಗಾರರು ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುವಾಗ ಮುಂಜಾನೆ ವೇಳೆಗೆ ಶಿರೂರು ಕಳುಹಿತ್ತು ಅಳಿವೆ ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಬುಡ್ಡು ಮುಖಾರ್ […]

ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೃತ್ಯು ! Read More »

ರೈತರ ಬೆಳೆಸಾಲ ಬಡ್ಡಿ ಮನ್ನಾ | ಬೆಳಗಾವಿ ಅಧಿವೇಶನದಲ್ಲಿ ಸಿಎಂ ಘೋಷಣೆ

ಬೆಳಗಾವಿ: ಕೃಷಿ ಸಾಲವನ್ನು ಪಡಕೊಂಡು ಅಸಲನ್ನು ಮರುಪಾವತಿ ಮಾಡುವವರಿಗೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕಲಾಪದಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಈ ವಿಚಾರ ತಿಳಿಸಿದರು. ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತೇವೆ. ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ

ರೈತರ ಬೆಳೆಸಾಲ ಬಡ್ಡಿ ಮನ್ನಾ | ಬೆಳಗಾವಿ ಅಧಿವೇಶನದಲ್ಲಿ ಸಿಎಂ ಘೋಷಣೆ Read More »

ಸಂಸತ್ ದಾಳಿಕೋರ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ! | ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ಪ್ರತಿಭಟನೆ!!

ಬುಧವಾರ ಸಂಸತ್ ಮೇಲೆ ದಾಳಿ ನಡೆಸಿದ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೈಸೂರು ಮೂಲದ ಮನೋರಂಜನ್ ಸಹಿತ ಇತರ ನಾಲ್ವರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಆರು ಮಂದಿಯ ಬೇರೆ ಬೇರೆ ರಾಜ್ಯದವರಾಗಿರುವುದರಿಂದ ಯಾವುದೋ ಉದ್ದೇಶವಿಟ್ಟುಕೊಂಡೇ ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇವರ ಹಿಂದಿರುವವರ್ಯಾರು ಎಂಬ ಹಿನ್ನೆಲೆಯಲ್ಲೂ ಚರ್ಚೆ ನಡೆಯುತ್ತಿದ್ದು, ತನಿಖೆ ನಡೆಯುತ್ತಿದೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರ ಬಂಧನಕ್ಕೆ ಆಗ್ರಹಿಸಿ ಮೈಸೂರಿನ ಅವರ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಯುವ ಕಾಂಗ್ರೆಸ್

ಸಂಸತ್ ದಾಳಿಕೋರ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ! | ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ಪ್ರತಿಭಟನೆ!! Read More »

ಕುಕ್ಕೆ ಕ್ಷೇತ್ರಕ್ಕೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್,

ಕುಕ್ಕೆ ಕ್ಷೇತ್ರಕ್ಕೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ Read More »

ದೇಹದ ಮುಕ್ಕಾಲು ಭಾಗ ತಿಂದ ನರಭಕ್ಷಕ ಹುಲಿ!!

ಹುಲಿ ದಾಳಿಗೆ ಸಿಲುಕಿದ ವ್ಯಕ್ತಿಯೋರ್ವನ ಮೃತದೇಹ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಆಡಿನ ಕಣಿವೆ ಸಮೀಪದಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಆಡಿನಕಣಿವೆಯ ಬಸವಯ್ಯ (54) ಮೃತ ವ್ಯಕ್ತಿ. ಬಸವಯ್ಯ ಬುಡಕಟ್ಟು ಜನಾಂಗಕ್ಕೆ ಸೇರಿದವನು. ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ. ನಂತರ ಮನೆಗೆ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಅಭಯಾರಣ್ಯದ ಒಳಗೆ ಮೃತದೇಹ ಪತ್ತೆಯಾಗಿದೆ. ಆತನ ಕಾಲು, ಎದೆಯ ಭಾಗವನ್ನು ಹುಲಿ ತಿಂದು ಹಾಕಿದ್ದು, ಕೇವಲ ಹೊಟ್ಟೆ ಭಾಗವನ್ನು ಮಾತ್ರ ಬಿಟ್ಟಿದೆ. ಮುಕ್ಕಾಲು

ದೇಹದ ಮುಕ್ಕಾಲು ಭಾಗ ತಿಂದ ನರಭಕ್ಷಕ ಹುಲಿ!! Read More »

ಜೆಸಿಬಿ ಏರಿದ ನವ ಜೋಡಿ! | ಕೋಳಿ ಅಂಕಕ್ಕೂ ಸಾಕ್ಷಿಯಾಯಿತು ಮದುವೆ!!

ಮದುವೆ ಮುಗಿದ ಮೇಲೆ ನವ ದಂಪತಿ ವರನ ಮನೆಗೆ ಹೋಗಲು ಕಾರು ಬದಲಾಗಿ ಜೆಸಿಬಿ ಅರೇಂಜ್‌ ಮಾಡಲಾಗಿತ್ತು. ಜೆಸಿಬಿಯ ಮುಂಭಾಗಕ್ಕೆ ವಧು – ವರರು ಕೂರುವಂತಹ ಆಸನವನ್ನು ಅಳವಡಿಸಿ, ಜೆಸಿಬಿಯನ್ನು ಹೂಗಳಿಂದ ಅಲಂಕೃತಗೊಳಿಸಿ ಕರೆದೊಯ್ಯಲಾಯಿತು. ರಸ್ತೆಯುದ್ದಕ್ಕೂ ನವ ದಂಪತಿಯ ಸ್ನೇಹಿತರು ಹುಲಿ ಕುಣಿತಕ್ಕೆ ಹೆಜ್ಜೆ ಹಾಕುತ್ತಾ ಸಾಥ್‌ ನೀಡಿದರು. ಬ್ರಹ್ಮಾವರದಲ್ಲಿ ನಡೆದ ಮಿಥುನ್‌ ಹಾಗೂ ಪೂಜಾ ಜೋಡಿಯ ವಿವಾಹ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು. ಮದುವೆ ಮಂಟಪದಲ್ಲಿಯೇ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕೋಳಿ ಅಂಕವೂ ನಡೆಯಿತು. ವಧು

ಜೆಸಿಬಿ ಏರಿದ ನವ ಜೋಡಿ! | ಕೋಳಿ ಅಂಕಕ್ಕೂ ಸಾಕ್ಷಿಯಾಯಿತು ಮದುವೆ!! Read More »

ಅನೈತಿಕ ಸಂಬಂಧಕ್ಕೆ ಅಡ್ಡಿ: ಪತ್ನಿಯ ಹತ್ಯೆಗೈದನೇ ಪತಿ?

ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಗೃಹಿಣಿ ಶ್ವೇತಾ (31) ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ದೈವಿ. ಮೃತ ಗೃಹಿಣಿ ಪೋಷಕರಿಂದ ಪತಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಪತ್ನಿ ಶ್ವೇತಾ ಮೃತಪಟ್ಟ ಬಳಿಕ ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಿದ್ದ ಪತಿ. ಆದರೆ ಮನೆಯವರಿಗೆ ಮಗಳ ಸಾವಿನ ಬಗ್ಗೆ ಅನುಮಾನಗೊಂಡು ಅಂತ್ಯಕ್ರಿಯೆ ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದರು. ಆರೋಗ್ಯವಾಗಿ ಮಗಳು ಸುಖಾಸುಮ್ಮನೆ ಸಾವಿಗೀಡಾಗಲು ಸಾಧ್ಯವಿಲ್ಲ. ನಮ್ಮ ಮಗಳಿಗೆ ಪಾಯಿಸನ್ ಇಂಜೆಕ್ಷನ್ ಚುಚ್ಚಿ

ಅನೈತಿಕ ಸಂಬಂಧಕ್ಕೆ ಅಡ್ಡಿ: ಪತ್ನಿಯ ಹತ್ಯೆಗೈದನೇ ಪತಿ? Read More »

ರಾಜಭವನಕ್ಕೂ ಬಂದ ಬಾಂಬ್ ಬೆದರಿಕೆ ಕರೆ!!

ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ. ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ. ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ 11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದುಬಂದಿದೆ. ಬೆದರಿಕೆ ಕರೆ ಬಂದ ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ

ರಾಜಭವನಕ್ಕೂ ಬಂದ ಬಾಂಬ್ ಬೆದರಿಕೆ ಕರೆ!! Read More »

ಇಬ್ಭಾಗವಾದ ಜೆ.ಡಿ.ಎಸ್.ಗೆ ಸಿ.ಕೆ. ನಾಣು ಅಧ್ಯಕ್ಷ!

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ  ಅವರಿಗೆ ಅಸಮಾಧಾನಿತ ಹಾಗೂ ಉಚ್ಛಾಟಿತ ನಾಯಕರು ಸೆಡ್ಡು ಹೊಡೆದಿದ್ದಾರೆ. ಸೋಮವಾರ ನಡೆದ ಸಭೆಯಲ್ಲಿ ಉಚ್ಛಾಟಿತ ನಾಯಕ ಸಿ.ಕೆ. ನಾಣು ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ. ಹಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಸಿ.ಎಂ. ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿ.ಕೆ. ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಿ.ಎಂ ಇಬ್ರಾಹಿಂ ಮಾಹಿತಿ ನೀಡಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ನೂತನ

ಇಬ್ಭಾಗವಾದ ಜೆ.ಡಿ.ಎಸ್.ಗೆ ಸಿ.ಕೆ. ನಾಣು ಅಧ್ಯಕ್ಷ! Read More »

ಬ್ರಹ್ಮಚಾರಿಗಳ ಸಂಘಕ್ಕೆ ರಾಷ್ಟ್ರಾಧ್ಯಕ್ಷರಾಗ್ತಾರಾ ರಾಹುಲ್ ಗಾಂಧಿ!?

ರೈತರ ಮಕ್ಕಳಿಗೆ ಹೆಣ್ಣು ಕೊಡದ ಕಾರಣಕ್ಕೆ ಬೇಸತ್ತು ಜನವರಿಯಲ್ಲಿ ಚುಂಚನಗಿರಿಗೆ ಪಾದಯಾತ್ರೆ ನಡೆಸಿ ಅರಿವು ಮೂಡಿಸಲು ಬ್ರಹ್ಮಚಾರಿ ಸಂಘ ಪ್ಲಾನ್ ಮಾಡುತ್ತಿದೆ. ಚುಂಚನಗಿರಿ ಪಾದಯಾತ್ರೆಗೆ ಈಗಾಗಲೇ ನೋಂದಣಿ ಆರಂಭವಾಗಿದೆ. ರಾಹುಲ್ ಗಾಂಧಿಗೆ ಆಹ್ವಾನ! ಈ ಪಾದಯಾತ್ರೆಗೆ ಇನ್ನೂ ಮದುವೆಯಾಗದ ಸಂಸದ ರಾಹುಲ್ ಗಾಂಧಿಯನ್ನು ಕರೆಸಲು ಚಿಂತನೆ ನಡೆಸಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಹ್ಮಚಾರಿಗಳ ಸಂಘದ ಪ್ರಮುಖರಾದ ಮಲ್ಲೇಶ್ ತಿಳಿಸಿದ್ದಾರೆ. ಅಲ್ಲದೇ, ವೀರೇಶ್ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಬ್ರಹ್ಮಚಾರಿಗಳಿಗೆ ಆಹ್ವಾನವನ್ನೂ ನೀಡಿದ್ದಾರೆ.

ಬ್ರಹ್ಮಚಾರಿಗಳ ಸಂಘಕ್ಕೆ ರಾಷ್ಟ್ರಾಧ್ಯಕ್ಷರಾಗ್ತಾರಾ ರಾಹುಲ್ ಗಾಂಧಿ!? Read More »

error: Content is protected !!
Scroll to Top