ರಾಜ್ಯ

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ | ಪ್ರಮುಖ ಆರೋಪಿಗಳ ಬಂಧನ

ಅಡ್ಯನಡ್ಕ: ಕರ್ನಾಟಕ ಬ್ಯಾಂಕ್‍ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ತನಿಖೆ ವೇಗ ಪಡೆದುಕೊಂಡಿದೆ. ಇದೀಗ ಪ್ರಮುಖ ಆರೋಪಿಯ ವಿಚಾರಣೆ ನಡೆಯುತ್ತಿದೆ. ತಾಂತ್ರಿಕ ತನಿಖೆ ಮೂಲಕ ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಿದ ಪೊಲೀಸರು ಪ್ರಮುಖ ಆರೋಪಿಗಳನ್ನು ಎರಡು ದಿನಗಳ ಹಿಂದೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಫೆ.7 ರಂದು ಬ್ಯಾಂಕ್ ಕಟ್ಟಡದ ಹಿಂಬಾಗಿಲಿನ ಕಿಟಕಿಯನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಭಾರೀ ಪ್ರಮಾಣದ ನಗ-ನಗದನ್ನು ದೋಚಿದ್ದರು. ಈ ಸಂದರ್ಭ ಕಾರ್ಯಪ್ರವೃತ್ತರಾದ ಪೊಲೀಸರು ಅನುಮಾನದ ಮೇಲೆ […]

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ | ಪ್ರಮುಖ ಆರೋಪಿಗಳ ಬಂಧನ Read More »

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ | ಕರ್ನಾಟಕ ರಾಜ್ಯಾದ್ಯಂತ 6,98,624 ಜನ ಪರೀಕ್ಷೆ ಬರೆಯಲಿದ್ದಾರೆ

ಬೆಂಗಳೂರು : ಇಂದಿನಿಂದ ಮಾ.22 ರವರೆಗೆ ರಾಜ್ಯಾದ್ಯಂತ ಈ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. .ಪರೀಕ್ಷೆಗಳನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಬಾರಿ ಕರ್ನಾಟಕ ರಾಜ್ಯಾದ್ಯಂತ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ | ಕರ್ನಾಟಕ ರಾಜ್ಯಾದ್ಯಂತ 6,98,624 ಜನ ಪರೀಕ್ಷೆ ಬರೆಯಲಿದ್ದಾರೆ Read More »

ಪಾಕಿಸ್ತಾನ ಬಿಜೆಪಿ ಗೆ ಶತ್ರುದೇಶ, ನಮಗಲ್ಲ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಬಿಜೆಪಿಗೆ ಪಾಕಿಸ್ತಾನವು ಶತ್ರು ದೇಶ ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್‌ ಸದಸ್ಯ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್‌ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ಬಿಜೆಪಿ ಪ್ರಕಾರ

ಪಾಕಿಸ್ತಾನ ಬಿಜೆಪಿ ಗೆ ಶತ್ರುದೇಶ, ನಮಗಲ್ಲ : ಬಿ.ಕೆ.ಹರಿಪ್ರಸಾದ್ Read More »

ಜಾತಿ ಗಣತಿ ವರದಿ ಇಂದು ಸಲ್ಲಿಕೆ | ರಾಜಕೀಯ ಬಿರುಗಾಳಿ ಎಬ್ಬಿಸುವ ನಿರೀಕ್ಷೆ

ಬೆಂಗಳೂರು : ಬಹುಕಾಲದಿಂದ ನಿರೀಕ್ಷಿಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿ ಇಂದು ಸರಕಾರಕ್ಕೆ ಸಲ್ಲಿಕೆಯಾಗಲಿದೆ. ವರದಿಯನ್ನು ಗುರುವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದ್ದಾರೆ. ಈ ವರದಿಗೆ ಒಕ್ಕಲಿಗ, ಲಿಂಗಾಯತ ಸೇರಿ ಕೆಲವು ಸಮುದಾಯದ ವಿರೋಧ ಇರುವುದರಿಂದ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಬಹುದು ಎಂಬ ನಿರೀಕ್ಷೆ ಇದೆ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೇ ವರದಿಗೆ ಅಪಸ್ವರ ಎತ್ತಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಡುಗಡೆಯಾಗುವ

ಜಾತಿ ಗಣತಿ ವರದಿ ಇಂದು ಸಲ್ಲಿಕೆ | ರಾಜಕೀಯ ಬಿರುಗಾಳಿ ಎಬ್ಬಿಸುವ ನಿರೀಕ್ಷೆ Read More »

ಐ ಎ ಎಸ್ ಪರೀಕ್ಷೆಯನ್ನು ಕನ್ನಡದಲ್ಲೇ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗನಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು

ಖ್ಯಾತ ನಟ, ಮಾಜಿ ಐಎಎಸ್‌ ಅಧಿಕಾರಿ ಹಾಗೂ ರಾಜಕಾರಣಿ ಕೆ. ಶಿವರಾಂ ಅವರಿಗೆ ಹೃದಯಾಘಾತ ಸಂಭವಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವರಾಂ ಅವರ ಸ್ಥಿತಿ ಚಿಂತಾಜನಕವಾಗಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಎಚ್ ಸಿ ಜಿ ಆಸ್ಪತ್ರೆ ಯಲ್ಲಿ ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಶಿವರಾಂ ಅವರಿಗೆ ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಅನ್ನೋ ಮಾಹಿತಿ ಇದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಶಿವರಾಂ ಅಳಿಯ

ಐ ಎ ಎಸ್ ಪರೀಕ್ಷೆಯನ್ನು ಕನ್ನಡದಲ್ಲೇ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗನಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು Read More »

ಶತ್ರುದೇಶ ಪಾಕಿಸ್ಥಾನಕ್ಕೆ ಜಿಂದಾಬಾದ್ | ಬಜರಂಗದಳದಿಂದ ತೀವ್ರ ಖಂಡನೆ

ಬೆಂಗಳೂರು: ನಿನ್ನೆ ನಡೆದ ರಾಜ್ಯಸಭಾ ಚುಣಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವುದು ಹಾಗೂ ಇದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ನಿಂದಿಸಿರುವುದನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಇಂತಹ ಬೆಳವಣಿಗೆಗಳು ದೇಶಕ್ಕೆ ಅಪಾಯಕಾರಿಯಾಗಿದ್ದು, ನಾಸೀರ್ ಹುಸೇನ್ ನ ರಾಜ್ಯಸಭಾ ಸದಸ್ಯತ್ವವನ್ನು ರದ್ದು ಮಾಡಬೇಕು. ಅಲ್ಲದೆ ಶತ್ರುದೇಶಕ್ಕೆ ಜೈಕಾರ ಕೂಗಿದವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ.

ಶತ್ರುದೇಶ ಪಾಕಿಸ್ಥಾನಕ್ಕೆ ಜಿಂದಾಬಾದ್ | ಬಜರಂಗದಳದಿಂದ ತೀವ್ರ ಖಂಡನೆ Read More »

ಭಾರತ ಸಂವಿಧಾನ ಕುರಿತು ಭಾಷಣ ಮಾಡಲು ಬಂದ ಪಾಕಿಸ್ತಾನಿ ಯುವತಿ | ಹಿಂದಕ್ಕೆ ಕಳುಹಿಸಿ ಭದ್ರತಾ ಪಡೆ

ಭಾರತ ಸಂವಿಧಾನ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್ ರನ್ನು ಕೇಂದ್ರೀಯ ಭದ್ರತಾ ಪಡೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹಿಂದೆ ಕಳುಹಿಸಿದ ಘಟನೆ ನಡೆದಿದೆ. ಕರ್ನಾಟಕ ಕಾಂಗ್ರೆಸ್ ಸರಕಾರದ ಆಮಂತ್ರಣದಂತೆ ಭಾರತದ ಸಂವಿಧಾನದ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶದಂತೆ ಕೇಂದ್ರೀಯ ಭದ್ರಾತಾ ಪಡೆ, ಬೆಂಗಳೂರು ವಿಮಾನನಿಲ್ದಾಣ ದಿಂದ ಪಾಕಿಸ್ತಾನಕ್ಕೆ ಹಿಂದೆ ಕಳಿಸಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರ, ಸರಕಾರಿ ಇಂತಹಾ ಜಿಹಾದಿಗಳನ್ನು

ಭಾರತ ಸಂವಿಧಾನ ಕುರಿತು ಭಾಷಣ ಮಾಡಲು ಬಂದ ಪಾಕಿಸ್ತಾನಿ ಯುವತಿ | ಹಿಂದಕ್ಕೆ ಕಳುಹಿಸಿ ಭದ್ರತಾ ಪಡೆ Read More »

ಶಿವಸೇನೆ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಮಹಾರಾಷ್ಟ್ರ: ಶಿವಸೇನೆಯ ಹಿರಿಯ ನಾಯಕ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಇಂದು ವಿಧಿವಶರಾಗಿದ್ದಾರೆ. ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ನಸುಕಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಶಿವಸೇನೆ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ Read More »

‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಚಾರಿಟೇಬಲ್ ಎಂಡೋಮೆಂಟ್ ಬಿಲ್-2024’ ವಿಧೇಯಕ ಅಂಗೀಕಾರಕ್ಕೆ ಬಿಜೆಪಿ ವಿರೋಧ | ದೇವಸ್ಥಾನದ ವ್ಯವಸ್ಥಾಪಕ ಸಮಿತಿಯಲ್ಲಿ ಇತರ ಧರ್ಮದವರ ನೇಮಕಾತಿ ರದ್ದುಪಡಿಸದಿದ್ದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ: ಮೋಹನ ಗೌಡ

ಬೆಂಗಳೂರು:  ರಾಜ್ಯ ಸರಕಾರವು ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಚಾರಿಟೇಬಲ್ ಎಂಡೋಮೆಂಟ್ ಬಿಲ್ 2024’ ಅಂಗೀಕರಿಸಿದ್ದು, ಈ ವಿಧೇಯಕ ಸರಕಾರಕ್ಕೆ ದೇವಸ್ಥಾನದಿಂದ ತೆರಿಗೆ ವಸೂಲಿ ಮಾಡುವ ಅಧಿಕಾರ ನೀಡುತ್ತದೆ. ಈ ವಿಧೇಯಕದ ಪ್ರಕಾರ ಹಿಂದೂ ದೇವಸ್ಥಾನದ ಆದಾಯ 1 ಕೋಟಿ ರೂಪಾಯಿ ಇದ್ದರೆ ಆಗ ಸರಕಾರ ಅದರ ಮೇಲೆ ಶೇಕಡ 10 ರಷ್ಟು ತೆರಿಗೆ ವಿಧಿಸುವುದು ಮತ್ತು ಅದರ ಆದಾಯ ಒಂದು ಕೋಟಿಗಿಂತಲೂ ಕಡಿಮೆ ಆದರೆ, 10 ಲಕ್ಷ ರೂಪಾಯಿಗಿಂತ ಹೆಚ್ಚು ಇದ್ದರೆ ಅವರಿಗೆ ಸರಕಾರ

‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಚಾರಿಟೇಬಲ್ ಎಂಡೋಮೆಂಟ್ ಬಿಲ್-2024’ ವಿಧೇಯಕ ಅಂಗೀಕಾರಕ್ಕೆ ಬಿಜೆಪಿ ವಿರೋಧ | ದೇವಸ್ಥಾನದ ವ್ಯವಸ್ಥಾಪಕ ಸಮಿತಿಯಲ್ಲಿ ಇತರ ಧರ್ಮದವರ ನೇಮಕಾತಿ ರದ್ದುಪಡಿಸದಿದ್ದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ: ಮೋಹನ ಗೌಡ Read More »

25ನೇ ಕಲಂನಲ್ಲಿ ಹಿಂದೂ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡುವ ಕುರಿತ ತಿದ್ದುಪಡಿ ಖಂಡನೀಯ | ದೇವಸ್ಥಾನಗಳ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತರ: ಶಾಂತಾಶ್ರಮದ ಮಠಾಧಿಪತಿ ವಾಮನಾಶ್ರಮ ಮಹಾಸ್ವಾಮೀಜಿ

ಕುಮಟಾ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2024 ಕರ್ನಾಟಕ ರಾಜ್ಯ ಪತ್ರಿಕೆಯನ್ನು ಹೊರಡಿಸಿದ್ದು, 25 ನೇ ಕಲಂನಲ್ಲಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡುವ ಕುರಿತು ತಿದ್ದುಪಡಿ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ. ಇದು ದೇವಸ್ಥಾನಗಳಲ್ಲಿ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರನ್ನು ಸೇರಿಸಿ ದೇವಸ್ಥಾನಗಳ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತ್ರವಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಕರ್ನಾಟಕ ಸರಕಾರವು 16 ನೇ ವಿಧಾನಸಭೆಯ 3 ನೇ ಅಧಿವೇಶನದಲ್ಲಿ ಈ

25ನೇ ಕಲಂನಲ್ಲಿ ಹಿಂದೂ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡುವ ಕುರಿತ ತಿದ್ದುಪಡಿ ಖಂಡನೀಯ | ದೇವಸ್ಥಾನಗಳ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತರ: ಶಾಂತಾಶ್ರಮದ ಮಠಾಧಿಪತಿ ವಾಮನಾಶ್ರಮ ಮಹಾಸ್ವಾಮೀಜಿ Read More »

error: Content is protected !!
Scroll to Top