ರಾಜ್ಯ

ಹಾಲಿನ ದರ ಏರಿಸಲು ಕೆ.ಎಂ.ಎಫ್ ಸಿದ್ಧತೆ!!

ಬೆಂಗಳೂರು: ಹಾಲಿನ ದರ ಮತ್ತೊಮ್ಮೆ ಏರಿಕೆ ಮಾಡುವ ಕುರಿತು ಕೆಎಂಎಫ್ ಮುಂದಾಗಿದೆ ಎಂದು ತಿಳಿದುಬಂದಿದೆ. ಒಕ್ಕೂಟಗಳು ನಷ್ಟದಲ್ಲಿರುವ ಕಾರಣ ನೀಡಿ ಹಾಲಿನ ದರ ಪರಿಷ್ಕರಣೆ ಮಾಡಲು ಹೊರಟಿದ್ದು. ಈ ಕುರಿತು ಜನವರಿಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಮುಂದಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದೀಗ ಹಾಲಿನ ದರ ಮತ್ತೆ ಹೆಚ್ಚಳ ಮಾಡಲು ಕೆಎಂಎಫ್ ಸಿದ್ದತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ […]

ಹಾಲಿನ ದರ ಏರಿಸಲು ಕೆ.ಎಂ.ಎಫ್ ಸಿದ್ಧತೆ!! Read More »

ಬೆಳ್ತಂಗಡಿ ಮೂಲದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ!

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿ ಲೀಲಾವತಿ (85) ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಕೆಲವು ಸಮಯಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತೀರಾ ಹದಗೆಟ್ಟಿದ್ದು, ಚಿತ್ರರಂಗದ ಹಲವು ನಟರು ಆಗಮಿಸಿ ಆರೋಗ್ಯ ವಿಚಾರಿಸಿದ್ದರು. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಜನಿಸಿದ್ದ ಲೀಲಾವತಿ ಅವರು ಕನ್ನಡ, ತೆಲುವು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ, ರಾಜ್ಯದ ಮನೆಮಾತಾಗಿದ್ದರು. ನಾಗಕನ್ನಿಕೆ ಚಿತ್ರದ

ಬೆಳ್ತಂಗಡಿ ಮೂಲದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ! Read More »

ಸಿಎಂ ತವರಲ್ಲಿ ಜೀತಪದ್ದತಿ ಪತ್ತೆ!!

ಸಿಎಂ ತವರು ಜಿಲ್ಲೆಯಲ್ಲಿ ಜೀತಪದ್ಧತಿ ಇನ್ನೂ ಜೀವಂತವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನಲ್ಲಿ ನೇಪಾಳ ದೇಶದ ತಾಯಿ ಮಕ್ಕಳನ್ನು ಜೀತ ಪದ್ದತಿಗೆ ತಳ್ಳಿ ದುಡಿಸಲಾಗುತ್ತಿತ್ತು. ಇದೀಗ ಅವರ ರಕ್ಷಣೆ ಮಾಡಲಾಗಿದೆ. ಎಚ್.ಡಿ ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ ಈರೇಗೌಡ ಎಂಬಾತ ತನ್ನ ಜಮೀನಿನಲ್ಲಿ ಕೆಲಸಕ್ಕೆ ನೇಪಾಳ ಮೂಲದ ನಿರ್ಮಲಾ ಎಂಬ ಮಹಿಳೆ, ಆಕೆಯ ಪತಿ ಮತ್ತು ಮಕ್ಕಳನ್ನು ಜೀತಕ್ಕಿರಿಸಿದ್ದ. ಕಳೆದ ಒಂದೂವರೆ ವರ್ಷದಿಂದ ಜೀತ ಮಾಡಿಕೊಂಡಿದ್ದರು. ಜೀತಪದ್ಧತಿ ವಿರೋಧಿಸಿದ್ದಕ್ಕೆ ಪತ್ನಿಯಿಂದ ಪತಿಯನ್ನು ದೂರ

ಸಿಎಂ ತವರಲ್ಲಿ ಜೀತಪದ್ದತಿ ಪತ್ತೆ!! Read More »

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು!

ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಲೂಕಿನ ಕುಮಟಾ – ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ. ಮೃತರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಚಾಲಕ ಚೆನ್ನೈ ಮೂಲದವನಾಗಿದ್ದಾನೆ. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣ ರಾವ್ ಬಾಬುರಾವ್

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು! Read More »

ತಾಳಿ ಕಟ್ಟುವ ಶುಭವೇಳೆ, ಕೈಯಲ್ಲಿರಲು ಹೂಮಾಲೆ, ಒಲ್ಲೆ ಅಂದಳು ಬಾಲೆ…!!

ತಾಳಿ ಕಟ್ಟುವ ವೇಳೆಯಲ್ಲಿ ವಧು ಮದುವೆಯನ್ನು ತಡೆ ಹಿಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆಯಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ತಿಪ್ಪರಡ್ಟಿಹಳ್ಳಿಯ ಯಮುನಾ ಜಿ.ಎಂ ಜತೆಗೆ ಚಿಕ್ಕಬ್ಯಾಲದಕೆರೆಯ ಸಂತೋಷನೊಟ್ಟಿಗೆ ಮದುವೆ ನಿಶ್ಚಯವಾಗಿತ್ತು. ಚಿಕ್ಕಬ್ಯಾಲದಕೆರೆಯ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಡಿ. 6-7ರಂದು ವಿವಾಹ ನಡೆಯಬೇಕಿತ್ತು. ಡಿ.6ರಂದು ಆರತಕ್ಷತೆಯು ಚೆನ್ನಾಗಿಯೇ ನಡೆದಿತ್ತು. ಮದುವೆ ಪೂರ್ವವಾಗಿ ನಡೆಯಬೇಕಾದ ಶಾಸ್ತ್ರ-ಸಂಪ್ರದಾಯಗಳೆಲ್ಲವೂ ಜರುಗಿತ್ತು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ವಧು ಮನಸ್ಸನ್ನು ಬದಲಾಯಿಸಿದ್ದಳು. ಮುಹೂರ್ತದ ಸಮಯಕ್ಕೆ ವಧು ಮತ್ತು ವರನನ್ನು ಮಂಟಪದಲ್ಲಿ ಕೂರಿಸಲಾಗಿತ್ತು.

ತಾಳಿ ಕಟ್ಟುವ ಶುಭವೇಳೆ, ಕೈಯಲ್ಲಿರಲು ಹೂಮಾಲೆ, ಒಲ್ಲೆ ಅಂದಳು ಬಾಲೆ…!! Read More »

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ

ಬೆಳಗಾವಿ: ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಪ್ರಸ್ತಾವ ಬಂದರೆ ಆಗ ಪರಿಶೀಲನೆ ನಡೆಸಬಹುದು. ಆದರೆ, ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ” ಎಂದು ಹೇಳಿದರು. “ನನಗೆ ಸಚಿವರೂ, ಪ್ರತಿಪಕ್ಷದವರೂ ಎಂಬ ಬೇಧವಿಲ್ಲ. ಎಲ್ಲರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ Read More »

ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶ್ರೀ!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾ ಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆ. 1ರಂದು ಮುರುಘಾ ಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಕಾರಾಗೃಹ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರಕಾರ ಮುರುಘಾ ಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು

ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶ್ರೀ! Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಅಂಬಾರಿ ಹೊತ್ತಿದ್ದ ಅರ್ಜುನನ ಸಾವು: ಸಂಪೂರ್ಣ ತನಿಖೆಗೆ ಸೂಚನೆ

ಬೆಂಗಳೂರು: ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಸಾವಿಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ: ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನ ಕೋಟೆಯಲ್ಲೂ ಸ್ಮಾರಕವಾಗಬೇಕೆಂದು ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ

ಅಂಬಾರಿ ಹೊತ್ತಿದ್ದ ಅರ್ಜುನನ ಸಾವು: ಸಂಪೂರ್ಣ ತನಿಖೆಗೆ ಸೂಚನೆ Read More »

ಹೈಕೋರ್ಟ್‌ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ!! | ಕೋರ್ಟ್‌ಗಳ ವಿಡಿಯೊ ಕಾನ್ಫರೆನ್ಸ್‌, ಲೈವ್‌ ಸ್ಟ್ರೀಮಿಂಗಿಗೆ ನಿರ್ಬಂಧ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ವಿವಿಧ ಕೋರ್ಟ್‌ ಹಾಲ್ ಗಳ ವೀಡಿಯೊ ಕಾನ್ಫರೆನ್ಸ್‌ ವಿಚಾರಣೆ ವೇಳೆ ಅಶ್ಲೀಲ ಚಿತ್ರ ಪ್ರದರ್ಶಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕರ ವಿರುದ್ಧ ಮಂಗಳವಾರ ಎಫ್‌ಐಆರ್‌ ದಾಖಲಾಗಿದೆ. ಹೈಕೋರ್ಟ್‌ ಕಂಪ್ಯೂಟರ್ಸ್‌ ರಿಜಿಸ್ಟ್ರಾರ್‌ ಕಚೇರಿಯ ಎನ್‌. ಸುರೇಶ್‌ ಅವರು ನೀಡಿದ ದೂರಿನ ಅನ್ವಯ ಅನಾಮಿಕರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ಗಳಾದ 67 ಮತ್ತು 67(ಎ) ಅಡಿ ಕೇಂದ್ರೀಯ ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ಸಾರಾಂಶ: ಕರ್ನಾಟಕ ಹೈಕೋರ್ಟ್‌ನ 6, 12, 18,

ಹೈಕೋರ್ಟ್‌ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ!! | ಕೋರ್ಟ್‌ಗಳ ವಿಡಿಯೊ ಕಾನ್ಫರೆನ್ಸ್‌, ಲೈವ್‌ ಸ್ಟ್ರೀಮಿಂಗಿಗೆ ನಿರ್ಬಂಧ Read More »

error: Content is protected !!
Scroll to Top