ರಾಜ್ಯ

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸ್ಪೀಕರ್ ಯು. ಟಿ. ಖಾದರ್ ಬಹುಮಾನ ನೀಡಿ ಗೌರವಿಸಿದ್ದಾರೆ. ಶಾಸಕ ಅಶೋಕ್ ರೈಯವರು ಕಳೆದ ಬಾರಿ ಚೊಚ್ಚಲ ಅದಿವೇಶನದಲ್ಲಿ ಭಾಗವಹಿಸಿದ್ದರು. ಸದನಕ್ಕೆ ಸಮಯಕ್ಕೆ ಸರಿಯಗಿ ಹಾಜರಾಗುವ ಸದಸ್ಯರಿಗೆ ಬಹುಮಾ ನೀಡಿ ಗೌರವಿಸಲಾಗುವುದು ಎಂದು ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಯು.ಟಿ. ಖಾದರ್ ಅವರು ಘೋಷಣೆ […]

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್ Read More »

ಯಸಳೂರಿನ ನೆಡುತೋಪಿನಲ್ಲಿ ಅರ್ಜುನನ ಅಂತ್ಯಸಂಸ್ಕಾರ!

8 ಬಾರಿ ಅಂಬಾರಿ ಹೊತ್ತು ನಾಡಿನ ಪ್ರೀತಿ ಗಳಿಸಿದ್ದ ಅರ್ಜುನನ ಅಂತ್ಯಸಂಸ್ಕಾರ ಸಕಲೇಶಪುರ ಹಾಸನದ ಯಸಲೂರಿನ ನೆಡುತೋಪಿನಲ್ಲಿ ನಡೆಯಿತು. ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಅರ್ಜುನನಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಜೆಸಿಬಿ ಸಹಾಯದಿಂದ ಅಂತ್ಯಸಂಸ್ಕಾರ ಮಾಡಲಾಯಿತು. ಅಂತ್ಯಸಂಸ್ಕಾರದ ವೇಳೆ ಮಾವುತನ ರೋಧನ ಮುಗಿಲುಮುಟ್ಟಿತ್ತು. ಎಂತಾ ರಾಜನನ್ನು ಮಿಸ್ ಮಾಡಿಕೊಂಡೆ. ನನ್ನ ಆನೆಯನ್ನು ಬದುಕಿಸಿ ಕೊಡಿ ಎಂಬ ರೋಧನ ಕಣ್ಣೀರು ಬರಿಸುವಂತಿತ್ತು.

ಯಸಳೂರಿನ ನೆಡುತೋಪಿನಲ್ಲಿ ಅರ್ಜುನನ ಅಂತ್ಯಸಂಸ್ಕಾರ! Read More »

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’!

ಸಕಲೇಶಪುರ: ಈ ಬಾರಿ ನಾಡಹಬ್ಬ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಅಸುನೀಗಿದೆ. ಸಕಲೇಶಪುರದಲ್ಲಿ ನಡೆದ ಕಾಡಾನೆ ಸೆರೆ ವೇಳೆ ಘಟನೆ ಸಂಭವಿಸಿದೆ. ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡುವ ವೇಳೆ, ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ಸಂದರ್ಭ ಗಂಭೀರ ಗಾಯಗೊಂಡ ಅರ್ಜುನ ಅಸುನೀಗಿದೆ ಎಂದು ಹೇಳಲಾಗಿದೆ. ಸಕಲೇಶಪುರದ ಯಸಲೂರಿನಲ್ಲಿ ಘಟನೆ ನಡೆದಿದೆ. ದಾಳಿ ಸಂದರ್ಭ ಮಾವುತರು ಓಡಿ ಹೋಗಿದ್ದಾರೆ. ಈ ಸಂದರ್ಭ ಹಲವರ ಪ್ರಾಣ ಉಳಿಸಲು, ಅರ್ಜುನ ತನ್ನ ಪ್ರಾಣ ಪಣವಾಗಿ ಇಟ್ಟಿದ್ದ. ಇದರಿಂದ ಅರ್ಜುನ

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’! Read More »

ಸಿ.ಪಿ. ಯೋಗೇಶ್ವರ್ ಭಾವ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆ!!

ಬೆಂಗಳೂರು: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವನ ಮೃತದೇಹ ಪತ್ತೆಯಾಗಿದೆ. ರಾಮಾಪುರದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಕೊಲೆಯಾದ ಸ್ಥಿತಿಯಲ್ಲಿದೆ ಎಂದು ಹೇಳಲಾಗಿದೆ. ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಚಕ್ಕೆರೆ ಗ್ರಾಮದಲ್ಲಿರುವ ತಮ್ಮ ಮನೆಯಿಂದ ಶನಿವಾರ ನಾಪತ್ತೆಯಾಗಿದ್ದರು. ಅಪಹರಣದ ಶಂಕೆಯೂ ವ್ಯಕ್ತವಾಗಿತ್ತು. 62ರ ಹರೆಯದ ಮಹದೇವಯ್ಯ ಅವರು ಯೋಗೇಶ್ವರ ಸಹೋದರಿಯ ಪತಿ. ಮಹದೇವಯ್ಯ ಅವರ ಪತ್ನಿ ಬೆಂಗಳೂರಿಗೆ ಹೋಗಿದ್ದರಿಂದ ಮನೆಯಲ್ಲಿ ಅವರೊಬ್ಬರೇ ಇದ್ದರು. ಶನಿವಾರ ಬೆಳಗ್ಗೆ ಮಹದೇಶ್ವರ

ಸಿ.ಪಿ. ಯೋಗೇಶ್ವರ್ ಭಾವ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆ!! Read More »

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!

ಬೆಂಗಳೂರು: ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರತೆಗೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾಳೆ. ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿಯನ್ನು ಆಕೆ ಬಹಿರಂಗಪಡಿಸಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್! Read More »

ನಕಲಿ ಮತದಾರರಿಗೆ ಚುನಾವಣಾ ಆಯೋಗ ಶಾಕ್!! | ರಾಜ್ಯದಲ್ಲಿ 36 ಲಕ್ಷ ನಕಲಿ ಮತದಾರರು ಪತ್ತೆ!!

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸ್ಪೀಡ್ ಪೋಸ್ಟ್ ಮೂಲಕ 40 ಲಕ್ಷ ಚುನಾವಣಾ ಫೋಟೋ ಗುರುತಿನ ಚೀಟಿಗಳನ್ನು (ಇಪಿಐಸಿ) ರವಾನಿಸುತ್ತಿದೆ. ಇಪಿಐಸಿಗಳು ಮತ್ತು ನೋಟಿಸ್‌ಗಳ ಬುಕಿಂಗ್ ಮತ್ತು ವಿತರಣೆಗಾಗಿ ಅಂಚೆ ಇಲಾಖೆ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ನಡುವೆ ಈ ಹಿಂದೆ ಸಹಿ ಮಾಡಿದ ತಿಳುವಳಿಕಾ ಒಪ್ಪಂದವನ್ನು ಅನುಸರಿಸುತ್ತಿದೆ.

ನಕಲಿ ಮತದಾರರಿಗೆ ಚುನಾವಣಾ ಆಯೋಗ ಶಾಕ್!! | ರಾಜ್ಯದಲ್ಲಿ 36 ಲಕ್ಷ ನಕಲಿ ಮತದಾರರು ಪತ್ತೆ!! Read More »

ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆ!!

ಬೆಂಗಳೂರು: ಹಾಸನದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್​​ನಲ್ಲಿ ಬಂದರೂ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ನಡೆಯಿತು. ಇದರ ಬೆನ್ನಲ್ಲೇ ಮಗುವಿನ ಪೋಷಕರು ಹಾಗೂ ಆ್ಯಂಬುಲೆನ್ಸ್‌ ಚಾಲಕರು ನಿಮ್ಹಾನ್ಸ್‌ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಶವ ಪರೀಕ್ಷೆಯ ನಂತರ ಮಗುವಿನ ಮೃತದೇಹ ಪಡೆಯಲು ಪೋಷಕರು 24 ಗಂಟೆಗಳಿಗೂ ಹೆಚ್ಚು ಕಾಲ ಕಾಯುವಂತ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಸಂಜೆಯವರೆಗೂ ನಡೆಯಿತು. ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ

ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆ!! Read More »

ಜನೌಷಧಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಸಂವಾದ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯಶವಂತಪುರ ಸುಬೇದಾರ್ ಛತ್ರಂ ರಸ್ತೆಯಲ್ಲಿರುವ “ಪ್ರಧಾನಮಂತ್ರಿಗಳ ಜನೌಷಧಿ ಕೇಂದ್ರ”ಕ್ಕೆ ಭೇಟಿ ನೀಡಿ ಜನರ ಜೊತೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರ್ಖಂಡ್‍ನ ದಿಯೋಘರ್‍ನ ಏಮ್ಸ್‍ನಲ್ಲಿ 10 ಸಾವಿರನೇ ಜನೌಷಧಿ ಕೇಂದ್ರವನ್ನು ಜನತೆಗೆ ಸಮರ್ಪಿಸಿದ್ದಾರೆ. ಮಧ್ಯಮ ವರ್ಗ ಮತ್ತು ಬಡಜನರಲ್ಲಿ ಜನೌಷಧಿ ಕೇಂದ್ರಗಳ ಜನಪ್ರಿಯತೆ ಹೆಚ್ಚುತ್ತಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಕೆಲವು ಔಷಧಿಗಳು ಶೇ 70ರಷ್ಟು ಕಡಿಮೆ ದರಕ್ಕೆ ಲಭಿಸುತ್ತವೆ. ಕಳೆದ 9 ವರ್ಷಗಳಲ್ಲಿ, ದೇಶಾದ್ಯಂತ

ಜನೌಷಧಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಸಂವಾದ Read More »

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು

ಭತ್ತ ಕಾಯಲು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಬೀರು (32) ಹಾಗೂ ಸುರೇಶ್ (30) ಸಿಡಿಲು ಬಡಿತದಿಂದ ಮೃತಪಟ್ಟವರು ಎನ್ನಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು Read More »

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ !

ಅಜ್ಜ ಸಾವನ್ನಪ್ಪಿದ ಎರಡೂವರೆ ಗಂಟೆಗಳ ಅಂತರದಲ್ಲಿ ರಸ್ತೆ ಅಪಘಾತದಲ್ಲಿ ಮೊಮ್ಮಗ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ ವಾಸ್ಥವ್ಯವಿರುವ ನಾರಾಯಣ ಪೂಜಾರಿ ವಯೋಸಹಜದಿಂದ ಮೃತಪಟ್ಟಿದ್ದರು. ಇದಾದ ಎರಡೂವರೆ ಗಂಟೆ ಬಳಿಕ ಮೊಮ್ಮಗ ನಿಶಾಂತ ಪೂಜಾರಿ (23) ವಾಹನ ಅಪಘಾತದಿಂದ ಮೃತಪಟ್ಟರು ಎನ್ನಲಾಗಿದೆ. ಮೃತ ನಿಶಾಂತ ಚಾಮರಾಜನಗರದ ಮೆಡಿಕಲ್ ಕಾಲೇಜೊಂದರಲ್ಲಿ  ಎರಡನೇ ವರ್ಷದ ಎಂಬಿ ವ್ಯಾಸಂಗ ಮಾಡುತ್ತಿದ್ದು, ಕಳೆದ ವಾರವಷ್ಟೆ ಊರಿಗೆ ಬಂದಿದ್ದ ನಿಶಾಂತ ಸೋಮವಾರ ಪರೀಕ್ಷೆ ಇದ್ದಿದ್ದರಿಂದ ಶನಿವಾರ ಚಾಮರಾಜನಗರಕ್ಕೆ ತೆರಳಿದ್ದ. ಆದರೆ

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ ! Read More »

error: Content is protected !!
Scroll to Top