ರಾಜ್ಯ

ವಾಹನಗಳಿಗೆ ಪ್ಯಾನಿಕ್ ಬಟನ್ ಎಲ್​.ವಿ.ಟಿ. ಕಡ್ಡಾಯಕ್ಕೆ ಆದೇಶ: ಡಿ. 1ರಿಂದಲೇ ಅನ್ವಯ | ಏನಿದು ಪ್ಯಾನಿಕ್ ಬಟನ್ ಎಲ್​.ವಿ.ಟಿ.? ಕಾರ್ಯನಿರ್ವಹಣೆ ಹೇಗೆ? ಇಲ್ಲಿದೆ ಡೀಟೈಲ್ಸ್

ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರಾ್ಯಕಿಂಗ್ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಿ.1ರಿಂದ ಆದೇಶ ಅನ್ವಯವಾಗಲಿದ್ದು, ಒಂದು ವರ್ಷದ ಅವಧಿಯೊಳಗೆ ಅಳವಡಿಸಿಕೊಳ್ಳುವಂತೆ ಗಡುವು ನೀಡಲಾಗಿದೆ. ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಹಾಗೂ ಪ್ಯಾನಿಕ್ ಬಟನ್ ಅಳವಡಿಸಬೇಕಿದ್ದು, 2024ರ ನ. 30ರವರೆಗೆ ಅವಕಾಶ ನೀಡಲಾಗಿದೆ. ವಾಹನಗಳಿಗೆ ವಿಎಲ್​ಟಿ ಮತ್ತು ಪ್ಯಾನಿಕ್ ಬಟನ್ ಡಿವೈಸ್​ಗಳನ್ನು ಅಳವಡಿಸುವ […]

ವಾಹನಗಳಿಗೆ ಪ್ಯಾನಿಕ್ ಬಟನ್ ಎಲ್​.ವಿ.ಟಿ. ಕಡ್ಡಾಯಕ್ಕೆ ಆದೇಶ: ಡಿ. 1ರಿಂದಲೇ ಅನ್ವಯ | ಏನಿದು ಪ್ಯಾನಿಕ್ ಬಟನ್ ಎಲ್​.ವಿ.ಟಿ.? ಕಾರ್ಯನಿರ್ವಹಣೆ ಹೇಗೆ? ಇಲ್ಲಿದೆ ಡೀಟೈಲ್ಸ್ Read More »

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು??

ಕತ್ತಲ ಹೊತ್ತಲ್ಲಿ ಬೆಳಕ ಚಿಮ್ಮಿಸುತ್ತಾ ಬರುವ ಮಿಂಚುಹುಳ ಯಾರಿಗೆ ಗೊತ್ತಿಲ್ಲ ಹೇಳಿ!! ಹಳ್ಳಿಯ ಮನೆಗಳಲ್ಲಿ ಬಾಲ್ಯವನ್ನು ಕಳೆದವರಿಗೆ ಮಿಂಚುಹುಳವನ್ನು ಮರೆಯಲು ಸಾಧ‍್ಯವೇ ಇಲ್ಲ. ಆದರೆ ಇಂದು ಆ ಮಿಂಚುಹುಳಗಳು ಎಲ್ಲಿ ಹೋಗಿವೆ? ಅಪರೂಪಕ್ಕಾದರೂ ನೋಡಲು ಸಿಗಬೇಕಲ್ಲವೇ? ಸಂಶೋಧಕರ ಪ್ರಕಾರ, ಪಶ್ಚಿಮ ಘಟ್ಟಗಳಲ್ಲಿಯೂ ಮಿಂಚುಹುಳುಗಳ ಸಂತತಿ ಕಡಿಮೆಯಾಗಿದೆ. ಇದಕ್ಕೆ ಹಲವು ಕಾರಣಗಳನ್ನು ಅವರು ನೀಡಿದ್ದಾರೆ. ಎನ್ವಿರಾನ್ಮೆಂಟಲ್ ಮ್ಯಾನೇಜ್ಮೆಂಟ್ ಮತ್ತು ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಸಂಶೋಧಕರು ಜೀರುಂಡೆ ಜಾತಿಗಳು ಮತ್ತು ಅವುಗಳ ಪರಿಸರ

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು?? Read More »

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ!| ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ | 8ರಿಂದ 10 ಲಕ್ಷ ರೂ.ಗೆ ಮಗು ಮಾರಾಟ ಜಾಲ ಬೆಳಕಿಗೆ!!

ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ!| ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ | 8ರಿಂದ 10 ಲಕ್ಷ ರೂ.ಗೆ ಮಗು ಮಾರಾಟ ಜಾಲ ಬೆಳಕಿಗೆ!! Read More »

‘ಕಾಂತಾರ ಚಾಪ್ಟರ್ 1’ ಈಗಷ್ಟೇ ಶುರು: ರಿಷಬ್ ಮಾತಿನ ಮರ್ಮವೇನು?

“ಕಾಂತಾರ ಚಾಪ್ಟರ್‌ -1” ಶುರು ಮಾಡಿದ್ದೇವೆ. ಅಧ್ಯಾಯ ಎರಡನ್ನು ನೋಡಿ ನೀವು ದೊಡ್ಡ ಹಿಟ್‌ ಮಾಡಿದ್ದೀರಿ. ಇದರ ಸಂಪೂರ್ಣ ಸಕ್ಸಸ್‌ ನ್ನು ಕನ್ನಡಿಗರಿಗೆ ಅರ್ಪಿಸಲು ಇಷ್ಟಪಡ್ತೇನೆ. ಇದು ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ  ನೆರವೇರಿದ ʼಕಾಂತಾರʼ ಪ್ರೀಕ್ವೆಲ್‌ ಮುಹೂರ್ತ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಮಾತು ಕಾಂತಾರದ ಮುಂದುವರೆದ ಪಯಣದಲ್ಲಿ ಮುನ್ನುಡಿ ಅಂದರೆ ಹಿಂದೆ ಏನು ನಡೆಯಿತು ಎನ್ನುವುದನ್ನು ಹೇಳಲು ಹೊರಟಿದ್ದೇನೆ. ಹಿಂದಿನಂತೆ ಈ ಸಿನಿಮಾಕ್ಕೂ ನಿಮ್ಮೆಲ್ಲರ ಹಾರೈಕೆ ಇರಲಿ. ಯಶಸ್ಸನ್ನು ಜವಾಬ್ದಾರಿಯಾಗಿ ತೆಗೆದುಕೊಂಡು ಅದ್ಭುತವಾಗಿ

‘ಕಾಂತಾರ ಚಾಪ್ಟರ್ 1’ ಈಗಷ್ಟೇ ಶುರು: ರಿಷಬ್ ಮಾತಿನ ಮರ್ಮವೇನು? Read More »

ಮಹಿಳೆಯನ್ನು ಕೊಂದಿದ್ದ ಹೆಬ್ಬುಲಿ ಸೆರೆ!

ಕೆಲ ದಿನಗಳ ಹಿಂದೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯಲ್ಲಿ 50 ವರ್ಷದ ಮಹಿಳೆಯನ್ನು ಕೊಂದಿದ್ದ ಹುಲಿ ಮಂಗಳವಾರ ನಸುಕಿನ ಜಾವ 1.40ರ ಸುಮಾರಿಗೆ ಸೆರೆ ಸಿಕ್ಕಿದೆ. ಸೆರೆಸಿಕ್ಕ ಹತ್ತು ವರ್ಷದ ಗಂಡು ಹುಲಿ ಆರೋಗ್ಯವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಮೈಸೂರು ಸಮೀಪದ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ನವೆಂಬರ್ 24ರಂದು ಮಹಿಳೆಯನ್ನು ಕೊಂದಿದ್ದ ಹುಲಿ ಎರಡು ಜಾನುವಾರುಗಳನ್ನು ಕೊಂದಿತ್ತು. ಬೋನಿನೊಳಗೆ ಕಾದು ಕುಳಿತಿದ್ದ ಅರಣ್ಯ ಸಿಬ್ಬಂದಿ ಸಮಾಧಾನಪಡಿಸಿ ಹಸುವನ್ನು ತಿನ್ನಲು ಬಂದಾಗ ಸೆರೆ

ಮಹಿಳೆಯನ್ನು ಕೊಂದಿದ್ದ ಹೆಬ್ಬುಲಿ ಸೆರೆ! Read More »

ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ

ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಅವರು ನೇಮಕಗೊಂಡಿದ್ದಾರೆ. ಕರ್ನಾಟಕದ ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ. ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ, ಅದೇ ರೀತಿ ಬಿಬಿಎಂಪಿ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಲಾಗಿದೆ.

ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ Read More »

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ. ಅತೀಕ್

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಅವರು ತುಮಕೂರು ಜಿಲ್ಲೆ ಪಾವಗಡದವರು. 1991ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮಂಗಳೂರು ಎಸಿಯಾಗಿ ನಂತರ ಮಂಡ್ಯ, ಹಾಸನ ಡಿಸಿಯಾಗಿದ್ದವರು. ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕರೂ ಆಗಿದ್ದರು. ಕೇಂದ್ರ ಸರ್ಕಾರದ ಸೇವೆಯಲ್ಲಿ ಪ್ರಧಾನ ಮಂತ್ರಿಗಳ

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ. ಅತೀಕ್ Read More »

ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ

ವ್ಯಕ್ತಿಯೊಬ್ಬನಿಗೆ ಥಳಿಸಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ಬಂಧಿಸಿರುವ ಘಟನೆ ಮೀರತ್’ನಲ್ಲಿ ನಡೆದಿದೆ. ವಿಡಿಯೋ ಶೇರ್ ಮಾಡಿದ್ದಕ್ಕಾಗಿ ನಿನ್ನೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನವೆಂಬರ್ 13ರಂದು ಘಟನೆ ನಡೆದಿದ್ದು ಯುವಕರ ಗುಂಪೊಂದು ವಿದ್ಯಾರ್ಥಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿದ್ದಾರೆ ಆ ಬಳಿಕ ವಿದ್ಯಾರ್ಥಿಯ ಮುಖದ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿ ಅಮಾನುಷವಾಗಿ ವರ್ತಿಸಿದ್ದಾನೆ. ಇಷ್ಟೆಲ್ಲಾ ಘಟನೆ ನಡೆದಿರುವುದನ್ನು ಗುಂಪಿನ ಓರ್ವ ಸದಸ್ಯ ಚಿತ್ರೀಕರಿಸಿದ್ದಾನೆ. ಹಲ್ಲೆ ಮಾಡಬೇಡಿ ಎಂದು

ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ Read More »

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ

ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ Read More »

ಐವರ ಸಾಮೂಹಿಕ ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ನೆರಳು!! | “ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ”- ಡೆತ್ ನೋಟ್’ನಲ್ಲಿವೆ ಇನ್ನೂ ಹಲವು ವಿಚಾರಗಳು!!

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ತುಮಕೂರಿನ ಸದಾಶಿವ ನಗರದಲ್ಲಿ ನಡೆದಿದ್ದು, ಇದೀಗ ಆತ್ಮಹತ್ಯೆಯ ಹಿಂದಿನ ಒಂದೊಂದೇ ಘಟನೆಗಳು ಹೊರಬರುತ್ತಿದೆ. ಅಲ್ಲದೇ, ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ಕರಾಳತೆಯೂ ಇದೆ ಎಂಬ ಅನುಮಾನಗಳು ಮೂಡಿವೆ. ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸಾವಿಗೂ ಮುನ್ನ ಗರೀಬ್ ಸಾಬ್ ಅವರು ತನ್ನ ದೊಡ್ಡಮ್ಮನಿಗೆ ಡೆತ್ ನೋಟ್ ಬರೆದಿದ್ದಾರೆ‌. ದೊಡ್ಡಮ್ಮನಿಗೆ ನಮಸ್ಕಾರಗಳು. ನಮಗೆ ಸಾಲ ಹೆಚ್ಚಾಗಿದೆ.

ಐವರ ಸಾಮೂಹಿಕ ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ನೆರಳು!! | “ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ”- ಡೆತ್ ನೋಟ್’ನಲ್ಲಿವೆ ಇನ್ನೂ ಹಲವು ವಿಚಾರಗಳು!! Read More »

error: Content is protected !!
Scroll to Top