ರಾಜ್ಯ

ಹಿಂದೂ ಯುವತಿಯ ಜೊತೆ ತಿರುಗಾಡುತ್ತಿದ್ದ ಅನ್ಯಕೋಮಿನ ಡ್ಯಾನ್ಸ್ ಮಾಸ್ಟರ್ | ಹಲ್ಲೆ ನಡೆಸಿದ ಬಜರಂಗದಳ ಕಾರ್ಯಕರ್ತರ ಬಂಧನ

ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಹಿಂದೂ ಯುವತಿ ಜತೆ ತಿರುಗಾಡುತ್ತಿದ್ದ ಉಜಿರೆ ಕಾಲೇಜಿನ ಡ್ಯಾನ್ಸ್ ಮಾಸ್ಟರ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ 7 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಡ್ಯಾನ್ಸ್ ಮಾಸ್ಟ‌ರ್ ನೃತ್ಯ ಕಲಿಸುವ ನೆಪದಲ್ಲಿ ಹಿಂದೂ ಯುವತಿಯರನ್ನು ಬುಟ್ಟಿಗೆ ಹಾಕಿಕೊಂಡು ಲವ್ ಜಿಹಾದ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಹಲ್ಲೆ ಮಾಡಿದ್ದರು. ಚಿಕ್ಕಮಗಳೂರಿನ ಅಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿತ್ತು. ಉಜಿರೆಯ ಖಾಸಗೀ ಕಾಲೇಜಿನಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿರುವ ಮುಸ್ಲಿಂ […]

ಹಿಂದೂ ಯುವತಿಯ ಜೊತೆ ತಿರುಗಾಡುತ್ತಿದ್ದ ಅನ್ಯಕೋಮಿನ ಡ್ಯಾನ್ಸ್ ಮಾಸ್ಟರ್ | ಹಲ್ಲೆ ನಡೆಸಿದ ಬಜರಂಗದಳ ಕಾರ್ಯಕರ್ತರ ಬಂಧನ Read More »

ನಾಳೆ (ಫೆ.10): ಪತ್ರಕರ್ತರ 5ನೇ ಗ್ರಾಮವಾಸ್ತವ್ಯ | ಮಾಹಿತಿ ಪತ್ರ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ದಾವಣಗೆರೆ: ಕೊಲ್ಲಮೊಗರು ಬಂಗ್ಲೆಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಇಂದು ಬಿಡುಗಡೆ ಮಾಡಲಾಯಿತು. ದಾವಣಗೆರೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಮಾಹಿತಿ ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ

ನಾಳೆ (ಫೆ.10): ಪತ್ರಕರ್ತರ 5ನೇ ಗ್ರಾಮವಾಸ್ತವ್ಯ | ಮಾಹಿತಿ ಪತ್ರ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಫೆ. 12ರಿಂದ ಅಧಿವೇಶನ, ಫೆ. 16ಕ್ಕೆ ರಾಜ್ಯ ಬಜೆಟ್: ಸ್ಪೀಕರ್ ಖಾದರ್

ಫೆ. 12ರಿಂದ 23ರವರೆಗೆ ವಿಧಾನಸಭೆ ಬಜೆಟ್ ಅಧಿವೇಶನ ನಡೆಯಲಿದ್ದು, ಫೆ. 16ರಂದು ಸಿಎಂ ಬಜೆಟ್ ಮಂಡಿಸುವರು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ. 12ಕ್ಕೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವರು. 15ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಸಾಗಲಿದೆ. ಫೆ. 16ಕ್ಕೆ ಬಜೆಟ್ ಇರಲಿದೆ. 23ರವರೆಗೆ ಬಜೆಟ್ ಕುರಿತ ಚರ್ಚೆಗಳು ನಡೆಯಲಿವೆ. ಅದಕ್ಕೂ ಪೂರ್ವದಲ್ಲಿ ಬಜೆಟ್ ಬಗ್ಗೆ ಮಾಹಿತಿ ನೀಡಲು ಎಲ್ಲ ಶಾಸಕರಿಗೆ ಫೆ. 9ರಂದು

ಫೆ. 12ರಿಂದ ಅಧಿವೇಶನ, ಫೆ. 16ಕ್ಕೆ ರಾಜ್ಯ ಬಜೆಟ್: ಸ್ಪೀಕರ್ ಖಾದರ್ Read More »

ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಹೈಕೋರ್ಟ್!!

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಬಿಸಿ ಇದೀಗ ಪಕ್ಷಕ್ಕೆ ತಟ್ಟಿದೆ. ಆಗ ವಿಪಕ್ಷ ನಾಯಕರಾಗಿದ್ದ ಈಗಿನ ಸಿಎಂ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ. ಪಾಟೀಲ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಹೈಕೋರ್ಟ್ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ಉಡುಪಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. ಇದರಲ್ಲಿ ಆಗಿನ ಸಚಿವ ಕೆ.ಎಸ್. ಈಶ್ವರಪ್ಪ ಹೆಸರೂ ಕೇಳಿಬಂದಿತ್ತು. ಈಶ್ವರಪ್ಪ

ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಹೈಕೋರ್ಟ್!! Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೇಷ್ಠ ಕಾರ್ಯಕರ್ತ ಗೋಪಾಲ ಚೆಟ್ಟಿಯಾರ್ ನಿಧನ

ಪೆರ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೇಷ್ಠ ಕಾರ್ಯಕರ್ತ  ಪೆರ್ಲದ ಗೋಪಾಲ ಚೆಟ್ಟಿಯಾರ್ ( 78) ಇಂದು ನಿಧನ ಹೊಂದಿದ್ದಾರೆ. ಕಳೆದ ಐದು ದಶಕಗಳಿಂದ ವಿಭಾಗ, ಪ್ರಾಂತ, ಕ್ಷೇತ್ರೀಯ ಸ್ಥರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಮುನ್ನಡೆಸಿದ್ದಾರೆ. ಮೂಲತಃ ಕೇರಳದ ಪೆರ್ಲದವರಾಗಿದ್ದ ಅವರು ವಿದ್ಯಾರ್ಥಿ ಜೀವನದಲ್ಲೇ  ಸಂಘದ ಸ್ವಯಂ ಸೇವಕರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿ ಬಳಿಕ ಪೂರ್ಣ ಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೇಷ್ಠ ಕಾರ್ಯಕರ್ತ ಗೋಪಾಲ ಚೆಟ್ಟಿಯಾರ್ ನಿಧನ Read More »

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!!

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಠಾಧೀಪತಿಗಳೊಂದಿಗೆ ಸಮಾಲೋಚನೆ ನಡೆಸಲಿರುವ ಅಮಿತ್ ಶಾ, ಜೆಡಿಎಸ್ ಮುಖಂಡರೊಂದಿಗೆ ಲೋಕಸಭೆ ಸೀಟು ಹಂಚಿಕೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಫೆ. 9 ಮತ್ತು 10ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ, ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಫೆ. 10ರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಪಾರ್ವತಮ್ಮ

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!! Read More »

ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಎಂದು ಕರೆಯಬಾರದು: ಸಿಎಂ

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಇಂದು ದಾವಣಗೆರೆಯಲ್ಲಿ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ. ನೀವೇ

ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಎಂದು ಕರೆಯಬಾರದು: ಸಿಎಂ Read More »

ಸುಳ್ಯ ಶಾಸಕಿ ಬಾಗೀರಥಿ ಮುರುಳ್ಯ ಬೆಂಗಳೂರು ಕಚೇರಿ ಪ್ರಾರಂಭ | ಶಾಸಕರ ಭವನದಲ್ಲಿ ಧಾರ್ಮಿಕ ವಿಧಿವಿಧಾನದೊಂದಿಗೆ ಆರಂಭ

ಬೆಂಗಳೂರು: ಸುಳ್ಯ ಶಾಸಕಿ ಬಾಗೀರಥಿ ಮುರುಳ್ಯ ಬೆಂಗಳೂರು ಕಚೇರಿ ಶುಕ್ರವಾರ ಆರಂಭಗೊಂಡಿತು. ಬೆಂಗಳೂರಿನ ಶಾಸಕರ ಭವನದಲ್ಲಿ ಭವನದಲ್ಲಿ ಕಚೇರಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭಿಸಲಾಯಿತು. ಬೆಂಗಳೂರಿನ ಶಾಸಕರ ಭವನದ ಎರಡು ಹಾಗೂ ಮೂರನೇ ಮಹಡಿಯ ರೂಂ ಸಂಖ್ಯೆ 335 ಹಾಗೂ 226 ರಲ್ಲಿ ಆರಂಭಗೊಂಡಿತು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಮುರುಳ್ಯ ಗ್ರಾಪಂ ಉಪಾಧ್ಯಕ್ಷೆ ಜಾನಕಿ ಮುರುಳ್ಯ, ಮುಖಂಡರಾದ ಎ.ವಿ.ತೀರ್ಥರಾಮ, ರಂಜಿತ್ ಎನ್‍.ಆರ್., ಸುನಿಲ್‍

ಸುಳ್ಯ ಶಾಸಕಿ ಬಾಗೀರಥಿ ಮುರುಳ್ಯ ಬೆಂಗಳೂರು ಕಚೇರಿ ಪ್ರಾರಂಭ | ಶಾಸಕರ ಭವನದಲ್ಲಿ ಧಾರ್ಮಿಕ ವಿಧಿವಿಧಾನದೊಂದಿಗೆ ಆರಂಭ Read More »

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದವಾಗಿ ಮೃತ್ಯು!!

ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದ ಗೃಹಿಣಿಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಅನ್ನಪೂರ್ಣ ಎಂದು ಗುರುತಿಸಲಾಗಿದೆ. ಮೃತಳ ಕುಟುಂಬಸ್ಥರು ಅನ್ನಪೂರ್ಣ ಅವರು ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಮಹಿಳೆಯೂ ಅಲ್ಲ. ಯಾವುದೇ ಅನಾರೋಗ್ಯ ಕೂಡ ಇರಲಿಲ್ಲ. ಹೀಗಾಗಿ ಯಾರೋ ದುಷ್ಕರ್ಮಿಗಳು ಅನ್ನಪೂರ್ಣರನ್ನ ಕೊಂದು ರೈಲಿನಿಂದ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ. ಮಂಗಳವಾರ ರಾತ್ರಿ ಶಿವಮೊಗ್ಗದಿಂದ ಮಹಿಳೆಯರಿಗಾಗಿ ಮೀಸಲಿದ್ದ ರೈಲ್ವೆ ಬೋಗಿಯಲ್ಲಿ ಬೆಂಗಳೂರಿನತ್ತ ಹೊರಟಿದ್ದರು. ಮಹಿಳೆಯರಿಗೆ ಪ್ರತ್ಯೇಕ ಇರುವ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದರು. ಜೊತೆಗೆ ಸಹೋದರ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದವಾಗಿ ಮೃತ್ಯು!! Read More »

ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಾ.ಎಂ.ಬಿ ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ), ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು) ಮತ್ತು ಎ. ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಗೆಚೆ ವರ್ಗಾವಣೆ ಮಾಡಲಾಗಿತ್ತು. ಇದರ

ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ! Read More »

error: Content is protected !!
Scroll to Top