ರಾಜ್ಯ

ರೌಡಿ ಶೀಟರ್‌ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್!!

ರೌಡಿ ಶೀಟರ್​ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ‌ ಮುಂದಾಗಿದೆ. ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನವೆಂಬರ್ 1ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಹೇಳಿದ್ದಾರೆ. ಮೈಸೂರಿನ ಲಷ್ಕರ್ ಪೊಲೀಸ್‌ ಠಾಣೆಯಲ್ಲಿ ಕಾಂಗ್ರೆಸ್‌ ಮುಖಂಡ ಡಾ. ಕೆ.ಎಂ. […]

ರೌಡಿ ಶೀಟರ್‌ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್!! Read More »

ಸಿಲಿಂಡರ್‌ ಸ್ಫೋಟಕ್ಕೆ ಮನೆಯೇ ಛಿದ್ರ; ಒಂದೇ ಕುಟುಂಬದ 7 ಮಂದಿ ಗಂಭೀರ

ಮನೆಯೊಳಗಡೆ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಏಳು ಮಂದಿ ಗಾಯಗೊಂಡ ಘಟನೆ ಬೆಂಗಳೂರಿನ ಅಂಜನಾಪುರ ಸಮೀಪದ ವೀವರ್ಸ್ ಕಾಲೋನಿಯ ಮಾರುತಿ ಲೇಔಟ್‌ನಲ್ಲಿ ನಡೆದಿದೆ. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಐದು ಮಂದಿ ಬಾಡಿಗೆ ಪಡೆದು ವಾಸವಾಗಿದ್ದರು. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ (32), ನಾಜಿಯಾ (22) ಹಾಗೂ ಇರ್ಫಾನ್ (21), ಗುಲಾಬ್ (18), ಶಹಜಾದ್ (9) ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ಮುಂಜಾನೆ 5:30ರ ಸುಮಾರಿಗೆ ಅಡುಗೆ ಮನೆಯ ಲೈಟ್‌

ಸಿಲಿಂಡರ್‌ ಸ್ಫೋಟಕ್ಕೆ ಮನೆಯೇ ಛಿದ್ರ; ಒಂದೇ ಕುಟುಂಬದ 7 ಮಂದಿ ಗಂಭೀರ Read More »

ಮನೆ ಬಾಗಿಲಿಗೆ ಬರುತ್ತೆ ಮತ್ಸ್ಯ ವಾಹಿನಿ; ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯ!

ಬೆಂಗಳೂರು: ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರನ್ನು ಆರ್ಥಿಕವಾಗಿ ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕಾರ್ಯಕ್ರಮವೊಂದಕ್ಕೆ ಚಾಲನೆ ನೀಡಿದೆ. ಮಂಗಳವಾರ (ನ. 22) ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ದಿನದಂದು ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳ ಸೇವೆಗೆ ಚಾಲನೆ ದೊರೆತಿದೆ. ಈ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಮೂಲಕ ತಾಜಾ ಮೀನುಗಳು ಇನ್ನು ಬೆಂಗಳೂರಿನ ಮನೆ ಮನೆ ತಲುಪಲಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕಾರ್ಯಕ್ರಮವನ್ನು ರೂಪಿಸಿದೆ. ಇದರ ಹಿಂದೆ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಕೊಡಿಸುವ ಆಶಯವನ್ನು

ಮನೆ ಬಾಗಿಲಿಗೆ ಬರುತ್ತೆ ಮತ್ಸ್ಯ ವಾಹಿನಿ; ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯ! Read More »

ಬೆಂಗಳೂರಿನ ಕೊಡಗು ಮತ್ತು ದ.ಕ. ಗೌಡ ಸಮಾಜದ ನೂತನ ಆಡಳಿತ ಮಂಡಳಿ ಪುನರ್ ರಚನೆ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ 2023 -25ನೇ ಸಾಲಿನ ನೂತನ ಆಡಳಿತ ಮಂಡಳಿಯ ಪುನರ್ ರಚನೆ ನ. 19ರಂದು ಬೆಂಗಳೂರಿನ ಲಗ್ಗೆರೆಯಲ್ಲಿರುವ ನಮ್ಮನೆ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. ನಿರ್ದೇಶಕರುಗಳ ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸಮಾಜದ ನೂತನ ಅಧ್ಯಕ್ಷರಾಗಿ ಪಳಂಗಪ್ಪ ಪಾಣತ್ತಲೆ, ಉಪಾಧ್ಯಕ್ಷರಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಗೌರವ ಕಾರ್ಯದರ್ಶಿಯಾಗಿ ಸೋಮಣ್ಣ ಕುಂಭಗೌಡನ, ಖಜಾಂಜಿಯಾಗಿ ರಾಧಾಕೃಷ್ಣ ಗುತ್ತಿಗಾರುಮೂಲೆ, ಜಂಟಿ ಕಾರ್ಯದರ್ಶಿಗಳಾಗಿ ನಾಗೇಶ್ ಉಳುವಾರು ಬಂಟೋಡಿ

ಬೆಂಗಳೂರಿನ ಕೊಡಗು ಮತ್ತು ದ.ಕ. ಗೌಡ ಸಮಾಜದ ನೂತನ ಆಡಳಿತ ಮಂಡಳಿ ಪುನರ್ ರಚನೆ Read More »

ಮುರುಘಾ ಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ?!

ಬೆಂಗಳೂರು: 2ನೇ ಫೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಬಂಧನಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಸೋಮವಾರ ಮಧ್ಯಾಹ್ನ ಬಂಧನವಾದ ಬೆನ್ನಲ್ಲೇ, ಹೈಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ. ಜಾಮೀನು ಮಂಜೂರು ಮಾಡಿರುವ ಕೋರ್ಟ್, ಬಂಧನ ಮಾಡದಂತೆ ಚಿತ್ರದುರ್ಗ ಕಾರಾಗೃಹಕ್ಕೆ ಆದೇಶಿಸಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಮಾಹಿತಿಯನ್ನು ಇಮೇಲ್ ಮೂಲಕ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.

ಮುರುಘಾ ಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ?! Read More »

ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ!!

ಚಿತ್ರದುರ್ಗ: ಮುರುಘಾ ಮಠದ ಡಾ. ಶ್ರೀ. ಶಿವಮೂರ್ತಿ ಮುರುಘಾ ಶರಣರಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ನ್ಯಾಯಾಲಯದ ಆದೇಶ ಹೊರಬಿದ್ದ ಬೆನ್ನಲ್ಲೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಶ್ರೀಗಳನ್ನು ವಶಕ್ಕೆ ಪಡೆದು, ಜಿಲ್ಲಾ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು. ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ

ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ!! Read More »

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!!

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂಯ ಐವರು ಅಧಿಕಾರಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ. ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ (23) ಮತ್ತು ಅವರ ಒಂಬತ್ತು ತಿಂಗಳ ಮಗು ಸಜೀವ ದಹನವಾಗಿದ್ದರು.

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!! Read More »

ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ!

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.  ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ.  2ನೇ ಪೋಕ್ಸೋ ಕೇಸ್​ನಲ್ಲಿ ಅರೆಸ್ಟ್ ವಾರಂಟ್​​ ಜಾರಿ ಮಾಡಿದ ಕೋರ್ಟ್​​, 1ನೇ ಪೋಕ್ಸೋ ಕೇಸ್​ನಲ್ಲಿ

ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ! Read More »

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ

ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಮೊದಲ ಹಂತದಲ್ಲಿ 18 ಜಿಲ್ಲೆಗಳನ್ನು ಮಾತ್ರ ಆಯ್ಕೆ ಮಾಡಲಾಗಿತ್ತು. ಇದೀಗ ಉಳಿದ 13 ಜಿಲ್ಲೆಗಳನ್ನು ಯೋಜನೆಯೊಳಗೆ ತರಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ ಜಿಲ್ಲೆಗಳನ್ನು ಎರಡನೇ ಹಂತದಲ್ಲಿ ಸೇರಿಸಿಕೊಳ್ಳಲಾಗಿದೆ. ಎಲ್ಲಾ ಕುಶಲ ಕರ್ಮಿಗಳಿಗೂ ಅವಕಾಶ ಮಾಡಿಕೊಡುವ

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ Read More »

ವಿಶ್ವಕಪ್ : ನಾಳೆ ನಡೆಯಲಿದೆ ಭಾರತ-ಆಸ್ಟ್ರೇಲಿಯಾ ನಡುವೆ ಜಿದ್ದಾಜಿದ್ದಿನ ಸೆಣಸಾಟ | ಭಾರತದ ಗೆಲುವಿಗಾಗಿ ಪೂಜೆ-ಪುನಸ್ಕಾರಗಳು, ಶುಭ ಹಾರೈಕೆಗಳು

ಬೆಂಗಳೂರು: ಭಾನುವಾರ ವಿಶ್ವದ ಅತೀ ದೊಡ್ಡ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟ ಭಾರತ ಹಾಗೂ ಆಸ್ಟ್ರೇಲಿಯ ತಂಡಗಳ ನಡುವೆ ನಡೆಯಲಿದ್ದು, ಒಂದೆಡೆ ಭಾರತದ ಆಟಗಾರರು ಸತತ ಅಭ್ಯಾಸದಲ್ಲಿ ತೊಡಗಿಕೊಂಡಿದ್ದರೆ, ಇನ್ನೊಂದೆಡೆ ಭಾರತ ತಂಡದ ಗೆಲುವಿಗಾಗಿ ದೇವಸ್ಥಾನಗಳಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪೂಜೆ, ಪುನಸ್ಕಾರಗಳು ನಡೆಯುತ್ತಿವೆ. ಬೆಂಗಳೂರಿನ ನಿಮಿಷಾಂಭ ದೇವಾಲಯದಲ್ಲಿ ಭಾರತ ಗೆಲುವಿಗಾಗಿ ವಿಶೇಷ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ಮತ್ತೊಂದೆಡೆ ಕಾಪು ಕಡಲ ಕಿನಾರೆಗಳಲ್ಲಿ ಭಾರತ ಗೆಲುವಿಗಾಗಿ ಮರಳಿನಲ್ಲಿ ವಿಶ್ವಕಪ್ ಹೋಲುವ ಶಿಲ್ಪಗಳನ್ನು ರಚಿಸಿ ಶುಭ ಹಾರೈಸುವ

ವಿಶ್ವಕಪ್ : ನಾಳೆ ನಡೆಯಲಿದೆ ಭಾರತ-ಆಸ್ಟ್ರೇಲಿಯಾ ನಡುವೆ ಜಿದ್ದಾಜಿದ್ದಿನ ಸೆಣಸಾಟ | ಭಾರತದ ಗೆಲುವಿಗಾಗಿ ಪೂಜೆ-ಪುನಸ್ಕಾರಗಳು, ಶುಭ ಹಾರೈಕೆಗಳು Read More »

error: Content is protected !!
Scroll to Top