ರಾಜ್ಯ

ಬೈಕ್‍ಗೆ ಲಾರಿ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ತರಕಾರಿ ತುಂಬಿದ ಲಾರಿಯೊಂದು ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ‍ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತಪಟ್ಟ ಬೈಕ್ ಸವಾರ. ತಂದೆಯ ಜತೆ ಬೈಕ್‍ನಲ್ಲಿ ತೆರಳುತ್ತಿದ್ದ ಸಂದರ್ಭ ತರಕಾರಿ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಂಜುನಾಥ್ ಲಾರಿಯಡಿ ಸಿಲುಕಿ ದೂರ ಎಳೆದೊಯ್ದಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‍ಗೆ ಲಾರಿ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು Read More »

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು

ಬೆಂಗಳೂರು: ಅಪರಿಚಿತರ ಗುಂಪೊಂದು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಸೂರ್ಯ (22) ಹತ್ಯೆಯಾದ ಯುವಕ. ಭಾನುವಾರ ರಾಮೇಶ್ವರ ಸಮೀಪದ ರೆಸ್ಟೋರೆಂಟ್ ಒಂದಲ್ಲಿ ಸೂರ್ಯ ನಾಲ್ವರು ಸ್ನೇಹಿತರೊಂದಿಗೆ ಫೋಟೊ ಶೂಟ್ ಮಾಡುತ್ತಿದ್ದ ವೇಳೆ ಅಪರಿಚಿತರ ಗುಂಪೊಂದು ಅವರ ಜತೆ ಕಿರಿಕ್ ತೆಗೆದಿದೆ. ಅಪರಿಚಿತರ ತಂಡ ಫೋಟೋ ತೆಗೆದಿದ್ದ ಕ್ಯಾಮೆರಾ ಕಿತ್ತುಕೊಂಡು ನಾಲ್ವರು ಯುವಕರ ಮೇಲೆ ಹಲ್ಲೆ ಮಾಡಿ, ಸೂರ್ಯನಿಗೆ ಚಾಕುವಿನಿಂದ ಇರಿದಿದ್ದಾರೆ.

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು Read More »

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಶನಿವಾರ ಬೆಂಗಳೂರಿನ ವಿಜಯನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅವರ ಆಪ್ತ ಬೆಂಬಲಿಗರು ಉಪಸ್ಥಿತರಿದ್ದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

ಸರಕಾರಿ ಬಸ್-ಓಮ್ನಿ ಬಸ್ ಡಿಕ್ಕಿ | 5 ಮಂದಿ ಮೃತ್ಯು, 60 ಮಂದಿಗೆ ಗಾಯ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಓಮ್ಮಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 10 ಅಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದ್ದು, ಸಮೀಪದ ಚೆಟ್ಟಿಯಪ್ಪನೂರಿನಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓನ್ನಿಬಸ್ ನಡುವೆ ಅಪಘಾತ ಸಂಭವಿಸಿದ್ದು

ಸರಕಾರಿ ಬಸ್-ಓಮ್ನಿ ಬಸ್ ಡಿಕ್ಕಿ | 5 ಮಂದಿ ಮೃತ್ಯು, 60 ಮಂದಿಗೆ ಗಾಯ Read More »

ಅನಂತಪುರ ಕ್ಷೇತ್ರದಲ್ಲಿ ಮತ್ತೆ ಕಾಣಿಸಿಕೊಂಡ ಮೊಸಳೆ | ಭಕ್ತರಲ್ಲಿ ಸಂತಸ

ಅನಂತಪುರ: ಕಾಸರಗೋಡು: ಇತಿಹಾಸ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ಭಕ್ತಾದಿಗಳ ಆಸೆಯಂತೆ ಮೊಸಳೆ ಕಾಣ ಸಿಕ್ಕಿದೆ. ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿದ ಬಳಿಕ ಭಕ್ತರಲ್ಲಿ ಬೇಸರದ ಛಾಯೆ ಮೂಡಿತ್ತು. ಎಲ್ಲರೂ ದೇವರಲ್ಲಿ ಇನ್ನೊಂದು ಬಬಿಯಾದ ಪ್ರತಿಬಿಂಬವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದರು. ಒಂದು ವಾರದ ಹಿಂದೆ ಭಕ್ತಾದಿಯೊಬ್ಬರು ಮೊಸಳೆ ಕಂಡಂತೆ ಆಯಿತು ಅಂದರೂ ಸಾಕ್ಷ್ಯಾಧಾರ ಇಲ್ಲದಿದ್ದರಿಂದ ನಂಬಲು ಅಸಾಧ್ಯವಾಗಿತ್ತು. ಇದೀಗ ಕ್ಷೇತ್ರದ ಆಡಳಿತ ಮಂಡಳಿ ಮೊಸಳೆ ಇರುವುದನ್ನು ಖಚಿತಪಡಿಸಿದೆ. ದೇವರ ಪ್ರತಿ ಬಿಂಬ

ಅನಂತಪುರ ಕ್ಷೇತ್ರದಲ್ಲಿ ಮತ್ತೆ ಕಾಣಿಸಿಕೊಂಡ ಮೊಸಳೆ | ಭಕ್ತರಲ್ಲಿ ಸಂತಸ Read More »

ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿಯಲಿದ್ದಾರೆ. ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ! Read More »

ಬಸ್‌ಗಳಲ್ಲಿ ಆಡಿಯೋ ಪ್ರಕಟನೆಗೆ ಸೂಚನೆ!

ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಬಸ್‌ಗಳಲ್ಲಿ ಆಡಿಯೋ ರೂಪದಲ್ಲಿ ಪ್ರಕಟನೆ ವ್ಯವಸ್ಥೆ ಅಳವಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿದೆ. ಬೆಂಗಳೂರಿನ ದೃಷ್ಟಿ ವಿಶೇಷ ಚೇತನ ಎನ್‌. ಶ್ರೇಯಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಈ ಸಂಬಂಧ ಖಾಸಗಿ ಬಸ್‌ ಆಪರೇಟರ್‌ಗಳಿಗೆ ನಿರ್ದೇಶನ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ

ಬಸ್‌ಗಳಲ್ಲಿ ಆಡಿಯೋ ಪ್ರಕಟನೆಗೆ ಸೂಚನೆ! Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ Read More »

ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್

ಕಾಸರಗೋಡು: ರೈಲು ಹಳಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ನವೀನ್ (26)ಮೃತಪಟ್ಟವರು. ಕುಂಬಳೆ ಸಮೀಪದ ಶಿರಿಯ ಸೇತುವೆ ಬಳಿ ಘಟನೆ ನಡೆದಿದ್ದು, ಬಂದ್ಯೋಡು ಮುಟ್ಟಂನಿಂದ ಶಿರಿಯ ತನಕ ಹಳಿ ತಪಾಸಣೆಗೆ ನವೀನ್‌ಗೆ ನೀಡಲಾಗಿತ್ತು. ಸೇತುವೆ ಸಮೀಪ ತಪಾಸಣೆಗೆ ನಡೆಸುತ್ತಿದ್ದಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ರೈಲು ಬಡಿದಿದೆ. ಕೆಲ ಸಮಯದ ಹಿಂದೆಯಷ್ಟೇ ನವೀನ್ ರೈಲ್ವೆ, ಕೆಲಸಕ್ಕೆ ಸೇರಿದ್ದರು. ರೈಲ್ವೆ ಅಧಿಕಾರಿಗಳು,

ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್ Read More »

ಕುಸಿದು ಬಿದ್ದು ವಿದ್ಯಾರ್ಥಿನಿ ಉಷಾ ಮೃತ್ಯು

ಚಿಕ್ಕಮಗಳೂರು: ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಉಷಾ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಬಿದ್ದಿದ್ದಾಳೆ. ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು 108 ಆಂಬುಲೆನ್ಸ್ ಮೂಲಕ ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.  ಮೃತ ಉಷಾ ಹಲವು ವರ್ಷಗಳಿಂದ ಟಿ.ಬಿ. ಖಾಯಿಲೆಯಿಂದ ಬಳಲುತ್ತಿದ್ದಳು ಎಂದು ವಸತಿ ಶಾಲೆಯ

ಕುಸಿದು ಬಿದ್ದು ವಿದ್ಯಾರ್ಥಿನಿ ಉಷಾ ಮೃತ್ಯು Read More »

error: Content is protected !!
Scroll to Top