ರಾಜ್ಯ

ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು!

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ. ಕಾಂತೇಶ್‌ ಅಲಿಯಾಸ್‌ ಶ್ರೀಕಾಂತ್‌ ಅಲಿಯಾಸ್‌ ಕಾಂತ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ನಡೆಸಿದರು. ತನಿಖಾಧಿಕಾರಿಯ ಆಕ್ಷೇಪಣೆಯ ಜೊತೆಗೆ ಸರ್ಕಾರಿ ಅಭಿಯೋಜಕಿ ಅವರು ಆಕ್ಷೇಪಣೆ […]

ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು! Read More »

ಮಗು ಮಾರಾಟ ಪ್ರಕರಣ | ಐವರ ಬಂಧನ

ಹುಟ್ಟಿದ ಮಾರನೇ ದಿನವೇ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರದ ಬ್ಯಾಕರ ಹಳ್ಳಿಯಲ್ಲಿ ಮಗುವನ್ನು ಮಾರಾಟ ಮಾಡಿದ ಆರೋಪದಡಿ ತಾಯಿ ಗಿರಿಜಾ, ಆಶಾಕಾರ್ಯಕರ್ತೆ ಸುಮಿತ್ರ, ಮಗು ಖರೀದಿಸಿದ ಮಹಿಳೆ ಉಷಾ, ಶ್ರೀಕಾಂತ್ ಸುಬ್ರಹ್ಮಣ್ಯ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನ.15ರಂದು ಗಿರಿಜಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ತಮಗೆ ಇಬ್ಬರು ಮಕ್ಕಳಿರುವುದರಿಂದ ನ.16ರಂದು ಆಶಾ ಕಾರ್ಯಕರ್ತೆ ಸುಮಿತ್ರ ಅವರ ಮೂಲಕ ಚಿಕ್ಕಮಗಳೂರು ಮೂಲದ ಉಷಾ ಎಂಬುವವರಿಗೆ ಮಗು ಮಾರಾಟ ಮಾಡಿದ್ದರು. ಈ

ಮಗು ಮಾರಾಟ ಪ್ರಕರಣ | ಐವರ ಬಂಧನ Read More »

ಗರ್ಭಗುಡಿ ಪ್ರವೇಶ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿ ಕಿಡಿ

ಹಲವು ಬಾರಿ ಮನವಿ ಮಾಡಿದರೂ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಲು ನಿರಾಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯನ್ನು ಬಿಜೆಪಿ ಟೀಕಿಸಿದೆ. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ್ದಾರೆ ಎಂದು ಬಿಜೆಪಿ ಟೀಕಿಸಿರುವ ರಾಜ್ಯ ಬಿಜೆಪಿ ಘಟಕ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ. 39 ಸೆಕೆಂಡುಗಳ ಈ ವಿಡಿಯೋದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ದೇವಾಲಯದ ಪ್ರವೇಶ ದ್ವಾರದ ಬಳಿ ನಿಂತಿರುವುದನ್ನು ಕಾಣಬಹುದು. ಅಲ್ಲಿಂದ ಅವರನ್ನು ಗರ್ಭಗುಡಿಗೆ ಬರುವಂತೆ ಮನವಿ ಮಾಡಿದರೂ, ಅವರು ಪ್ರವೇಶಿಸಲು ನಿರಾಕರಿಸುತ್ತಾರೆ. ಅವರ

ಗರ್ಭಗುಡಿ ಪ್ರವೇಶ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿ ಕಿಡಿ Read More »

ರಾಜ್ಯದಲ್ಲಿ ವಿದ್ಯುತ್, ಮದ್ಯದ ಬಳಿಕ ಇದೀಗ ಶಿಕ್ಷಣವೂ ದುಬಾರಿ! | ಕಾಲೇಜು ಶುಲ್ಕವನ್ನು ಏರಿಸಿ ಶಾಕ್ ನೀಡಿದ ರಾಜ್ಯ ಸರ್ಕಾರ!

ರಾಜ್ಯ ಸರ್ಕಾರ ಇದೀಗ ಕಾಲೇಜು ವಿದ್ಯಾರ್ಥಿಗಳಿಗೆ ಶಾಕ್​ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಕಾಲೇಜು ಮತ್ತು ಯೂನಿವರ್ಸಿಟಿಗಳ ಶುಲ್ಕವನ್ನು ಶೇ. 10ರಷ್ಟು ಏರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್​ಗಳ ಶುಲ್ಕ ಶೇ.10 ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ. ಬಿಎ, ಬಿಕಾಂ, ಬಿಎಸ್​ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ. 10ರಷ್ಟು ಏರಿಕೆಗೆ ಅವಕಾಶ ನೀಡಿದೆ. ಈ ಮೂಲಕ ಸರ್ಕಾರ ವಿದ್ಯಾರ್ಥಿಗಳ

ರಾಜ್ಯದಲ್ಲಿ ವಿದ್ಯುತ್, ಮದ್ಯದ ಬಳಿಕ ಇದೀಗ ಶಿಕ್ಷಣವೂ ದುಬಾರಿ! | ಕಾಲೇಜು ಶುಲ್ಕವನ್ನು ಏರಿಸಿ ಶಾಕ್ ನೀಡಿದ ರಾಜ್ಯ ಸರ್ಕಾರ! Read More »

ಜ. 7ರಂದು ಸ್ನೇಹಮಿಲನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜನವರಿ 7ರಂದು ಬೆಂಗಳೂರಿನ ಚೌಡೇಶ್ವರಿನಗರದ  ಲಗ್ಗೆರೆಯ “ನಮ್ಮನೆ” ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಲಿದೆ. ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಸಮಾರಂಭ ಉದ್ಘಾಟಿಸಲಿದ್ದಾರೆ. ಕೊಡಗು ಮತ್ತು ದಕ್ಷಿಣಕನ್ನಡ ಗೌಡ ಸಮಾಜ ಬೆಂಗಳೂರು ಇದರ ಅಧ್ಯಕ್ಷ ಪಳಂಗಪ್ಪ ಪಾಣತ್ತಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಮುನಿರತ್ನ, ಶಾಸಕರಾದ ಮುನಿರಾಜು, ಡಾ. ಮಂತರ್ ಗೌಡ, ಬೆಳ್ಳಾರೆ ಡಾ.

ಜ. 7ರಂದು ಸ್ನೇಹಮಿಲನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ Read More »

ಹಿಂಗಾರು ಬೆಳೆ ಸಮೀಕ್ಷೆ: ಮೊಬೈಲಿನಲ್ಲೇ ದಾಖಲಿಸಬಹುದು!

ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಆರಂಭಿಸಲಾಗಿದೆ. ಈ ಕುರಿತು ರೈತರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಡಿಸೆಂಬರ್ 30ರಿಂದ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಆಂಡ್ರಾಯ್ಡ್ ಮೊಬೈಲ್ ಅಪ್ಲಿಕೇಶನ್‌ ಮೂಲಕ ತಾವೇ ಸ್ವತಃ ದಾಖಲಿಸಬಹುದಾಗಿದೆ. ಡೌನ್‌ಲೋಡ್ ಮಾಡಿಕೊಳ್ಳಿ; ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ

ಹಿಂಗಾರು ಬೆಳೆ ಸಮೀಕ್ಷೆ: ಮೊಬೈಲಿನಲ್ಲೇ ದಾಖಲಿಸಬಹುದು! Read More »

ನದಿಯಲ್ಲಿ ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು !

ನದಿಯಲ್ಲಿ ಈಜಲು ತೆರಳಿದ್ದ ಮೂವರು ಇಂಜಿನೀಯರಿಂಗ್ ವಿದ್ಯಾರ್ಥಿಗಳು ನೀರುಪಾಲಾಗದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ನಡೆದಿದೆ. ರಷಿಕ್ ಕುಶಾಲಪ್ಪ (20), ಆಕಾಶ್ ಬಿದ್ದಪ್ಪ (20) ಹಾಗೂ ಸುದೀಶ್ ಅಯ್ಯಪ್ಪ (20) ನೀರುಪಾಲದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ವೀಕೆಂಡ್ ಕಾರಣಕ್ಕೆ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದು ಈ ವೇಳೆ ಘಟನೆ ಸಂಭವಿಸಿದೆ. ನೀರಿನ ಹರಿವು ಹೆಚ್ಚಿದ್ದರಿಂದ ಮೂವರು

ನದಿಯಲ್ಲಿ ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು ! Read More »

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚತೆ | ಶಿಕ್ಷಣ ಸಚಿವರ ತವರಲ್ಲೇ ನಡೆಯಿತು ಘಟನೆ | ಪೋಷಕರಿಂದ ಪ್ರತಿಭಟನೆ | ತಿಂಗಳೊಂದರಲ್ಲೇ ನಡೆದ ಮೂರನೇ ಘಟನೆ

ಕೋಲಾರದ ಮುಳಬಾಗಿಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಲದ ಗುಂಡಿ ಸ್ವಚ್ಛತೆ ಹಾಗೂ ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಸ್ವಚ್ಛತೆ ಪ್ರಕರಣದ ಬಳಿಕ ಇದೀಗ ಶಿವಮೊಗ್ಗದಲ್ಲೂ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದ್ದು, ಭದ್ರಾವತಿಯ ನೇರಲೆಕೆರೆ ಶಾಲಾ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಆಕ್ರೋಶಗೊಂಡ ಪೋಷಕರು ಪ್ರತಿಭಟನೆ

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚತೆ | ಶಿಕ್ಷಣ ಸಚಿವರ ತವರಲ್ಲೇ ನಡೆಯಿತು ಘಟನೆ | ಪೋಷಕರಿಂದ ಪ್ರತಿಭಟನೆ | ತಿಂಗಳೊಂದರಲ್ಲೇ ನಡೆದ ಮೂರನೇ ಘಟನೆ Read More »

ಸಹಕಾರ ಸಂಘದ ಚುನಾವಣೆಯಲ್ಲಿ ಸೋಲು | ಆತ್ಮಹತ್ಯೆಗೆ ಶರಣು !

ಧಾರವಾಡ: ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಥಿಸಿ ಸೋತ ಅಭ್ಯರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ. ವಿಶ್ವವಿದ್ಯಾನಿಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾತ್ ಸಾವಳಗಿ (55) ಆತ್ಮಹತ್ಯೆ ಮಾಡಿಕೊಂಡವರು. ಚುನಾವಣೆ ಫಲಿತಾಂಶ ಬಂದ ಮೇಲೆ ಮನೆಗೆ ವಾಪಸ್ ಆಗಿದ್ದ ಅವರು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರ್ನಾಲ್ಕು ದಿನಗಳಿಂದ ಮನೆ ಬಾಗಿಲು ತೆರೆಯದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬಂದಿ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ

ಸಹಕಾರ ಸಂಘದ ಚುನಾವಣೆಯಲ್ಲಿ ಸೋಲು | ಆತ್ಮಹತ್ಯೆಗೆ ಶರಣು ! Read More »

ಪರಮಪೂಜ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದಲ್ಲಿ ನಡೆದ ಮಹಾಗುರುಗಳ ಶ್ರೀ ಪಾದುಕಾ ಪೂಜೆ, ಸುವರ್ಣ ಪುಷ್ಪಾ ಹಾರ ಸಮರ್ಪಣ ಸಂಕಲ್ಪ

ಶೃಂಗೇರಿ: ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶೃಂಗೇರಿ ಶಾಖಾ ಮಠದಲ್ಲಿ ಡಿ.26 ರಿಂದ 28ರ ವರೆಗೆ ಆಯೋಜಿಸಲಾಗಿರುವ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಮಹಾಗುರುಗಳ ಶ್ರೀಪಾದುಕಾಪೂಜೆ ಹಾಗೂ ಸುವರ್ಣ ಪುಷ್ಪಾ ಹಾರ ಸಮರ್ಪಣ  ಸಂಕಲ್ಪ ಡಿ.27 ಬುಧವಾರ ಬೆಳಿಗ್ಗೆ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ನೆರವೇರಿತು.

ಪರಮಪೂಜ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದಲ್ಲಿ ನಡೆದ ಮಹಾಗುರುಗಳ ಶ್ರೀ ಪಾದುಕಾ ಪೂಜೆ, ಸುವರ್ಣ ಪುಷ್ಪಾ ಹಾರ ಸಮರ್ಪಣ ಸಂಕಲ್ಪ Read More »

error: Content is protected !!
Scroll to Top