ರಾಜ್ಯ

ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ಕಾರ್ಖಾನೆಯೊಂದರ ಮಾಲಕಿಯ ಕತ್ತು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಾಳದ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ಜಿಕೆಎನ್ ಚಿಕೋರಿ ಇಂಡಸ್ಟ್ರೀಸ್ ನಲ್ಲಿ ನಡೆದಿದೆ. ಮಂಡ್ಯದ ವಿದ್ಯಾನಗರ ನಿವಾಸಿ ನಳಿನಿ (62) ಕೊಲೆಯಾದ ದುರ್ದೈವಿ. ಕೊಲೆಯಾಗಿರೊ ನಳಿನಿ ಸ್ಥಿತಿವಂತರಾಗಿದ್ದರು. ಗಂಡ ರಮೇಶ್‌, ಮಂಡ್ಯದಲ್ಲಿ ಕಾಫಿಪುಡಿ ಅಂಗಡಿ ಹಾಗೂ ಹೆಬ್ಬಾಳ ಬಳಿ ಚಿಕೋರಿ ಕಾರ್ಖಾನೆಯನ್ನ ನಡೆಸುತ್ತಿದ್ದರು. ಆದರೆ ಬರುಬರುತ್ತ ಸಾಕಷ್ಟು ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಮನೆಯನ್ನು ಬ್ಯಾಂಕ್ ನಲ್ಲಿ ಅಡ ಇಟ್ಟಿದ್ದರು. ಕಾರ್ಖಾನೆ ಬಂದ್ ಆಗಿದ್ದು, […]

ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷದ್ ಸುಳಿವಿಗೆ ಎರಡು ಲಕ್ಷ ಘೋಷಣೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ. 2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷದ್ ಸುಳಿವಿಗೆ ಎರಡು ಲಕ್ಷ ಘೋಷಣೆ Read More »

ಬೆಂಗಳೂರು ಕಂಬಳ-ನಮ್ಮ ಕಂಬಳ : ದ.ಕ.ಉಸ್ತುವಾರಿ ಸಚಿವರಿಗೆ ಆಹ್ವಾನ

ಬೆಂಗಳೂರು: ಬೆಂಗಳೂರು ಕಂಬಳ ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಮಾಡಿ ಕಂಬಳ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಬೆಂಗಳೂರು ಕಂಬಳ-ನಮ್ಮ ಕಂಬಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ,

ಬೆಂಗಳೂರು ಕಂಬಳ-ನಮ್ಮ ಕಂಬಳ : ದ.ಕ.ಉಸ್ತುವಾರಿ ಸಚಿವರಿಗೆ ಆಹ್ವಾನ Read More »

ಸಿ ಶ್ರೇಣಿ ದೇವಾಲಯಗಳಿಗೂ ಗೃಹಜ್ಯೋತಿ ಯೋಜನೆ ವಿಸ್ತರಣೆ | ಚಿಂತನೆ ನಡೆಸಿದ ಸರಕಾರ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಇದೀಗ ಸರಕಾರ ಧಾರ್ಮಿಕದತ್ತಿ ಇಲಾಖೆ ವ್ಯಾಪ್ತಿಯ ಸಿ ಶ್ರೇಣಿ ದೇವಸ್ಥಾನಗಳಿಗೂ ಗೃಹಜ್ಯೋತಿ ಯೋಜನೆಯನ್ನು ಕಲ್ಪಿಸಲು ಮುಂದಾಗಿದೆ. ಈಗಾಗಲೇ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುತ್ತಿರುವಂತೆ ಸಿ ದರ್ಜೆ ದೇವಸ್ಥಾನಗಳಿಗೂ ಉಚಿತ ವಿದ್ಯುತ್ ಪೂರೈಕೆ ಮಾಡಲು ಸರಕಾರ ಚಿಂತನೆ ನಡೆಸಿದೆ. ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲು ಯೋಜನೆ ರೂಪಿಸಲಾಗಿದೆ. ಒಂದರಿಂದ ಐದು ಲಕ್ಷ ರೂಪಾಯಿ ಆದಾಯ ಹೊಂದಿದ

ಸಿ ಶ್ರೇಣಿ ದೇವಾಲಯಗಳಿಗೂ ಗೃಹಜ್ಯೋತಿ ಯೋಜನೆ ವಿಸ್ತರಣೆ | ಚಿಂತನೆ ನಡೆಸಿದ ಸರಕಾರ Read More »

ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ!

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ. ಕೆಲವು ವರ್ಷಗಳಿಂದ ಶಿವಮೊಗ್ಗ ದಸರಾದಲ್ಲಿ ಬೆಳ್ಳಿ ಅಂಬಾರಿ ಹೊರಲು ಮೂರು ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯು ಅಂಬಾರಿ ಹೊರುವ ಸಾಗರನ ಜತೆ ಯಾವ ಅನೆಗಳನ್ನು ಕಳುಹಿಸಬೇಕು ಎಂದು ಗೊಂದಲ ಮೂಡಿತ್ತು. ಕುಂತಿ ಈಚೆಗೆ ಮರಿ ಹಾಕಿತ್ತು. ಭಾನುಮತಿ ತುಂಬು ಗರ್ಭಿಣಿಯಾಗಿತ್ತು. ಹಾಗಾಗಿ ಸಾಗರ ಆನೆ ಜತೆ ನೇತ್ರಾವತಿ, ಹೇಮಾವತಿ ಆನೆಗಳನ್ನು ಕಳುಹಿಸಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವು

ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ! Read More »

4 ಗ್ರಾಮಗಳಲ್ಲಿ ಲಘು ಭೂಕಂಪ!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಈ ಘಟನೆ ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ

4 ಗ್ರಾಮಗಳಲ್ಲಿ ಲಘು ಭೂಕಂಪ! Read More »

ಬೆಂಗಳೂರು ಕಂಬಳಕ್ಕೆ ಆಹ್ವಾನ

ಪುತ್ತೂರು: ಬೆಂಗಳೂರು ಕಂಬಳ ಸಮಿತಿ ವತಿಯಿಂದ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ಭೇಟಿ ಮಾಡಿ ಕಂಬಳಕ್ಕೆ ಆಹ್ವಾನಿಸಲಾಯಿತು. ಬೆಂಗಳೂರು ಕಂಬಳ ಕುರಿತು ರೂಪರೇಷೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ, ಪದಾಧಿಕಾರಿ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ಬೆಂಗಳೂರು ಕಂಬಳಕ್ಕೆ ಆಹ್ವಾನ Read More »

‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು?

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಕಂಬಳಕ್ಕೆ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನುಮತಿ ಸಿಕ್ಕಿಲ್ಲ ಎಂದು ವರದಿಯಾಗಿದೆ. ನವಂಬರ್ ಕೊನೆ ವಾರದಲ್ಲಿ ನಡೆಯಲುದ್ದೇಶಿಸಿರುವ ಬೆಂಗಳೂರು ಕಂಬಳಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರೆ ಮುಹೂರ್ತವೂ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮುಹೂರ್ತಕ್ಕೆ ಆಗಮಿಸಿ, 1 ಕೋಟಿ ರೂ. ಅನುದಾನ ನೀಡುವ ಘೋಷಣೆ ಮಾಡಿದ್ದರು. ಇದರ ನಡುವೆ ಇದೀಗ ಅನುಮತಿ ವಿಚಾರ ವರದಿಯಾಗಿದೆ. ಬೆಂಗಳೂರಿನಲ್ಲಿ ಕಂಬಳ ನಡೆಸುವುದಾದರೆ ಬಿಬಿಎಂಪಿಯ ಅನುಮತಿ ಕಡ್ಡಾಯ. ಕಾನೂನು

‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು? Read More »

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ

ಪಡುಕುತ್ಯಾರು: ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸಾನ್ ಕಾರ್ಡ್ ಅತೀ ಅಗತ್ಯವಾಗಿದ್ದು, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ, ನಿಖರತೆ ಪರಿಶೀಲಿಸಲು ಇತ್ತೀಚಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಫ್ಟ್ ಸರ್ವೀಸ್ ಸೆಂಟರ್ ಸಹಾಯಕ ನಿರ್ದೇಶಕಿ ವೀಣಾ ಹೇಳಿದರು.ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಸತ್ಸಂಗ ಮಂದಿರದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ನಡೆದ ವೃತ್ತಿ ಕೌಶಲ್ಯ

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ Read More »

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದ 42 ಕೋಟಿ ರೂ. ಹಣದ ಪರದೇ ಕೆ ಪೀಛೇ ಇರುವ ಕೈಗಳನ್ನು ಪತ್ತೆ ಹಚ್ಚಲು ಸಿಬಿಐ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಆಗ್ರಹಿಸಿದರು. ಬಿಜೆಪಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ, ಲೂಟಿ ಕಾಂಗ್ರೆಸಿನ ರಕ್ತದಲ್ಲಿದೆ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ. ಅಂಬಿಕಾಪತಿಗೆ 42

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ Read More »

error: Content is protected !!
Scroll to Top