ರಾಜ್ಯ

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು. ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆಗೆ 2017ರಿಂದ 2022ರವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. […]

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ Read More »

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು!

ರಾಗಿಗುಡ್ಡ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ. ಮಂಗಳವಾರ ರಾತ್ರಿ ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದು, ಮುಂದಿನ 30 ದಿನಗಳ ಕಾಲ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು! Read More »

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅನಾವರಣ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಂಛನ ಬಿಡುಗಡೆ ಮಾಡಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ Read More »

ಬೆಂಗಳೂರು ಕಂಬಳ: ಸಿ.ಎಂ. ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ನ. 25 ಹಾಗೂ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳಕ್ಕೆ ಮುಖ್ಯಮಂತ್ರಿಯವರಿಗೆ ಆಹ್ವಾನ ನೀಡಿದರು. ಮುಖ್ಯಮಂತ್ರಿಯನ್ನು ಭೇಟಿಯಾದ ಅಶೋಕ್ ರೈ ಅವರು, ಚರ್ಚೆ ನಡೆಸಿ, ಕಂಬಳಕ್ಕೆ ವಿವಿಧ

ಬೆಂಗಳೂರು ಕಂಬಳ: ಸಿ.ಎಂ. ಭೇಟಿಯಾದ ಶಾಸಕ ಅಶೋಕ್ ರೈ Read More »

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಂಬಳ ಸಮಿತಿ , ಬೆಂಗಳೂರು ತುಳು ಕೂಟ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸರ್ವ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನ. 25ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕರೆಪೂಜೆ ಬುಧವಾರ ನಡೆಯಿತು. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಗಣ್ಯರು ಕರೆಪೂಜೆ ನೆರವೇರಿಸಿದರು. ಪ್ರಮುಖರಾದ ಗುಣರಂಜನ್ ಶೆಟ್ಟಿ, ಮಾಜಿ

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ Read More »

ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ

ಪುತ್ತೂರು: ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ  ನಡೆಯಲಿರುವ ಬೆಂಗಳೂರು ‌ಕಂಬಳದ ಕರೆ‌ಮುಹೂರ್ತ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಆಹ್ವಾನ‌ ನೀಡಲಾಯಿತು. ನ.25 ಹಾಗೂ 26 ರಂದು ಬೆಂಗಳೂರು‌ಕಂಬಳ ನಡೆಯಲಿದ್ದು ಕರೆ ಮುಹೂರ್ತ ಕಾರ್ಯಕ್ರಮ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಬೆಂಗಳೂರು‌ ಕಂಬಳ ಸಮಿತಿ‌ ಅಧ್ಯಕ್ಷ ಶಾಸಕ ಅಶೋಕ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ , ಮುರಳೀಧರ್ ರೈ ಮಠಂತಬೆಟ್ಟು ಸಹಿತಿ ಕಂಬಳ

ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ Read More »

ವಜ್ರದೇಹಿ ಶ್ರೀಗೆ ಸಿಸಿಬಿ ನೋಟೀಸ್!?

ಮಂಗಳೂರು: ದಕ್ಷಿಣ ಕನ್ನಡದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಕುಂದಾಪುರ ಹಾಗೂ ಹಾಲಶ್ರೀ ಸ್ವಾಮಿಜಿ ಬಂಧನವಾಗಿ ತಿಂಗಳು ಕಳೆದಿದೆ. ಇದೀಗ  ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ಅವರು ಶ್ರೀಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಚೈತ್ರ ಇಡಿಗೆ ಬರೆದ ಪತ್ರದಲ್ಲಿ ವಜ್ರದೇಹಿ ಮಠದ

ವಜ್ರದೇಹಿ ಶ್ರೀಗೆ ಸಿಸಿಬಿ ನೋಟೀಸ್!? Read More »

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ

ಬೆಂಗಳೂರು: ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ 2023-25 ನೇ ಸಾಲಿನ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ ಹಾಗೂ ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಕಾರ್ಯದರ್ಶಿಗಳಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಖಜಾಂಜಿಯಾಗಿ ಕುಂಭಗೌಡನ ಸೋಮಣ್ಣ, ಜಂಟಿ ಕಾರ್ಯದರ್ಶಿಯಾಗಿ ನಾಗೇಶ್ ಬಂಟೋಡಿ ಉಳುವಾರನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ Read More »

ಯಾಕಾಗಿ ನಡೆಯಿತು ಬಿಜೆಪಿ – ಜೆಡಿಎಸ್ ಮೈತ್ರಿ? ಒಳಗುಟ್ಟು ಬಿಚ್ಚಿಟ್ಟ ದೇವೇಗೌಡ!

ಸುಬ್ರಹ್ಮಣ್ಯ: ಕುಮಾರಸ್ವಾಮಿಯವರು ಈಗಾಗಲೇ ಗೃಹಮಂತ್ರಿ ಜೊತೆ ಚರ್ಚೆ ನಡೆಸಿದ್ದಾರೆ. ಸೀಟು ಹಂಚಿಕೆಯ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೇ. ದಸರಾ ಕಳೆದು ಸೀಟು ಹಂಚಿಕೆ ಕುರಿತು ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. ದಕ್ಷಿಣ ಭಾರತದ ಹೆಸರಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮೈತ್ರಿಗೆ ಮೊದಲು ಜೆಡಿಎಸ್’ನ 19 ಶಾಸಕರು, 8 ಸಂಸದರು ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು

ಯಾಕಾಗಿ ನಡೆಯಿತು ಬಿಜೆಪಿ – ಜೆಡಿಎಸ್ ಮೈತ್ರಿ? ಒಳಗುಟ್ಟು ಬಿಚ್ಚಿಟ್ಟ ದೇವೇಗೌಡ! Read More »

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು

ಬೆಂಗಳೂರು: ಪಟಾಕಿ ಅನ್’ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ. ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್’ಗಳು

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು Read More »

error: Content is protected !!
Scroll to Top