ರಾಜ್ಯ

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ. ಅತೀಕ್

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಅವರು ತುಮಕೂರು ಜಿಲ್ಲೆ ಪಾವಗಡದವರು. 1991ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮಂಗಳೂರು ಎಸಿಯಾಗಿ ನಂತರ ಮಂಡ್ಯ, ಹಾಸನ ಡಿಸಿಯಾಗಿದ್ದವರು. ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕರೂ ಆಗಿದ್ದರು. ಕೇಂದ್ರ ಸರ್ಕಾರದ ಸೇವೆಯಲ್ಲಿ ಪ್ರಧಾನ ಮಂತ್ರಿಗಳ […]

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ. ಅತೀಕ್ Read More »

ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ

ವ್ಯಕ್ತಿಯೊಬ್ಬನಿಗೆ ಥಳಿಸಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ಬಂಧಿಸಿರುವ ಘಟನೆ ಮೀರತ್’ನಲ್ಲಿ ನಡೆದಿದೆ. ವಿಡಿಯೋ ಶೇರ್ ಮಾಡಿದ್ದಕ್ಕಾಗಿ ನಿನ್ನೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನವೆಂಬರ್ 13ರಂದು ಘಟನೆ ನಡೆದಿದ್ದು ಯುವಕರ ಗುಂಪೊಂದು ವಿದ್ಯಾರ್ಥಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿದ್ದಾರೆ ಆ ಬಳಿಕ ವಿದ್ಯಾರ್ಥಿಯ ಮುಖದ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿ ಅಮಾನುಷವಾಗಿ ವರ್ತಿಸಿದ್ದಾನೆ. ಇಷ್ಟೆಲ್ಲಾ ಘಟನೆ ನಡೆದಿರುವುದನ್ನು ಗುಂಪಿನ ಓರ್ವ ಸದಸ್ಯ ಚಿತ್ರೀಕರಿಸಿದ್ದಾನೆ. ಹಲ್ಲೆ ಮಾಡಬೇಡಿ ಎಂದು

ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ Read More »

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ

ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ Read More »

ಐವರ ಸಾಮೂಹಿಕ ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ನೆರಳು!! | “ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ”- ಡೆತ್ ನೋಟ್’ನಲ್ಲಿವೆ ಇನ್ನೂ ಹಲವು ವಿಚಾರಗಳು!!

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ತುಮಕೂರಿನ ಸದಾಶಿವ ನಗರದಲ್ಲಿ ನಡೆದಿದ್ದು, ಇದೀಗ ಆತ್ಮಹತ್ಯೆಯ ಹಿಂದಿನ ಒಂದೊಂದೇ ಘಟನೆಗಳು ಹೊರಬರುತ್ತಿದೆ. ಅಲ್ಲದೇ, ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ಕರಾಳತೆಯೂ ಇದೆ ಎಂಬ ಅನುಮಾನಗಳು ಮೂಡಿವೆ. ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸಾವಿಗೂ ಮುನ್ನ ಗರೀಬ್ ಸಾಬ್ ಅವರು ತನ್ನ ದೊಡ್ಡಮ್ಮನಿಗೆ ಡೆತ್ ನೋಟ್ ಬರೆದಿದ್ದಾರೆ‌. ದೊಡ್ಡಮ್ಮನಿಗೆ ನಮಸ್ಕಾರಗಳು. ನಮಗೆ ಸಾಲ ಹೆಚ್ಚಾಗಿದೆ.

ಐವರ ಸಾಮೂಹಿಕ ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ನೆರಳು!! | “ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ”- ಡೆತ್ ನೋಟ್’ನಲ್ಲಿವೆ ಇನ್ನೂ ಹಲವು ವಿಚಾರಗಳು!! Read More »

ಬೆಂಗಳೂರು: ‘ರಾಜ – ಮಹಾರಾಜ’ ಜೋಡುಕರೆ ಕಂಬಳಕ್ಕೆ ಸಂಭ್ರಮದ ತೆರೆ | ಫಲಿತಾಂಶ, ಬಹುಮಾನದ ವಿವರ ಇಲ್ಲಿದೆ

ರಾಜಧಾನಿಯ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ಸಮಿತಿ ನೇತೃತ್ವದಲ್ಲಿ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದ ‘ರಾಜ – ಮಹಾರಾಜ’ ಜೋಡುಕರೆ ಕಂಬಳ ಕೂಟ ಸೋಮವಾರ ಮುಂಜಾನೆ ಹೊತ್ತಿಗೆ ವಿದ್ಯುಕ್ತವಾಗಿ ತೆರೆ ಕಂಡಿದೆ. ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 7 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 6 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 21 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 32 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 31 ಜೊತೆ ಹಾಗೂ ನೇಗಿಲು

ಬೆಂಗಳೂರು: ‘ರಾಜ – ಮಹಾರಾಜ’ ಜೋಡುಕರೆ ಕಂಬಳಕ್ಕೆ ಸಂಭ್ರಮದ ತೆರೆ | ಫಲಿತಾಂಶ, ಬಹುಮಾನದ ವಿವರ ಇಲ್ಲಿದೆ Read More »

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ವೀಕ್ಷಿಸಿ ಊರಿಗೆ ವಾಪಾಸಾಗುತ್ತಿದ್ದಾಗ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬಜಪೆ ಮೂಲದ ಕಿಶಾನ್‍ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ಫಿಲೀಪ್‍ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ. ನಿತೀಶ್‍ ಭಂಡಾರಿ, ಪ್ರೀತಿ ಲೋಬೋ, ಹರೀಶ್ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು Read More »

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ!

ಬೆಂಗಳೂರು : ವಿವಿಧ ಇಲಾಖೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಮೊದಲ ಹಂತವಾಗಿ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಹಳೆಯ ಪ್ರಸ್ತಾವನೆಗೆ ಮತ್ತೆ ಚಾಲನೆ ನೀಡಲಾಗಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯು ಚರ್ಚೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಕುರಿತು ನವೆಂಬರ್‌ 8ರಂದು ಹೊರಡಿಸಲಾಗಿರುವ ಅರೆ ಸರ್ಕಾರಿ ಪತ್ರದಲ್ಲಿ ಈ ಕುರಿತು ಕೂಡಲೇ

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ! Read More »

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ!

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ. ಕಂಬಳ ಆಯೋಜನೆ ವೇಳೆ ಜಿಟಿ ಜಿಟಿ ಮಳೆಯಾಗಿತ್ತು. ಮಧ್ಯಾಹ್ನ ಏಕಾಏಕಿ ಸುರಿದ ಗಾಳಿ ಮಳೆಗೆ ಬಯಲ️ಲ್ಲಿ ನಿಂತಿದ್ದ ಜನತೆ ರಕ್ಷಣೆಗೆ ಓಡಿದರು. ಮಳೆ ಬಂದರೂ ಕಂಬಳ ಕೂಟ ಮಾತ್ರ ಸರಾಗವಾಗಿ ನಡೆಯುತ್ತಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು,

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ! Read More »

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ

ಬೆಂಗಳೂರು: ಶಾಸಕ ಅಶೋಕ್‌ ಕುಮಾರ್‌ ರೈ ಅವರ ನೇತೃತ್ವದಲ್ಲಿ ಕರಾವಳಿಯ ಗ್ರಾಮೀಣ ಸೊಗಡು ಕಂಬಳ ರಾಜಧಾನಿಗೆ ತಲುಪಿದೆ. ಬೆಂಗಳೂರಿನಲ್ಲಿರುವ ಕರಾವಳಿಗರು ಹಾಗೂ ಕಂಬಳವನ್ನು ಮೊದಲ ಬಾರಿಗೆ ನೋಡುತ್ತಿರುವ ಹೊರ ಊರಿಗರಿಗೆ ಬೆಂಗಳೂರು ಕಂಬಳ ಹಬ್ಬವಾಗಿ ಮೂಡಿಬರುತ್ತಿದೆ. ಬೆಳಿಗ್ಗೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ರಾಜ ಮಹರಾಜ ಹೆಸರಿನ ಕಂಬಳ ಕರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಸದ ಸದಾನಂದ

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ Read More »

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ

ಬೆಂಗಳೂರು: ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರಪಾಳ್ಯ ಚಿತಾಗಾರದಲ್ಲಿ ನಡೆಯಿತು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್​,

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ Read More »

error: Content is protected !!
Scroll to Top