ರಾಜ್ಯ

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್!

ಬೆಂಗಳೂರು: ಬಹುಕೋಟಿ ವಂಚನೆ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆದಕಿದಷ್ಟು ಬೆಚ್ಚಿ ಬೀಳಿಸುವ ವಿಷಯಗಳು ಹೊರಬರುತ್ತಿವೆ. ಮಾಹಿತಿ ಪ್ರಕಾರ, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಹಲವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇನ್ನೂ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ಪೋನ್ ಮೂಲಕ ಮೌಖಿಕ ಸೂಚನೆ ನೀಡಿದೆ ಎನ್ನಲಾಗಿದೆ. ಭಜರಂಗದಳ, ವಿಹೆಚ್​ಪಿ, ಹಿಂದೂ ಜಾಗರಣೆ ವೇದಿಕೆಯ ಮುಖಂಡರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಿಂದುತ್ವ ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವದೂತ ವಿನಯ್ ಗುರೂಜಿಗೆ […]

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್! Read More »

ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರದ ಮಹತ್ವದ ಆದೇಶ!

ಬೆಂಗಳೂರು: ಸರ್ಕಾರದ ಅಧಿಕೃತ ಸಭೆ, ಸಮಾರಂಭ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಮತ್ತು ಲೋಟಗಳನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  2018ರಲ್ಲಿ ಮಾಡಿದ್ದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಂದ ಈ ಆದೇಶ ಹೊರಬಿದ್ದಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಾಟಲ್‌ನ ನೀರಿನ ಬಳಕೆ

ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರದ ಮಹತ್ವದ ಆದೇಶ! Read More »

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು?

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಹೆಲ್ತ್ ಕಿಯೋಸ್ಕ್” (ಹೆಲ್ತ್‌ ಎಟಿಎಂ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಕಾರ್ಪೋರೇಟ್‌ ಕಂಪನಿಗಳ (ಸಿಎಸ್‌ಆರ್‌ ನಿಧಿಯಡಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಹೆಲ್ತ್‌ ಎಟಿಎಮ್ ಯೋಜನೆ ಜಾರಿಗೊಂಡಿದೆ. ಆರೋಗ್ಯ ಕೇಂದ್ರಗಳಲ್ಲಿ, ವೆಲ್‌ನೆಸ್ ಸೆಂಟರ್ ಸೇರಿದಂತೆ 25 ಆಯ್ದ ಸ್ಥಳಗಳಲ್ಲಿ ಹೆಲ್ತ್ ಎಟಿಎಮ್ ಅನ್ನು ಆರಂಭ ಮಾಡಲಾಗಿದೆ. ಇದರಿಂದ ಅನೇಕ ಪ್ರಯೋಜನಗಳಿವೆ. ಅಲ್ಲದೆ, ಹೆಲ್ತ್ ಎಟಿಎಂ ಹೇಗೆ ಕಾರ್ಯನಿರ್ವಹಣೆ ಮಾಡಲಿದೆ ಎಂಬುದನ್ನು ನೋಡೋಣ.

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು? Read More »

ಸಾಲು ಮರದ ತಿಮ್ಮಕ್ಕ ಅವರ ಸರ್ಕಾರಿ ಸೌಲಭ್ಯವನ್ನು ಬಳಸಿಕೊಂಡಳಾ ಚೈತ್ರಾ?

ಬೆಂಗಳೂರು: ಸಿಸಿಬಿ ಬಂಧನದ ಬಳಿಕ ಚೈತ್ರಾ ಮತ್ತು ತಂಡದ ಹೊಸ ಹೊಸ ವಂಚನೆಗಳು ಇದೀಗ ಬೆಳಕಿಗೆ ಬರತೊಡಗಿದೆ. ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿರುವ ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ ಮತ್ತವರ ತಂಡ ಅಕ್ರಮವಾಗಿ ಬಳಸಿಕೊಂಡಿದೆ ಎಂಬ ಹೊಸ ಆರೋಪ ಕೇಳಿಬಂದಿದೆ. ಚೈತ್ರಾ ಗ್ಯಾಂಗಿನ ಗಗನ್ ಎಂಬಾತ ಸಾಲು ಮರದ ತಿಮ್ಮಕ್ಕ ಅವರ ಪುತ್ರನ ಜೊತೆ ಸ್ನೇಹದಿಂದಿದ್ದ. ಇದನ್ನೇ ತಮ್ಮ ವಂಚನೆಗೆ ಬಳಸಿಕೊಂಡಿದ್ದ ಗಗನ್, ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರನ್ನು ಬಳಸಿಕೊಂಡಿದ್ದ ಎನ್ನಲಾಗಿದೆ. ಈ

ಸಾಲು ಮರದ ತಿಮ್ಮಕ್ಕ ಅವರ ಸರ್ಕಾರಿ ಸೌಲಭ್ಯವನ್ನು ಬಳಸಿಕೊಂಡಳಾ ಚೈತ್ರಾ? Read More »

ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!!

ಕೋಲಾರ: ಯಾರೋ ಒಬ್ಬ ದೊಡ್ಡ ಸಾಧಕರಿಗೆ ಸನ್ಮಾನ ಮಾಡುವಾಗಲೂ ನಾವು ಚಪ್ಪಲಿ ಕಳಚಿಟ್ಟು ನಿಲ್ಲುವುದಿಲ್ಲ. ಆದರೆ, ಕೋಲಾರದ ಎಸ್‌ಪಿ ನಾರಾಯಣ ಅವರು 11 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ವಾನ ಲೈಕಾ ಬೀಳ್ಕೊಡುಗೆ ಸಂದರ್ಭದಲ್ಲಿ ಶೂ ಕಳಚಿಟ್ಟು ಆ ನಾಯಿಗೆ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ನಾಯಿಯ ಬಗೆಗಿನ ಪೊಲೀಸರ ಪ್ರೀತಿ ಜಗತ್ತಿಗೆ ಅರ್ಥವಾಯಿತು. ಹೀಗೆ ಸನ್ಮಾನ ಮಾಡಿಸಿಕೊಂಡ ಶ್ವಾನದಳದ ನಾಯಿ ಏನು ಸಾಮಾನ್ಯದ್ದಲ್ಲ. ಕಳೆದ 11 ವರ್ಷಗಳಿಂದ

ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!! Read More »

ಪುತ್ತಿಗೆ ಪರ್ಯಾಯ: ಸ್ವಾಗತ ಕಾರ್ಯಾಲಯ ಕಚೇರಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಉಡುಪಿ: ಪುತ್ತಿಗೆ ಪರ್ಯಾಯದ ಪೂರ್ವಭಾವಿಯಾಗಿ ಶನಿವಾರ ಪರ್ಯಾಯ ಕಾರ್ಯಾಲಯ ಕಚೇರಿ ಮತ್ತು ಸ್ವಾಗತ ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ  ಹೆಗ್ಗಡೆ ಉದ್ಘಾಟಿಸಿದರು. ಇದೇ ಸಂದರ್ಭ ಪರ್ಯಾಯ ಲಾಂಛನವನ್ನೂ ಬಿಡುಗಡೆಗೊಳಿಸಲಾಯಿತು. ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಪುತ್ತಿಗೆ ಪರ್ಯಾಯ: ಸ್ವಾಗತ ಕಾರ್ಯಾಲಯ ಕಚೇರಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತು ವಶಕ್ಕೆ! | ಎಲ್ಲೆಲ್ಲಿ, ಎಷ್ಟೆಷ್ಟು ಮೌಲ್ಯದ ಸೊತ್ತುಗಳು ವಶಕ್ಕೆ? ಇಲ್ಲಿದೆ ಡೀಟೈಲ್ಸ್… |

ಮಂಗಳೂರು (ಬೆಂಗಳೂರು): ವಂಚನೆ ಪ್ರಕರಣದ ಆರೋಪದಲ್ಲಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಚ್ ವಾರೆಂಟ್ ಪಡೆದು ಶೋಧ ಕಾರ್ಯ ನಡೆಸಿದ ಸಿಸಿಬಿ ಪೊಲೀಸ್ ಪಡೆ ಉಡುಪಿಯ ಉಳ್ಳೂರು ಶ್ರೀರಾಮ ಸೊಸೈಟಿ ಆಸ್ತಿ, ಬಂಗಾರ ಪತ್ತೆ ಮಾಡಿದೆ. 1 ಕೋಟಿ 08 ಲಕ್ಷ ರೂಪಾಯಿ ಖಾಯಂ ಠೇವಣಿ, ಸೊಸೈಟಿ ಖಾತೆಯಲ್ಲಿ 40 ಲಕ್ಷ ರೂ. ನಗದು ಮತ್ತು 400 ಗ್ರಾಂ ಚಿನ್ನ ಕೂಡ ಪತ್ತೆ ಮಾಡಿದೆ. ಅಲ್ಲದೇ ತನ್ನ ಸ್ನೇಹಿತೆಯ

ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತು ವಶಕ್ಕೆ! | ಎಲ್ಲೆಲ್ಲಿ, ಎಷ್ಟೆಷ್ಟು ಮೌಲ್ಯದ ಸೊತ್ತುಗಳು ವಶಕ್ಕೆ? ಇಲ್ಲಿದೆ ಡೀಟೈಲ್ಸ್… | Read More »

ಗಣೇಶ ಚತುರ್ಥಿಗೆ ಸೆ. 19ರಂದೇ ರಜೆ ಫಿಕ್ಸ್: ಸರ್ಕಾರದಿಂದ ಹೊರಬಿತ್ತು ಆದೇಶ

ಬೆಂಗಳೂರು: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ. ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು

ಗಣೇಶ ಚತುರ್ಥಿಗೆ ಸೆ. 19ರಂದೇ ರಜೆ ಫಿಕ್ಸ್: ಸರ್ಕಾರದಿಂದ ಹೊರಬಿತ್ತು ಆದೇಶ Read More »

ಹಾಲಶ್ರೀ ಕಾರು ಚಾಲಕ CCB ವಶ!

ಬೆಂಗಳೂರು: ಅಭಿನಯ ಹಾಲಶ್ರೀ ಸ್ವಾಮೀಜಿಯ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಭಿನಯ ಶ್ರೀ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಬಿಜೆಪಿ ಬೈಂದೂರು ಎಂ.ಎಲ್‌ಎ ಟಿಕೆಟ್ ಪಡೆಯಬೇಕಾದ್ರೇ ಅಭಿನಯ ಹಾಲಶ್ರೀ ಶಿಫಾರಸ್ಸು ಮುಖ್ಯ ಎಂಬುದಾಗಿ ಉದ್ಯಮಿ ಗೋವಿಂದಬಾಬುಗೆ ಚೈತ್ರಾ ಕುಂದಾಪುರ ಹಾಗೂ ಅವರ ತಂಡ ಹೇಳಿತ್ತು. ಅದರಂತೆ ಉದ್ಯಮಿ ಅಭಿನಯ ಹಾಲಶ್ರೀಗಳನ್ನು ಬೆಂಗಳೂರಿನ ವಿಜಯನಗರದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭ ತನಗೆ ಬೈಂದೂರು ಉಸ್ತುವಾರಿಯನ್ನು ನೀಡಿದ್ದಾರೆ. ಅಲ್ಲದೇ ಕೇಂದ್ರದ ಬಿಜೆಪಿ ನಾಯಕರು ಪರಿಚಯ ಎಂದೂ

ಹಾಲಶ್ರೀ ಕಾರು ಚಾಲಕ CCB ವಶ! Read More »

ಘೋಷ್ ಅಧ್ಯಯನಕ್ಕಾಗಿ ಡಾಕ್ಟರೇಟ್ ಪಡೆದಿದ್ದ ಕಟ್ಟಿಗೆ ಹಳ್ಳಿ ಮಠದ ಡಾ. ಮಹಾಂತೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಕಟ್ಟಿಗೆ ಹಳ್ಳಿ ಮಠದ ಸ್ವಾಮೀಜಿಗಳಾದ ಡಾ. ಮಹಾಂತೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಇವರು ಗ್ರಾಮದಲ್ಲಿ ನಡೆದಾಡುವ ದೇವರೆಂದೇ ಹೆಸರಾಗಿದ್ದರು. ಡಾ. ಮಹಾಂತೇಶ್ವರ ಸ್ವಾಮೀಜಿ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರ ರಾತ್ರಿ ನಿಧನರಾಗಿರುವ ಅವರ ಪಾರ್ಥಿವ ಶರೀರವನ್ನು ಶ್ರೀ ಮಠಕ್ಕೆ ತರಲಾಗಿದ್ದು, ಸಾಣೆಹಳ್ಳಿ ಶ್ರೀಗಳು ಸೇರಿದಂತೆ ಹಲವಾರು ಗಣ್ಯರು

ಘೋಷ್ ಅಧ್ಯಯನಕ್ಕಾಗಿ ಡಾಕ್ಟರೇಟ್ ಪಡೆದಿದ್ದ ಕಟ್ಟಿಗೆ ಹಳ್ಳಿ ಮಠದ ಡಾ. ಮಹಾಂತೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ Read More »

error: Content is protected !!
Scroll to Top