ರಾಜ್ಯ

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಮೊಬೈಲ್’ನಲ್ಲಿ ಮಾತನಾಡಿರುವ ವೀಡಿಯೋ ಒಂದು ಇದೀಗ ಮಾಧ‍್ಯಮಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಸಭೆಯಲ್ಲಿದ್ದ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡುತ್ತಾ, “ಅಪ್ಪ ಹೇಳಿ” ಎಂದು ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಆ ಕಡೆಯಿಂದ ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಪ್ರಶ್ನೆ ಮಾಡುತ್ತಾರೆ. ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು, […]

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್ Read More »

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಬುಧವಾರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್‌.ಎಂ. ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಜಯನಗರ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ದೂರು ದಾಖಲಿಸಿದ್ದಾರೆ. ‘ಡಿಕೆ ಸಹೋದರರನ್ನು ಕೊಲ್ಲು’ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ ಪೋಸ್ಟ್ ಹಾಕಿದ್ದ ಎಂದು ಹೇಳಲಾಗಿದೆ.

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ Read More »

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಗಣಹೋಮ, ದುರ್ಗಾಹೋಮದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಾಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರಗ ಜ್ಞಾನೇಂದ್ರ, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ, ಅಶೋಕ್, ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್ ಅವರು, ದೇಶದ ಅತಿದೊಡ್ಡ ಪಕ್ಷದ

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್ Read More »

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ

ಬೆಂಗಳೂರು: ರಾಜ್ಯ ಬಿಜೆಪಿಯ 11 ನೇ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ದುರ್ಗಾ ಹೋಮ ಹಾಗೂ ಗಣಪತಿ ಹೋಮ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೋಮ ಕಾರ್ಯದ ಸಂಕಲ್ಪದಲ್ಲಿ ಭಾಗಿಯಾಗಿದ್ದು, ಅವರಿಗೆ ಪೂಜಾ ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಾಗಿತ್ತು. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯನ್ನು ವಿದ್ಯುತ್ ದೀಪಗಳು ಮತ್ತು ತೋರಣಗಳಿಂದ ಅಲಂಕರಿಸಲಾಗಿತ್ತು.

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ Read More »

ಬೈಕ್‍ಗೆ ಲಾರಿ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ತರಕಾರಿ ತುಂಬಿದ ಲಾರಿಯೊಂದು ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ‍ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತಪಟ್ಟ ಬೈಕ್ ಸವಾರ. ತಂದೆಯ ಜತೆ ಬೈಕ್‍ನಲ್ಲಿ ತೆರಳುತ್ತಿದ್ದ ಸಂದರ್ಭ ತರಕಾರಿ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಂಜುನಾಥ್ ಲಾರಿಯಡಿ ಸಿಲುಕಿ ದೂರ ಎಳೆದೊಯ್ದಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‍ಗೆ ಲಾರಿ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು Read More »

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು

ಬೆಂಗಳೂರು: ಅಪರಿಚಿತರ ಗುಂಪೊಂದು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಸೂರ್ಯ (22) ಹತ್ಯೆಯಾದ ಯುವಕ. ಭಾನುವಾರ ರಾಮೇಶ್ವರ ಸಮೀಪದ ರೆಸ್ಟೋರೆಂಟ್ ಒಂದಲ್ಲಿ ಸೂರ್ಯ ನಾಲ್ವರು ಸ್ನೇಹಿತರೊಂದಿಗೆ ಫೋಟೊ ಶೂಟ್ ಮಾಡುತ್ತಿದ್ದ ವೇಳೆ ಅಪರಿಚಿತರ ಗುಂಪೊಂದು ಅವರ ಜತೆ ಕಿರಿಕ್ ತೆಗೆದಿದೆ. ಅಪರಿಚಿತರ ತಂಡ ಫೋಟೋ ತೆಗೆದಿದ್ದ ಕ್ಯಾಮೆರಾ ಕಿತ್ತುಕೊಂಡು ನಾಲ್ವರು ಯುವಕರ ಮೇಲೆ ಹಲ್ಲೆ ಮಾಡಿ, ಸೂರ್ಯನಿಗೆ ಚಾಕುವಿನಿಂದ ಇರಿದಿದ್ದಾರೆ.

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು Read More »

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಶನಿವಾರ ಬೆಂಗಳೂರಿನ ವಿಜಯನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅವರ ಆಪ್ತ ಬೆಂಬಲಿಗರು ಉಪಸ್ಥಿತರಿದ್ದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

ಸರಕಾರಿ ಬಸ್-ಓಮ್ನಿ ಬಸ್ ಡಿಕ್ಕಿ | 5 ಮಂದಿ ಮೃತ್ಯು, 60 ಮಂದಿಗೆ ಗಾಯ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಓಮ್ಮಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 10 ಅಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದ್ದು, ಸಮೀಪದ ಚೆಟ್ಟಿಯಪ್ಪನೂರಿನಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓನ್ನಿಬಸ್ ನಡುವೆ ಅಪಘಾತ ಸಂಭವಿಸಿದ್ದು

ಸರಕಾರಿ ಬಸ್-ಓಮ್ನಿ ಬಸ್ ಡಿಕ್ಕಿ | 5 ಮಂದಿ ಮೃತ್ಯು, 60 ಮಂದಿಗೆ ಗಾಯ Read More »

ಅನಂತಪುರ ಕ್ಷೇತ್ರದಲ್ಲಿ ಮತ್ತೆ ಕಾಣಿಸಿಕೊಂಡ ಮೊಸಳೆ | ಭಕ್ತರಲ್ಲಿ ಸಂತಸ

ಅನಂತಪುರ: ಕಾಸರಗೋಡು: ಇತಿಹಾಸ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ಭಕ್ತಾದಿಗಳ ಆಸೆಯಂತೆ ಮೊಸಳೆ ಕಾಣ ಸಿಕ್ಕಿದೆ. ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿದ ಬಳಿಕ ಭಕ್ತರಲ್ಲಿ ಬೇಸರದ ಛಾಯೆ ಮೂಡಿತ್ತು. ಎಲ್ಲರೂ ದೇವರಲ್ಲಿ ಇನ್ನೊಂದು ಬಬಿಯಾದ ಪ್ರತಿಬಿಂಬವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದರು. ಒಂದು ವಾರದ ಹಿಂದೆ ಭಕ್ತಾದಿಯೊಬ್ಬರು ಮೊಸಳೆ ಕಂಡಂತೆ ಆಯಿತು ಅಂದರೂ ಸಾಕ್ಷ್ಯಾಧಾರ ಇಲ್ಲದಿದ್ದರಿಂದ ನಂಬಲು ಅಸಾಧ್ಯವಾಗಿತ್ತು. ಇದೀಗ ಕ್ಷೇತ್ರದ ಆಡಳಿತ ಮಂಡಳಿ ಮೊಸಳೆ ಇರುವುದನ್ನು ಖಚಿತಪಡಿಸಿದೆ. ದೇವರ ಪ್ರತಿ ಬಿಂಬ

ಅನಂತಪುರ ಕ್ಷೇತ್ರದಲ್ಲಿ ಮತ್ತೆ ಕಾಣಿಸಿಕೊಂಡ ಮೊಸಳೆ | ಭಕ್ತರಲ್ಲಿ ಸಂತಸ Read More »

ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿಯಲಿದ್ದಾರೆ. ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ! Read More »

error: Content is protected !!
Scroll to Top