ರಾಜ್ಯ

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ

ಪುತ್ತೂರು: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಧರ್ಮಸ್ಥಳದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಪೊಲೀಸ್ ಇಲಾಖೆ, ಸಿಐಡಿ, ಸಿಬಿಐ ತನಿಖೆ ನಡೆದಿತ್ತು. ಪ್ರಕರಣ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ […]

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ Read More »

ರಾಯಚೂರಿನ ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ ಆತ್ಮಹತ್ಯೆ | ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಶಂಕೆ !

ರಾಯಚೂರು : ಹಿರಿಯ ಪತ್ರಕರ್ತರೊಬ್ಬರು ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರುಗಿಯಲ್ಲಿ ನಡೆದಿದೆ. ರಾಯಚೂರಿನ ಕಲ್ಲೂರು ಗ್ರಾಮದ ಕೆ.ಎನ್.ರೆಡ್ಡಿ (57) ಈ ಕೃತ್ಯ ಎಸಗಿದವರು. ಹಲವು ವರ್ಷಗಳಿಂದ ಕಲಬುರಗಿ ನಗರದ ದರಿಯಾಪುರದಲ್ಲಿ ಪತ್ನಿ ಹಾಗೂ ಪುತ್ರಿ ಜತೆ ವಾಸವಾಗಿದ್ದರು. ಸಾಲದ ಹೊರೆ ಮತ್ತು ಕೌಟುಂಬಿಕ ಕಲಹಕ್ಕೆ ಬೇಸತ್ತು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ರೆಡ್ಡಿ ಅವರು ಡೆಕ್ಕನ್ ಹೆರಾಲ್ಡ್ ಸೇರಿದಂತೆ ವಿವಿಧ ಆಂಗ್ಲ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಜೆಸ್ಕಾಂನ ಸಾರ್ವಜನಿಕ

ರಾಯಚೂರಿನ ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ ಆತ್ಮಹತ್ಯೆ | ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಶಂಕೆ ! Read More »

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ | ನ.17 ರ ವರೆಗೆ ಕಾಲಾವಕಾಶ

ಬೆಂಗಳೂರು : ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಂಡಳಿಯ ಸದಸ್ಯ ಡಾ.ಕಮಲ್ಜೀತ್ ಸೋಯಿ ಅವರು, ಸುರಕ್ಷತೆಯ ದೃಷ್ಟಿಯಿಂದ ಇದನ್ನು ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ ಎಂದಿದ್ದಾರೆ. ದೇಶದಲ್ಲಿ ಸುಮಾರು 34 ಕೋಟಿಗೂ ಹೆಚ್ವು ನಕಲಿ ನಂಬರ್ ಪ್ಲೇಟ್ ಅಳವಡಿಸಿದ ವಾಹನಗಳು ಓಡಾಡುತ್ತಿದೆ. ಇದರಿಂದ ದೇಶದಲ್ಲಿ ಶೇ.99 ಅಪಘಾತಗಳು

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ | ನ.17 ರ ವರೆಗೆ ಕಾಲಾವಕಾಶ Read More »

ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು: ನಮ್ಮ ನಾಡನ್ನು ಆಳುವವರು ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಶ್ರೀಗಳು ಹೇಳಿದ್ದಾರೆ. ಪತ್ರಿಕಾ ಹೇಳೀಕೆ ನೀಡಿರುವ ಅವರು, ಮೈಸೂರು: ಉದಯನಿಧಿ ಸ್ಟಾಲಿನ್​  ಹೇಳಿಕೆಗೆ ಸಿಡಿದೆದ್ದಿದ್ದಾರೆ. ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ. ಅಂತಾ ಆದಿಚುಂಚನಗಿರಿ ಶ್ರೀಗಳು ಮಹಾಭಾರತದ ಸಂದೇಶ ಉಲ್ಲೇಖಿಸಿದ್ದಾರೆ. ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜಾಗೃತವಾಗಿರಬೇಕು. ಬಳಸುವ ಪದಗಳ

ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

ಉದಯನಿಧಿ ಸ್ಟಾಲಿನ್, ಜಿ.ಪರಮೇಶ್ವರ ಅವರಿಂದ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ | ಕೌಂಟರ್ ನೀಡಿದ ರಾಜ್ಯ ಬಿಜೆಪಿ

ಬೆಂಗಳೂರು: ಇತ್ತೀಚೆಗೆ ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರ ಬೆನ್ನಲ್ಲೇ, ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರು ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗೆ ಎಕ್ಸ್(ಟ್ವಿಟ್ಟರ್) ನಲ್ಲಿ ಟ್ವಿಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಪ್ರತ್ಯುತ್ತರ ನೀಡಿದ್ದು, “ಯಾರಿಗಾದರೂ ಅವರ ಮುತ್ತಾತ,

ಉದಯನಿಧಿ ಸ್ಟಾಲಿನ್, ಜಿ.ಪರಮೇಶ್ವರ ಅವರಿಂದ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ | ಕೌಂಟರ್ ನೀಡಿದ ರಾಜ್ಯ ಬಿಜೆಪಿ Read More »

ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ

ಬೆಂಗಳೂರು: ರಾಜ್ಯ ಸರಕಾರ ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಅ.2 ರಿಂದ 29 ರ ವರೆಗೆ ನೀಡಲಾಗುತ್ತಿದ್ದ ದಸರಾ ರಜೆಯನ್ನು  ಕೊರೊನಾ ಹಿನ್ನಲೆಯಲ್ಲಿ ಕಡಿತಗೊಳಿಸಲಾಗಿತ್ತು. ಲಾಕ್ ಡೌನ್ ಸಂದರ್ಭದಲ್ಲಿ ನಡೆಯದ ತರಗತಿಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೂ ಹಿಂದಿನ ಕಡಿತ ನೀತಿ ಅನುಸರಿಸುತ್ತಿದೆ. ಸಾಮಾನ್ಯ ಶಾಲೆಗಳಿಗೆ ಅ.8 ರಿಂದ 24 ಕ್ಕೆ ಸೀಮಿತಗೊಳಿಸಲಾಗಿದ್ದು, ವಿಶೇಷ

ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ Read More »

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ

ಮಂಗಳೂರು: ಶಿಕ್ಷಕರ ದಿನಾಚರಣೆಯಂದೇ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ 24ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ತರಲಾಗಿದ್ದು, ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ Read More »

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆಯು ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್‌ ರೋವರ್‌ ಸಂಚಾರ ನಡೆಸುವ ವೀಡಿಯೊವನ್ನು ಹಂಚಿಕೊಂಡಿದೆ. ಚಂದ್ರನ ಮೇಲೈಯಲ್ಲಿ ಅನೇಕ ಕುಳಿಗಳು ಮತ್ತು ಬಂಡೆಗಳನ್ನು ತಪ್ಪಿಸಿ ಚಲಿಸುವ ವಿಡಿಯೋವನ್ನು ಇಸ್ರೋ ಹಂಚಿಕೊಂಡಿದ್ದು, ಬೆಂಗಳೂರಿನ ಸೆಂಟರ್‌ನಿಂದ ದೂರದಿಂದಲೇ ರೋವರ್ ಚಾಲನೆ ನಿಯಂತ್ರಿಸಲಾಗುತ್ತಿದೆ. ಮುಂದಿನ ವಾರದೊಳಗೆ (ಭೂಮಿಯ 14ದಿನಗಳು) ತನ್ನ ಪ್ರಯೋಗಳನ್ನು ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಗ್ಯಾನ್ ರೋವರ್ ತೊಡಗಿದೆ. ಸುರಕ್ಷಿತ ಮಾರ್ಗದ ಹುಡುಕಾಟದಲ್ಲಿ ರೋವರ್ ಅನ್ನು ತಿರುಗಿಸಲಾಗಿದೆ. ತಿರುಗುವಿಕೆಯನ್ನು ಲ್ಯಾಂಡ‌ ಇಮೇಜರ್ ಕ್ಯಾಮೆರಾ ಸೆರೆಹಿಡಿಯಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ Read More »

ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

ಮಡಿಕೇರಿ : ಮಡಿಕೇರಿಯ ಯುವ ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ವಸತಿಗೃಹವೊಂದರಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಡ್ಯ ಮೂಲದ ರಶ್ಮಿ (27) ಈ ಕೃತ್ಯ ಎಸಗಿ ಮೃತಪಟ್ಟವರು. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ ಡಿಎಫ್‍ಆರ್ ಒ ಆಗಿ ಕೊಡಗಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″

ಸುಳ್ಯ : ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ  ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಶಿಕ್ಷಕರ ಅತ್ಯುತ್ತಮ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು,  ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″ Read More »

error: Content is protected !!
Scroll to Top