ರಾಜ್ಯ

ಬಸ್‌ಗಳಲ್ಲಿ ಆಡಿಯೋ ಪ್ರಕಟನೆಗೆ ಸೂಚನೆ!

ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಬಸ್‌ಗಳಲ್ಲಿ ಆಡಿಯೋ ರೂಪದಲ್ಲಿ ಪ್ರಕಟನೆ ವ್ಯವಸ್ಥೆ ಅಳವಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿದೆ. ಬೆಂಗಳೂರಿನ ದೃಷ್ಟಿ ವಿಶೇಷ ಚೇತನ ಎನ್‌. ಶ್ರೇಯಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಈ ಸಂಬಂಧ ಖಾಸಗಿ ಬಸ್‌ ಆಪರೇಟರ್‌ಗಳಿಗೆ ನಿರ್ದೇಶನ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ […]

ಬಸ್‌ಗಳಲ್ಲಿ ಆಡಿಯೋ ಪ್ರಕಟನೆಗೆ ಸೂಚನೆ! Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ Read More »

ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್

ಕಾಸರಗೋಡು: ರೈಲು ಹಳಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ನವೀನ್ (26)ಮೃತಪಟ್ಟವರು. ಕುಂಬಳೆ ಸಮೀಪದ ಶಿರಿಯ ಸೇತುವೆ ಬಳಿ ಘಟನೆ ನಡೆದಿದ್ದು, ಬಂದ್ಯೋಡು ಮುಟ್ಟಂನಿಂದ ಶಿರಿಯ ತನಕ ಹಳಿ ತಪಾಸಣೆಗೆ ನವೀನ್‌ಗೆ ನೀಡಲಾಗಿತ್ತು. ಸೇತುವೆ ಸಮೀಪ ತಪಾಸಣೆಗೆ ನಡೆಸುತ್ತಿದ್ದಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ರೈಲು ಬಡಿದಿದೆ. ಕೆಲ ಸಮಯದ ಹಿಂದೆಯಷ್ಟೇ ನವೀನ್ ರೈಲ್ವೆ, ಕೆಲಸಕ್ಕೆ ಸೇರಿದ್ದರು. ರೈಲ್ವೆ ಅಧಿಕಾರಿಗಳು,

ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್ Read More »

ಕುಸಿದು ಬಿದ್ದು ವಿದ್ಯಾರ್ಥಿನಿ ಉಷಾ ಮೃತ್ಯು

ಚಿಕ್ಕಮಗಳೂರು: ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಉಷಾ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಬಿದ್ದಿದ್ದಾಳೆ. ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು 108 ಆಂಬುಲೆನ್ಸ್ ಮೂಲಕ ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.  ಮೃತ ಉಷಾ ಹಲವು ವರ್ಷಗಳಿಂದ ಟಿ.ಬಿ. ಖಾಯಿಲೆಯಿಂದ ಬಳಲುತ್ತಿದ್ದಳು ಎಂದು ವಸತಿ ಶಾಲೆಯ

ಕುಸಿದು ಬಿದ್ದು ವಿದ್ಯಾರ್ಥಿನಿ ಉಷಾ ಮೃತ್ಯು Read More »

ಹಗಲು ಪೊಲೀಸ್ ಡ್ಯೂಟಿ, ರಾತ್ರಿ ಕಳ್ಳತನ | ಮುಖ್ಯ ಪೇದೆಯ ಬಂಧನ

ಚಿಕ್ಕಬಳ್ಳಾಪುರ:  ಹಗಲು ಪೊಲೀಸ್ ಡ್ಯೂಟಿ, ರಾತ್ರಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಮುಖ್ಯ ಪೇದೆಯೊಬ್ಬನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಹೊರಠಾಣೆಯ ಮುಖ್ಯಪೇದೆ ಸಿದ್ದರಾಮರೆಡ್ಡಿ ಬಂಧಿತ ಆರೋಪಿ. ಬೆಳಗ್ಗೆ ವೇಳೆ ಪೊಲೀಸ್‌ ಡ್ಯೂಟಿ ಮಾಡೋದು, ರಾತ್ರಿಯಾಗುತ್ತಿದ್ದಂತೆ ಕಳ್ಳತನದ ಡ್ಯೂಟಿ ಮಾಡುತ್ತಿದ್ದ ಮುಖ್ಯಪೇದೆ ಸಿದ್ದರಾಮರೆಡ್ಡಿ ಇದೀಗ ಬಂಧಿಸಿ ಅಟ್ಟಲಾಗಿದೆ. ಪೊಲೀಸಪ್ಪನೇ ಕಳ್ಳತನಕ್ಕೆ ಇಳಿಯೋದೂ ಅಲ್ಲದೆ; ಎಂಓಬಿ ಅಪರಾಧಿಯೊಬ್ಬನನ್ನು ಕೂಡ ಕಳ್ಳತನ ಮಾಡಲು ಜೊತೆಯಾಗಿ ಇಟ್ಟುಕೊಂಡಿದ್ದ ಈ ಘನಂಧಾರಿ ಪೊಲೀಸಪ್ಪ ಎಂಬುದು ಮತ್ತಷ್ಟು ಬೇಸರದ ಸಂಗತಿ. ಕೇರಳ ಮತ್ತು

ಹಗಲು ಪೊಲೀಸ್ ಡ್ಯೂಟಿ, ರಾತ್ರಿ ಕಳ್ಳತನ | ಮುಖ್ಯ ಪೇದೆಯ ಬಂಧನ Read More »

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಕೊಲೆಗೆ ಬಿಗ್ ಟ್ವಿಸ್ಟ್ | ಕೊಲೆ ಆರೋಪದಲ್ಲಿ ಕಾರು ಚಾಲಕ ಕಿರಣ್ ಬಂಧನ

ಬೆಂಗಳೂರು: ಸರ್ಕಾರಿ ಕರ್ತವ್ಯದಲ್ಲಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಅವರ ಕೊಲೆಗೆ ಸಂಬಂಧಪಟ್ಟಂತೆ ಇದೀಗ ಬಿಗ್ ಅಪ್ಡೇಟ್ ಸಿಕ್ಕಿದ್ದು, ಪ್ರತಿಮಾ ಅವರ ಹಿಂದಿನ ಕಾರು ಚಾಲಕನೊಬ್ಬ ಈ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸುಬ್ರಮಣ್ಯ ಠಾಣೆಯ ಪೊಲೀಸ್ ಅಧಿಕಾರಿಗಳು ಕಾರು ಚಾಲಕ ಕಿರಣ್ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣನೇ ಹತ್ಯೆ ಮಾಡಿರಬಹುದು ಎಂಬ ಶಂಕೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಕೊಲೆಗೆ ಬಿಗ್ ಟ್ವಿಸ್ಟ್ | ಕೊಲೆ ಆರೋಪದಲ್ಲಿ ಕಾರು ಚಾಲಕ ಕಿರಣ್ ಬಂಧನ Read More »

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು

ಕಾಸರಗೋಡು: ಸ್ಕೂಟರ್ – ಜೀಪು ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ. ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ವಿದ್ಯಾರ್ಥಿ. ಈತ ಉಪ್ಪಳ ತಹಾನಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಮಸೀದಿಯಿಂದ ಮರಳುತ್ತಿದ್ದಾಗ ಮನೆ ಸಮೀಪವೇ ಈ ಅಪಘಾತ ನಡೆದಿದೆ. ಮುಂಭಾಗದಲ್ಲಿ ತೆರಳುತ್ತಿದ್ದ ಜೀಪು ತಿರುವೊಂದರಲ್ಲಿ ಏಕಾಏಕಿ ಬ್ರೇಕ್ ಹಾಕಿದೆ. ಆಗ ಹಿಂಭಾಗದಲ್ಲಿ ಬರುತ್ತಿದ್ದ ಸ್ಕೂಟರ್ ಜೀಪಿಗೆ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು Read More »

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ

ವಿರಾಜಪೇಟೆ: ರಕ್ಷಿತಾರಣ್ಯದಿಂದ ಬೇಟೆಯಾಡಿ ಎರಡು ಜಿಂಕೆಗಳನ್ನು ಕೊಂದು ಮಾಂಸ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಯಶಸ್ವಿಯಾಗಿದ್ದು, ಬಂಧಿತರಿಂದ ಮಾಂಶ ವಶಪಡಿಸಿಕೊಂಡಿದ್ದಾರೆ. ಬೇಟೋಳಿ ಗ್ರಾಮದ ನಿವಾಸಿ ವಿರಾಜಪೇಟೆ ಬೇಕರಿಯೊಂದರ ಮಾಲೀಕ ಎಂ.ಎಂ ಅಜೀಜ್ (45), ನೆಹರು ನಗರ ನಿವಾಸಿ ಆಟೋ ಚಾಲಕ ಹುಸೈನ್ ಸಿ.ಎ.ಅಲಿಯಾಸ್ ಜಂಶೀರ್ (32) ಬಂಧಿತ ಆರೋಪಿಗಳು. ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಎಂ.ಸಿ.ಮುತ್ತಣ್ಣ ಅವರಿಗೆ ದೊರೆತ ಖಚಿತ ಮಾಹಿತಿ ಮೇಲೆ ಪೆರುಂಬಾಡಿ ಕಡೆಯಿಂದ

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ Read More »

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ

ಬೆಂಗಳೂರು: ಗಣಿ-ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಧಿಕಾರಿ. ಪ್ರತಿಮಾ ಅವರು ದೊಡ್ಡಕಲ್ಲಸಂದ್ರದ ಅಪಾರ್ಟೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ವಿವಾಹಿತರಾಗಿದ್ದು, ಪ್ರತಿಮಾ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ರಾತ್ರಿ ಪ್ರತಿಮಾ ಅವರಿಗೆ ಸಹೋದರ ಕರೆ ಮಾಡಿದ್ದ ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ ಬಂದು ನೋಡಿದಾಗ

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ Read More »

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಕಡಬ ತಾಲೂಕಿನ ಚಾರ್ವಕ ನಿವಾಸಿಯೊಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಾರ್ವಕ ನಿವಾಸಿ ತಾರಾನಾಥ (39) ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕಡಬ ತಾಲೂಕಿನ ಬೊಮ್ಮಳಿಕೆ ಪದ್ಮನಾಭ ಗೌಡ ಎಂಬವರ ಪುತ್ರರಾಗಿರುವ ತಾರನಾಥ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತನ್ನ ರೂಮ್ ನಲ್ಲೇ ನ.3ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top