ರಾಜ್ಯ

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ

ಉಡುಪಿ: ವ್ಯಕ್ತಿಯೊಬ್ಬ ತಾನು ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡು ಬೆಂಗಳೂರು ಮೂಲದ ಭಕ್ತರ ಕುಟುಂಬವೊಂದಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತನೇ ಕುಟುಂಬಕ್ಕೆ ವಂಚಿಸಿದ ವ್ಯಕ್ತಿ. ಬೆಂಗಳೂರಿನ ದಿಲ್ಲಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ […]

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದು ಮಹಿಳೆಯೋರ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬೆಂಗಳೂರು- ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು Read More »

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಮುಂಬರುವ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ  ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಾರ್ಗಸೂಚಿಯನ್ನು ಇದೀಗ  ಹೊರಡಿಸಿದೆ. ಮುಖ್ಯವಾಗಿ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ಸರಕಾರ ಈ ಮಾರ್ಗಸೂಚಿ ಹೊರಡಿಸಿದೆ. ಮಾರ್ಗಸೂಚಿ ಹೇಗಿವೆ ? 1.ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಆರೋಗ್ಯಧಿಕಾರಿ, ತಹಶೀಲ್ದಾರ್, ಜಿಲ್ಲಾ ಪರಿಸರ

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್ Read More »

ಕಾಲೇಜು ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ

ಹಾಸನ: ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಚೆನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಹೊನ್ನಶೆಟ್ಟಿ ಹಳ್ಳಿಯ ಮಾನ್ಯ (19) ಈ ಕೃತ್ಯ ಎಸಗಿದವರು. ಹಾಸನದ ಹೊವಲಯದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಎಂಜಿನಿಯರಿಂಗ್ ಓದುತ್ತಿದ್ದ ಮಾನ್ಯ ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ ಹಿನ್ನಲೆಯಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಈ ಬೆನ್ನಲ್ಲೇ ಮಾನ್ಯ ಕಾಲೇಜಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಕಾಲೇಜು ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ Read More »

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ಎಂಬವರ ವಿರುದ್ಧ ಉದ್ಯಮಿ ನೀಲಿಮಾ ಎಂಬವರು ನೀಡಿದ ದೂರಿನಂತೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ ಹೆಗ್ಡೆ ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು Read More »

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷ ,ಪುತ್ತೂರು ಶಾಸಕ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು. ‌ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ಮಾಹಿತಿ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ

ಧಾರವಾಡ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಯೋಜನಾ ಕಚೇರಿಯಲ್ಲಿ ಕೋಟ್ಯಾಂತರ ನಗದು ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಎಸ್‌ಕೆಡಿಆರ್‌ಡಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರು (23), ನವಲಗುಂದದ ಕಳ್ಳಿಮಠ ಓಣಿಯ ಬಸವರಾಜ ಶೇಖಪ್ಪ ಬಾಬಜಿ (34), ಮಹಾಂತೇಶ ಲಕ್ಷ್ಮಣ ಹಿರಗಣ್ಣವರ (27) ಹಾಗೂ ನವಲಗುಂದದ ಜಿಲಾನಿ ಬವರಸಾಬ ಜಮಾದಾರ (25), ಪರಶುರಾಮ ಹನುಮಂತಪ್ಪ ನೀಲಪ್ಪಗೌಡ್ರ (34), ಭೋವಿ ಓಣಿಯ ರಂಗಪ್ಪ ನಾಗಪ್ಪ ಗುಡಾರದ (31),

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ Read More »

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ

ಮಂಗಳೂರು: ಸೊಳ್ಳೆಗಳಿಂದ ಹರಡುವ ಮಾರಕ ಝೀಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲಲ್ಲೂ ಝೀಕಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಝೀಕಾ ವೈರಸ್ ದೃಢಪಟ್ಟಿದೆ. ಆದರೆ ಜನರಿಗೆ ಹರಡಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಝೀಕಾ ವೈರಸ್ ಕಂಡುಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟು ಮನೆ ಮನೆ ಸಮೀಕ್ಷೆ ರಕ್ತ ಸಂಗ್ರಹಕ್ಕೆ

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ Read More »

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು

ಸೂಂಟಿಕೊಪ್ಪ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್‌ನಲ್ಲಿ ನಡೆದಿದೆ. ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಇಂದು ಬೆಳಗ್ಗೆ ಸೌಭಾಗ್ಯ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಕಳೆದ ಭಾನುವಾರ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಮನೆಯವರು, ಪೊಲೀಸರು ಸೇರಿದಂತೆ ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದರು. ಆದರೆ ಇಂದು ಕೆರೆಯಲ್ಲಿ ಪೌಲ್‌

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು Read More »

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ವಿನಾಯಕ ಎಂಬ ಆನೆ ಮಂಗಳವಾರ ಸಾವನ್ನಪ್ಪಿದೆ. ಆನೆಗಳಿಗೆ ತರಬೇತಿ ನೀಡುತ್ತಿದ್ದ ಸಂದರ್ಭದಲ್ಲಿ ದಿಢೀರ್‌ ಆಗಿ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆನೆಗೆ ಅಕ್ಕಿರಾಜ, ವಿನಾಯಗನ್‌ ಎಂಬ ಹೆಸರು ಇದೆ. ಕೊಯಮತ್ತೂರಿನಲ್ಲಿ 2021ರಲ್ಲಿ ಈ ಆನೆಯನ್ನು ಸೆರೆ ಹಿಡಿದು ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಆನೆಯು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು Read More »

error: Content is protected !!
Scroll to Top