ರಾಜ್ಯ

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು

ಟ್ಯೂಷನ್‌ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ವಾಹನ ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಮನಗರದಲ್ಲಿ ಸಂಭವಿಸಿದೆ. ರಾಮನಗರ ತಾಲ್ಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್‌ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ. 12 […]

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು Read More »

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌

2025-26ನೇ ಶೈಕ್ಷಣಿಕ ವರ್ಷದಿಂದ ಜಾರಿ ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 5 ವರ್ಷ 5 ತಿಂಗಳು ಬದಲು 6 ವರ್ಷ ತುಂಬಿರಬೇಕು ಎಂದು ರಾಜ್ಯ ಸರ್ಕಾರ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಈ ಕುರಿಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 2022ರ ಜು.26ರಂದು ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಬೆಂಗಳೂರಿನ ಅನಿಕೇತ್ ಎಂಬವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌ Read More »

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ

ಬೆಂಗಳೂರು: ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಇಂದು (ಬುಧವಾರ) ಅಪರಾಹ್ನ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಪೂರ್ವಾಹ್ನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಕೆ. ಶಿವರಾಮ್‌ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಮಂಗಳವಾರ ರಾತ್ರಿಯೇ ಪ್ರಕ್ರಿಯೆಗಳನ್ನೆಲ್ಲಾ ಪೂರೈಸಿ ಥಾಯ್ಲೆಂಡ್‌ ಏರ್‌ಲೈನ್ಸ್‌ನ ವಿಶೇಷ ವಿಮಾನದ ಮೂಲಕ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ಥಾಯ್ಲೆಂಡ್‌ನಲ್ಲಿದ್ದ ವಿಜಯ ರಾಘವೇಂದ್ರ, ಬಿ.ಕೆ.

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ Read More »

ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ

ಬೆಂಗಳೂರು: ಥೈಲಾಂಡ್ ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ. ನಾಳೆ (ಬುಧವಾರ) ಮಧ್ಯಾಹ್ನ 12 ಗಂಟೆ ವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ಬಿ.ಕೆ.ಶಿವರಾಂ ಮನೆ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಥೈಲಾಂಡ್ ನಲ್ಲಿ

ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ Read More »

ರಾಜ್ಯ ಕೃಷಿ ಸಚಿವರಿಂದ ಕೃಷಿ ಅಧಿಕಾರಿಗಳು, ಸಿಬ್ಬಂದಿಗಳಿಂದ ಹಣಕ್ಕಾಗಿ ಒತ್ತಡ | ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮನವಿ

ಮಂಡ್ಯ: ರಾಜ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಕೃಷಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ತಲಾ 6 ರಿಂದ 8 ಲಕ್ಷ ರೂ. ನೀಡುವಂತೆ ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಮಂದಿ ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಮೂಲಕ ಕರ್ನಾಟಕ ಸರಕಾರದ  ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಈ ಕುರಿತು ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಹಾಗೂ ಮದ್ದೂರು

ರಾಜ್ಯ ಕೃಷಿ ಸಚಿವರಿಂದ ಕೃಷಿ ಅಧಿಕಾರಿಗಳು, ಸಿಬ್ಬಂದಿಗಳಿಂದ ಹಣಕ್ಕಾಗಿ ಒತ್ತಡ | ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮನವಿ Read More »

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ರಾಘವೇಂದ್ರ 2007,

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ Read More »

ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು | ಸಚಿವ ಕೆ.ಹೆಚ್. ಮುನಿಯಪ್ಪ ಘೊಷಣೆ

ಬೆಂಗಳೂರು: ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ. ಹೀಗೆಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದು, ಈ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಬಿಸಿ ಸುದ್ದಿಯೊಂದನ್ನು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದರು. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ನ್ನು ಕೂಡಾ ರದ್ದುಗೊಳಿಸಲಾಗುತ್ತದೆ. ಯಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು

ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು | ಸಚಿವ ಕೆ.ಹೆಚ್. ಮುನಿಯಪ್ಪ ಘೊಷಣೆ Read More »

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಮಕ್ಕಳಾದ ಎರಡೂವರೆ ವರ್ಷದ ಮೋಕ್ಷಾ, ಎಂಟು ತಿಂಗಳ  ಸೃಷ್ಟಿ (8 ತಿಂಗಳು) ಎಂದು ಗುರುತಿಸಲಾಗಿದೆ. ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ. ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ Read More »

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ

ಬಾಗಲಕೋಟೆ: ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಮತಾ ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಾಗಲಕೋಟೆಯ ಇಳಕಲ್ ತಾಲ್ಲೂಕಿನ ಗುಡೂರ ಗ್ರಾಮದಲ್ಲಿ ಇಹಲೋಕ ತ್ಯಜಿಸಿದರು. ಮಮತಾ ಅವರು 5 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ನಟಿಸಿದ್ದರು. 25 ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗದ ಮೇರು ನಟರುಗಳಾದ ಅಂಬರೀಷ್, ವಜ್ರಮುನಿ ಸೇರಿ ಅನೇಕರ ಜೊತೆ ತೆರೆಹಂಚಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಚಿತ್ರರಂಗದಿಂದ ದೂರವೇ

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ Read More »

ಆಯ್ಕೆ ಅಸಿಂಧು ಕೋರಿ ಅರ್ಜಿ : ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಆರೋಪದಡಿ ವರುಣಾ ಕ್ಷೇತ್ರದ ಶಾಸಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ನೀಡಿದೆ. ಸೆಪ್ಟೆಂಬರ್ 1ಕ್ಕೆ ವಿಚಾರಣೆ ಮುಂದೂಡಿ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಆದೇಶ ನೀಡಿದರು. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(2) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್‌ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ

ಆಯ್ಕೆ ಅಸಿಂಧು ಕೋರಿ ಅರ್ಜಿ : ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್ Read More »

error: Content is protected !!
Scroll to Top