ರಾಜ್ಯ

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲನ ಮೂಡಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ […]

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೋಕ್

ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೋಕ್ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೋಕ್ Read More »

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ

ದೆಹಲಿ : ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ 14ನೇ ಕಂತು ಗುರುವಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಪ್ರಕಟಿಸಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿಯಲ್ಲಿ 8.5 ಕೋಟಿ ರೈತರಿಗೆ 14ನೇ ಕಂತಿನ ನಿಧಿಯನ್ನು ಜು.27 ರಂದು ಪ್ರಧಾನ ಮಂತ್ರಿಯವರು ನರೇಂದ್ರ ಮೋದಿ ವಿತರಿಸಲಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಪಿಎಂ ಕಿಸಾನ್ ಕಂತಿನ ಹಣವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ Read More »

ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು : ಅನುದಾನ ಬಿಡುಗಡೆ ಮಾಡಲು ಕೂಡ ಸಚಿವರು ಕಮಿಷನ್ ಕೇಳುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿ ಶಾಸಕರು ಬರೆದಿರುವ ಪತ್ರದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ನ ಶಾಸಕಾಂಗ ಸಭೆ ನಡೆಯಲಿದೆ. ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಈ ಶಾಸಕಾಂಗ ಸಭೆ ಬಹಳ ಕುತೂಹಲ ಮೂಡಿಸಿದೆ. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಹಿರಿಯ ಶಾಸಕರೇ ಶಾಸಕಾಂಗ ಸಭೆ ಕರೆಯುವಂತೆ ಒತ್ತಡ ಹಾಕಿದ್ದಾರೆ. ಅಲ್ಲದೆ ಸಚಿವರ ವಿರುದ್ಧ ಶಾಸಕರ ಪತ್ರ

ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ Read More »

ಭಾರೀ ಮಳೆಗೆ ಕೊಡಗಿನ ಕರ್ತೋಜೆಯಲ್ಲಿ ಭೂಕುಸಿತ | ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ಕೊಡಗಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಭೂಕುಸಿತ ಉಂಟಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯಗೊಂಡಿದೆ. ಕೊಡಗಿನ ಮದೆನಾಡು ಸಮೀಪದ ಕರ್ತೋಜೆಯಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತತದಿಂದಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸೂಚನೆಯಿದ್ದು, ಆತಂಕ ಉಂಟಾಗಿದೆ. ಭಾರೀ ಮಳೆಯನ್ನು ಲೆಕ್ಕಿಸದೆ ಕೊಡಗು ಜಿಲ್ಲಾಡಳಿತ ಜೆಸಿಬಿ, ಹಿಟಾಚಿ ಯಂತ್ರಗಳನ್ನು ಬಳಸಿ ಕಾರ್ಯಾಚರಣೆಗೆ ಇಳಿದಿದ್ದಾರೆ.

ಭಾರೀ ಮಳೆಗೆ ಕೊಡಗಿನ ಕರ್ತೋಜೆಯಲ್ಲಿ ಭೂಕುಸಿತ | ಸಂಚಾರದಲ್ಲಿ ವ್ಯತ್ಯಯ Read More »

ನಂದಿನಿ ಹಾಲಿನ ದರ ಹೆಚ್ಚಳ | ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

ಪುತ್ತೂರು: ನಂದಿನಿ ಹಾಲಿ ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಪ್ರತೀ ಲೀಟರ್ ಗೆ 5 ರೂ. ಹೆಚ್ಚಳ ಮಾಡಬೇಕು ಎಂದು ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಸಭೆಯಲ್ಲಿ ನಿರ್ಣಯದ ಬಳಿಕ ಮೂರು ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ನಂದಿನಿ ಹಾಲಿನ ದರ ಹೆಚ್ಚಳ | ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ Read More »

ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ | ಜಿಕೆ ವೆಂಚರ್ಸ್ ಟೈಟಲ್ಸ್ ನಿಂದ ನೋಂದಣಿ

ಬೆಂಗಳೂರು : ನೈಜ ಘಟನೆ ಆಧರಿಸಿ ಅನೇಕ ಸಿನೆಮಾಗಳು ಮೂಡಿ ಬಂದಿದ್ದು, ಈ ಹಿನ್ನಲೆಯಲ್ಲಿ ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್ ವುಡ್‌ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ

ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ | ಜಿಕೆ ವೆಂಚರ್ಸ್ ಟೈಟಲ್ಸ್ ನಿಂದ ನೋಂದಣಿ Read More »

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: 2023 – 24ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ  ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ ಅಡಿಕೆ, ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ ಕಲ್ಪಿಸಿದ್ದು ಜು.31 ರ ತನಕ ರೈತರು ವಿಮೆ ಕಂತನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲಾ ರೈತ ಬಾಂಧವರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿರುತ್ತದೆ. ಸಮಯದ ಅಭಾವವಿರುವುದರಿಂದ ರೈತರು ತಮ್ಮ ತಮ್ಮಲ್ಲಿಯೇ ಹೆಚ್ಚಿನ ಪ್ರಚಾರ ಕೈಗೊಂಡು ತಮ್ಮ ತಮ್ಮಲ್ಲಿನ ರೈತರ ವಾಟ್ಸಾಪ್ ಗುಂಪುಗಳಿಗೆ

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್ Read More »

ಸದನದಲ್ಲಿ ಕುಸಿದುಬಿದ್ದ ಯತ್ನಾಳ್ | ಆಸ್ಪತ್ರೆಗೆ ಭೇಟಿ ನೀಡಿದ ರಾಜಕೀಯ ನಾಯಕರು

ಬೆಂಗಳೂರು : ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿ.ಯಸ್.ಯಡಿಯೂರಪ್ಪ, ಸ್ಪೀಕರ್ ಯು.ಟಿ.ಖಾದರ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು. ಯತ್ನಾಳ್ ಅವರು ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲವು ಬಿಜೆಪಿ ಶಾಸಕರು ಸಹ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ

ಸದನದಲ್ಲಿ ಕುಸಿದುಬಿದ್ದ ಯತ್ನಾಳ್ | ಆಸ್ಪತ್ರೆಗೆ ಭೇಟಿ ನೀಡಿದ ರಾಜಕೀಯ ನಾಯಕರು Read More »

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು : ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಶಾಸಕ ಬಸನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ. ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಬಿಪಿಯಲ್ಲಿ ಏಳಿರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು,

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್ Read More »

error: Content is protected !!
Scroll to Top