ರಾಜ್ಯ

ಬೆಂಗಳೂರು ಕಂಬಳಕ್ಕೆ ಆಹ್ವಾನ

ಪುತ್ತೂರು: ಬೆಂಗಳೂರು ಕಂಬಳ ಸಮಿತಿ ವತಿಯಿಂದ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ಭೇಟಿ ಮಾಡಿ ಕಂಬಳಕ್ಕೆ ಆಹ್ವಾನಿಸಲಾಯಿತು. ಬೆಂಗಳೂರು ಕಂಬಳ ಕುರಿತು ರೂಪರೇಷೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ, ಪದಾಧಿಕಾರಿ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ಬೆಂಗಳೂರು ಕಂಬಳಕ್ಕೆ ಆಹ್ವಾನ Read More »

‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು?

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಕಂಬಳಕ್ಕೆ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನುಮತಿ ಸಿಕ್ಕಿಲ್ಲ ಎಂದು ವರದಿಯಾಗಿದೆ. ನವಂಬರ್ ಕೊನೆ ವಾರದಲ್ಲಿ ನಡೆಯಲುದ್ದೇಶಿಸಿರುವ ಬೆಂಗಳೂರು ಕಂಬಳಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರೆ ಮುಹೂರ್ತವೂ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮುಹೂರ್ತಕ್ಕೆ ಆಗಮಿಸಿ, 1 ಕೋಟಿ ರೂ. ಅನುದಾನ ನೀಡುವ ಘೋಷಣೆ ಮಾಡಿದ್ದರು. ಇದರ ನಡುವೆ ಇದೀಗ ಅನುಮತಿ ವಿಚಾರ ವರದಿಯಾಗಿದೆ. ಬೆಂಗಳೂರಿನಲ್ಲಿ ಕಂಬಳ ನಡೆಸುವುದಾದರೆ ಬಿಬಿಎಂಪಿಯ ಅನುಮತಿ ಕಡ್ಡಾಯ. ಕಾನೂನು

‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು? Read More »

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ

ಪಡುಕುತ್ಯಾರು: ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸಾನ್ ಕಾರ್ಡ್ ಅತೀ ಅಗತ್ಯವಾಗಿದ್ದು, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ, ನಿಖರತೆ ಪರಿಶೀಲಿಸಲು ಇತ್ತೀಚಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಫ್ಟ್ ಸರ್ವೀಸ್ ಸೆಂಟರ್ ಸಹಾಯಕ ನಿರ್ದೇಶಕಿ ವೀಣಾ ಹೇಳಿದರು.ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಸತ್ಸಂಗ ಮಂದಿರದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ನಡೆದ ವೃತ್ತಿ ಕೌಶಲ್ಯ

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ Read More »

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದ 42 ಕೋಟಿ ರೂ. ಹಣದ ಪರದೇ ಕೆ ಪೀಛೇ ಇರುವ ಕೈಗಳನ್ನು ಪತ್ತೆ ಹಚ್ಚಲು ಸಿಬಿಐ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಆಗ್ರಹಿಸಿದರು. ಬಿಜೆಪಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ, ಲೂಟಿ ಕಾಂಗ್ರೆಸಿನ ರಕ್ತದಲ್ಲಿದೆ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ. ಅಂಬಿಕಾಪತಿಗೆ 42

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ Read More »

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು. ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆಗೆ 2017ರಿಂದ 2022ರವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ.

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ Read More »

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು!

ರಾಗಿಗುಡ್ಡ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ. ಮಂಗಳವಾರ ರಾತ್ರಿ ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದು, ಮುಂದಿನ 30 ದಿನಗಳ ಕಾಲ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು! Read More »

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅನಾವರಣ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಂಛನ ಬಿಡುಗಡೆ ಮಾಡಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ Read More »

ಬೆಂಗಳೂರು ಕಂಬಳ: ಸಿ.ಎಂ. ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ನ. 25 ಹಾಗೂ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳಕ್ಕೆ ಮುಖ್ಯಮಂತ್ರಿಯವರಿಗೆ ಆಹ್ವಾನ ನೀಡಿದರು. ಮುಖ್ಯಮಂತ್ರಿಯನ್ನು ಭೇಟಿಯಾದ ಅಶೋಕ್ ರೈ ಅವರು, ಚರ್ಚೆ ನಡೆಸಿ, ಕಂಬಳಕ್ಕೆ ವಿವಿಧ

ಬೆಂಗಳೂರು ಕಂಬಳ: ಸಿ.ಎಂ. ಭೇಟಿಯಾದ ಶಾಸಕ ಅಶೋಕ್ ರೈ Read More »

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಂಬಳ ಸಮಿತಿ , ಬೆಂಗಳೂರು ತುಳು ಕೂಟ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸರ್ವ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನ. 25ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕರೆಪೂಜೆ ಬುಧವಾರ ನಡೆಯಿತು. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಗಣ್ಯರು ಕರೆಪೂಜೆ ನೆರವೇರಿಸಿದರು. ಪ್ರಮುಖರಾದ ಗುಣರಂಜನ್ ಶೆಟ್ಟಿ, ಮಾಜಿ

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ Read More »

ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ

ಪುತ್ತೂರು: ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ  ನಡೆಯಲಿರುವ ಬೆಂಗಳೂರು ‌ಕಂಬಳದ ಕರೆ‌ಮುಹೂರ್ತ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಆಹ್ವಾನ‌ ನೀಡಲಾಯಿತು. ನ.25 ಹಾಗೂ 26 ರಂದು ಬೆಂಗಳೂರು‌ಕಂಬಳ ನಡೆಯಲಿದ್ದು ಕರೆ ಮುಹೂರ್ತ ಕಾರ್ಯಕ್ರಮ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಬೆಂಗಳೂರು‌ ಕಂಬಳ ಸಮಿತಿ‌ ಅಧ್ಯಕ್ಷ ಶಾಸಕ ಅಶೋಕ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ , ಮುರಳೀಧರ್ ರೈ ಮಠಂತಬೆಟ್ಟು ಸಹಿತಿ ಕಂಬಳ

ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ Read More »

error: Content is protected !!
Scroll to Top