ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ
ಕಾರ್ಕಳ : ಶಿಕ್ಷಣ ಇಲಾಖೆಯಲ್ಲಿ ಪ್ರತಿಭಾ ಕಾರಂಜಿ ಮಹತ್ವದ್ದಾಗಿದ್ದು, ಈ ಬಾರಿ ಪ್ರತಿಭಾ ಕಾರಂಜಿಯಲ್ಲಿ ದೈವದ ಕೋಲವನ್ನು ಶಿಕ್ಷಣ ಇಲಾಖೆ ಸೇರಿಸಿ ಸುತ್ತೋಲೆ ಹೊರಡಿಸಿದ್ದು, ದೈವದ ಕೋಲ ಪ್ರದರ್ಶನದ ವಸ್ತುವಲ್ಲ. ಅದನ್ನು ತಕ್ಷಣ ಕೈಬಿಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯಿಸಿದ್ದಾರೆ. ಸದನದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಿಕ್ಷಣ ಸಚಿವರನ್ನು ಒತ್ತಾಯಿಸಿದರು. ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ Read More »










