ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ
ಹಾಸನ : ರಾಜ್ಯಮಟ್ಟದ 514ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಸಮಾರಂಭ ಹಾಸನ ನಗರದಲ್ಲಿ ಮಂಗಳವಾರ ನಡೆಯಿತು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಕೆ ಎನ್ ರಾಜಣ್ಣ, ತಂಗಡಗಿ ಶಿವರಾಜ್ ಸಂಗಪ್ಪ, ಶಾಸಕರುಗಳಾದ ಕೆ ಎಂ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಸಿ ಎನ್ ಬಾಲಕೃಷ್ಣ, ಸಿಮೆಂಟ್ ಮಂಜು, […]










