ರಾಜ್ಯ

ವಿಶ್ವ ಪ್ರವಾಸಿತಾಣವಾಗಿ ಗಮನ ಸೆಳೆದ ಮಡಿಕೇರಿಯಲ್ಲಿ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ನಿರ್ಮಾಣ | ಪ್ರವಾಸಿ ತಾಣಕ್ಕೆ ಮತ್ತೊಂದು ಸೇರ್ಪಡೆ

ಮಡಿಕೇರಿ: ಮಡಿಕೇರಿಯ ಹೊರವಲಯದ ಉಡೋತ್ ಎಂಬಲ್ಲಿ 31 ಮೀ. ಉದ್ದ, 2 ಮೀ. ಅಗಲದ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಮಂಜಿನನಗರಿ ಎಂದೇ ಖ್ಯಾತವಾದ, ಪ್ರವಾಸಿ ತಾಣವೆಂದೇ ವಿಶ್ವದ ಗಮನ ಸೆಳೆದ ಮಡಿಕೇರಿಯ ಉಡೋತ್  ಎಂಬಲ್ಲಿ ಈ ನೂತನ ಬ್ರಿಡ್ಜ್‍ ನಿರ್ಮಾಣವಾಗಿದ್ದು, ದಕ್ಷಿಣ ಭಾರತದ ಎರಡನೇ ಬ್ರಿಡ್ಜ್‍ ಆಗಿದೆ. ಸುಮಾರು 78 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ. ಇದೀಗ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ಪ್ರವಾಸೋದ್ಯಮಕ್ಕೆ ಹೊಸ ಸೇರ್ಪಡೆಯಾಗಿದೆ. ಸುಮಾರು 5 ಟನ್ […]

ವಿಶ್ವ ಪ್ರವಾಸಿತಾಣವಾಗಿ ಗಮನ ಸೆಳೆದ ಮಡಿಕೇರಿಯಲ್ಲಿ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ನಿರ್ಮಾಣ | ಪ್ರವಾಸಿ ತಾಣಕ್ಕೆ ಮತ್ತೊಂದು ಸೇರ್ಪಡೆ Read More »

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ Read More »

ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ

ಬೆಂಗಳೂರು: ಕಾಂಗ್ರೆಸ್ ನ ದ್ವೇಷ ರಾಜಕಾರಣ ಮುಂದುವರಿದಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ ತೆರೆಯಲಾಗಿದೆ. ಅದರ ಉದ್ಘಾಟನೆಯೂ ನೆರವೇರಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಹೆಲ್ಫ್ ಲೈನ್ ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದ್ವೇಷ ರಾಜಕೀಯ ಮಾಡುವ ಮುನ್ಸೂಚನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಹೋರಾಟದ ಮೂಲಕವೇ ಬಿಜೆಪಿ

ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ Read More »

ಆರ್ ಎಸ್‍ ಎಸ್‍ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ

ಬೆಂಗಳೂರು:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರೊಬ್ಬರು ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಪ್ರಸ್ತುತ ಹಿಂದೂ ಜಾಗರಣಾ ವೇದಿಕೆ ವರ್ತೂರು ಭಾಗ ದೊಮ್ಮಸಂದ್ರ ನಗರ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಚಂದ್ರಶೇಖರ್ (48) ಮೃತಪಟ್ಟವರು. ಚಂದಾಪುರ ದೊಮ್ಮಸಂದ್ರ ರಸ್ತೆಯ ಕಗ್ಗಲೀಪುರ ಗೇಟ್ ಬಳಿ ನಡೆದ ರಸ್ತೆ ಅಪಘಾತ ದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುತ್ತಾರೆ, ಮೃತರು ತಾಯಿ ಪತ್ನಿ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಆರ್ ಎಸ್‍ ಎಸ್‍ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ Read More »

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು :  ವಿದ್ಯಾರ್ಥಿಗಳು ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿದ್ದು,  ಮೇ 20 ಮತ್ತು 21 ರಂದು ನಡೆದ ಪರೀಕ್ಷೆಯ ಫಲಿತಾಂಶ ಜೂನ್ ಎರಡನೇ ವಾರದ ವೇಳೆಗೆ ಪ್ರಕಟವಾಗುವ ನಿರೀಕ್ಷೆಯಿದೆ. KCET ಫಲಿತಾಂಶವನ್ನು ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ cetonline.karnataka.gov.in ಮೂಲಕ ತಿಳಿದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಕೆಸಿಇಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದ್ದು, ಈ ಬಾರಿ KEA

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ Read More »

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ?

ಬೆಂಗಳೂರು: ಚುನಾವಣೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಗುರುವಾರ ಸಂಜೆ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದೆ.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ? Read More »

ವಿದ್ಯುತ್ ಬಿಲ್ ಫಿಕ್ಸೆಡ್ ಚಾರ್ಜ್| ನಿಗದಿತ ಶುಲ್ಕ ಹೆಚ್ಚಳ | ಗ್ರಾಹಕರಿಗೆ ಶಾಕ್‍

ಪುತ್ತೂರು: ವಿದ್ಯುತ್ ಬಿಲ್ ಫಿಕ್ಸೆಡ್ ಚಾರ್ಜ್ ದಿಢೀರ್ ಹೆಚ್ಚಳವಾಗಿದ್ದು ಮೇ ತಿಂಗಳ ಬಿಲ್ ನಲ್ಲಿ ನಿಗದಿತ ಶುಲ್ಕ ಏರಿಕೆ ಮಾಡಲಾಗಿದೆ. ಈ ಮೂಲಕ ವಿದ್ಯುತ್ ಗ್ರಾಹಕರಿಗೆ ಶಾಕ್ ಎದುರಾಗಿದೆ. ಗೃಹ ಬಳಕೆ ವಿದ್ಯುತ್ ಸಂಪರ್ಕಕ್ಕೆ ಪ್ರತಿ ಕಿ.ವ್ಯಾ.ಗೆ 100 ರೂ. ಇದ್ದ ನಿಗದಿತ ಶುಲ್ಕ ಮೇ ತಿಂಗಳಿನಿಂದ ಅನ್ವಯವಾಗುವಂತೆ 110 ರೂ.ಗೆ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಪ್ರತಿ ಯೂನಿಟ್ ಬೆಲೆ 70 ಪೈಸೆ ಹೆಚ್ಚಳವಾಗಿದ್ದು ಗಾಯದ ಮೇಲೆ ಬರೆ ಎಳೆದಂತೆ ಫಿಕ್ಸೆಡ್ ಚಾರ್ಜ್ ಕೂಡ ದಿಢೀರ್ ಆಗಿ

ವಿದ್ಯುತ್ ಬಿಲ್ ಫಿಕ್ಸೆಡ್ ಚಾರ್ಜ್| ನಿಗದಿತ ಶುಲ್ಕ ಹೆಚ್ಚಳ | ಗ್ರಾಹಕರಿಗೆ ಶಾಕ್‍ Read More »

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ ಗೋಪಾಲ ಕೃಷ್ಣ ರವರನ್ನು

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಿನ್ನೆ 5 ಸೆಂ.ಮೀ. ಮಳೆಯಾಗಿದ್ದು, ಕೊಳ್ಳೆಗಾಲ, ಕೊಟ್ಟಿಗೆಹಾರ, ಸರಗೂರು, ಅರಕಲಗೂಡು, ಮೂರ್ನಾಡು, ಬೀದರ್, ಟಿ.ನರಸೀಪುರ, ಕಳಸ, ಮೂಡಿಗೆಯ ಸೇರಿದಂತೆ ವಿವಿಧೆಡೆ ಸಾಧಾರಣ ಮಲೆಯಾಗಿದೆ. ಇಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ Read More »

ವಿದ್ಯುತ್ ದರ ಪ್ರತಿ ಯುನಿಟ್ ಗೆ 70 ಪೈಸೆ ಹೆಚ್ಚಳ | ಸರಕಾರದಿಂದ ಆದೇಶ | ನಷ್ಟ ಭರ್ತಿ ಮಾಡಲು ಗ್ರಾಹಕರ ಮೇಲೆ ಬರೆ

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಸರಕಾರ ಗೃಹಜ್ಯೋತಿ ಸ್ಕೀಂನಲ್ಲಿ ಎಲ್ಲರಿಗೂ 200 ಯುನಿಟ್ ತನಕ ುಚಿತ ವಿದ್ಯುತ್ ಘೋಷಣೆ ಮಾಡಿದ ಬೆನ್ನಲ್ಲೇ ಪ್ರತಿ ಯುನಿಟ್ ಗೆ 70 ಪೈಸೆಯಷ್ಟು ಹೆಚ್ಚಳ ಮಾಡಿ ನಷ್ಟ ಭರ್ತಿ ಮಾಡಲು ಗ್ರಾಹಕರಿಗೆ ಬರೆ ಹಾಕಲು ಮುಂದಾಗಿದೆ. ಜೂ.1 ರಿಂದಲೇ ಜ್ಯಾರಿಗೆ ಬರುವಂತೆ ಸರಕಾರ ಇದೀಗ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ಪ್ರತಿ ಯುನಿಟ್ ಗೆ 70 ಪೈಸೆ ಹೆಚ್ಚಳ ಮಾಡಿದ್ದು, ವಿದ್ಯುತ್ ಸರಬರಾಜು ಕಂಪೆನಿಗಳಿಗೆ ನಷ್ಟದ ಕಾರಣ ನೀಡಿ ಈ

ವಿದ್ಯುತ್ ದರ ಪ್ರತಿ ಯುನಿಟ್ ಗೆ 70 ಪೈಸೆ ಹೆಚ್ಚಳ | ಸರಕಾರದಿಂದ ಆದೇಶ | ನಷ್ಟ ಭರ್ತಿ ಮಾಡಲು ಗ್ರಾಹಕರ ಮೇಲೆ ಬರೆ Read More »

error: Content is protected !!
Scroll to Top