ರಾಜ್ಯ

ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು : ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು. ಅವುಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಸ್‌ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜತೆ ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವವರನ್ನು ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾರೆ, ವಿದೇಶದ ನೆಲದಲ್ಲಿ ದೇಶ […]

ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ Read More »

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್‌

ಬೆಂಗಳೂರು :ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಸಿದ್ದರಾಮಯ್ಯ ಇಚ್ಚೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮತಿಸಿಲ್ಲ ಎನ್ನಲಾಗಿದೆ. ನಿಮಗೆ ಕೋಲಾರ ಸೂಕ್ತ ಅಲ್ಲ, ವರುಣಾದಿಂದಲೇ ಸ್ಪರ್ಧಿಸಿ. ನಾಮಪತ್ರ ಹಾಕಿ ಬೇರೆ ಕಡೆ ಪ್ರಚಾರ ಮಾಡಿ ಅಂತ ಸ್ವತಃ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ. ರಾಹುಲ್ ಗಾಂಧಿ ಅವರ ಸೂಚನೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿ ಪಕ್ಷದ ನಾಯಕರ ಜೊತೆಗೆ ಹೋಗಿ ಚರ್ಚೆ ಮಾಡ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆಯ ಸಭೆಯಲ್ಲೇ ನನ್ನ ಟಿಕೆಟ್

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್‌ Read More »

ಶಿವಮೊಗ್ಗ, ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಇಬ್ಬರು ಉಗ್ರರ ವಿರುದ್ಧ ಚಾರ್ಜ್‌ಶೀಟ್

ಬೆಂಗಳೂರು : ಕರ್ನಾಟಕದಲ್ಲಿ ರಾಷ್ಟ್ರಧ್ವಜ ಸುಡುವುದು ಸೇರಿದಂತೆ ಎರಡು ಡಜನ್‌ಗೂ ಹೆಚ್ಚು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಇಬ್ಬರು ಇಸ್ಲಾಮಿಕ್ ಸ್ಟೇಟ್ ಕಾರ್ಯಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್‌ಶೀಟ್ ಸಲ್ಲಿಸಿದೆ.ಶಿವಮೊಗ್ಗದ ಮಾಜ್ ಮುನೀರ್ ಅಹ್ಮದ್ (23) ಮತ್ತು ಸೈಯದ್ ಯಾಸಿನ್ (22) ವಿರುದ್ಧ ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ಮಾಡುವುದನ್ನು ತಡೆಯುವ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವಿಶೇಷ ನ್ಯಾಯಾಲಯ ಆರೋಪಪಟ್ಟಿ ಸಲ್ಲಿಸಿದೆ

ಶಿವಮೊಗ್ಗ, ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಇಬ್ಬರು ಉಗ್ರರ ವಿರುದ್ಧ ಚಾರ್ಜ್‌ಶೀಟ್ Read More »

ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರು: ಹಿಮಂತ್‌ ಬಿಸ್ವಾ ಶರ್ಮ ಟೀಕೆ

ನವ ಭಾರತಕ್ಕೆ ಮದರಸ ಶಿಕ್ಷಣದ ಅಗತ್ಯವಿಲ್ಲ ಬೆಳಗಾವಿ : ಕಾಂಗ್ರೆಸಿಗರು ಬಾಬರಿ ಮಸೀದಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ, ರಾಮಮಂದಿರದ ಬಗ್ಗೆ ಮಾತನಾಡುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮ ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರಿಗೆ ಜನರು ತಕ್ಕ ಪಾಠ ಕಲಿಸಬೇಕು, ಅವರನ್ನು ದೇಶದಿಂದ ಕಿತ್ತೊಗೆಯುವ ಅಗತ್ಯವಿದೆ.ಅಸ್ಸಾಂ ಸೇರಿದಂತೆ ಇಡೀ ಉತ್ತರ ಭಾರತ ಎಂದೂ ಔರಂಗಜೇಬನ ಆಡಳಿತದ ಹಿಡಿತಕ್ಕೆ ಸಿಕ್ಕಿರಲಿಲ್ಲ. ಆದರೂ, ಕಮ್ಯುನಿಸ್ಟ್‌ ಸಾಹಿತಿಗಳು ಇಡೀ ಭಾರತ ಔರಂಗಜೇಬನ ಅಧೀನದಲ್ಲಿತ್ತು ಎಂದು ತಿರುಚಿದ

ಮೊಘಲರಂತೆಯೇ ಇರುವ ಕಾಂಗ್ರೆಸ್ಸಿಗರು: ಹಿಮಂತ್‌ ಬಿಸ್ವಾ ಶರ್ಮ ಟೀಕೆ Read More »

ತಡರಾತ್ರಿ ಹೋಟೆಲ್‌ನಲ್ಲಿ ಲೇಡಿಸ್ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತೀವ್ರ ವಿರೋಧ

ಶಿವಮೊಗ್ಗ : ನಗರದಲ್ಲಿ ಶುಕ್ರವಾರ ರಾತ್ರಿ ಹೋಟೆಲೊಂದರಲ್ಲಿ ನಡೆಯುತ್ತಿದ್ದ ‘ಲೇಟ್‌ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ.ಕುವೆಂಪು ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಬಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು. ನಂತರ ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಸೇರಿದಂತೆ ಹಲವರು ಹೋಟೆಲ್‌ನಿಂದ ಹೊರಗೆ ಬರುತ್ತಿರುವುದು ಕಂಡುಬಂತು. ತಡರಾತ್ರಿ ಪಾರ್ಟಿ ಆಯೋಜಿಸಲಾಗಿದೆ ಎಂದು ಬಜರಂಗದಳದ ಮುಖಂಡ ರಾಜೇಶ್ ಗೌಡ

ತಡರಾತ್ರಿ ಹೋಟೆಲ್‌ನಲ್ಲಿ ಲೇಡಿಸ್ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತೀವ್ರ ವಿರೋಧ Read More »

ಡಿ.ವಿ. ಸದಾನಂದ ಗೌಡರ ಹುಟ್ಟುಹಬ್ಬ ಆಚರಣೆ

ಅಭಿಮಾನಿ ಬಳಗ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಅವರ ಹುಟ್ಟುಹಬ್ಬವನ್ನು ಶನಿವಾರ ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಆಚರಿಸಲಾಯಿತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯರ ಉಪಸ್ಥಿತಿಯಲ್ಲಿ ಬೃಹತ್ ಕೇಕನ್ನು ಕತ್ತರಿಸಿ ಸಂಭ್ರಮವನ್ನು ಆಚರಿಸಲಾಯಿತು. ಡಿ.ವಿ. ಸದಾನಂದ ಗೌಡ ಅವರ ಅಭಿಮಾನಿಗಳ ಬಳಗ ಏರ್ಪಡಿಸಿದ್ದ ಹುಟ್ಟುಹಬ್ಬ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ಡಿ.ವಿ. ಸದಾನಂದ ಗೌಡರ ಹುಟ್ಟುಹಬ್ಬ ಆಚರಣೆ Read More »

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ನೆಲೆಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಜನರಿಗಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೀವ ಮಠಂದೂರು ಅಭಿಮಾನಿ ಬಳಗದ ವತಿಯಿಂದ ‘ಬನ್ನಿ, ರಾಜಧಾನಿಯಲ್ಲಿ ನಾವೆಲ್ಲರೂ ಸೇರಿ ಒಗ್ಗಟ್ಟಾಗೋಣ’ ಎನ್ನುವ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ Read More »

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಇತ್ತೀಚೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ವಿಶ್ವಸಂಸ್ಥೆಯಲ್ಲಿ ಯಾವುದೇ ಭಾಷೆಯಲ್ಲಿ ಭಾಷಣ ಮಾಡುವ ಅವಕಾಶವಿದೆ. ವಿಶ್ವಸಂಸ್ಥೆಯ ಮಾನವ ಹಕ್ಕು ಸಂರಕ್ಷಣೆ ಪರಿಷತ್ತಿನ 28ನೇ ಸಭೆಯಲ್ಲಿ ರಿಷಬ್ ಪರಿಸರ ಸಂರಕ್ಷಣೆ ವಿಷಯದಲ್ಲಿ ಭಾಷಣ ಮಾಡಲು ತಯಾರಿ ನಡೆಸಿಕೊಂಡು ಹೋಗಿದ್ದರು. ಅಲ್ಲಿ ಕನ್ನಡದಲ್ಲಿ ರಿಷಬ್ ಶೆಟ್ಟಿ ಭಾಷಣ ಆರಂಭಿಸಿದ್ದರು. ತಾಂತ್ರಿಕ ಸಮಸ್ಯೆಯಿಂದಾಗಿ ಇಂಗ್ಲಿಷ್ ಅಥವಾ ಬೇರೆ ಭಾಷೆಗಳಿಗೆ ಅನುವಾದ ಪ್ರಸಾರ ಆಗದ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು Read More »

ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಬೆಳಗಾವಿ: ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಬೆಳಗಾವಿ ಶಾಸಕ ಅಭಯ ಪಾಟೀಲ ಅವರು ಇಲ್ಲಿನ ಶಿವಾಜಿ ಗಾರ್ಡನ್‌ನಲ್ಲಿ ‘ಶಿವಚರಿತ್ರೆ’ ಶೀರ್ಷಿಕೆಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಮದರಸಾ ಶಿಕ್ಷಣಕ್ಕೆ ಬ್ರೇಕ್‌ ಹಾಕಲು ಅಸ್ಸಾಂ ಸರ್ಕಾರ ಮುಂದಾಗಿದೆ ಎಂದು ಹೇಳಿದರು. ನಮ್ಮ ಸರ್ಕಾರವು ಈಗಾಗಲೇ ಅಸ್ಸಾಂನಲ್ಲಿ 600 ಮದರಸಾಗಳನ್ನು ಮುಚ್ಚಿದೆ. ಶೀಘ್ರದಲ್ಲೇ ಉಳಿದ ಮದರಸಾಗಳನ್ನೂ ಮುಚ್ಚುವ

ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ Read More »

ಶೇ.15 ವೇತನ ಹೆಚ್ಚಳವನ್ನು ತಿರಸ್ಕರಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು : ವೇತನವನ್ನು ಶೇ.15ರಷ್ಟು ಹೆಚ್ಚು ಮಾಡುವ ಮುಖ್ಯಮಂತ್ರಿಗಳ ಕೊಡುಗೆಯನ್ನು ತಿರಸ್ಕರಿಸಿರುವ ಸಾರಿಗೆ ನೌಕರರ ಸಂಘ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿದೆ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತು ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ. ನಿಗದಿಯಂತೆ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘದ ಅಧ್ಯಕ್ಷ ಎಚ್‌.ವಿ.ಅನಂತ ಸುಬ್ಬರಾವ್‌ ಸ್ಪಷ್ಟಪಡಿಸಿದ್ದಾರೆ.ಸಾರಿಗೆ ಸಂಘಟನೆಗಳ ಮುಖಂಡರೊಂದಿಗೆ ನಾಲ್ಕೂ ನಿಗಮಗಳ

ಶೇ.15 ವೇತನ ಹೆಚ್ಚಳವನ್ನು ತಿರಸ್ಕರಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

error: Content is protected !!
Scroll to Top