ರಾಜ್ಯ

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ

ಬೆಂಗಳೂರು: ಬೆಂಗಳೂರಿಗೆ ಬೇಸಿಗೆಯ ಮೊದಲ ಮಳೆಯ ಸ್ಪರ್ಶವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆಯಿಂದಲೇ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.ಸಂಜೆಯ ವೇಳೆಗೆ ಗಾಳಿಯಿಂದಾಗಿ ಮೋಡಗಳು ನಗರ ಪ್ರದೇಶದಿಂದ ಸ್ವಲ್ಪ ದೂರಕ್ಕೆ […]

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ Read More »

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ

ಮಡಿದವರಲ್ಲಿ ಐವರು ಮಹಿಳೆಯರು ಹೈದರಾಬಾದ್‌ : ಹೈದರಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರ ಸಹಿತ ಆರು ಮಂದಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ 7.30ರ ವೇಳೆಗೆ ಸ್ವಪ್ನಲೋಕ್‌ ಕಾಂಪ್ಲೆಕ್ಸ್‌ ಎಂಬ ವಾಣಿಜ್ಯ ಸಂಕೀರ್ಣದ 5ನೆ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ. ಕಟ್ಟಡದ ಒಳಗೆ 13 ಮಂದಿ ಸಿಕ್ಕಿಬಿದ್ದಿದ್ದರು. ಏಳು ಮಂದಿಯನ್ನು ರಕ್ಷಿಸಲಾಗಿದೆ. ಆರು ಮಂದಿ ದಟ್ಟ ಹೊಗೆಯಿಂದ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ Read More »

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ 865 ಗಡಿ ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಕ್ಷಮಿಸಲಾರದ ಅಪರಾಧವಾಗಿದ್ದು, ಈ ವಿಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ಸಲ್ಲಿಸಲಾಗುವುದು ಎಂದಿದ್ದಾರೆ.ಕಳೆದ ಡಿಸೆಂಬರ್ ನಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದಾಗ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿ ಸಭೆ ಕರೆದು, ಸುಪ್ರೀಂಕೋರ್ಟ್ ಆದೇಶ ನೀಡುವವರೆಗೂ ಗಡಿ ವಿಚಾರ ಕುರಿತಂತೆಯೂ ಯಾರೊಬ್ಬರೂ

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ Read More »

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ

ಶಿವಮೊಗ್ಗ : ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧ ಟೀಕೆ ಮಾಡುವವರು ಯಾರು? ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ Read More »

ಅರುಣಾಚಲ ಪ್ರದೇಶ: ಸೇನಾ ಹೆಲಿಕಾಪ್ಟರ್ ಪತನ

ಪೈಲಟ್‌ಗಳಿಗಾಗಿ ಶೋಧ ಕಾರ್ಯ ಅರುಣಾಚಲ ಪ್ರದೇಶ : ಭಾರತೀಯ ಸೇನಾ ಚೀತಾ ಹೆಲಿಕಾಪ್ಟರ್ ಮಾ. 16ರ ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್‌ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ಎಟಿಸಿಯ ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ. ಸದ್ಯ ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. 2022ರಲ್ಲಿ ತವಾಂಗ್‌ನಲ್ಲಿ ಹೆಲಿಕಾಪ್ಟರ್ ಒಂದು

ಅರುಣಾಚಲ ಪ್ರದೇಶ: ಸೇನಾ ಹೆಲಿಕಾಪ್ಟರ್ ಪತನ Read More »

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್

ಮಂಗಳೂರು : ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ನಿರ್ದೇಶನದ ಯಶಸ್ವಿ ತುಳು ನಾಟಕ ಶಿವದೂತೆ ಗುಳಿಗೆ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ ಎನ್ನಲಾಗಿರುವ ವ್ಯಂಗ್ಯ ಮಾತೊಂದು ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ತುಳುವರ ಗುಳಿಗ ದೈವಕ್ಕೆ ಅಪಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆರಗ ಜ್ಞಾನೇಂದ್ರ ಅವರ ವ್ಯಂಗ್ಯ ಭಾಷಣದ ತುಣುಕನ್ನು ವೈರಲ್‌ಮಾಡಲಾಗಿದೆ. ಮಾ.14ರಂದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಶಿವದೂತೆ ಗುಳಿಗೆ ನಾಟಕ ಆಯೋಜಿಸಿದ್ದರು. ಈ ನಾಟಕ ಪ್ರದರ್ಶನ ಕುರಿತು ಎಲ್ಲೆಡೆ ಪೋಸ್ಟರ್‌ ಅಂಟಿಸಲಾಗಿತ್ತು. ಈ ಬಗ್ಗೆ

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್ Read More »

ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್‌ ರಗಳೆ: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ

ಬೆಂಗಳೂರು : ಈ ಬೇಸಿಗೆಯಲ್ಲಿ ಜನರಿಗೆ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಚಿಂತೆ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕಂಡು ಮುಂದಿನ ಮೂರು ತಿಂಗಳ ಅವಧಿಗೆ ವಿದ್ಯುತ್‌ ಕಡಿತವಾಗದಂತೆ ನೋಡಿಕೊಳ್ಳಲು ಎಸ್ಕಾಂಗಳು ನಿರ್ಧರಿಸಿವೆ.ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಈ ಬೇಸಿಗೆಯಲ್ಲಿ ಜನರಿಗೆ ಲೋಡ್‌ಶೆಡ್ಡಿಂಗ್‌ ರಗಳೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಿದ್ದಾರೆ. ಇದೀಗ ಬೇಸಿಗೆ ಆರಂಭವಾಗಿದ್ದು, ವಿದ್ಯುತ್‌ ಬಳಕೆಯೂ ಹೆಚ್ಚಾಗಿದೆ. ಈಗಾಗಲೇ ಪರೀಕ್ಷೆಗಳು ಆರಂಭವಾಗಿವೆ. ಹಾಗೆಯೇ ರೈತರಿಗೂ

ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್‌ ರಗಳೆ: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ Read More »

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಎಂಟು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಾವೂರಿನ ರಾಜಾ ಅಲಿಯಾಸ್ ರೋಹನ್ ರೆಡ್ಡಿ , ಪಡೀಲ್-ಕಣ್ಣೂರಿನ ಪ್ರಕಾಶ್ ಶೆಟ್ಟಿ, ಕೃಷ್ಣಾಪುರದ ನಿಸ್ಸಾರ್ ಹುಸೇನ್, ಕಸಬಾ ಬೆಂಗ್ರೆಯ ಕಬೀರ್, ಅಚ್ಯುತ್ ಮತ್ತು ಕಾವೂರಿನ ರಿಜ್ವಾನ್ ಬಂಧಿತರಲ್ಲಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂಟು ಆರೋಪಿಗಳ ಪೈಕಿ ರೆಡ್ಡಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಅಲ್ಲಿ ನಕಲಿ ಗುರುತಿನಡಿಯಲ್ಲಿ ವಾಸಿಸುತ್ತಿದ್ದನು.ಈತ 2013ರಲ್ಲಿ ಬಸ್ ಚಾಲಕನ ಕೊಲೆ ಪ್ರಕರಣದ

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಅನುಮತಿ

ಮಾ.27 ರಿಂದ ಪರೀಕ್ಷೆ- ಫಲಿತಾಂಶ ಬಹಿರಂಗಪಡಿಸುವಂತಿಲ್ಲ ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. 10 ದಿನಗಳ ಬಳಿಕ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ

5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಅನುಮತಿ Read More »

ವಿಶ್ವಸಂಸ್ಥೆಯಲ್ಲಿ ವಿಶೇಷ ಭಾಷಣ ಮಾಡಲು ಕಾಂತಾರದ ರಿಷಬ್‌ಗೆ ಆಹ್ವಾನ

ಕನ್ನಡದಲ್ಲೇ ಮಾತನಾಡಿ ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ವಿಶ್ವದ ಗಮನ ಸೆಳೆಯಲಿರುವ ರಿಷಬ್‌ ಬೆಂಗಳೂರು : ಕಾಂತಾರದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಕನ್ನಡದಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಲಿರುವ ಮೊದಲ ಕನ್ನಡಿಗ ಎನ್ನಿಸಿಕೊಳ್ಳಲಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಪ್ರಚಲಿತ ಸಾಮಾನ್ಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ಇದರಲ್ಲಿ ಮಾತನಾಡಲು ರಿಷಬ್‌ ಶೆಟ್ಟಿ ಆಯ್ಕೆಯಾಗಿದ್ದು,

ವಿಶ್ವಸಂಸ್ಥೆಯಲ್ಲಿ ವಿಶೇಷ ಭಾಷಣ ಮಾಡಲು ಕಾಂತಾರದ ರಿಷಬ್‌ಗೆ ಆಹ್ವಾನ Read More »

error: Content is protected !!
Scroll to Top