ರಾಜ್ಯ

ಮಂಡ್ಯದಲ್ಲಿ ಮೋದಿ ಹವಾ : ರೊಡ್‌ ಶೋ ಶುರು

ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಂಡ್ಯ : ಕರ್ನಾಟಕಕ್ಕೆ ಒಂದು ದಿನದ ಭೇಟಿ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಆವರಣಕ್ಕೆ ತೆರಳಿದ್ದು, ಸಕ್ಕರೆ ನಾಡು ಮಂಡ್ಯ ಅಕ್ಕರೆಯ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಕಾಶಿ ಧಾರವಾಡದಲ್ಲೂ ಮೋದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಮೋದಿ […]

ಮಂಡ್ಯದಲ್ಲಿ ಮೋದಿ ಹವಾ : ರೊಡ್‌ ಶೋ ಶುರು Read More »

ಬಿಜೆಪಿ ನಿದ್ದೆಗೆಡಿಸಿದ, ಕಾಂಗ್ರೆಸ್‌ಗೆ ಖುಷಿ ಕೊಟ್ಟ ಸಮೀಕ್ಷೆ

ಜೆಡಿಎಸ್‌ ಸ್ಥಿತಿ ಆರಕ್ಕೇರುವುದಿಲ್ಲ ಮೂರಕ್ಕಿಳಿಯುವುದಿಲ್ಲ ಬೆಂಗಳೂರು : ಮೂರೂ ಪಕ್ಷಗಳು 150ರ ಗುರಿ ಇಟ್ಟುಕೊಂಡು ಮತದಾರರ ಮನಗೆಲ್ಲಲು ಹಗಲಿರುಳು ಎನ್ನದೆ ಬೆವರು ಸುರಿಸುತ್ತಿವೆ. ಆದರೆ ಈ ನಡುವೆ ಮತದಾನೋತ್ತರ ಸಮೀಕ್ಷೆಗಳು ಮಾತ್ರ ಬೇರೆಯದ್ದೇ ಕಥೆ ಹೇಳುತ್ತಿವೆ. ಇದೀಗ ಲೋಕ್‌ಪೋಲ್‌ ಎಂಬ ಹೆಸರಿನಲ್ಲಿ ಸಂಸ್ಥೆಯೊಂದು ಮಾಡಿದ ಸಮೀಕ್ಷೆ ಜೆಡಿಎಸ್‌ ಮತ್ತು ಬಿಜೆಪಿಯ ನಿದ್ದೆಗೆಡಿಸಿದ್ದರೆ ಕಾಂಗ್ರೆಸ್‌ ಮುಖದಲ್ಲಿ ಮಂದಹಾಸ ಮೂಡಿಸಿದೆ.ಲೋಕ್‌ಪೋಲ್‌ ಸಮೀಕ್ಷೆ ಪ್ರಕಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ. ಕಾಂಗ್ರೆಸ್‌ 116 ರಿಂದ 122 ಸ್ಥಾನಗಳು ಪಡೆಯಬಹುದು

ಬಿಜೆಪಿ ನಿದ್ದೆಗೆಡಿಸಿದ, ಕಾಂಗ್ರೆಸ್‌ಗೆ ಖುಷಿ ಕೊಟ್ಟ ಸಮೀಕ್ಷೆ Read More »

80 ವರ್ಷ ಮೇಲ್ಪಟ್ಟವರಿಗೆ, ವಿಕಲ ಚೇತನರಿಗೆ ಮನೆಯಿಂದಲೇ ಮತದಾನ ಸೌಲಭ್ಯ

ದೇಶದಲ್ಲೇ ಮೊದಲ ಬಾರಿ ಕರ್ನಾಟಕದಲ್ಲಿ ಜಾರಿ ಬೆಂಗಳೂರು : ವಯೋವೃದ್ಧರು ಮತ್ತು ವಿಕಲ ಚೇತನರನ್ನು ಈ ಸಲ ಮತಗಟ್ಟೆಗೆ ಎತ್ತಿಕೊಂಡು ಅಥವಾ ಹೊತ್ತುಕೊಂಡು ತರುವ ಅಗತ್ಯ ಇಲ್ಲ. 80 ವರ್ಷಕ್ಕೂ ಮೇಲ್ಪಟ್ಟವರಿಗೆ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರು

80 ವರ್ಷ ಮೇಲ್ಪಟ್ಟವರಿಗೆ, ವಿಕಲ ಚೇತನರಿಗೆ ಮನೆಯಿಂದಲೇ ಮತದಾನ ಸೌಲಭ್ಯ Read More »

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ

ಬೆಂಗಳೂರು : 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ. ಪರೀಕ್ಷೆa ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಸರ್ಕಾರದ ನಿರ್ಧಾರದ ವಿರುದ್ಧ ರುಪ್ಸಾ ಅರ್ಜಿಈ ಶೈಕ್ಷಣಿಕ ವರ್ಷದಿಂದ 5 ಮತ್ತು

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ Read More »

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ

ಹಳೆಬೀಡು ವಸತಿ ಶಾಲೆಯಲ್ಲಿ ನಡೆದ ಕೃತ್ಯ ಹಾಸನ : ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಕೆಲ ತಿಂಗಳುಗಳಿಂದ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು.ಪುನೀತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ. (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳು. ಕೆಲವು ತಿಂಗಳುಗಳಿಂದ ವಸತಿ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ Read More »

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ ವೇ ಲೋಕಾರ್ಪಣೆ ಸೇರಿಸಿದಂತೆ ಸುಮಾರು 16 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ.ಭಾನುವಾರ ಮಧ್ಯಾಹ್ನ 12 ಗಂಟೆಗೆ ಮೋದಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವರ್ಷದ ಆರಂಭದಿಂದ ರಾಜ್ಯ ಪ್ರವಾಸದಲ್ಲಿರುವ

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ Read More »

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ

ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್‌ ದಾಖಲು ತಿರುವನಂತಪುರಂ : ಕರಾವಳಿ ರಾಜ್ಯಗಳಾದ ಕೇರಳ ಮತ್ತು ಕರ್ನಾಟಕದಲ್ಲಿ ತಾಪಮಾನ ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿದೆ. ನಿನ್ನೆ ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇದು ರಾಜಸ್ಥಾನದ ಮರುಭೂಮಿಯಲ್ಲಿ ಕಡುಬೇಸಿಗೆಯಲ್ಲಿ ದಾಖಲಾಗುವ ತಾಪಮಾನದ ಆಸುಪಾಸಿನಲ್ಲಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು, ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.ಗುರುವಾರ

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ Read More »

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ

ಬೊಮ್ಮಾಯಿ ಅಧ್ಯಕ್ಷ : ಯಡಿಯೂರಪ್ಪ, ಕಟೀಲ್‌ ಸದಸ್ಯರು ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿರುವ ಚುನಾವಣಾ ಪ್ರಚಾರ ಸಮಿತಿಯನ್ನು ಬಿಜೆಪಿ ರಚಿಸಿದೆ. ಈ ಸಮಿತಿಯಲ್ಲಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೂ ಸ್ಥಾನವಿದ್ದು, ಸದಸ್ಯರಾಗಿ ಅವರ ಹೆಸರನ್ನು ಸೇರಿಸಲಾಗಿದೆ.ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವೆ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ, ಸಚಿವ

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ

ಸಂಸದ, ಶಾಸಕರಾಗಿ ಸೇವೆ ಸಲ್ಲಿಸಿದ್ದ ಜನನಾಯಕ ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಡ್ರೈವರ್‌ಗೆ ಕರೆ ಮಾಡಿದ್ದಾರೆ, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ Read More »

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ

ಹಾಸನದ ವ್ಯಕ್ತಿ ಸಾವಿಗೀಡಾದ ಬಳಿಕ ಎಚ್ಚರಿಕೆ ಗಂಟೆ ಬೆಂಗಳೂರು : ರಾಜ್ಯದಲ್ಲಿ ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಇದು ರಾಜ್ಯದಲ್ಲಿ ಎಚ್‌3ಎನ್‌2 ವೈರಸ್‌ನಿಂದ ಸಂಬವಿಸಿದ ಮೊದಲ ಸಾವು.ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆರೋಗ್ಯ ತಪಾಸಣೆ ಭರದಿಂದ ಸಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲು ಮುಂದಾಗಿದೆ. ಅನಾರೋಗ್ಯ ಪೀಡಿತ ಜನರು ಹಾಗೂ ವೃದ್ಧರನ್ನು ಕೂಡ ಪರೀಕ್ಷೆ ನಡೆಸಲಾಗಿದೆ ಎಂದು ಡಿಎಚ್‌ಓ ಡಾ.ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.ಎಚ್‌3ಎನ್‌2 ವೈರಸ್‌ ಸೋಂಕಿತರಲ್ಲಿ

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ Read More »

error: Content is protected !!
Scroll to Top