ರಾಜ್ಯ

ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ

ಯುದ್ಧದಿಂದಾಗಿ ವಿಮಾನಗಳು ರದ್ದಾಗಿ ಆತಂಕದ ಸ್ಥಿತಿ ಬೆಂಗಳೂರು: ಯುದ್ಧದಿಂದಾಗಿ ವಿಮಾನ ಸಂಚಾರ ರದ್ದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ […]

ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ Read More »

ದ್ವಿತೀಯ ಪಿಯುಸಿ ಪರೀಕ್ಷಾ ಹಿನ್ನೆಲೆ ಪರೀಕ್ಷಾ ಬೋರ್ಡ್‌ನಿಂದ ‌ಕಠಿಣ ಕ್ರಮ

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಸಮಯದಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಕ್ಸಾಂ ಬೋರ್ಡ್ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಬೋರ್ಡ್ ಕೈಗೊಂಡ ಕ್ರಮಗಳ ಪಟ್ಟಿ ಈ ಕೆಳಗಿನಂತಿವೆ:

ದ್ವಿತೀಯ ಪಿಯುಸಿ ಪರೀಕ್ಷಾ ಹಿನ್ನೆಲೆ ಪರೀಕ್ಷಾ ಬೋರ್ಡ್‌ನಿಂದ ‌ಕಠಿಣ ಕ್ರಮ Read More »

ಪತಿ ಮರಣದ ಕೆಲವೇ ದಿನದಲ್ಲಿ ಪತ್ನಿ ಮರು ಮದುವೆ: ಸಂದೇಹದಿಂದ ದೂರು ನೀಡಿದ ಮೃತನ ಸಹೋದರರು

ತುಮಕೂರು: ಪತಿ ಮೃತಪಟ್ಚ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿದ್ದು, ಇದರಿಂದ ಅನುಮಾನಗೊಂಡು ‌ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಘಟನೆ ದಾಸರಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯ ಶವವನ್ನು 23 ದಿನಗಳ ಬಳಿಕ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪರಮೇಶ್ (50) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಇದಾದ ಕೆಲವೇ ದಿನದಲ್ಲಿ ಅವರ ಪತ್ನಿ ಬೇರೊಂದು ಮದುವೆಯಾಗಿದ್ದು, ಕುಟುಂಬಸ್ಥರಲ್ಲಿ ಸಂದೇಹ ಸೃಷ್ಟಿಯಾಗುವಂತೆ ಮಾಡಿದೆ. ಮೃತ ವ್ಯಕ್ತಿಯ ಸಹೋದರರಿಗೆ ತನ್ನ ಅಣ್ಣನಿಗೆ ಹೃದಯಾಘಾತವಾಗಿಲ್ಲ, ಆತನ ಮೂಗಿನ ನಡುವೆ ಗಾಯ ಇತ್ತು.

ಪತಿ ಮರಣದ ಕೆಲವೇ ದಿನದಲ್ಲಿ ಪತ್ನಿ ಮರು ಮದುವೆ: ಸಂದೇಹದಿಂದ ದೂರು ನೀಡಿದ ಮೃತನ ಸಹೋದರರು Read More »

ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ

ಕೋಲಾರ: ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳ‌ ಕೆಲವು ವ್ಯಕ್ತಿಗಳು ಮತ್ತು ಖಾಸಗಿ ಡೈರಿಗಳು ಹಾಲು ಕಲಬೆರಕೆ ಅಡ್ಡಾಗಳನ್ನು ನಿರ್ಮಾಣ ಮಾಡಿಕೊಂಡು ಜನರ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿದ್ದರು. ಈ ವಿಷಯ ತಿಳಿದ ಡಿಸಿ ಒಂದೇ ಸಮಯಕ್ಕೆ ಸುಮಾರು 32 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 42 ರಷ್ಟು ಹಾಲಿನ ಮಾದರಿ ಸಂಗ್ರಹ ಮಾಡಿದ್ದರು. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ Read More »

ನಿಂತಿದ್ದ ಲಾರಿಗೆ ಗುದ್ದಿದ ಕಾರು: ಮೂರು ಮಂದಿ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂರು ಮಂದಿ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಸಮೀಪ ನಡೆದಿದೆ. ಒಂದೇ ಕುಟುಂಬದ ಐದು ಜನರು ಮಂತ್ರಾಲಯಕ್ಕೆ ತೆರಳಿ ಮರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ರಾಯರ ದರ್ಶನ ಪಡೆದು ಹಿಂದಿರುಗುತ್ತಿದ್ದ ಸಮಯದಲ್ಲಿ ಭೀಕರ ಅಪಘಾತ ನಡೆದಿರುವುದಾಗಿದೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮೃತರನ್ನು ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ, ಗಂಗಾಧರ್ ಮತ್ತು ಲೋಹಿತ್ ಎಂದು ಗುರುತಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಕಾರು: ಮೂರು ಮಂದಿ ಸಾವು Read More »

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ

ಇನ್‌ಸ್ಟಾಗ್ರಾಂನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್‌ ಹಾಕಿದ ಕಿಡಿಗೇಡಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುರುವಾಗಲು ಇನ್ನೆರಡು ದಿನ ಬಾಕಿಯಿರುವಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ ಮತ್ತೆ ಎದುರಾಗಿದೆ. ಫೆಬ್ರವರಿ 28ರಿಂದ ಪರೀಕ್ಷೆಗಳು ಶುರುವಾಗಲಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. ಯಾವುದಾದರೂ ಪ್ರಶ್ನೆ

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ Read More »

ಆಕ್ರೋಶದ ಅಲೆ ಎಬ್ಬಿಸಿದ ವಿದ್ಯಾರ್ಥಿ ಸಂಕೇತ್‌ ಕೊಲೆ ಕೃತ್ಯ

15 ಲ.ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಸ್ಲಿಂ ಯುವಕರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಥಳಿಸಿ ಸಾಯಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಅವರೂ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಶಾಲಾ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ

ಆಕ್ರೋಶದ ಅಲೆ ಎಬ್ಬಿಸಿದ ವಿದ್ಯಾರ್ಥಿ ಸಂಕೇತ್‌ ಕೊಲೆ ಕೃತ್ಯ Read More »

ಅಜೀಮ್‌ ಪ್ರೇಮ್‌ಜಿ ವಿವಿ ವಿರುದ್ಧ ದೇಶ ವಿರೋಧಿ ಚಟುವಟಿಕೆ ಆರೋಪ

ಮಾನ್ಯತೆ ರದ್ದುಪಡಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಬೆಂಗಳೂರು: ಸರ್ಜಾಪುರದಲ್ಲಿರುವ ಪ್ರತಿಷ್ಠಿತ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಮಂಗಳವಾರ ವಿವಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಕೇಂದ್ರ ಗೃಹ

ಅಜೀಮ್‌ ಪ್ರೇಮ್‌ಜಿ ವಿವಿ ವಿರುದ್ಧ ದೇಶ ವಿರೋಧಿ ಚಟುವಟಿಕೆ ಆರೋಪ Read More »

ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಅಶಾಂತಿಧೂತರ ಅಟ್ಟಹಾಸ

ಮುರುಡೇಶ್ವರ: ಅಶಾಂತಿದೂತ ಯುವಕರು ಹಿಂದೂ ಧರ್ಮೀಯರ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿರುವ ಘಟನೆ ಬೈಲೂರಿನ ತೆಂಗಾರಿನಲ್ಲಿ ‌ನಡೆದಿದೆ. ರಾತ್ರಿ ವೇಳೆ ಮೂರು ಬೈಕ್‌ಗಳ ಮೂಲಕ ಬಂದ ದುಷ್ಕರ್ಮಿಗಳು ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲೆಸೆದಿದ್ದಾರೆ. ಅಪ್ರಾಪ್ತ ವಯಸ್ಸಿನ ಅಶಾಂತಿದೂತರು ಗುಂಪಾಗಿ ಬಂದು ನಡೆಸಿದ ಕೃತ್ಯ ಇದೆಂದು ತಿಳಿದು ಬಂದಿದೆ. ಮೂವರು ಆರೋಪಿಗಳನ್ನು ಸ್ಥಳೀಯ ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯ ಬಳಿಕ ಹಿಂದೂಗಳು ಮುರ್ಡೇಶ್ವರ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಆ ಬಳಿಕ

ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಅಶಾಂತಿಧೂತರ ಅಟ್ಟಹಾಸ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರ ಮೇಲೆಯೇ ಆರೋಪಿಗಳ ವಕೀಲರಿಂದ ಆರೋಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರೇ ಎಡವಟ್ಟು ಮಾಡಿದ್ದಾರೆ ಎಂದು ಆರೋಪಿಗಳ‌ ಪರ ವಕೀಲರು ಆರೋಪಿಸಿದ್ದಾರೆ. ಸದ್ಯ ಆರೋಪಿಗಳು ದಿನಕ್ಕೊಂದು ಎಂಬಂತೆ ಹೊಸ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ. ನ್ಯಾಯಾಲಯಕ್ಕೆ ನಿನ್ನೆಯೂ ‌ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದು, ಪೊಲೀಸರು ನಮ್ಮ ಮೊಬೈಲ್ ಗಳನ್ನು ಯಾವುದೋ ಸ್ಥಳದಲ್ಲಿ ವಶಕ್ಕೆ ಪಡೆದು ಬಳಿಕ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಆರೋಪಿಗಳನ್ನು ಟೈಲ್ಸ್ ಇರುವಂತಹ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರ ಮೇಲೆಯೇ ಆರೋಪಿಗಳ ವಕೀಲರಿಂದ ಆರೋಪ Read More »

error: Content is protected !!
Scroll to Top