ರಾಜ್ಯ

ಮದುವೆ ಪ್ರಪೋಸ್‌ ನೆಪದಲ್ಲಿ ಪ್ರಿಯತಮನನ್ನು ಜೀವಂತ ದಹಿಸಿದ ಯುವತಿ

ವೆಸ್ಟರ್ನ್ ಸ್ಟೈಲ್‌ನಲ್ಲಿ ನಿನಗೆ ಪ್ರಪೋಸ್ ಮಾಡುವುದಾಗಿ ನಂಬಿಸಿ ಭೀಕರ ಕೃತ್ಯ ಬೆಂಗಳೂರು : ‘ವೆಸ್ಟರ್ನ್ ಸ್ಟೈಲ್’ನಲ್ಲಿ ಪ್ರಪೋಸ್ ಮಾಡುತ್ತೇನೆ ಎಂದು ನಂಬಿಸಿ, ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಪ್ರೇಯಸಿಯೇ ಜೀವಂತ ದಹಿಸಿರುವ ಪ್ರಕರಣ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತ ಕಿರಣ್ ಮತ್ತು ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮಂಗಳವಾರ ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದಿದ್ದನ್ನು ನೋಡಿ ಕಿರಣ್ ಆಕೆಯ ಮನೆಗೆ ಬಂದಿದ್ದನು. ಈ […]

ಮದುವೆ ಪ್ರಪೋಸ್‌ ನೆಪದಲ್ಲಿ ಪ್ರಿಯತಮನನ್ನು ಜೀವಂತ ದಹಿಸಿದ ಯುವತಿ Read More »

ಗೃಹ ಸಚಿವ ಪರಮೇಶ್ವರ್‌ ವಿರುದ್ಧವೇ ಎಫ್‌ಐಆರ್‌!

ಬೆಟ್ಟಿಂಗ್‌ ಪ್ರಕರಣದಲ್ಲಿ ಕೇಸ್‌ ದಾಖಲಿಸಿ ತನಿಖೆ ಮಾಡಲು ಆದೇಶಿಸಿದ ನ್ಯಾಯಾಲಯ ಬೆಂಗಳೂರು: ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಕೇವಲ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗೃಹಸಚಿವ ಜಿ. ಪರಮೇಶ್ವರ್‌ ವಿರುದ್ಧವೇ ಎಫ್‌ಐಆರ್‌ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ನಾಗಭೂಷಣ್ ಎಂಬುವವರು ಕೋರ್ಟ್‌ಗೆ ಮನವಿ

ಗೃಹ ಸಚಿವ ಪರಮೇಶ್ವರ್‌ ವಿರುದ್ಧವೇ ಎಫ್‌ಐಆರ್‌! Read More »

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ: ಆರೋಪಿ ವಿರುದ್ಧ ದೂರು ದಾಖಲು

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿ ಮಾಡಿ, ಹಲ್ಲೆ ನಡೆಸಿದ ಆರೋಪಿಯ ಮೇಲೆ ಪ್ರಕರಣ ದಾಖಲಾಗಿದೆ. ಗಾಯಾಳು ಪೊಲೀಸ್ ಪ್ರವೀಣ್ ಎಂಬವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎ. 18 ರಂದು ಸಂಚಾರ ಪೂರ್ವ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್, ಹಲೇಷಾ, ಚಂಪಾ ಎಂಬವರು ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಪದವು ಕಡೆಯಿಂದ ಬೈಕ್ ಸವಾರನೊಬ್ಬ ಮಹಿಳೆಯೊಬ್ಬಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಬಂದು, ವಾಹನವನ್ನು ಬಿಕರ್ನಕಟ್ಟೆಗೆ ಹೋಗುವ ಫ್ರೀ ಲೆಫ್ಟ್‌ನಲ್ಲಿ ನಿಲ್ಲಿಸಿದ್ದಾನೆ. ಇದರಿಂದ ಇತರ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ: ಆರೋಪಿ ವಿರುದ್ಧ ದೂರು ದಾಖಲು Read More »

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಸಾವು, ಓರ್ವ ಗಂಭೀರ

ಕಾರವಾರ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ದಾಂಡೇಲಿಯ ಅಜಂಗಾವ ಎಂಬಲ್ಲಿ ನಡೆದಿದೆ. ಮೃತರನ್ನು ಧಾರವಾಡದ ಫರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಹಳಿಯಾಳದ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ ತೆರಳುವ ಸಮಯದಲ್ಲಿ ಈ ಘಟನೆ ನಡೆದಿದೆ. ಢಿಕ್ಕಿಯ ಭೀಕರತೆಗೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ದಾಂಡೇಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಸಾವು, ಓರ್ವ ಗಂಭೀರ Read More »

ಪತಿ ಮನೆಯವರ ಕಿರುಕುಳ: ಗೃಹಣಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಗೃಹಣಿಯೊಬ್ಬಳು ವರದಕ್ಷಿಣೆಯ ಕುರುಕುಳದಿಂದ ಬೇಸತ್ತು, ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ(28) ಎಂಬವರೇ ಮೃತ ದುರ್ದೈವಿ. ಶ್ರೀನಿಧಿ ಅವರು ಸಂತೋಷ್ ಜೊತೆಗೆ 2021 ರಲ್ಲಿ ಮದುವೆಯಾಗಿದ್ದರು. ಇಬ್ಬರು ಮಕ್ಕಳು ಸಹ ಇವರಿಗಿದ್ದಾರೆ. ಗಂಡ ಮತ್ತು ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹ, ಕಿರುಕುಳದಿಂದ ಬೇಸತ್ತು ಶ್ರೀನಿಧಿ ಅವರು ಕಿಟಕಿಗೆ ‌ಶಾಲಿನಿಂದ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಶ್ರೀನಿಧಿ ಅವರು ತವರು

ಪತಿ ಮನೆಯವರ ಕಿರುಕುಳ: ಗೃಹಣಿ ಆತ್ಮಹತ್ಯೆಗೆ ಶರಣು Read More »

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆದ ಖದೀಮ ಪೊಲೀಸರ ಅತಿಥಿ

ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿದ್ದ ಆರೋಪಿಯನ್ನು ನಾಯಕನಹಟ್ಟಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಳ್ಳಕೆರೆ ತಾಲೂಕಿನ ಗಿಂತ ಕೊಲಮ್ಮನಹಳ್ಳಿಯ ಪಾಲಯ್ಯ ಜಿ. ಎಂದು ಗುರುತಿಸಲಾಗಿದೆ. ಪಾಲಯ್ಯ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಕೃಷಿ ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿದೆ. ಆರೋಪಿ ನೆಟ್ಟಿದ್ದ ಸುಮಾರು 18 ಲಕ್ಷ ರೂ. ಮೌಲ್ಯದ 791 ಗಾಂಜಾ ಗಿಡಗಳಿಂದ ಸುಮಾರು 187 ಕೆಜಿ ಸೊಪ್ಪನ್ನು ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆದ ಖದೀಮ ಪೊಲೀಸರ ಅತಿಥಿ Read More »

ಕರಾವಳಿಯಲ್ಲಿ ಇನ್ನೂ ಐದು ದಿನ ಉಷ್ಣ ಅಲೆ

ಮುನ್ನೆಚ್ಚರಿಕೆ ವಹಿಸಲು ಜನರಿಗೆ ಆರೋಗ್ಯ ಇಲಾಖೆ ಸೂಚನೆ ಬೆಂಗಳೂರು: ಮಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಬಿಸಿಲಿನ ಬೇಗೆಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರಾವಳಿಯಲ್ಲಿ ಇನ್ನೂ ಐದು ದಿನ ಉಷ್ಣ ಅಲೆ Read More »

ಕಾಂಗ್ರೆಸ್‌ ಶಾಸಕನ ಮನೆ ಬಾಗಿಲಿಗೆ ಬಂದ ಬಿಟ್‌ ಕಾಯಿನ್‌ ಹಗರಣದ ತನಿಖೆ

ನಲಪಾಡ್‌ ನಡೆಸಿದ ಕೋಟಿಗಟ್ಟಲೆ ವ್ಯವಹಾರದ ಮೇಲೆ ಅನುಮಾನ ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಮತ್ತು ಅವರ ಮಗ ಮೊಹಮ್ಮದ್‌ ನಲಪಾಡ್‌ ಮನೆ ಮತ್ತು ಕಚೇರಿಗಳ ಮೆಲೆ ದಾಳಿ ನಡೆಸುವುದರೊಂದಿಗೆ ಕರ್ನಾಟಕದಲ್ಲಿ ಕೆಲ ವರ್ಷಗಳ ಹಿಂದೆ ಭಾರಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ಹಗರಣದ ತನಿಖೆ ಈಗ ಕಾಂಗ್ರೆಸ್ ಎನ್.ಎ. ಹ್ಯಾರಿಸ್ ಕುಟುಂಬದ ಹೊಸ್ತಿಲಿಗೆ ಬಂದು ನಿಂತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಹ್ಯಾರಿಸ್ ಮತ್ತು

ಕಾಂಗ್ರೆಸ್‌ ಶಾಸಕನ ಮನೆ ಬಾಗಿಲಿಗೆ ಬಂದ ಬಿಟ್‌ ಕಾಯಿನ್‌ ಹಗರಣದ ತನಿಖೆ Read More »

ಮನೆಯಂಗಳದಲ್ಲಿ ‌ನಿಲ್ಲಿಸಿದ್ದ ಸ್ಕೂಟಿಗೆ ಕನ್ನ ಹಾಕಿದ ಕಳ್ಳ

ಕಾರ್ಕಳ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ‌ಸ್ಕೂಟಿಯನ್ನು ಮನೆಯ ಬಾಗಿಲು ಒಡೆದು ಒಳನುಗ್ಗಿ, ಸ್ಕೂಟಿಯ ಕೀ ತೆಗೆದುಕೊಂಡು ಕಳ್ಳನೊಬ್ಬ ಎಗರಿಸಿಕೊಂಡು ಹೋದ ಘಟನೆ ಕಸಬಾ ಗ್ರಾಮದ ಆನಂದನಗರದಲ್ಲಿ ‌ನಡೆದಿದೆ. ಕರಿಯಕಲ್ಲು ‌ನಿವಾಸಿ ಹರೀಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಹರೀಶ್ ಅವರು ಉಜಿರೆಯಲ್ಲಿ ಕೆಲಸ ಮಾಡುತ್ತಿದ್ದು ಎ. 16 ರಂದು ತೆರಳಿದ್ದರು. ಎ. 19 ರಂದು ಹರೀಶ್ ಅವರಿಗೆ ಸಂಬಂಧಿಕರು ಕರೆ ಮಾಡಿ ಮನೆಯ ಬಾಗಿಲು ಒಡೆದಿರುವ ಬಗ್ಗೆ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಕಳ್ಳತನ

ಮನೆಯಂಗಳದಲ್ಲಿ ‌ನಿಲ್ಲಿಸಿದ್ದ ಸ್ಕೂಟಿಗೆ ಕನ್ನ ಹಾಕಿದ ಕಳ್ಳ Read More »

ಬೀದರ್‌ನಲ್ಲಿ ಬಿಸಿಲಿನ ತಾಪಕ್ಕೆ ಓರ್ವ ಬಲಿ

ಬೀದರ್: ಸೂರ್ಯನ ತಾಪಕ್ಕೆ ಕರ್ನಾಟಕ ಕೊತಕೊತ ಕುದಿಯುತ್ತಿದ್ದು, ಬಿಸಿಲಿನ ಹೊಡೆತಕ್ಕೆ ಬೀದರ್‌ನಲ್ಲಿ ಓರ್ವ ವ್ಯಕ್ತಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹೀಟ್ ಸ್ಟ್ರೋಕ್‌ಗೆ ಬಲಿಯಾದ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಮೊಹಮದ್ ಸಮೀರ್ ಲಯಿಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಮಲನಗರದ ಡಿಗ್ಗಿ ‌ನಗರಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ -50 ರಲ್ಲಿ ಈ ಘಟನೆ ನಡೆದಿದೆ. ಕಮಲಾ ನಗರದ ಸಲೂನ್ ಒಂದರಲ್ಲಿ ಲಯೀಕ್ ಕೆಲಸ ಮಾಡುತ್ತಿದ್ದುದಾಗಿ ತಿಳಿದು ಬಂದಿದೆ. ಸಮೀಪದ ಮೆಕ್ಯಾನಿಕ್ ಅಂಗಡಿ ಒಂದರ ಬಳಿ ಬಂದು ನೀರು

ಬೀದರ್‌ನಲ್ಲಿ ಬಿಸಿಲಿನ ತಾಪಕ್ಕೆ ಓರ್ವ ಬಲಿ Read More »

error: Content is protected !!
Scroll to Top