ರಾಜ್ಯ

ಗ್ಯಾಸ್ ಪಂಪ್ ಏಜೆನ್ಸಿ ಸಿಬ್ಬಂದಿಗೆ ಹಲ್ಲೆ, ಸಾವಿರಾರು ರೂ. ಮೌಲ್ಯದ ಸೊತ್ತು ನಾಶ: ದೂರು ದಾಖಲು

ಬಂಟ್ವಾಳ: ಮೆಲ್ಕಾರಿನ ಬೊಗೋಡಿಯಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿ ಒಂದರಲ್ಲಿ ಹಲ್ಲೆ ಮತ್ತು ವಸ್ತುಗಳಿಗೆ ಹಾನಿ ಎಸಗಿದ ಘಟನೆಗೆ ಸಂಬಂಧಿಸಿದ ಹಾಗೆ ಮ್ಯಾನೇಜರ್ ಕುನಲ್ ಎಂಬವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಮಾ. 20 ರಂದು ಅಟೋರಿಕ್ಷಾ ಚಾಲಕನೊಬ್ಬ ತನ್ನ ಅಟೋವನ್ನು ಪಂಪ್ ಒಳಗೆ ತಂದಿದ್ದು, ಕಚೇರಿಯ ಸಿಬ್ಬಂದಿ ಅಶ್ವಿನ್ ಎಂಬುವವರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾಗಿ ತಿಳಿಸಿದ್ದಾರೆ. ಹಾಗೆಯೇ ಆ ಬಳಿಕ ಪಂಪ್‌ನ ಸೊತ್ತುಗಳಿಗೆ ಹಾನಿ ಎಸಗಿದ್ದಾನೆ. ಈ ಘಟನೆಯಿಂದ ಸುಮಾರು ನಲವತ್ತೆಂಟು ಸಾವಿರ […]

ಗ್ಯಾಸ್ ಪಂಪ್ ಏಜೆನ್ಸಿ ಸಿಬ್ಬಂದಿಗೆ ಹಲ್ಲೆ, ಸಾವಿರಾರು ರೂ. ಮೌಲ್ಯದ ಸೊತ್ತು ನಾಶ: ದೂರು ದಾಖಲು Read More »

ಯಕ್ಷ ಭಾರತಿ ದಶಮಾನೋತ್ಸವ ದಶಪರ್ವ ಸ್ಮರಣ ಸಂಚಿಕೆ ಬಿಡುಗಡೆ

ಉಜಿರೆ: ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ ಯಕ್ಷಭಾರತಿ ರಿ. ಕನ್ಯಾಡಿ ಹನ್ನೊಂದನೇ ವಾರ್ಷಿಕ ಸಮಾರಂಭದಲ್ಲಿ ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ರೂಪಿಸಲಾದ “ದಶಪರ್ವ” ಸ್ಮರಣ ಸಂಚಿಕೆಯನ್ನು ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಶಾಸಕ ಪ್ರತಾಪಸಿಂಹ ನಾಯಕ್ ಲೋಕಾರ್ಪಣೆಗೊಳಿಸಿದರು. ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ, ಕಲಾ ಪೋಷಕ ಶ್ರೀಪತಿ ಭಟ್, ಮೂಡಬಿದಿರೆ ಸಂಪಾದಕ ಮಂಡಳಿಯ ಮಹೇಶ ಕನ್ಯಾಡಿ, ಹರಿದಾಸ ಗಾಂಭೀರ, ಭವ್ಯ ಹೊಳ್ಳ, ಕೌಶಿಕ್ ರಾವ್ ಕನ್ಯಾಡಿ, ರತ್ನವರ್ಮ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು. ದಶಪರ್ವದ ಸಂಪಾದಕ

ಯಕ್ಷ ಭಾರತಿ ದಶಮಾನೋತ್ಸವ ದಶಪರ್ವ ಸ್ಮರಣ ಸಂಚಿಕೆ ಬಿಡುಗಡೆ Read More »

ಚಾರ್ಮಾಡಿ ಘಾಟ್‌ನಲ್ಲಿ ‌ಪಲ್ಟಿಯಾದ ಟಿಟಿ ವಾಹನ: ಒಂಬತ್ತು ಜನರಿಗೆ ಗಾಯ

ಕೊಟ್ಟಿಗೆಹಾರ: ಟಿಟಿ ‌ವಾಹನವೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ‌ನಡೆದಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಈ ವಾಹನವು ಭದ್ರಾವತಿಯಿಂದ ಧರ್ಮಸ್ಥಳದತ್ತ ಹೋಗುತ್ತಿತ್ತು. ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ ಇದು, ಗಾಯಾಳು ಒಂಬತ್ತು ಜನರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸ್ಥಳೀಯರು ಘಟನೆ ನಡೆದ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಗಾಯ ಆಲಿ ಗಳನ್ನು ನೆರೆಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು

ಚಾರ್ಮಾಡಿ ಘಾಟ್‌ನಲ್ಲಿ ‌ಪಲ್ಟಿಯಾದ ಟಿಟಿ ವಾಹನ: ಒಂಬತ್ತು ಜನರಿಗೆ ಗಾಯ Read More »

ಸರ್ಕಾರಿ ಬಸ್ ಪಲ್ಟಿ: ಎಂಟು ಜನರಿಗೆ ಗಾಯ

ಚಿಕ್ಕಮಗಳೂರು: ವಿದ್ಯುತ್ ಕಂಬವೊಂದಕ್ಕೆ ಸರ್ಕಾರಿ ಬಸ್ ಗುದ್ದಿದ್ದು, ಎಂಟು ಮಂದಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕೊಡಾಳ್ ಸಮೀಪ ನಡೆದಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸು ಕುಕ್ಕನೂರಿನಿಂದ ಧರ್ಮಸ್ಥಳದತ್ತ ತೆರಳುತ್ತಿತ್ತು. ನಲವತ್ತಕ್ಕೂ ಅಧಿಕ ಪ್ರಯಾಣಿಕರು ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಪಘಾತದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ‌ತನಿಖೆ ನಡೆಸುತ್ತಿದ್ದಾರೆ.

ಸರ್ಕಾರಿ ಬಸ್ ಪಲ್ಟಿ: ಎಂಟು ಜನರಿಗೆ ಗಾಯ Read More »

ಉದ್ಯಮಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ಲಪಟಾಯಿಸಿದ ಸೈಬರ್‌ ವಂಚಕರು

ಬೆಳಗಾವಿ: ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಕೋಟಿ ಕೋಟಿ ಹಣ ಕಳೆದುಕೊಂಡು ಉದ್ಯಮಿ ಕಂಗಾಲಾಗಿದ್ದಾರೆ. ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್‌ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಫ್ರಾಡ್‌ ಲಿಸ್ಟ್‌ನಲ್ಲಿ ತೋರಿಸುತ್ತಿದೆ. ನೀವು ಮನಿ ಲಾಡ್ರಿಂಗ್ ಮಾಡ್ತಿದ್ದೀರಿ ಎಂದು ಬೆದರಿಕೆ ಹಾಕಿದ್ದರು. ನಿಮ್ಮ ಹಣ ಬೇರೆ ಖಾತೆಗೆ ವರ್ಗಾಯಿಸಿ ಎಂದು ವಂಚಕರು ಅಕೌಂಟ್ ನಂಬರ್ ಕೊಟ್ಟಿದ್ದಾರೆ.

ಉದ್ಯಮಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ಲಪಟಾಯಿಸಿದ ಸೈಬರ್‌ ವಂಚಕರು Read More »

ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಕಚೇರಿಯಲ್ಲೇ ಆತ್ಮಹತ್ಯೆ

ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳುಹಿಸಿ ನೇಣಿಗೆ ಶರಣಾದ ಅಧಿಕಾರಿ ಬೆಂಗಳೂರು: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳುಹಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋ ಮಾಡಿ ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ

ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಕಚೇರಿಯಲ್ಲೇ ಆತ್ಮಹತ್ಯೆ Read More »

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಸಂಭವಿಸಿದ ದುರ್ಘಟನೆ ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶು ವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಸಮೀಕ್ಷಾ ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10.30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11.45ರ ಸುಮಾರಿಗೆ ಗರ್ಭಿಣಿ

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು Read More »

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲು ಒಂದು ತಿಂಗಳು ರದ್ದು

ತುರ್ತು ರೈಲು ಹಳಿ ಕಾಮಗಾರಿಗೆ ಹಲವು ರೈಲುಗಳ ಸಂಚಾರ ವ್ಯತ್ಯಯ ಮಂಗಳೂರು: ತುರ್ತು ಹಳಿ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲು ಒಂದು ತಿಂಗಳು ರದ್ದು Read More »

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ

ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಯುವತಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್​​ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಈ ಕೃತ್ಯ ಎಸಗಿದ್ದಾನೆ. ಕೋಲಾರ ಮೂಲದ ಅಪ್ರಾಪ್ತೆ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸೈಯದ್ ಆಕೆ ಜೊತೆ ಸುತ್ತಾಡಿಕೊಂಡಿದ್ದನು. ಈ ವಿಷಯ ತಿಳಿದು ಪೋಷಕರು ಇಬ್ಬರಿಗೂ 2025 ಜೂನ್‌ನಲ್ಲಿ ಎಂಗೇಜ್ಮೆಂಟ್ ಮಾಡಿದ್ದರು. ನಿಶ್ಚಿತಾರ್ಥವಾದ ನಂತರ ಸೈಯದ್‌ಗೆ ಭಾವಿಪತ್ನಿ ಮೇಲೆ

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ Read More »

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು

ಏ.9ರಂದು ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪಚುನಾವಣೆ

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು Read More »

error: Content is protected !!
Scroll to Top