ರಾಜ್ಯ

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು

ಬೆಂಗಳೂರು : ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ಮಾ.26ರಂದು ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದ 8 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದೆ. ಸನೋಜ್ ಶರ್ಮಾ ಅಕಾ ಸನೋದ್, ಅಮಿತ್ ಕುಮಾರ್ ಮಂಡಲ್, ಚಂದ್ರ ಪಾಲ್, ತಿಲಕ್ ರಾಮ್, ನೀರಜ್ ಭಾರತಿ, ಲಕ್ಷ್ಮಣ ಮತ್ತು ಸುಮಯಾ ಗುಪ್ತಾ ಅಲಿಯಾಸ್ ಸಮಯ್ ಶುಕ್ರವಾರದವರೆಗೆ ಒಬ್ಬರ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಸುಟ್ಟು ಗಾಯಗೊಂಡಿದ್ದ 8 ಕಾರ್ಮಿಕರಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು […]

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು Read More »

ಏ.9 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ

ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಸಫಾರಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಏ.9ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಆದರೆ ಈ ಸಲ ಮೋದಿ ಕರ್ನಾಟಕಕ್ಕೆ ಬರುತ್ತಿರುವುದು ಚುನಾವಣಾ ಪ್ರಚಾರಕ್ಕೆ ಅಲ್ಲ. ಹುಲಿ ನೀತಿಯ ಐವತ್ತನೇ ವರ್ಷಾಚರಣೆ ಬಂಡೀಪುರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿಮ ಬರುತ್ತಿದ್ದಾರೆ. ಈ ವೇಳೆ ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಪ್ರಧಾನಿ ಮೋದಿ ಅವರು ಸಫಾರಿ ಕೈಗೊಳ್ಳಲಿದ್ದಾರೆ.ವಿಶೇಷ ಎಂದರೆ ಏ.9ರಂದೇ ರಾಹುಲ್‌ ಗಾಂಧಿ ಕೋಲಾರದಲ್ಲಿ ಕಾಂಗ್ರೆಸಿನ ಜೈ ಭಾರತ್‌ ರ‍್ಯಾಲಿಗೆ ಚಾಲನೆ ನೀಡಲಿದ್ದಾರೆ.ವಿಧಾನಸಭೆ ಚುನಾವಣೆ

ಏ.9 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ Read More »

ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು

ನೀವು ಅಡ್ಮಿನ್‌ ಆಗಿದ್ದರೆ ಎಚ್ಚರಿಕೆ ವಹಿಸಿಕೊಳ್ಳಿ ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಸುದ್ದಿಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಮತ್ತು ಇನ್ನಿತರ ಮೂಲಗಳಿಂದ ರಾಜಕೀಯ ಪ್ರಚಾರ ಮಾಡಬೇಕಿದ್ದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದರೆ ಚುನಾವಣಾ ಸಂಬಂಧ ನೇಮಕ ಮಾಡಲಾಗಿರುವ ಸಮಿತಿಯಿಂದ ಪೂರ್ವ ಅನುಮತಿ ಪಡೆಯುವುದು ಕಡ್ಡಾಯ. ವಾಟ್ಸಪ್‌, ಫೇಸ್‌ಬುಕ್‌ ಮತ್ತಿತರ ಸೋಷಿಯಲ್‌ ಮೀಡಿಯಾ ಗ್ರೂಪ್‌ಗಳಿಗೂ ಈ ನಿಯಮ ಅನ್ವಯವಾಗುತ್ತದೆ.

ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು Read More »

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾ. 31 ರಂದು ಸಂಭವಿಸಿದೆ. ರೆನೀಶ್ (27) ಎಂಬಾತನೇ ಮೃತ ಯುವಕ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಇವನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ.

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಗೆ ಕಾರಣ : ಸಾಲಬಾಧೆ

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ನಡೆದಿದೆ.ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದರು.ಕರುಣಾ ಲಾಡ್ಜ್‌ನಲ್ಲಿ ಘಟನೆ ನಡೆದಿದ್ದು, ಮೈಸೂರು ಮೂಲದ ದಂಪತಿ ಮತ್ತು ಅವಳಿ ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಡೆತ್‌ ನೋಟ್‌ ಸಿಕ್ಕಿದ್ದು, ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿ,

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಗೆ ಕಾರಣ : ಸಾಲಬಾಧೆ Read More »

ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ

ಮೈಸೂರಿನ ವಾಣಿವಿಲಾಸದ ಕುಟುಂಬ ಮಂಗಳೂರು : ನಗರದ ಕೆ.ಎಸ್‌. ರಾವ್‌ ರಸ್ತೆಯ ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿವಿಲಾಸದವರೆಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿಯೇ ಡೆತ್‌ನೋಟ್‌ ಪತ್ತೆಯಾಗಿದೆ. ನಾಲ್ವರಲ್ಲಿ ಓರ್ವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿದ್ದರು. ಬಂದರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಒಂದೇ ಕುಟುಂಬದ ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. ಮಂಗಳೂರಿನ

ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ Read More »

ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ

ನಾಲ್ಕು ಹಂತಗಳ ಪರಿಶೀಲನೆ ಬಳಿಕ ಅಭ್ಯರ್ಥಿ ಹೆಸರು ಘೋಷಣೆ ಬೆಂಗಳೂರು : ಬಿಜೆಪಿ ಈ ಸಲ ಟಿಕೆಟ್‌ ಹಂಚಿಕೆಗೆ ಮತದಾನದ ಪದ್ಧತಿ ಅಳವಡಿಸಿಕೊಂಡಿದೆ. ಜಿಲ್ಲಾವಾರು ಪದಾಧಿಕಾರಿಗಳು ಮತದಾನ ಮಾಡಲಿದ್ದು, ಬಳಿಕ ಎರಡು ದಿನ ಬೆಂಗಳೂರಿನಲ್ಲಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ನಡೆಯಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ. ಬಿಜೆಪಿಯಲ್ಲಿ ಪ್ರತಿ ಕ್ಷೇತ್ರಕ್ಕೆ ಅನೇಕ ಮಂದಿ ಅಕಾಂಕ್ಷಿಗಳು ಇರುವುದು ಮತ್ತು ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎನ್ನುವ ಕಾರಣಕ್ಕೆ ಈ ಸಲ ಕರ್ನಾಟಕದಲ್ಲಿ ಕೇಸರಿ ಪಕ್ಷ

ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ Read More »

ರಾಹುಲ್‌ ಗಾಂಧಿ ದುರ್ಬಲಗೊಳಿಸಲು ಮತ್ತು ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ

ಆಪ್ತ ಸಲಹೆಗಾರರೆ ರಾಹುಲ್‌ ಗಾಂಧಿ ಅವರ ದಾರಿ ತಪ್ಪಿಸುತ್ತಿದ್ದಾರೆ ಎಂದ ಬಿಜೆಪಿ ನಾಯಕ ಬೆಂಗಳೂರು : ರಾಹುಲ್‌ ಗಾಂಧಿಯ ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ ನಡೆಯುತ್ತಿದೆ ಎಂದು ಬಿಜೆಪಿ ನಾಯಕರೊಬ್ಬರು ಮಾಡಿದ ಆರೋಪ ಸಂಚಲನವುಂಟು ಮಾಡಿದೆ. ಕರ್ನಾಟಕದಿಂದ ರಾಜ್ಯಸಭಾ ಸಂಸದರಾಗಿರುವ ಲೆಹರ್‌ ಸಿಂಗ್‌ ಸಿರೋಯಾ ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ರಾಹುಲ್‌ ಗಾಂಧಿಯನ್ನು ಹರಕೆಯ ಕುರಿಯಂತೆ ಬಲಿಕೊಡಲು ಮುಂದಾಗಿದೆ ಎಂಬುದು ಸಿರೋಯ ಹೇಳಿದ್ದಾರೆ. ರಾಹುಲ್‌ ಗಾಂಧಿ ಶುದ್ಧ ಹ್ರದಯದ ವ್ಯಕ್ತಿ, ಆದರೆ ಅವರನ್ನು ದುರ್ಬಲಗೊಳಿಸುವ

ರಾಹುಲ್‌ ಗಾಂಧಿ ದುರ್ಬಲಗೊಳಿಸಲು ಮತ್ತು ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ Read More »

ರಸ್ತೆ ದಾಟುವ ವೇಳೆ ಮಹಿಳೆಗೆ ಬಸ್ ಢಿಕ್ಕಿ : ಸ್ಥಳದಲ್ಲೇ ಮೃತ್ಯು

ಮಂಗಳೂರು : ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಮಾ.30 ರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ.ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಇನ್ನು ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ

ರಸ್ತೆ ದಾಟುವ ವೇಳೆ ಮಹಿಳೆಗೆ ಬಸ್ ಢಿಕ್ಕಿ : ಸ್ಥಳದಲ್ಲೇ ಮೃತ್ಯು Read More »

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರಿಗೆ ಹಣ ಎಸೆದ ಆರೋಪ : ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಜಾಧ್ವನಿ ಯಾತ್ರೆ ವೇಳೆ ಹಣವನ್ನು ಹಂಚಿದ್ದಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವ ಮುನ್ನ ಮಂಗಳವಾರ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕಲಾವಿದರಿಗೆ ಹಣ ಎಸೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರದ ವೇಳೆ ನಗದು ಎಸೆದಿದ್ದಾರೆ ಎಂಬ

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರಿಗೆ ಹಣ ಎಸೆದ ಆರೋಪ : ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top