ರಾಜ್ಯ

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಲಿಂಕ್‌ ಕಳುಹಿಸಿ ಹಣ ಎಗರಿಸಿದ ಖದೀಮ ಉಡುಪಿ : ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋದ ಮಹಿಳೆಯೊಬ್ಬರು ಸುಮಾರು 2 ಲ.ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಡುಪಿಯ ಜ್ಯೋತಿ (32) ಹಣ ಕಳೆದುಕೊಂಡವರು. ಫೇಸ್‌ಕ್ರೀಂ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ದೊರೆತ ನಂಬರ್‌ಗೆ ಕರೆ ಮಾಡಿದ್ದು, ಆಗ ವ್ಯಕ್ತಿಯೊಬ್ಬ ನೋಂದಣಿ ಮಾಡುವಂತೆ ಸೂಚಿಸಿದ್ದಾನೆ. ಮಾ.22 ರಂದು ಮತ್ತೆ ಕರೆ ಮಾಡಿದ ವ್ಯಕ್ತಿ ಈ ಹಿಂದೆ ಮಾಡಿದ ಮಾಹಿತಿ […]

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ

ಮಂಗಳೂರು : ಸುರತ್ಕಲ್‌ನ ಎನ್‌ಐಟಿಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಗೇ ಸುಮಾರು 28 ಲ.ರೂ. ಪಂಗನಾಮ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿರುವ ಬಗ್ಗೆ ವಿದ್ಯಾರ್ಥಿ ಯಶ್‌ವರ್ಧನ್‌ ಜೈನ್ ಎಂಬಾತನ ವಿರುದ್ಧ ಕೇಸು ದಾಖಲಾಗಿದೆ.. 2022ರ ಮಾರ್ಚ್‌ನಿಂದ ವಾಟ್ಸಪ್ ಗ್ರೂಪ್‌ನಲ್ಲಿ ಎನ್‌ಐಟಿಕೆ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಶೇ.10ರಷ್ಟು ಅಧಿಕ ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದಿದ್ದ. ಅಕ್ಟೋಬರ್ ತಿಂಗಳಿನಲ್ಲಿ ‘ವೈವಿಜೆ ಇನ್‌ವೆಸ್ಟ್‌ಮೆಂಟ್ ಎಂಟರ್‌ಪ್ರೈಸಸ್ ಎಂಬ ಹೆಸರಿನ ಟೆಲಿಗ್ರಾಂ ಗ್ರೂಪ್ ಮಾಡಿದ್ದ.

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ Read More »

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ

ಬೆಂಗಳೂರು : ಈ ಸಲ ನಡೆಯುವ ವಿಧಾನಸಭೆ ಚುನಾವಣೆ ಮೆ 10 ಬುಧವಾರ ಬರುತ್ತದೆ. ಬುಧವಾರವನ್ನೇ ಆಯ್ಕೆ ಮಾಡಿಕೊಳ್ಳಲು ಚುನಾವಣಾ ಆಯೋಗ ಕಾರಣ ಕೊಟ್ಟಿದೆ. ಒಂದು ವೇಳೆ ಚುನಾವಣೆ ಸೋಮವಾರ ನಿಗದಿ ಮಾಡಿದ್ದರೆ ಆ ದಿನ ರಜೆಯಾದ್ದರಿಂದ ದೀರ್ಘ ವಾರಾಂತ್ಯ ಎಂದು ತೆರಳುವವರ ಸಂಖ್ಯೆ ಹೆಚ್ಚಾಗುತ್ತಿತ್ತು. ಇದರಿಂದ ಮತದಾನ ಕಡಿಮೆಯಾಗುತ್ತಿತ್ತು. ಮಂಗಳವಾರ ಚುನಾವಣೆ ನಿಗದಿ ಮಾಡಿದ್ದರೂ ಸೋಮವಾರ ಒಂದು ದಿನ ರಜೆ ಪಡೆದುಕೊಂಡರೆ ಒಟ್ಟು ನಾಲ್ಕು ದಿನಗಳ ರಜೆ ಸಿಗುತ್ತದೆ ಎಂದು ಪ್ರವಾಸ ತೆರಳುತ್ತಾರೆ.ಬುಧವಾರವಾದರೆ ಹೆಚ್ಚುವರಿಯಾಗಿ ಎರಡು

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ Read More »

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌

ಈ ಸಲ ಮನೆಯಿಂದಲೇ ಮತಚಲಾಯಿಸುವ ಸೌಲಭ್ಯ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ ಹಿರಿಯ ಮತ್ತು ವಿಶೇಷ ಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ. ನಿನ್ನೆ ಚುನಾವಣೆ ದಿನಾಂಕ ಘೋಷಣೆ ಮಾಡುವಾಗ ಮುಖ್ಯ ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಇದೇ ಮೊದಲ ಬಾರಿಗೆ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.‌ ದೇಶದಲ್ಲಿ ಇದೇ ಮೊದಲ ಬಾರಿಗೆ

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌ Read More »

ಧರ್ಮಸ್ಥಳ : ನೇತ್ರಾವತಿ ನದಿಯಲ್ಲಿ ಸ್ನಾನದ ವೇಳೆ ಶ್ಯಾಂಪು, ಸೋಪು ಬಳಕೆ ನಿಷೇಧ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ಸಂದರ್ಭ ಶ್ಯಾಂಪು, ಸೋಪು ಬಳಕೆ ಮಾಡದಂತೆ ಧರ್ಮಸ್ಥಳ ಗ್ರಾ. ಪಂ. ಆದೇಶ ಹೊರಡಿಸಿದೆ.ಪ್ರಸಿದ್ಧ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿನ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿದರೆ ಪಾಪ ಕಳೆಯುತ್ತದೆ ಎಂಬ ನಂಬಿಕೆಯಿದೆ. ಆದರೆ ಸ್ನಾನದ ಸಂದರ್ಭ ಶ್ಯಾಂಪು ಸೋಪು ಬಳಕೆ ಮಾಡುವುದರಿಂದ ನದಿಯಲ್ಲಿರುವ ಜಲಚರಗಳ ಮೇಲೆ ದುಷ್ಪಾರಿಣಾಮ ಬೀರುತ್ತದೆ ಮತ್ತು ಸ್ನಾನಕ್ಕೆ ಯೋಗ್ಯವಾಗದ ನೀರಾಗಿ ಪರಿವರ್ತನೆಯಾಗುತ್ತದೆ.

ಧರ್ಮಸ್ಥಳ : ನೇತ್ರಾವತಿ ನದಿಯಲ್ಲಿ ಸ್ನಾನದ ವೇಳೆ ಶ್ಯಾಂಪು, ಸೋಪು ಬಳಕೆ ನಿಷೇಧ Read More »

ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ | ಕೇಂದ್ರ ಚುನಾವಣಾ ಆಯುಕ್ತ ಘೋಷಣೆ

ಪುತ್ತೂರು: ರಾಜ್ಯ ಚುನಾವಣೆಗೆ ಮುಹೂರ್ತ ದಿನ ನಿಗದಿಯಾಗಿದ್ದು, ಮೇ 10ರಂದು ರಾಜ್ಯಾದ್ಯಂತ ಚುನಾವಣೆ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಪೂರ್ವಾಂಚಲದ 3 ರಾಜ್ಯಗಳ ಚುನಾವಣೆ ಬಳಿಕ ಇದೀಗ ದಕ್ಷಿಣ ಭಾರತದ ಚುನಾವಣೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆಯನ್ನು ನಡೆಸುವ ಬಗ್ಗೆ ಘೋಷಣೆ ಹೊರಡಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಏಪ್ರಿಲ್ 13ರಂದು ಗೆಜೆಟ್ ನೋಟಿಫಿಕೇಷನ್

ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ | ಕೇಂದ್ರ ಚುನಾವಣಾ ಆಯುಕ್ತ ಘೋಷಣೆ Read More »

ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ!

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಬುಧವಾರ ಮಧ್ಯಾಹ್ನ 11.30ಕ್ಕೆ ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಗಳನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವುದು ಬಹುತೇಕ ಖಚಿತ.ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ

ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ! Read More »

ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ

ಪುತ್ತೂರು: ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವ ಕೊನೆ ದಿನವನ್ನು ಕೇಂದ್ರ ಸರಕಾರ ವಿಸ್ತರಣೆ ಮಾಡಿದೆ. ಜೂನ್ 30ರವರೆಗೆ ದಿನ ವಿಸ್ತರಿಸಿ ಆದೇಶ ಹೊರಡಿಸಿದ್ದು, ಜುಲೈ 1ರಿಂದ ಕಡ್ಡಾಯ ಎಂದು ತಿಳಿಸಿದೆ. ನಿಮ್ಮ ಪಾನ್ – ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಅಥವಾ ಆಗಿಲ್ಲವೇ ಎಂದು ಮೊದಲಾಗಿ ತಿಳಿದುಕೊಳ್ಳಬೇಕು. ಅದಕ್ಕಾಗಿ ಇಲ್ಲಿ ನೀಡಿರುವ ಲಿಂಕ್ ಅನ್ನು ಬಳಸಿಕೊಳ್ಳಿ. https://eportal.incometax.gov.in/iec/foservices/#/pre-login/link-aadhaar-status ಈ ಲಿಂಕನ್ನು ಪ್ರೆಸ್ ಮಾಡಿದರೆ, ಸಿಗುವ ಪೋರ್ಟಲ್ ನಲ್ಲಿ ಆಧಾರ್ ಹಾಗೂ ಪಾನ್ ಕಾರ್ಡಿನ

ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ Read More »

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಲು ಮಾ.28 ರಂದು ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.ಆರೋಪಿ ಶಾಸಕರ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1ರ ವರೆಗೆ

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ Read More »

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top