ರಾಜ್ಯ

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದ ನಟ ಚೇತನ್‌ ಬಂಧನ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರುದ್ಧ ಕೆಟ್ಟದಾಗಿ ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಚೇತನ್‌ನನ್ನು ಬಂಧಿಸಿದ್ದಾರೆ. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿಕೊಂಡು ಅದಕ್ಕೊಂದು ಫೋಟೊ ಕೂಡ ಹಂಚಿಕೊಂಡಿದ್ದರು. ಜತೆಗೆ, ಉರಿಗೌಡ ಮತ್ತು ನಂಜೇಗೌಡ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೇ ಶಿವಕುಮಾರ್ ಎಂಬವರು ಶೇಷಾದ್ರಿಪುರ ಠಾಣೆಗೆ ದೂರು ದಾಖಲಿಸಿದ್ದರು. ಹಿಂದೂ ಭಾವನೆಗಳಿಗೆ ಧಕ್ಕೆ […]

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದ ನಟ ಚೇತನ್‌ ಬಂಧನ Read More »

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ

ಶಿವಮೊಗ್ಗ : ಹಿರಿಯ ನಾಯಕ ಈಶ್ವರಪ್ಪನವರ ಹೇಳಿಕೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಿಸಿದ್ದಾರೆ.ಪೊಲೀಸರ ಪ್ರತಿರೋಧದ ನಡುವೆಯೂ ಗೋಮೂತ್ರ ಸಿಂಪಡಣೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಈ

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ Read More »

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್‌ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್‌ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.ಈ ಸಂಬಂಧ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬಿಬಿಎಂಪಿ ಇತಿಹಾಸದಲ್ಲಿಯೇ 2,500 ಕೋಟಿ ರೂ. ಮೊತ್ತದ ಅತಿ ದೊಡ್ಡ ಹಗರಣವಾಗಿದ್ದು, ಬಿಬಿಎಂಪಿ ಎಂದು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರ (ಬಿಎಂಐಸಿಎಪಿಎ) ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ Read More »

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ

ಉಚಿತವಾಗಿ ಟ್ರಕ್‌ ಮತ್ತು ಚಾಲಕರನ್ನು ಒದಗಿಸಿದ ಬಿಜೆಪಿಯ ಹಿರಿಯ ನಾಯಕ ನಾಗರಾಜ ಶೆಟ್ಟಿ ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಪ್ರತಿಷ್ಥಾಪನೆಯಾಗಲಿರುವ ಭವ್ಯ ಶ್ರೀರಾಮನ ಮೂರ್ತಿಯನ್ನು ಕೆತ್ತಲು ಕಾರ್ಕಳದಿಂದ ಕೃಷ್ಣ ಶಿಲೆಯನ್ನು ಸಾಗಿಸಿದ್ದು ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ನಾಗರಾಜ ಶೆಟ್ಟಿಯವರ ಟ್ರಾನ್ಸ್‌ಪೋರ್ಟ್‌ ಕಂಪನಿ. ಮೂರು ದಿನಗಳಲ್ಲಿ ಬೃಹತ್‌ ಶಿಲೆ ಅಯೋಧ್ಯೆ ತಲುಪಿದೆ. ಒಂಭತ್ತು ಟನ್ ತೂಕದ ಶಿಲೆಯನ್ನು ಅಯೋಧ್ಯೆಯಲ್ಲಿ ನಾಗರಾಜ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ ಸ್ವಾಗತಿಸಲಾಯಿತು. ಉದ್ಯಮಿ ನಾಗರಾಜ ಶೆಟ್ಟಿ ಮಾಲಕತ್ವದ

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ Read More »

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

ಮಂಗಳೂರು : ರಾಜಕಾರಣದಲ್ಲಿ ನಿವೃತ್ತಿ ಅಂಚಿಗೆ ಬಂದು ನಿಂತಿರುವ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಂಥ ನಾಯಕರು ಯುವಕ್ರಾಂತಿ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.ರಾಹುಲ್‌ ಹೋದಲೆಲ್ಲ ಕಾಂಗ್ರೆಸ್‌ ನೆಲಕಚ್ಚಿದೆ. ಹೀಗಾಗಿ ಅವರು ಕರ್ನಾಟಕಕ್ಕೆ ಬಂದಿರುವುದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ರಾಜ್ಯದಿಂದ ಕಾಂಗ್ರೆಸ್‌ನ್ನು ಕಿತ್ತೆಸೆಯುವ ಬಿಜೆಪಿಯ ವಾಗ್ದಾನವನ್ನು ನನಸು ಮಾಡುವಲ್ಲಿ ರಾಹುಲ್‌ ಗಾಂಧಿ ಸಾಥ್‌ ನೀಡಲಿದ್ದಾರೆ ಎಂದು ಕಟೀಲ್‌ ಕಾಲೆಳೆದಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ Read More »

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ

ದೆಹಲಿ: ಕನಿಷ್ಠ ಬೆಂಬಲ ಬೆಲೆಯ ಕಾನೂನು, ಸಾಲಮನ್ನಾ ಮತ್ತು ಪಿಂಚಣಿ ಸೇರಿದಂತೆ ತನ್ನ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮತ್ತೊಂದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಹೇಳಿದೆ.15 ಸದಸ್ಯರ ಎಸ್‌ಕೆಎಂ ನಿಯೋಗವು ಕೃಷಿ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ಬೇಡಿಕೆ ಪತ್ರ ಸಲ್ಲಿಸಿತು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದರು.ನಾವು ಪ್ರತಿದಿನ ಪ್ರತಿಭಟನೆ ಮಾಡಲು ಬಯಸುವುದಿಲ್ಲ. ಆದರೆ, ನಾವು ಹಾಗೆ

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ Read More »

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದರು. ಆದ್ರೆ ಸಿಜೆಐ ಡಿ.ವೈ. ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ Read More »

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ದಾವಣಗೆರೆಯ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ ಹಾಗೂ ಮೆಟ್ರೊ ಮಾರ್ಗ-ಆಸ್ಪತ್ರೆ ಉದ್ಘಾಟನೆ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಘೋಷಣೆಗಿಂತ ಮುಂಚಿನ ಕೊನೇ ಭೇಟಿ ಕರ್ನಾಟಕ ಭೇಟಿ ಇದಾಗಿರಬಹುದು. ಮಾ.25ರ ಬಳಿಕ ಯಾವುದೇ ಕ್ಷಣದಲ್ಲಿ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಅನಂತರ ಮೋದಿ ಬಂದರೂ ಅದು ಚುನಾವಣಾ ಪ್ರಚಾರಕ್ಕಾಗಿ ಎಂದಾಗುತ್ತದೆ. ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ನಡೆಯಲಿರುವ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯ ಸಮಾರೋಪ

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ Read More »

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ

ಶಿವಮೊಗ್ಗ : ಬಿಜೆಪಿ ನಾಯಕ ಕೆ. ಎಸ್‌.ಈಶ್ವರಪ್ಪ ಅವರು ಆಜಾನ್‌ ಕುರಿತು ನೀಡಿದ ಹೇಳಿಕೆಯನ್ನು ಪ್ರತಿಭಟಿಸಲು ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಬಳಿ ಆಜಾನ್ ಕೂಗಿದ ಘಟನೆ ಶಿವಮೊಗ್ಗದಲ್ಲಿ ಭಾನುವಾರ ಸಂಭವಿಸಿದೆ. ವಿಧಾನಸೌಧದಲ್ಲೂ ಆಜಾನ್‌ ಕೂಗುತ್ತೇವೆ ಎಂದು ಈ ಯುವಕರ ತಂಡ ಎಚ್ಚರಿಕೆ ನೀಡಿದೆ.ಈಶ್ವರಪ್ಪ ಆಜಾನ್ ಕುರಿತ ಹೇಳಿಕೆ ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲ ಯುವಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಗಿಗುಡ್ಡದ ನಿವಾಸಿ ಮೌಸೀನ್ ಎಂಬಾತ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಅಲ್ಲದೆ

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ Read More »

ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ: ಸಿ.ಟಿ.ರವಿ ಆಕ್ರೋಶ

ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಝಾನ್‌ ಕೂಗಿರುವುದಕ್ಕೆ ತೀವ್ರ ಆಕ್ರೋಶ ಬೆಂಗಳೂರು : ಶಿವಮೊಗ್ಗದಲ್ಲಿ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಝಾನ್‌ ಕೂಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ. ಬಿನ್ ಲಾಡೆನ್ ರೀತ ಗುರುತಿಸಿಕೊಂಡರೆ ನಾವು ರೆಡಿ ಇಟ್ಟುಕೊಂಡಿದ್ದೇವೆ. ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ತಯಾರಾಗಿದ್ದೇವೆ. ಬೆಂಕಿ ಹಾಕಲು ಬಂದರೆ ಯೋಗಿ ಆದಿತ್ಯನಾಥ್ ರೀತಿ ಕರ್ನಾಟಕದಲ್ಲಿ ಬುಲ್ಡೋಜರ್ ಚಾಲು ಮಾಡುತ್ತೇವೆ. ನೀವು

ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ: ಸಿ.ಟಿ.ರವಿ ಆಕ್ರೋಶ Read More »

error: Content is protected !!
Scroll to Top