ರಾಜ್ಯ

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ

ಹುಬ್ಬಳ್ಳಿ : ಹುಬ್ಬಳ್ಳಿಯ ಬಂಡಿಗೆರೆಯಲ್ಲಿ 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಏ. 2 ರಂದು ನಡೆದಿದೆ.ಮಾ. 30 ರಂದು ನಡೆದಿದ್ದ ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 […]

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಜೆಡಿಎಸ್​​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ

ಕಾಗೇರಿ ನಿವಾಸಕ್ಕೆ ಭೇಟಿ ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಶಿರಸಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಜೆಡಿಎಸ್​ನ ಎಟಿ ರಾಮಸ್ವಾಮಿ, ಗುಬ್ಬಿ ಶ್ರೀನಿವಾಸ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಅರಸಿಕೆರೆ ಜೆಡಿಎಸ್​ ಶಾಸಕ ಶಿವಲಿಂಗೇಗೌಡ ಅವರು ಕೊನೆಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 400ಕ್ಕೂ ಅಧಿಕ ಮುಖಂಡರ ಜೊತೆ ಏ. 2 ರಂದು ಶಿರಸಿಯಲ್ಲಿರುವ ಸ್ಪೀಕರ್ ನಿವಾಸಕ್ಕೆ ಭೇಟಿ ನೀಡಿ ವಿಶ್ವೇಶ್ವರ

ಜೆಡಿಎಸ್​​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ Read More »

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ ಮಂಗಳೂರು : ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಎ. 2 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ.

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ Read More »

ಫೆಬ್ರವರಿ ತಿಂಗಳಲ್ಲಿ 45 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆ ಬ್ಯಾನ್‌

ಸೇವಾ ಷರತ್ತುಗಳ ಉಲ್ಲಂಘನೆಯನ್ನು ಆಧರಿಸಿ ಈ ಕ್ರಮ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಫೆಬ್ರವರಿ ತಿಂಗಳಲ್ಲಿ 45 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಫೆಬ್ರವರಿ 1ರಿಂದ 28ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,597,400 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು

ಫೆಬ್ರವರಿ ತಿಂಗಳಲ್ಲಿ 45 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆ ಬ್ಯಾನ್‌ Read More »

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ

ಅತಿದೊಡ್ಡ ಅಂತರ್‌ಜಾಲ ಮಾಹಿತಿ ಕಳ್ಳತನ ಪ್ರಕರಣ ಹೈದರಾಬಾದ್ : 66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಸೈಬರ್‌ ಚೋರನೊಬ್ಬನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ 56 ಲಕ್ಷ ಜನರು ಸೇರಿ ಎಂಟು ಮೆಟ್ರೋ ನಗರಗಳು, 24 ರಾಜ್ಯಗಳ 44 ವಿಭಾಗಗಳಲ್ಲಿ ಜನರ ಮಾಹಿತಿಯನ್ನು ಕಳ್ಳತನ ಮಾಡಿರುವ ದೇಶದ ಅತಿ ದೊಡ್ಡ ಡೇಟಾ ಕಳವು ಪ್ರಕರಣ ಇದು ಎಂದು ಸೈಬರಾಬಾದ್ ಪೊಲೀಸರು ಹೇಳಿದ್ದಾರೆ. ಒಟ್ಟಾರೆ 66.9 ಕೋಟಿ ಜನರ ಮತ್ತು ಖಾಸಗಿ ಸಂಸ್ಥೆಗಳ ವೈಯಕ್ತಿಕ ಮತ್ತು ಗೌಪ್ಯ

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ Read More »

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ

ಮಂಗಳೂರು : ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಪೈಪ್‌ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಮಂಗಳೂರಿನ ನವಬಂದರಿನಲ್ಲಿ ನಡೆದ ಈ ದುರಂತ ಹಡಗಿನಿಂದ ನೇರವಾಗಿ ಟ್ಯಾಂಕರ್‌ಗೆ ಬಿಟುಮೆನ್ ಆಯಿಲ್ ವರ್ಗಾಯಿಸುವಾಗ ಸಂಭವಿಸಿದೆ. ಆದರೆ ಶಿಪ್‌ನಲ್ಲಿ ಬಂದ ಬಿಟುಮೆನ್ ಆಯಿಲ್ ಅನ್ನು ಟ್ಯಾಂಕಿಗೆ ಮೊದಲು ವರ್ಗಾಯಿಸುವುದು ನಿಯಮ. ಆಯಿಲ್‌ ಅನ್ನು ಟ್ಯಾಂಕರ್‌ಗೆ ವರ್ಗಾಯಿಸುವ ವೇಳೆ ಪೈಪ್ ಸ್ಪೋಟಗೊಂಡು ಆಯಿಲ್ ಕಾರ್ಮಿಕರ ಮೈ ಮೇಲೆ ಬಿದ್ದಿದ್ದು ತಕ್ಷಣವೇ ಅವರನ್ನು ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ Read More »

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಪುತ್ತೂರು : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ Read More »

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ

ಪುತ್ತೂರು: 2023-24ನೇ ಸಾಲಿನ ಶೈಕ್ಷಣಿಕ ಅವಧಿ ಮೇ.29 ರಿಂದ ಆರಂಭವಾಗಲಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದ್ದು, ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಕೆಗಳು ಮಾ.29 ರಿಂದ ಆರಂಭಗೊಳ್ಳುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. 2023-24ನೇ ಮೊದಲ ಶೈಕ್ಷಣಿಕ ಅವಧಿ ಮೇ. 29ರಿಂದ ಅಕ್ಟೋಬರ್ 7 ರ ತನಕ,

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ Read More »

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏ. 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಇನ್ನೊಂದು ಅರ್ಜಿಗೆ ಆಕ್ಷೇಪಣೆ

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ Read More »

error: Content is protected !!
Scroll to Top