ರಾಜ್ಯ

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ

ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಇಂದು ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ ಒಳ ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ, ಕೊರಚ, ಕೊರಮ, ಭೋವಿ ಸಮುದಾಯದವರು ತೀವ್ರ ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. […]

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ Read More »

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು

ಮಂಗಳೂರು : ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾ.27 ರಂದು ಪೊಲೀಸರು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ ತಲೆಮರೆಸಿಕೊಂಡಿದ್ದ. ಇನ್ನು

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು Read More »

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

ಮಂಗಳೂರು : ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಎಸ್‌ ಅಂಗಾರ, ಮೀನುಗಾರಿಕೆ ಕ್ಷೇತ್ರ ಕಡಿಮೆ ಆದಾಯದಲ್ಲಿ ಹೆಚ್ಚು ಸಂಪಾದನೆ ಗಳಿಸಬಹುದಾದ ಕ್ಷೇತ್ರ. ಕೃತಕ ಹಾಗೂ ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಲಾಗುವುದು. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ Read More »

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ

ಡಿ.ಕೆ.ಬ್ರದರ್ಸ್‌ ಹೇಳಿಕೆಗೆ ತಿರುಗೇಟು ಬೆಂಗಳೂರು : ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್‌ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಕುಕ್ಕರ್‌ನಲ್ಲಿ ಬಾಂಬ್‌ ಇಡುವ ಕೆಲಸವನ್ನು ಡಿ.ಕೆ.ಬ್ರದರ್ಸ್‌ ಮಾಡಿದ್ದರು ಎಂಬ ಸಿ.ಟಿ.ರವಿ ಅವರ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರವಿ ಹೇಳಿಕೆ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು,

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ Read More »

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಬೇಕು ಎಂದು ಪ್ರತಿಪಾದನೆ ಬೆಂಗಳೂರು : ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿಯಲ್ಲಿದ್ದ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರನ್ನು ಒಲೈಸಿಕೊಳ್ಳುವ ಪ್ರಯತ್ನದಲ್ಲಿ ಒಬಿಸಿ ಕೋಟಾದಡಿಯಲ್ಲಿ ಶೇಕಡಾ 4 ರಷ್ಟು ಮೀಸಲಾತಿ ಪಡೆಯುತ್ತಿದ್ದ ಮುಸ್ಲಿಮರ ಮೀಸಲಾತಿ ರದ್ದುಗೊಳಿದ್ದಾರೆ. ಅದನ್ನು

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ Read More »

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ

ಬಂಟ್ವಾಳ : ಮಾ.26 ರಂದು ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ Read More »

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ

ಕೊಚ್ಚಿ: ಇಲ್ಲಿನ ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ತರಬೇತಿ ನಿರತವಾಗಿದ್ದ ಹೆಲಿಕಾಪ್ಟರ್ ಮಧ್ಯಾಹ್ನ 12.55ಕ್ಕೆ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗುತ್ತಿದ್ದಂತೆ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ ಪ್ರಾಥಮಿಕ ವರದಿಗಳ ಪ್ರಕಾರ, ಒಬ್ಬ ವ್ಯಕ್ತಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.ಈಮಧ್ಯೆ, ಕೋಸ್ಟ್ ಗಾರ್ಡ್‌ನ ಸುಧಾರಿತ ಲಘು ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ Read More »

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಮಾ.26 ರಂದು ಘಟನೆ ನಡೆದಿದೆ.ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ Read More »

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ

ಗದಗ : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಗಜೇಂದ್ರಗಡ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ. ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ Read More »

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ ನಾಳೆ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ Read More »

error: Content is protected !!
Scroll to Top