ರಾಜ್ಯ

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ

ಉಪ್ಪಿನಂಗಡಿ : ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಒಂಬತ್ತು ಲಕ್ಷ ರೂ. ನಗದಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಇಳಂತಿಲ ಗ್ರಾಮದ ಕಾರ್ಯಪಾಡಿ ಮನೆ ನಿವಾಸಿ ಮಹಮ್ಮದ್ ಕೆ. (60) ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ […]

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ Read More »

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಾರ್ಚ್ 23 ರಂದು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ (45) ಎಂದು ಗುರುತಿಸಲಾಗಿದೆ.ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಬೆಳಗಾವಿ : ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.ಐಶ್ವರ್ಯಾ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು Read More »

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ

ಪರೀಕ್ಷೆ ಸಮಯದಲ್ಲಿ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್‌ ತಡೆ ಬೆಂಗಳೂರು: ಇಂದಿನಿಂದ ನಡೆಯಬೇಕಿದ್ದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಶೇ.15ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಶುಕ್ರವಾರದಿಂದ ಮುಷ್ಕರ ಹೂಡುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ Read More »

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.ಸಾರಿಗೆ ನೌಕರರ ಸಂಘದ

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ Read More »

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ

ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ಕಾಂಗ್ರೆಸ್ ಶುಕ್ರವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾಳೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಎಂದು ಆರೋಪಿಸಿದರು. ಕೇಂದ್ರ ಸರಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ.

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ Read More »

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : ತಪ್ಪಿದ ಅನಾಹುತ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನ ವಾಣಿಜ್ಯ ಸಂಕೀರ್ಣವೊಂದರ ಐದನೇ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತೊಕ್ಕೊಟ್ಟು ಕಲ್ಲಾಪುದಲ್ಲಿರುವ ಕಿಯಾಂಜಾ ಯೂನಿವರ್ಸಲ್ ವಾಣಿಜ್ಯ ಸಂಕೀರ್ಣದಲ್ಲಿರುವ ಮನ್ಹಾಸ್ ಮಂಡಿ ಹೋಟೆಲ್‌ನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ಅದು ವ್ಯಾಪಿಸಿದೆ.ಇನ್ನು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಐದನೇ ಮಹಡಿ ಹತ್ತಿ ಚಿಮಣಿಗೆ ತಗುಲಿದ ಬೆಂಕಿಯನ್ನು

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : ತಪ್ಪಿದ ಅನಾಹುತ Read More »

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್

ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್ Read More »

ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ

ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ.ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು, ಐಟಿಆರ್ ಎಸ್ ನ್ನು ಸಲ್ಲಿಸುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಲ್ಲ. ಆದರೆ ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರೆಸುವುದಿಲ್ಲ ಎಂಬುದು ಗಮನಾರ್ಹ ವಿಷಯವಾಗಿದೆ. ಹಲವರು ಈಗಾಗಲೇ ಜೋಡಣೆ ಮಾಡುತ್ತಿದ್ದು ಇನ್ನೂ ಕೆಲವರು ಜೋಡಣೆಯಾಗಿದೆಯೇ ಇಲ್ಲವೇ ಎಂಬುದನ್ನು ಮರೆತಿದ್ದಾರೆ. ಆಧಾರ್-ಪ್ಯಾನ್ ಜೋಡಣೆಯಾಗಿದೆಯೇ ಇಲ್ಲವೇ? ಎಂಬುದನ್ನು ತಿಳಿಯುವುದಕ್ಕೆ ಆನ್

ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ Read More »

ಕಾಂಗ್ರೆಸ್‌ ಮಾಜಿ ಸಚಿವ ಅಂಜನಮೂರ್ತಿ ಇನ್ನಿಲ್ಲ

ಬೆಂಗಳೂರು: ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ (72 ವರ್ಷ) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ತಿಳಿದುಬಂದಿದೆ.ಬಿಎ, ಬಿ.ಎಲ್ ಪದವೀಧರರಾದ ಅಂಜನ ಮೂರ್ತಿ 10ನೇ ಏಪ್ರಿಲ್ 1941ರಲ್ಲಿ ಜನಿಸಿದ್ದರು. 1989-1994 ಮತ್ತು 1999, ಫೆ.23 2004 ರಿಂದ 2007 ಠಂಪಿಂಗ್ ಮೂರು ಬಾರಿ ಆಯ್ಕೆ ಸಮೀಪದ ಪ್ರತಿಸ್ಪರ್ಧಿಗಿಂತ 37000 ಮತಗಳ ಬಹುಮತ ಸಾಧಿಸಿದ್ದರು.

ಕಾಂಗ್ರೆಸ್‌ ಮಾಜಿ ಸಚಿವ ಅಂಜನಮೂರ್ತಿ ಇನ್ನಿಲ್ಲ Read More »

error: Content is protected !!
Scroll to Top