ರಾಜ್ಯ

ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನಾವರಣಗೊಳಿಸಿದರು. ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ. ಸಿ. ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆ.ಸಿ. ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು. ಚೆಂಗಲರಾಯ ರೆಡ್ಡಿ ಎನ್ನುವ ಹೆಸರಿನಲ್ಲಿ ಮೈಸೂರು […]

ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ Read More »

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ  ನೌಕರರ ವೇತನ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜ್ಯಾರಿಗೊಳಿಸಲು ಸರಕಾರವನ್ನು ಒತ್ತಾಯಿಸಿ ರಾಜ್ಯಾದ್ಯಮತ ಮಾ.1 ರಿಂದ ಸರಕಾರಿ ನೌಕರರು ನಡೆಸುವ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನಲ್ಲೂ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 2023-24ನೇ ಸಾಲಿನ ಬಜೆಟ್‍ ಮಂಡನೆ ವೇಳೆ ಸರಕಾರಿ

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ Read More »

ಇಂದಿನಿಂದ ಎರಡು ದಿನ ದಿಲ್ಲಿಯಲ್ಲಿ ಕನ್ನಡ ಕಲರವ

ಬಾರಿಸು ಕನ್ನಡ ಡಿಂಡಿಮವ ಉತ್ಸವಕ್ಕೆ ಪ್ರಧಾನಿ ಚಾಲನೆ ಹೊಸದಿಲ್ಲಿ : ಇಲ್ಲಿನ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಎರಡು ದಿನ ನಡೆಯಲಿರುವ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಇಂದು ಸಂಜೆ 5ಕ್ಕೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವದ ನಿಮಿತ್ತ ಎರಡು ದಿನ (25 ಮತ್ತು 26)ದಿಲ್ಲಿಯಲ್ಲಿ ಕನ್ನಡ ಕಲರವ ಕೇಳಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ್‌ ಭಾರತ ಶ್ರೇಷ್ಠ್‌ ಭಾರತ್‌’ ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು

ಇಂದಿನಿಂದ ಎರಡು ದಿನ ದಿಲ್ಲಿಯಲ್ಲಿ ಕನ್ನಡ ಕಲರವ Read More »

ಎಪ್ರಿಲ್‌ನಿಂದ ಶಾಲೆ ಅಡುಗೆ ಸಿಬ್ಬಂದಿ ಗೌರವ ಧನ ಏರಿಕೆ

ಸದನಕ್ಕೆ ಸಚಿವ ಸುನಿಲ್‌ ಕುಮಾರ್‌ ಹೇಳಿಕೆ ಬೆಂಗಳೂರು : ಸರಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳ ಗೌರವ ಧನವನ್ನು ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ 1 ಸಾವಿರ ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಎಪ್ರಿಲ್‌ನಿಂದ ಜಾರಿಗೆ ಬರಲಿದೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಸಾ.ರಾ.ಮಹೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಪ್ರಸ್ತುತ ಮಾಸಿಕ 3,700 ರೂ. ಹಾಗೂ ಅಡುಗೆ ಸಹಾಯಕರಿಗೆ ಮಾಸಿಕ

ಎಪ್ರಿಲ್‌ನಿಂದ ಶಾಲೆ ಅಡುಗೆ ಸಿಬ್ಬಂದಿ ಗೌರವ ಧನ ಏರಿಕೆ Read More »

ಡ್ರಗ್ಸ್‌ ಸೇವನೆ : ಮಾಹೆಯ 42 ವಿದ್ಯಾರ್ಥಿಗಳು ಅಮಾನತು

ಸೇವಿಸಿದವರು ಮತ್ತು ಸಾಗಿಸಿದವರು ಒಂದು ತಿಂಗಳ ಮಟ್ಟಿಗೆ ಡಿಬಾರ್‌ ಮಂಗಳೂರು : ಕ್ಯಾಂಪಸ್‌ ಪರಿಸರದಲ್ಲಿ ಮಾದಕ ವಸ್ತು ಸೇವಿಸಿದ ಮತ್ತು ಮಾದಕ ವಸ್ತು ಪೆಡ್ಲರ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ 42 ವಿದ್ಯಾರ್ಥಿಗಳನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಒಂದು ತಿಂಗಳ ಮಟ್ಟಿಗೆ ಕಾಲೇಜಿನಿಂದ ಅಮಾನತುಗೊಳಿಸಿದೆ. ಈ ದಿಟ್ಟ ಕ್ರಮದಿಂದ ಸಮಾಜಕ್ಕೆ ಬಲವಾದ ಸಂದೇಶ ರವಾನೆಯಾಗುತ್ತದೆ ಹಾಗೂ ಮಾದಕ ವಸ್ತುಗಳ ಸೇವನೆಯ ವಿರುದ್ಧ ಜಾಗೃತಿ ಮೂಡಿಸುತ್ತದೆ. ಉಡುಪಿಯಲ್ಲಿ ಡ್ರಗ್ಸ್ ಹಾವಳಿಗೆ ಕೆಲವು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ ಎಂದು ಉಡುಪಿ

ಡ್ರಗ್ಸ್‌ ಸೇವನೆ : ಮಾಹೆಯ 42 ವಿದ್ಯಾರ್ಥಿಗಳು ಅಮಾನತು Read More »

ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ ಬಿ.ಎಸ್.ವೈ. | ರಾಜಕೀಯ ನಿವೃತ್ತಿ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು: ಇದೇ ನನ್ನ ಕೊನೆ ಅಧಿವೇಶನ ಎನ್ನುವ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಿಸಿದ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದರು. ಬುಧವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದು, ಮತ್ತೆ ಈ ಸದನಕ್ಕೆ ಬರುವುದಿಲ್ಲ. ಇದೇ ಕೊನೆಯ ಅಧಿವೇಶನ ಎನ್ನುತ್ತಲೇ ಭಾವುಕರಾದರು ಬಿ.ಎಸ್.ವೈ. ಇದೇ ಸಂದರ್ಭ ವಿಪಕ್ಷಗಳ ಆರೋಪಗಳಿಗೂ ಉತ್ತರ ನೀಡಿದ ಅವರು, ‘ಬಿಜೆಪಿ ನನ್ನನ್ನು ಕಡೆಗಣಿಸಿದೆ ಎಂದು ವಿಪಕ್ಷಗಳು

ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ ಬಿ.ಎಸ್.ವೈ. | ರಾಜಕೀಯ ನಿವೃತ್ತಿ ಘೋಷಿಸಿದ ಯಡಿಯೂರಪ್ಪ Read More »

ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನ

ಅಧಿವೇಶನದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ಬೆಂಗಳೂರು : ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನವನ್ನು ನೀಡುವ ಕುರಿತು ಸರಕಾರ ಚಿಂತಿಸುತ್ತಿದೆ. ಈ ಕುರಿತು ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಕಂಬಳಕ್ಕೆ ಸೂಕ್ತ ಸ್ಥಾನಮಾನ ಒದಗಿಸುವ ಕುರಿತು ಚಿಂತಿಸಲಾಗುವುದು ಎಂದಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು, ಕಂಬಳ ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆಯಾಗಿದೆ. ದೈವಾರಾಧನೆಯೊಂದಿಗೆ ಕಂಬಳವನ್ನು ಆರಾದಿಸುವ

ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನ Read More »

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ

ಚುನಾವಣಾ ತಂತ್ರಗಾರಿಕೆಗೆ ನಾಯಕರ ಜತೆ ಸಮಾಲೋಚನೆ ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ ಮಾಡಿದ ಬೆನ್ನಲ್ಲೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಗುರುವಾರ ಋಾಜ್ಯಕ್ಕೆ ಬರಲಿರುವ ಶಾ ಚುನಾವಣಾ ತಂತ್ರಗಾರಿಕೆಯ ಕುರಿತು ಸಾಕಷ್ಟು ವಿಚಾರಗಳನ್ನು ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಲಿದ್ದಾರೆ. ಗುರುವಾರ ಅಮಿತ್‌ ಶಾ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಸಲ

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ Read More »

ಹಿರಿಯ ನಟ ಅನಂತ್‌ ನಾಗ್‌ ಇಂದು ಬಿಜೆಪಿ ಸೇರ್ಪಡೆ

ಪ್ರಧಾನಿ ಮೋದಿಯ ಕಟ್ಟಾ ಅಭಿಮಾನಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಹಿರಿಯ ನಟ ಅನಂತ್‌ ನಾಗ್‌ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ. ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್​ ಸದಸ್ಯರಾಗಿ

ಹಿರಿಯ ನಟ ಅನಂತ್‌ ನಾಗ್‌ ಇಂದು ಬಿಜೆಪಿ ಸೇರ್ಪಡೆ Read More »

ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ

ಪುತ್ತೂರು : ಪುತ್ತೂರಿನ ಡಿಸಿಆರ್ ಕೇಂದ್ರದಲ್ಲಿ ಫೆ.13 ರಂದು ಆರಂಭಗೊಂಡ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ “ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ” ಕುರಿತ ರಾಷ್ಟ್ರಮಟ್ಟದ ತರಭೇತಿ ಕಾರ್ಯಕ್ರಮದ ಸಮಾಪನಾ ಸಮಾರಂಭವು ಸೋಮವಾರ ನಡೆಯಿತು. ರೋಗಶಾಸ್ತ್ರ ವಿಜ್ಞಾನಿ ಡಾ. ರಾಜಶೇಖರ ಎಂಟು ದಿನಗಳ ಕಾಲ ನಡೆದಂತ ತರಬೇತಿ ಕಾರ್ಯಕ್ರಮದ ಕುರಿತಂತೆ ಸಂಕ್ಷಿಪ್ತ ವಿವರಣೆಯನ್ನು ಸಭೆಗೆ ನೀಡಿದರು. ಕೀಟಶಾಸ್ತ್ರದ ಪ್ರಧಾನ ವಿಜ್ಞಾನಿ ಡಾ. ಟಿ.ಎನ್.ರವಿಪ್ರಸಾದ್ ಅಭ್ಯರ್ಥಿಗಳಿಗೆ ತರಬೇತಿಯ ಸೂಕ್ತ ಅಳವಡಿಕೆಯ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಗೇರು ಮತ್ತು ಕೊಕ್ಕೊ

ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ Read More »

error: Content is protected !!
Scroll to Top