ರಾಜ್ಯ

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ

ದೆಹಲಿ: ಕನಿಷ್ಠ ಬೆಂಬಲ ಬೆಲೆಯ ಕಾನೂನು, ಸಾಲಮನ್ನಾ ಮತ್ತು ಪಿಂಚಣಿ ಸೇರಿದಂತೆ ತನ್ನ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮತ್ತೊಂದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಹೇಳಿದೆ.15 ಸದಸ್ಯರ ಎಸ್‌ಕೆಎಂ ನಿಯೋಗವು ಕೃಷಿ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ಬೇಡಿಕೆ ಪತ್ರ ಸಲ್ಲಿಸಿತು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದರು.ನಾವು ಪ್ರತಿದಿನ ಪ್ರತಿಭಟನೆ ಮಾಡಲು ಬಯಸುವುದಿಲ್ಲ. ಆದರೆ, ನಾವು ಹಾಗೆ […]

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ Read More »

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದರು. ಆದ್ರೆ ಸಿಜೆಐ ಡಿ.ವೈ. ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ Read More »

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ದಾವಣಗೆರೆಯ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ ಹಾಗೂ ಮೆಟ್ರೊ ಮಾರ್ಗ-ಆಸ್ಪತ್ರೆ ಉದ್ಘಾಟನೆ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಘೋಷಣೆಗಿಂತ ಮುಂಚಿನ ಕೊನೇ ಭೇಟಿ ಕರ್ನಾಟಕ ಭೇಟಿ ಇದಾಗಿರಬಹುದು. ಮಾ.25ರ ಬಳಿಕ ಯಾವುದೇ ಕ್ಷಣದಲ್ಲಿ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಅನಂತರ ಮೋದಿ ಬಂದರೂ ಅದು ಚುನಾವಣಾ ಪ್ರಚಾರಕ್ಕಾಗಿ ಎಂದಾಗುತ್ತದೆ. ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ನಡೆಯಲಿರುವ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯ ಸಮಾರೋಪ

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ Read More »

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ

ಶಿವಮೊಗ್ಗ : ಬಿಜೆಪಿ ನಾಯಕ ಕೆ. ಎಸ್‌.ಈಶ್ವರಪ್ಪ ಅವರು ಆಜಾನ್‌ ಕುರಿತು ನೀಡಿದ ಹೇಳಿಕೆಯನ್ನು ಪ್ರತಿಭಟಿಸಲು ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಬಳಿ ಆಜಾನ್ ಕೂಗಿದ ಘಟನೆ ಶಿವಮೊಗ್ಗದಲ್ಲಿ ಭಾನುವಾರ ಸಂಭವಿಸಿದೆ. ವಿಧಾನಸೌಧದಲ್ಲೂ ಆಜಾನ್‌ ಕೂಗುತ್ತೇವೆ ಎಂದು ಈ ಯುವಕರ ತಂಡ ಎಚ್ಚರಿಕೆ ನೀಡಿದೆ.ಈಶ್ವರಪ್ಪ ಆಜಾನ್ ಕುರಿತ ಹೇಳಿಕೆ ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲ ಯುವಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಗಿಗುಡ್ಡದ ನಿವಾಸಿ ಮೌಸೀನ್ ಎಂಬಾತ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಅಲ್ಲದೆ

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ Read More »

ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ: ಸಿ.ಟಿ.ರವಿ ಆಕ್ರೋಶ

ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಝಾನ್‌ ಕೂಗಿರುವುದಕ್ಕೆ ತೀವ್ರ ಆಕ್ರೋಶ ಬೆಂಗಳೂರು : ಶಿವಮೊಗ್ಗದಲ್ಲಿ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಝಾನ್‌ ಕೂಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ. ಬಿನ್ ಲಾಡೆನ್ ರೀತ ಗುರುತಿಸಿಕೊಂಡರೆ ನಾವು ರೆಡಿ ಇಟ್ಟುಕೊಂಡಿದ್ದೇವೆ. ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ತಯಾರಾಗಿದ್ದೇವೆ. ಬೆಂಕಿ ಹಾಕಲು ಬಂದರೆ ಯೋಗಿ ಆದಿತ್ಯನಾಥ್ ರೀತಿ ಕರ್ನಾಟಕದಲ್ಲಿ ಬುಲ್ಡೋಜರ್ ಚಾಲು ಮಾಡುತ್ತೇವೆ. ನೀವು

ಜಿನ್ನಾ ಮಾನಸಿಕತೆ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ನಾವು ಸಿದ್ಧ: ಸಿ.ಟಿ.ರವಿ ಆಕ್ರೋಶ Read More »

ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯ ಕಚೇರಿಯು ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳಿಗೆ ಸೇರಿದ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ಜಪ್ತಿ ಮಾಡಲಾದ ಆಸ್ತಿಗಳು ಆರೋಪಿಗಳ ಒಡೆತನದ ಆರು ಸ್ಥಿರಾಸ್ತಿಗಳ ರೂಪದಲ್ಲಿವೆ. ವಿಶೇಷ ತನಿಖಾ ತಂಡ ಮತ್ತು ಕರ್ನಾಟಕ ಲೋಕಾಯುಕ್ತ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ

ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ Read More »

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ

ಬೆಂಗಳೂರು : ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ದಿಲ್ಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ. 8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಸುಲಿಯಲು ಯತ್ನಿಸಿದ್ದಾರೆ. 2 ಮತ್ತು 3ನೇ ಸ್ತರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿ ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ Read More »

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ

ಮಂಗಳೂರು : ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದ ಪೊದೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ದೇವರ ವಿಗ್ರಹಗಳು ಪತ್ತೆಯಾಗಿವೆ. ಶಾರಾದಾ ದೇವಿಯ 2.5 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ Read More »

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ

ಬೆಂಗಳೂರು : ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದ ವಾಶ್‌ರೂಂನಲ್ಲಿ ಧೂಮಪಾನ ಮಾಡಿದ 20 ವರ್ಷದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಹದಿನೈದು ದಿನಗಳ ಅವಧಿಯಲ್ಲಿ ಇಂಡಿಗೊ ದಾಖಲಾದ ಎರಡನೇ ಪ್ರಕರಣ ಇದು.ಶುಕ್ರವಾರ ಈ ಘಟನೆ ಸಂಭವಿಸಿದೆ. ಅಸ್ಸಾಂ ಮೂಲದ ಸೆಹೆರಿ ಚೌಧುರಿ ಎಂಬ ಯುವಕ ವಾಶ್‌ರೂಮ್‌ನೊಳಗೆ ಸಿಗರೇಟ್ ಸೇದುತ್ತಿದ್ದ.ಪ್ರಯಾಣಿಕರು ವಾಸನೆ ಮತ್ತು ಹೊಗೆಯನ್ನು ಕಂಡು ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ನಂತರ, ಫ್ಲೈಟ್ ಕ್ಯಾಪ್ಟನ್ ವಿಮಾನ ನಿಲ್ದಾಣ ಪೊಲೀಸ್

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ Read More »

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌

ಬೆಂಗಳೂರು : ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಇದೀಗ ವಿದೇಶದ ಭಾಷೆಗಳಿಗೆ ಡಬ್‌ ಆಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಈ ಚಿತ್ರ ಪ್ರದರ್ಶನ ಕಂಡು ಅಲ್ಲಿದ್ದ ಗಣ್ಯರೂ ಮೆಚ್ಚಿಕೊಂಡಿದ್ದಾರೆ. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಚಿತ್ರವನ್ನು ಡಬ್‌ ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್‌ ಗೆ ಡಬ್‌ ಮಾಡಿ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್‌ ಮಾಡಲಾಗಿತ್ತು. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಅವತರಣಿಕೆಯ ‘ಕಾಂತಾರ’ ಚಿತ್ರವನ್ನು ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌ Read More »

error: Content is protected !!
Scroll to Top