ರಾಜ್ಯ

ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್‌ ರಗಳೆ: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ

ಬೆಂಗಳೂರು : ಈ ಬೇಸಿಗೆಯಲ್ಲಿ ಜನರಿಗೆ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಚಿಂತೆ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕಂಡು ಮುಂದಿನ ಮೂರು ತಿಂಗಳ ಅವಧಿಗೆ ವಿದ್ಯುತ್‌ ಕಡಿತವಾಗದಂತೆ ನೋಡಿಕೊಳ್ಳಲು ಎಸ್ಕಾಂಗಳು ನಿರ್ಧರಿಸಿವೆ.ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಈ ಬೇಸಿಗೆಯಲ್ಲಿ ಜನರಿಗೆ ಲೋಡ್‌ಶೆಡ್ಡಿಂಗ್‌ ರಗಳೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಿದ್ದಾರೆ. ಇದೀಗ ಬೇಸಿಗೆ ಆರಂಭವಾಗಿದ್ದು, ವಿದ್ಯುತ್‌ ಬಳಕೆಯೂ ಹೆಚ್ಚಾಗಿದೆ. ಈಗಾಗಲೇ ಪರೀಕ್ಷೆಗಳು ಆರಂಭವಾಗಿವೆ. ಹಾಗೆಯೇ ರೈತರಿಗೂ […]

ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್‌ ರಗಳೆ: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ Read More »

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಎಂಟು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಾವೂರಿನ ರಾಜಾ ಅಲಿಯಾಸ್ ರೋಹನ್ ರೆಡ್ಡಿ , ಪಡೀಲ್-ಕಣ್ಣೂರಿನ ಪ್ರಕಾಶ್ ಶೆಟ್ಟಿ, ಕೃಷ್ಣಾಪುರದ ನಿಸ್ಸಾರ್ ಹುಸೇನ್, ಕಸಬಾ ಬೆಂಗ್ರೆಯ ಕಬೀರ್, ಅಚ್ಯುತ್ ಮತ್ತು ಕಾವೂರಿನ ರಿಜ್ವಾನ್ ಬಂಧಿತರಲ್ಲಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂಟು ಆರೋಪಿಗಳ ಪೈಕಿ ರೆಡ್ಡಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಅಲ್ಲಿ ನಕಲಿ ಗುರುತಿನಡಿಯಲ್ಲಿ ವಾಸಿಸುತ್ತಿದ್ದನು.ಈತ 2013ರಲ್ಲಿ ಬಸ್ ಚಾಲಕನ ಕೊಲೆ ಪ್ರಕರಣದ

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಅನುಮತಿ

ಮಾ.27 ರಿಂದ ಪರೀಕ್ಷೆ- ಫಲಿತಾಂಶ ಬಹಿರಂಗಪಡಿಸುವಂತಿಲ್ಲ ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. 10 ದಿನಗಳ ಬಳಿಕ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ

5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಅನುಮತಿ Read More »

ವಿಶ್ವಸಂಸ್ಥೆಯಲ್ಲಿ ವಿಶೇಷ ಭಾಷಣ ಮಾಡಲು ಕಾಂತಾರದ ರಿಷಬ್‌ಗೆ ಆಹ್ವಾನ

ಕನ್ನಡದಲ್ಲೇ ಮಾತನಾಡಿ ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ವಿಶ್ವದ ಗಮನ ಸೆಳೆಯಲಿರುವ ರಿಷಬ್‌ ಬೆಂಗಳೂರು : ಕಾಂತಾರದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಕನ್ನಡದಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಲಿರುವ ಮೊದಲ ಕನ್ನಡಿಗ ಎನ್ನಿಸಿಕೊಳ್ಳಲಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಪ್ರಚಲಿತ ಸಾಮಾನ್ಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ಇದರಲ್ಲಿ ಮಾತನಾಡಲು ರಿಷಬ್‌ ಶೆಟ್ಟಿ ಆಯ್ಕೆಯಾಗಿದ್ದು,

ವಿಶ್ವಸಂಸ್ಥೆಯಲ್ಲಿ ವಿಶೇಷ ಭಾಷಣ ಮಾಡಲು ಕಾಂತಾರದ ರಿಷಬ್‌ಗೆ ಆಹ್ವಾನ Read More »

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ಸೆಳೆಯಲು ಸೀರೆ, ಬೆಳ್ಳಿ, ಬಂಗಾರದ ವಸ್ತುಗಳು, ಪ್ರೆಷರ್ ಕುಕ್ಕರ್, ಮಿಕ್ಸರ್ ಗ್ರೈಂಡರ್, ಟೆಲಿವಿಷನ್ ಸೆಟ್, ಮೊಬೈಲ್‌ಗಳನ್ನು ಹಂಚುತ್ತಿದ್ದಾರೆ. ಹಾವೇರಿ ಜಿಲ್ಲೆಯ

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ Read More »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್‌ ಕುಮಾರ್

ಬೆಂಗಳೂರು‌ : ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ – ವಿ. ಸುನೀಲ್‌ ಕುಮಾರ್ Read More »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್ Read More »

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸದ್ದಿಲ್ಲದೆ ಏರಿಕೆಯಾಗುತ್ತಿದೆ. ಇದರ ನಡುವೆ ಹೆಚ್​3ಎನ್​2 ಭೀತಿ ಕೂಡ ಹೆಚ್ಚಿದ್ದು, ರಾಜ್ಯದಲ್ಲಿ ಪ್ರಸ್ತುತ ಕಳೆದ 82 ದಿನಗಳಲ್ಲಿ 115 ಹೆಚ್​3ಎನ್​2 ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ H3N2 ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ 30 ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ವ್ಯಾಪ್ತಿ-30, ಶಿವಮೊಗ್ಗ-19, ಧಾರವಾಡ-14, ಮೈಸೂರು-09, ವಿಜಯಪುರ-08, ಬೆಳಗಾವಿ-05, ಹಾಸನ-05, ತುಮಕೂರು-03, ದಾವಣಗೆರೆ-03, ಹಾವೇರಿ-03, ದಕ್ಷಿಣ ಕನ್ನಡ-03, ಬೆಂಗಳೂರು ಗ್ರಾಮಾಂತರ-02, ಗದಗ-02, ರಾಮನಗರ-02, ಚಾಮರಾಜನಗರ-01, ಬಾಗಲಕೋಟೆ-01, ಉತ್ತರ ಕನ್ನಡ-01,

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ Read More »

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್

ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋ ವೈರಲ್ ಮಂಗಳೂರು: ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದ್ದು, ಆಕ್ಷೇಪಕ್ಕೆ ಎಡೆಮಾಡಿಕೊಟ್ಟಿದೆ. ಮಂಗಳೂರು ಸಮೀಪದ ಕಿನ್ನಿಗೋಳಿ ಗ್ರಾಮದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಎಂದು ಹೇಳುತ್ತಾರೆ. ಆದರೆ, ನಾನು ಹಾಗಲ್ಲ,‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್ Read More »

ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ಬಳಿಕ ಇದೀಗ ವಿದ್ಯುತ್‌ ಇಲಾಖೆಯ ನೌಕರರು ಮುಷ್ಕರಕ್ಕೆ ತಯಾರಾಗಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮಾ.16ರಂದು ಎಲ್ಲ ಎಸ್ಕಾಂಗಳ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳ ನೌಕರರ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. ಇದರಿಂದ ವಿದ್ಯುತ್‌ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆಯಿದೆ. ಕೆಪಿಟಿಸಿಎಲ್‌ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳ(ಎಸ್ಕಾಂ) ಅಧಿಕಾರಿಗಳು, ನೌಕರರ ಬೇಡಿಕೆಗೆ ಈವರೆಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಬುಧವಾರ ತನಕ ಸರ್ಕಾರಕ್ಕೆ ತೀರ್ಮಾನ ಕೈಗೊಳ್ಳಲು

ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ Read More »

error: Content is protected !!
Scroll to Top