ರಾಜ್ಯ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ

ಹಳೆಬೀಡು ವಸತಿ ಶಾಲೆಯಲ್ಲಿ ನಡೆದ ಕೃತ್ಯ ಹಾಸನ : ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಕೆಲ ತಿಂಗಳುಗಳಿಂದ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು.ಪುನೀತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ. (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳು. ಕೆಲವು ತಿಂಗಳುಗಳಿಂದ ವಸತಿ […]

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ Read More »

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ ವೇ ಲೋಕಾರ್ಪಣೆ ಸೇರಿಸಿದಂತೆ ಸುಮಾರು 16 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ.ಭಾನುವಾರ ಮಧ್ಯಾಹ್ನ 12 ಗಂಟೆಗೆ ಮೋದಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವರ್ಷದ ಆರಂಭದಿಂದ ರಾಜ್ಯ ಪ್ರವಾಸದಲ್ಲಿರುವ

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ Read More »

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ

ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್‌ ದಾಖಲು ತಿರುವನಂತಪುರಂ : ಕರಾವಳಿ ರಾಜ್ಯಗಳಾದ ಕೇರಳ ಮತ್ತು ಕರ್ನಾಟಕದಲ್ಲಿ ತಾಪಮಾನ ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿದೆ. ನಿನ್ನೆ ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇದು ರಾಜಸ್ಥಾನದ ಮರುಭೂಮಿಯಲ್ಲಿ ಕಡುಬೇಸಿಗೆಯಲ್ಲಿ ದಾಖಲಾಗುವ ತಾಪಮಾನದ ಆಸುಪಾಸಿನಲ್ಲಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು, ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.ಗುರುವಾರ

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ Read More »

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ

ಬೊಮ್ಮಾಯಿ ಅಧ್ಯಕ್ಷ : ಯಡಿಯೂರಪ್ಪ, ಕಟೀಲ್‌ ಸದಸ್ಯರು ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿರುವ ಚುನಾವಣಾ ಪ್ರಚಾರ ಸಮಿತಿಯನ್ನು ಬಿಜೆಪಿ ರಚಿಸಿದೆ. ಈ ಸಮಿತಿಯಲ್ಲಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೂ ಸ್ಥಾನವಿದ್ದು, ಸದಸ್ಯರಾಗಿ ಅವರ ಹೆಸರನ್ನು ಸೇರಿಸಲಾಗಿದೆ.ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವೆ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ, ಸಚಿವ

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ

ಸಂಸದ, ಶಾಸಕರಾಗಿ ಸೇವೆ ಸಲ್ಲಿಸಿದ್ದ ಜನನಾಯಕ ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಡ್ರೈವರ್‌ಗೆ ಕರೆ ಮಾಡಿದ್ದಾರೆ, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ Read More »

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ

ಹಾಸನದ ವ್ಯಕ್ತಿ ಸಾವಿಗೀಡಾದ ಬಳಿಕ ಎಚ್ಚರಿಕೆ ಗಂಟೆ ಬೆಂಗಳೂರು : ರಾಜ್ಯದಲ್ಲಿ ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಇದು ರಾಜ್ಯದಲ್ಲಿ ಎಚ್‌3ಎನ್‌2 ವೈರಸ್‌ನಿಂದ ಸಂಬವಿಸಿದ ಮೊದಲ ಸಾವು.ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆರೋಗ್ಯ ತಪಾಸಣೆ ಭರದಿಂದ ಸಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲು ಮುಂದಾಗಿದೆ. ಅನಾರೋಗ್ಯ ಪೀಡಿತ ಜನರು ಹಾಗೂ ವೃದ್ಧರನ್ನು ಕೂಡ ಪರೀಕ್ಷೆ ನಡೆಸಲಾಗಿದೆ ಎಂದು ಡಿಎಚ್‌ಓ ಡಾ.ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.ಎಚ್‌3ಎನ್‌2 ವೈರಸ್‌ ಸೋಂಕಿತರಲ್ಲಿ

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ Read More »

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ

ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ ಚಿಕ್ಕಮಗಳೂರು: ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಾ.7 ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ತಮ್ಮ ಸಮಸ್ಯೆಗಳಿಗೆ ಕಿವಿಕೊಡದೆ ಕಣ್ಣು ಮುಚ್ಚಿ ಕುಳಿತು, ಚುನಾವಣೆ ಬಂದ ಕೂಡಲೇ ಉಡುಗೊರೆ ನೀಡಲು ಮುಂದಾದ ಜನಪ್ರತಿನಿಧಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸೀರೆಗಳಿಗೆ ಬೆಂಕಿ ಹಚ್ಚಿದ ಯುವಕ,

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ Read More »

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ವಿಚಾರ ಸಂಬಂಧ ಅಧ್ಯಯನ ನಡೆಸಲು ರಾಜಸ್ಥಾನ ರಾಜ್ಯಕ್ಕೆ ಸಮಿತಿಯನ್ನು ರವಾನಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿಯೂ ಚುನಾವಣೆ ನಡೆಯಲಿದೆ. ಹೀಗಾಗಿ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರಿತಿರುವ ಬಿಜೆಪಿ, ಯಾವುದೇ ರೀತಿಯಲ್ಲೂ ಎಡವದಂತೆ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಒಂದು ವೇಳೆ ಒಪಿಎಸ್ ಬಗ್ಗೆ ಸರ್ಕಾರ ತದ್ವಿರುದ್ಧವಾಗಿ ನಿರ್ಧಾರ ತೆಗೆದುಕೊಂಡಿದ್ದೇ ಆದರೆ, ಅದು ಕೇವಲ

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ! Read More »

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ

ಪುತ್ತೂರು:  ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಗುರುವಾರ ಪುತ್ತೂರು ಬಿಜೆಪಿ ಕಛೇರಿ ಬಳಿ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ Read More »

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ

ಬೆಂಗಳೂರು : ಕಾಂಗ್ರೆಸ್​​ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದೆ. ನಿನ್ನೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತದಲ್ಲಿ 120 ಕ್ಷೇತ್ರಗಳ ಸಂಭಾವ್ಯ ಟಿಕೆಟ್​ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಹಿರಿಯ ನಾಯಕರು ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಮಧ್ಯಾಹ್ನದಿಂದ ರಾತ್ರಿ 10 ಗಂಟೆಯವರೆಗೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿದರು.ಸಿದ್ದರಾಮಯ್ಯ ಹಾಗೂ ಡಿಕೆಶಿ ಸೇರಿಕೊಂಡು 120 ಕ್ಷೇತ್ರಗಳ

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ Read More »

error: Content is protected !!
Scroll to Top