ರಾಜ್ಯ

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು

10 ಕಿ.ಮೀ. ಸಿನಿಮಾ ಶೈಲಿಯಲ್ಲಿ ಚೇಸ್‌ ಮಾಡಿದರೂ ತಪ್ಪಿಸಿಕೊಂಡ ದುಷ್ಕರ್ಮಿಗಳು ಚಿಕ್ಕಮಗಳೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು ಎಕ್ಸ್‌ಯುವಿ 500 ಕಾರಿನಲ್ಲಿ ತುಂಬಿಕೊಂಡು ಎಸ್ಕೇಪ್ ಆಗುತ್ತಿದ್ದ ಗೋ ಕಳ್ಳರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿರುವ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪದಿಂದ‌ ಕುದುರೆಗುಂಡಿಯವರೆಗೆ ಸುಮಾರು 10 ಕಿ.ಮೀ ಎರಡು ಕಾರುಗಳು ರೇಸ್‌ನಂತೆ ಅತಿವೇಗವಾಗಿ ಸಾಗಿವೆ. ಹಿಂದೂ ಸಂಘಟಕರು ಈ ಚೇಸ್ ಮಾಡಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೊಪ್ಪ ಪಟ್ಟಣದಿಂದ […]

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು Read More »

ಅಪಾರ್ಟ್‌ಮೆಂಟ್‌ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ

ಸಂವಾದ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಬೆದರಿಕೆ ದಾಟಿಯಲ್ಲಿ ಮಾತನಾಡಿದ ಡಿಸಿಎಂ ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘಟನೆಯ ಪದಾಧಿಕಾರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡೆದುಕೊಂಡ ರೀತಿಗೆ ಭಾರಿ ಆಕ್ರೋಶ ಮತ್ತು ಟೀಕೆ ವ್ಯಕ್ತವಾಗಿದೆ. ದೂರು ನೀಡಲು ಬಂದವರ ಜೊತೆಗೆ ದರ್ಪದಿಂದ ಮಾತನಾಡಿದ್ದಲ್ಲದೆ ಬೆದರಿಕೆಯನ್ನೂ ಹಾಕಿರುವ ಶಿವಕುಮಾರ್‌ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಇದು ಅಹಂಕಾರದ ಪರಮಾವಧಿ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಪಕ್ಷ ಬಿಜೆಪಿ ಕೂಡ ಡಿಕೆಶಿ ವರ್ತನೆಯನ್ನು ಟೀಕಿಸಿದೆ. ಕರ್ನಾಟಕ ಅಪಾರ್ಟ್​ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆ

ಅಪಾರ್ಟ್‌ಮೆಂಟ್‌ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ Read More »

ಡಿ.16 : ಧರ್ಮಸ್ಥಳದಲ್ಲಿ ಮಹಿಳಾ ನ್ಯಾಯ ಸಮಾವೇಶ

ಕೊಂದವರು ಯಾರು ಅಭಿಯಾನ ಸಮಿತಿಯಿಂದ ಮೌನ ಮೆರವಣಿಗೆ ಮಂಗಳೂರು: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ ವತಿಯಿಂದ ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ ಡಿ.16ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ 1,000ದಷ್ಟು ಮಹಿಳೆಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅಭಿಯಾನದ ಪ್ರಮುಖರಾದ ಜ್ಯೋತಿ ಎ. ತಿಳಿಸಿದ್ದಾರೆ. ಶುಕ್ರವಾರ

ಡಿ.16 : ಧರ್ಮಸ್ಥಳದಲ್ಲಿ ಮಹಿಳಾ ನ್ಯಾಯ ಸಮಾವೇಶ Read More »

ಒಂದು ತಿಂಗಳೊಳಗೆ ಕನ್ನಡ ನಾಮಫಲಕ ಅಳಡಿಕೆ ಕಡ್ಡಾಯ : ಸಚಿವ ತಂಗಡಗಿ

ನಿಯಮ ಉಲ್ಲಂಘಿಸಿದರೆ 20 ಸಾವಿರ ರೂ. ದಂಡ ಬೆಳಗಾವಿ: ಕರ್ನಾಟಕಾದ್ಯಂತ ಎಲ್ಲ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಟ್ರಸ್ಟ್ ನಡೆಸುವ ಸಂಸ್ಥೆಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ ಗಳು ಸೇರಿದಂತೆ ಸಲ್ಲ ಸಂಸ್ಥಾಪನೆಗಳಲ್ಲಿ ಒಂದು ತಿಂಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ

ಒಂದು ತಿಂಗಳೊಳಗೆ ಕನ್ನಡ ನಾಮಫಲಕ ಅಳಡಿಕೆ ಕಡ್ಡಾಯ : ಸಚಿವ ತಂಗಡಗಿ Read More »

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್‌ ಬೆದರಿಕೆಯೊಡ್ಡಿದ 13 ವರ್ಷದ ಬಾಲಕಿ!

ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಬಂದಿದ್ದ ಬೆದರಿಕೆ ಇ-ಮೇಲ್‌ ಬೆಂಗಳೂರು : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಬೆಳಗ್ಗೆ ಬಂದಿದ್ದ ಅನಾಮಧೇಯ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶದ ಮೂಲವನ್ನು ಪೊಲೀಸರು ಪತ್ತೆಹಚ್ಚಿದ್ದು, ಕರೆ ಕಳುಹಿಸಿದ ವ್ಯಕ್ತಿಯನ್ನು ನೋಡಿ ಪೊಲೀಸರೇ ಆಶ್ಚರ್ಯಚಕಿತರಾಗಿದ್ದಾರೆ. ಪೊಲೀಸ್ ತನಿಖೆಯ ವೇಳೆ ಈ ಬಾಂಬ್ ಬೆದರಿಕೆ ಇ-ಮೇಲ್ ತಮಿಳುನಾಡಿನ ಮೈಲಾಪುರದ 13 ವರ್ಷದ ಬಾಲಕಿಯಿಂದ ಬಂದಿರುವುದು ಗೊತ್ತಾಗಿದೆ. ಬಾಲಕಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಕುರಿತು ಗಮನ ಸೆಳೆಯುವ ಉದ್ದೇಶದಿಂದ ಈ ಇ-ಮೇಲ್

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್‌ ಬೆದರಿಕೆಯೊಡ್ಡಿದ 13 ವರ್ಷದ ಬಾಲಕಿ! Read More »

ಮತಗಳ್ಳತನ ಪ್ರಕರಣ : ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌

ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನವಾದ ಆರೋಪ ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಕೃತ್ಯದಲ್ಲಿ ಪ್ರಭಾವಿ ನಾಯಕನ ಪಾತ್ರ ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಎಸ್‌ಐಟಿ ತಂಡ ಬೆಂಗಳೂರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ

ಮತಗಳ್ಳತನ ಪ್ರಕರಣ : ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌ Read More »

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ

ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ನ್ಯಾಯಾಧೀಶರ ಪದಚ್ಯುತಿಗೆ ಕಾಂಗ್ರೆಸ್‌ ಯತ್ನ ಬೆಂಗಳೂರು: ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಂವಿಧಾನದ 124ನೇ ವಿಧಿಯೊಂದಿಗೆ 217ನೇ ವಿಧಿಯ ಅಡಿಯಲ್ಲಿ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲಾಗಿದ್ದು, ಜಡ್ಜ್​​​ ಸ್ವಾಮಿನಾಥನ್ ಪದಚ್ಯುತಿಗೆ ಮಹಾಭಿಯೋಗ ನೋಟೀಸ್‌ ನೀಡಲಾಗಿದೆ. ಈ ನೋಟೀಸ್‌ಗೆ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಶ್ರೇಯಸ್ ಪಟೇಲ್ (ಹಾಸನ), ಪ್ರಭಾ ಮಲ್ಲಿಕಾರ್ಜುನ (ದಾವಣಗೆರೆ)

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ Read More »

ಔತಣಕೂಟ ವಿವಾದ: ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಬೆಳಗಾವಿ: ಶಾಸಕರ ಜೊತೆಗೆ ನಗರದ ಹೊರವಲಯದಲ್ಲಿ ಔತಣಕೂಟ ನಡೆಸಿದ ವಿವಾದಕ್ಕೆ ಸಂಬಂಧಿಸಿದ ಹಾಗೆ ಡಿಸಿಎಂ ‌ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸ್ಥಳೀಯರು ಮತ್ತು ಪಕ್ಷದವರು ಪ್ರೀತಿಯಿಂದ ಆಹ್ವಾನಿಸಿದ ಕಾರಣಕ್ಕೆ ಔತಣಕೂಟದಲ್ಲಿ ಭಾಗವಹಿಸಿರುವುದಾಗಿ ಅವರು ತಿಳಿಸಿದ್ದಾರೆ. ಪ್ರತಿನಿತ್ಯ ಸ್ಥಳೀಯರು ಅಥವಾ ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಾರೆ. ಪ್ರೀತಿಯಿಂದ ಕರೆದಾಗ ಬೇಡ ಎನ್ನಲು ಆಗುವುದಿಲ್ಲ. ಆ ಕಾರಣಕ್ಕೆ ಒಂದೊಂದು ದಿನ ಒಂದೊಂದು ಕಡೆಗೆ ಔತಣಕ್ಕೆ ಹೋಗುತ್ತೇವೆ. ಇದು ಯಾವ ಔತಣ ಕೂಟವೂ ಅಲ್ಲ, ಏನೂ ಅಲ್ಲ ಎಂದು

ಔತಣಕೂಟ ವಿವಾದ: ಡಿ.ಕೆ. ಶಿವಕುಮಾರ್ ಹೇಳಿದ್ದೇನು? Read More »

ಮುಡಾ ಹಗರಣ : 22 ಕೋಟಿ ರೂ. ಲಂಚ ನುಂಗಿದ ಮಾಜಿ ಆಯುಕ್ತ

700 ಕೋ. ರೂ. ಮೌಲ್ಯದ 1,095 ನಿವೇಶನಗಳು ಅಕ್ರಮವಾಗಿ ಮಂಜೂರು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸುತ್ತಿಕೊಂಡಿದ್ದ ಮುಡಾ ಹಗರಣದ ಒಂದೊಂದೇ ಭ್ರಷ್ಟಾಚಾರ ಈಗ ಬಯಲಾಗತೊಡಗಿದೆ. ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಮುಡಾದ ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು ಮತ್ತು ಅದಕ್ಕಾಗಿ 22.47 ಕೋಟಿ ರೂ. ಲಂಚ ಪಡೆದಿದ್ದರು ಎಂಬುದು ತಿಳಿದುಬಂದಿದೆ. ಮನಿ ಲಾಂಡರಿಂಗ್ ಆ್ಯಕ್ಟ್ (ಪಿಎಂಎಲ್‌ಎ) ಅಡಿಯಲ್ಲಿ ನಡೆಸಲಾದ ತನಿಖೆಯಲ್ಲಿ

ಮುಡಾ ಹಗರಣ : 22 ಕೋಟಿ ರೂ. ಲಂಚ ನುಂಗಿದ ಮಾಜಿ ಆಯುಕ್ತ Read More »

ಬೆಳಗಾವಿಯಲ್ಲೂ ಮುಂದುವರಿದ ಕುರ್ಚಿ ಕಿತ್ತಾಟ : ಆಪ್ತರಿಗೆ ಡಿನ್ನರ್‌ ಮೀಟಿಂಗ್‌

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರಿಂದ ಆಪ್ತರಿಗೆ ಪ್ರತ್ಯೇಕವಾಗಿ ಭೋಜನ ಕೂಟ ಬೆಳಗಾವಿ : ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್‌ ಆಯಿತು, ಈಗ ಡಿನ್ನರ್‌ ಪಾಲಿಟಿಕ್ಸ್‌ ಸರದಿ. ಎಷ್ಟೇ ತೇಪೆ ಹಾಕಿದರೂ ಕಾಂಗ್ರೆಸ್‌ನ ಕುರ್ಚಿ ಕಿತ್ತಾಟ ಶಮನವಾಗುತ್ತಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದ ಮಧ್ಯೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ ಶೀತಲ ಸಮರವೂ ಜೋರಾಗಿದೆ. ಸಿದ್ದರಾಮಯ್ಯ ಆಪ್ತರು ನಡೆಸಿದ ಡಿನ್ನರ್ ಸಭೆಯ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಗುರುವಾರ ರಾತ್ರಿ ಆಪ್ತರಿಗಾಗಿ ವಿಶೇಷ ಡಿನ್ನರ್ ಮೀಟಿಂಗ್ ಆಯೋಜಿಸಿದ್ದಾರೆ. ಬೆಳಗಾವಿ ಹೊರವಲಯದಲ್ಲಿರುವ

ಬೆಳಗಾವಿಯಲ್ಲೂ ಮುಂದುವರಿದ ಕುರ್ಚಿ ಕಿತ್ತಾಟ : ಆಪ್ತರಿಗೆ ಡಿನ್ನರ್‌ ಮೀಟಿಂಗ್‌ Read More »

error: Content is protected !!
Scroll to Top