ರಾಜ್ಯ

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ

ಡಿವೈಡರ್‌ಗೆ ಡಿಕ್ಕಿಯಾದ ಕಾರಿಗೆ ಬೆಂಕಿ ಹತ್ತಿಕೊಂಡು ದುರಂತ ಬೆಂಗಳೂರು : ಧಾರವಾಡದಲ್ಲಿ ಶುಕ್ರವಾರ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ ಭೀಕರ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಒಬ್ಬರು ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್​​​ ಪಂಚಾಕ್ಷರಿ ಸಾಲಿಮಠ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸಾಲಿಮಠ ಅವರು ಇಂದು ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ […]

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ Read More »

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ

ಹಗರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇರುವ ಅನುಮಾನ ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ನೋಟಿಸ್​ ಜಾರಿ ಮಾಡಿ ಡಿಸೆಂಬರ್ 19ರೊಳಗೆ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇದೆ ಎಂದು ದೆಹಲಿ ಪೊಲೀಸರು ನಂಬಿದ್ದಾರೆ.

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ Read More »

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌

ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಘೋಷಣೆ ಕೂಗಿದ್ದಕ್ಕೆ ನೋಟಿಸ್‌ ನೀಡಿದ ಕಾಂಗ್ರೆಸ್‌ ಮಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಕಾಂಗ್ರೆಸ್‌ನ ಕುರ್ಚಿ ಕದನ ಶಾಂತವಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಬುಧವಾರ ನಡೆದ ಘಟನೆ ಅದಿನ್ನೂ ಬೂದಿಮುಚ್ಚಿದ ಕೆಂಡ ಎನ್ನುವುದನ್ನು ಬಹಿರಘಪಡಿಸಿದೆ. ಕೊಣಾಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮುಂದೆ ಡಿಕೆ ಡಿಕೆ… ಎಂದು ಘೋಷಣೆ ಕೂಗಿದ ವಿಚಾರ ಈಗ ಹೈಕಮಾಂಡ್‌ನ ಉರಿಗಣ್ಣಿಗೆ ಗುರಿಯಾಗಿದೆ. ಆ ಪ್ರಸಂಗದ ರೂವಾರಿ

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌ Read More »

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ದೂರು

50 ಲ.ರೂ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಭೋಪಾಲ: ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ವರದಕ್ಷಿಣೆ ಕಿರುಕುಳ, ಕೊಲೆ ಯತ್ನ, ಕೌಟುಂಬಿಕ ಹಿಂಸೆ ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಮಿತ್ ಕುಮಾರ್ ಅವರ ಗಮನಕ್ಕೆ ವಿಷಯ ತಲುಪಿದ್ದು, ದಿವ್ಯಾ ತುರ್ತು ಕ್ರಮ ಮತ್ತು ತನ್ನ ನಾಲ್ಕು ವರ್ಷದ ಮಗಳನ್ನು ಸುರಕ್ಷಿತವಾಗಿ ಮರಳಿ

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ದೂರು Read More »

ಬಗೆಹರಿಯದ ಇಂಡಿಗೋ ತಾಂತ್ರಿಕ ಅಡಚಣೆ : 300ಕ್ಕೂ ಅಧಿಕ ವಿಮಾನ ಯಾನ ರದ್ದು

ಮೂರನೇ ದಿನವೂ ಪ್ರಯಾಣಿಕರ ಪರದಾಟ ; ಸಂಸ್ಥೆಯ ಉನ್ನತಾಧಿಕಾರಿಗಳಿಗೆ ಸರ್ಕಾರದ ಬುಲಾವ್‌ ಬೆಂಗಳೂರು : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರಿ ಅಡಚಣೆ ಮೂರನೇ ದಿನವಾದ ಗುರುವಾರವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ

ಬಗೆಹರಿಯದ ಇಂಡಿಗೋ ತಾಂತ್ರಿಕ ಅಡಚಣೆ : 300ಕ್ಕೂ ಅಧಿಕ ವಿಮಾನ ಯಾನ ರದ್ದು Read More »

ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌

11 ಲಕ್ಷ ರೂಪಾಯಿ ಎಗರಿಸಿ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಪೊಲೀಸ್‌ ಸಿಬ್ಬಂದಿ ಬೆಂಗಳೂರು: ಪೊಲೀಸರೇ ಅಪರಾಧ ಕೃತ್ಯಗಳನ್ನು ಎಸಗಿ ಇಲಾಖೆಗೆ ಮಸಿ ಬಳಿಯುತ್ತಿರುವ ಕೃತ್ಯಗಳು ಹೆಚ್ಚುತ್ತಿವೆ. ಈಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ನಾಚೆಕೆಗೇಡಿನ ವಿಚಾರವೆಂದರೆ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಈ ಕಳ್ಳತನ ನಡೆದಿದೆ. ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ.ತುಂಬಿದ್ದ ಬ್ಯಾಗನ್ನು ಹೆಡ್‌ಕಾನ್‌ಸ್ಟೆಬಲ್‌ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ. ಹಣ ಕಳ್ಳತನ ಮಾಡಿ

ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌ Read More »

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ

ಜೈಲಿನಲ್ಲಿರುವ ಉಗ್ರನಿಗೆ ಡಾಕ್ಟರ್‌ ಟೆರರ್‌ಗಳ ಜೊತೆ ಸಂಪರ್ಕದ ಅನುಮಾನ ಬೆಂಗಳೂರು : ದೆಹಲಿ ಕಾರು ಬಾಂಬ್‌ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ್ಕೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನ ಮೂಡಿದೆ. ಈಗಾಗಲೇ ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳು ವಶಪಡಿಸಿಕೊಂಡ ತನಿಖೆ ನಡೆಸುತ್ತಿದೆ. ಇತ್ತೀಚೆಗೆ

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ Read More »

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಣಾಜೆಯ ಸರ್ವಮತ ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಂಗಳೂರು: ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮತ್ತು ಮಕ್ಕಳ ಕಲ್ಯಾಣ ಸಚಿವೆ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಟೀಕೆಗೆ ಗುರಿಯಾದ ಸಿಎಂ-ಡಿಸಿಎಂ ದುಬಾರಿ ಬೆಲೆಯ ಕೈಗಡಿಯಾರ

ಹ್ಯೂಬ್ಲೋಟ್ ಹಗರಣವನ್ನು ನೆನಪಿಸಿ ಕಾಲೆಳೆದ ಬಿಜೆಪಿ ಬೆಂಗಳೂರು : ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಟಿಕೋಳಿ ಸಾರು ಜೊತೆಗೆ ಬಿಸಿಬಿಸಿ ಇಡ್ಲಿಯ ಬ್ರೇಕ್‌ಫಾಸ್ಟ್‌ ಸವಿದ ಬಳಿಕ ವಿವಾದವೊಂದು ಮೆಲ್ಲನೆ ತಲೆ ಎತ್ತಿದೆ. ಈ ವಿವಾದಕ್ಕೆ ಕಾರಣ ಬ್ರೇಕ್‌ಫಾಸ್ಟ್‌ ಅಲ್ಲ ಬದಲಾಗಿ ಸಿಎಂ ಮತ್ತು ಡಿಸಿಎಂ ಕಟ್ಟಿಕೊಂಡಿದ್ದ ದುಬಾರಿ ಬೆಲೆಯ ಕೈಗಡಿಯಾರ ಎನ್ನುವುದೊಂದು ವಿಶೇಷ. ಕೈಗಡಿಯಾರ ಎಂದ ಕೂಡಲೇ ಸಿದ್ದರಾಮಯ್ಯನವರ ಕಳೆದ ಅವಧಿಯಲ್ಲಿ ಭಾರಿ ವಿವಾದಕ್ಕೊಳಗಾಗಿದ್ದ 75 ಲಕ್ಷ ರೂ. ಬೆಲೆಯ ಹ್ಯೂಬ್ಲೋಟ್ ಕೈಗಡಿಯಾರದ ವಿವಾದ

ಟೀಕೆಗೆ ಗುರಿಯಾದ ಸಿಎಂ-ಡಿಸಿಎಂ ದುಬಾರಿ ಬೆಲೆಯ ಕೈಗಡಿಯಾರ Read More »

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ

ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಆಂಧ್ರದ ಉಪಮುಖ್ಯಮಂತ್ರಿ ಉಡುಪಿ: ಡಿಸೆಂಬರ್‌ 7ರಂದು ಶ್ರೀಕೃಷ್ಣಮಠದ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ಜನಪ್ರಿಯ ನಟ ಪವನ್‌ ಕಲ್ಯಾಣ್‌ ಭಾಗವಹಿಸಲಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠದ ಆಯೋಜನೆಯ ಗೀತೋತ್ಸವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪವನ್‌ ಕಲ್ಯಾಣ್‌ ಆಗಮಿಸಲಿದ್ದಾರೆ. ನ.8ರಂದು ಪೇಜಾವರ ಶ್ರೀಗಳಿಂದ ಗೀತೋತ್ಸವ ಉದ್ಘಾಟನೆಗೊಂಡಿತ್ತು. ಲಕ್ಷಕಂಠ ಗೀತಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೀತೋತ್ಸವ ಸಮಾರೋಪದಲ್ಲಿ ಆಂಧ್ರದ ಡಿಸಿಎಂ ಭಾಗಿಯಾಗಲಿದ್ದಾರೆ.

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ Read More »

error: Content is protected !!
Scroll to Top