ರಾಜ್ಯ

ವರನಿಗೆ ಚಾಕು ಇರಿತ ಪ್ರಕರಣ : ವಧುವೇ ಹತ್ಯಾಯತ್ನದ ಸೂತ್ರಧಾರಿ!

ಮದುವೆ ತಪ್ಪಿಸಲು ಪ್ರಿಯತನೊಡನೆ ಸೇರಿ ಮರ್ಡರ್‌ ಪ್ಲಾನ್‌ ಮಾಡಿದ್ದ ಯುವತಿ ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ ಪ್ರಕರಣ ತಿರುವು ಪಡೆದುಕೊಂಡಿದ್ದು, ಅವನನ್ನು ಮದುವೆಯಾಗಬೇಕಾಗಿದ್ದ ವಧುವೇ ಈ ಹತ್ಯಾಯತ್ನದ ಹಿಂದಿನ ಸೂತ್ರಧಾರಿ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ರವೀಶ್‌ ಹೊಸ ಜೀವನಕ್ಕೆ ಕಾಲಿಡುವ ಸಂತೋಷದಲ್ಲಿದ್ದರು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್‌ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ […]

ವರನಿಗೆ ಚಾಕು ಇರಿತ ಪ್ರಕರಣ : ವಧುವೇ ಹತ್ಯಾಯತ್ನದ ಸೂತ್ರಧಾರಿ! Read More »

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಎಸ್‌ಐಟಿ ತನಿಖೆ ಆರಂಭ

ತೆರಿಗೆ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಂಗಳೂರು: ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ತನಿಖೆ ಆರಂಭಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಭಾನುವಾರ ತಿಳಿಸಿದ್ದಾರೆ. ಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ರಾಯ್ ಅವರು ಗುಂಡಿನ ಗಾಯಗಳೊಂದಿಗೆ ಮೃತಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನೆ ನಡೆದ

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಎಸ್‌ಐಟಿ ತನಿಖೆ ಆರಂಭ Read More »

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌?

ಗೋವಾ ಮಾದರಿಯಲ್ಲಿ ರಾಜ್ಯದಲ್ಲೂ ನಿಷೇಧ ಜಾರಿಗೆ ತರಲು ಗಂಭೀರ ಚಿಂತನೆ ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌? Read More »

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ

ಪದೇ ಪದೆ ದಾಳಿ ನಡೆಸುತ್ತಿದ್ದ ಕೇರಳದ ಐಟಿ ಅಧಿಕಾರಿಗಳು ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಹಾಗೂ ಒತ್ತಡವೇ ಕಾರಣ ಎಂದು ಸಹೋದರ ಸಿ.ಜೆ.ಬಾಬು ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ಐಟಿ ಅಧಿಕಾರಿಗಳು ಜ.28ರಿಂದಲೂ ನನ್ನ ತಮ್ಮ ಸಿ.ಜೆ.ರಾಯ್ ಅವರನ್ನು ವಿಚಾರಣೆ ಮಾಡುತ್ತಿದ್ದರು. ಶುಕ್ರವಾರವೂ ಕಚೇರಿಗೆ ಬಂದು ವಿಚಾರಣೆ ಮಾಡಿದ್ದಾರೆ. ಐಟಿ ಇಲಾಖೆಯ ಅಡಿಷನಲ್ ಕಮಿಷನರ್ ಕೃಷ್ಣ ಪ್ರಸಾದ್ ಸಹ ಅಧಿಕಾರಿಗಳ ತಂಡದಲ್ಲಿದ್ದರು ಎಂದು ಹೇಳಿದ್ದಾರೆ. ಈ ಐಟಿ ಅಧಿಕಾರಿಗಳು ಜ.27ರಂದು ನನ್ನ ಮನೆಗೆ

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ Read More »

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌

ಭ್ರಷ್ಟರಿಗೆ ಕೊನೆಗೆ ಆಗುವುದು ಇದೇ ಗತಿ ಎಂದು ಪ್ರತಿಕ್ರಿಯಿಸಿದ ಜನ ಬೆಂಗಳೂರು: ನಾಲ್ಕು ಲಕ್ಷ ರೂ. ಲಂಚ ಪಡೆವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಅಕರಿಗಳ ಬಲೆಗೆ ಬಿದ್ದಿರುವ ಪೊಲೀಸ್ ಇನ್‌ಸ್ಪೆ ಕ್ಟರ್ ಮಾಡಿರುವ ಹೈಡ್ರಾಮಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಈ ವಿಡಿಯೋಗೆ ಜನರಿಂದಲೂ ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನವರು ಭ್ರಷ್ಟರಿಗೆ ಕೊನೆಗೆ ಆಗುವ ಗತಿ ಇದುವೆ ಎಂದು ಬರೆದುಕೊಂಡಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ.

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌ Read More »

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ?

ಉದ್ಯಮ ವಲಯವನ್ನು ಆಘಾತಕ್ಕೆ ತಳ್ಳಿದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷನ ಆತ್ಮಹತ್ಯೆ ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಕೇರಳ ಮೂಲದ ಸಿ.ಜೆ ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಆದಾಯ ಕರ ಇಲಾಖೆ ಅಧಿಅಕರಿಗಳ ದಾಳಿ ನಡೆಯುತ್ತಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉದ್ಯಮ ವಲಯಕ್ಕೆ ತೀವ್ರ ಆಘಾತ ಉಂಟು ಮಾಡಿದೆ. ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿ.ಜೆ ರಾಯ್ ಅವರ

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ? Read More »

ಐಟಿ ದಾಳಿ ಬೆನ್ನಲ್ಲೇ ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು: ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದ, ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಅವರು ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶವವನ್ನು ಅನೇಕಲ್‌ನ ನಾರಾಯಣ ರಾವ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅವರ ಕಂಪನಿಗೆ ಪದೇ ಪದೇ ಐಟಿ ಅಧಿಕಾರಿಗಳು ದಾಳಿ ಮಾಡುತ್ತಿದ್ದು, ಇದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇಂದು ಕೂಡ ಐಟಿ ದಾಳಿ ನಡೆದಿದ್ದು, ಈ ವೇಳೆ

ಐಟಿ ದಾಳಿ ಬೆನ್ನಲ್ಲೇ ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT

ತಿರುವನಂತಪುರಂ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಲೆಯಾಳಂ‌ನ ಹೆಸರಾಂತ ನಟ ಜಯರಾಮ್ ಅವರ ಹೇಳಿಕೆಯನ್ನು ವಿಶೇಷ ತನಿಖಾ ತಂಡ ದಾಖಲಿಸಿಕೊಂಡಿದೆ. ಚೆನ್ನೈ ನಲ್ಲಿರುವ ಜಯರಾಮ್ ನಿವಾಸಕ್ಕೆ ತೆರಳಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿರುವುದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಉಣ್ಣಿಕೃಷ್ಣನ್ ಪೊಟ್ಟಿ ಜೊತೆಗೆ ಜಯರಾಮ್‌ ಅವರ ಸಂಬಂಧ ಏನು ಎಂಬುದನ್ನು SIT ಅಧಿಕಾರಿಗಳು ಪ್ರಶ್ನೆ ಮಾಡಿದ್ದು, ಪೊಟ್ಟಿ ತನ್ನ ಮನೆಯ ಪೂಜಾ ಕಾರ್ಯಕ್ರಮಗಳಿಗೆ ಆಗಾಗ ಬರುತ್ತಿದ್ದರು. ಆದರೆ ಅವರ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ನನಗೆ ಮಾಹಿತಿ ಇಲ್ಲ.

ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT Read More »

ತಿರುಪತಿಯಲ್ಲಿ ನವಜೋಡಿ ಫೋಟೋ ಶೂಟ್: ಭಕ್ತರ ಆಕ್ರೋಶ

ತಿರುಮಲ: ತಿರುಪತಿ ತಿರುಮಲ ಶ್ರೀವಾರಿ ದೇಗುಲದ ಮುಂಭಾಗದಲ್ಲಿ ನವಜೋಡಿಯೊಂದು ನಡೆಸಿರುವ ಫೋಟೋಶೂಟ್‌ಗೆ ಭಕ್ತರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ತಮ್ಮ ಅಸಭ್ಯ ಫೋಟೋಶೂಟ್ ಮೂಲಕ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾಗಿರುವಂತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಕ್ತರ ಕೆಂಗಣ್ಣಿಗೆ ನವ ಜೋಡಿ ಗುರಿಯಾಗಿರುವುದಾಗಿದೆ. ತಮಿಳುನಾಡು‌ ಮೂಲದ ಜೋಡಿ ಮದುವೆಯ ಬಳಿಕ ಶ್ರೀ ವೆಂಕಟೇಶ್ವರನ ದರ್ಶನ ಪಡೆದು, ಆ ಬಳಿಕ ದೇಗುಲದ ಆವರಣದ ಗೊಲ್ಲಮಂಟಪದ ಸಮೀಪ ವಿಶೇಷ ಬೆಳಕಿನಲ್ಲಿ ಪರಸ್ಪರ ಚುಂಬಿಸಿಕೊಂಡಂತೆ ಫೋಟೋ ತೆಗೆಸಿಕೊಂಡಿದ್ದಾರೆ. ಇದು ಭಕ್ತರು ಅತ್ತಿಂದಿತ್ತ ಓಡಾಡುವ ಸಂದರ್ಭದಲ್ಲಿ ಅವರುಗಳ ಕಣ್ಣಿಗೆ

ತಿರುಪತಿಯಲ್ಲಿ ನವಜೋಡಿ ಫೋಟೋ ಶೂಟ್: ಭಕ್ತರ ಆಕ್ರೋಶ Read More »

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ

ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ವರ ಚಾಮರಾಜನಗರ: ಮದುವೆ ಮಂಟಪಕ್ಕೆ ಹೋಗುತ್ತಿರುವಾಗಲೇ ವರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿರುವ ವರ. ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ Read More »

error: Content is protected !!
Scroll to Top