ರಾಜ್ಯ

29ರಿಂದ ಮದ್ಯದಂಗಡಿಗಳು ಬಂದ್‌

ಬೆಲೆ ಏರಿಕೆ, ಲೈಸೆನ್ಸ್‌ ಶುಲ್ಕ ವಿರೋಧಿಸಿ ಮುಷ್ಕರ ಹೂಡಲು ಮದ್ಯ ಮಾರಾಟಗಾರರ ತೀರ್ಮಾನ ಬೆಂಗಳೂರು: ನಿರಂತರ ಬೆಲೆ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಮೇ 29ರಿಂದ ರಾಜ್ಯದಲ್ಲಿ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದರೊಂದಿಗೆ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ […]

29ರಿಂದ ಮದ್ಯದಂಗಡಿಗಳು ಬಂದ್‌ Read More »

ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಸೈಟ್‌ ಕೊಡುಗೆ

ಬೆಂಗಳೂರಿನಲ್ಲಿ ಜಿ ಕೆಟಗರಿ ಸೈಟ್‌ ಕೊಡಲು ಸಂಪುಟ ತೀರ್ಮಾನ ಬೆಂಗಳೂರು: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ದೀಪಾ ಭಾಸ್ತಿ ಅವರು ಇಂಗ್ಲಿಷ್‌ಗೆ ಅನುವಾದಿಸಿದ ಬಾನು ಅವರ ಕನ್ನಡ ಕೃತಿ ‘ಎದೆಯ ಹಣತೆ’ 2025ರ ಬೂಕರ್ ಪ್ರಶಸ್ತಿಯನ್ನು ಗೆದ್ದಿದೆ. ಬಾನು ಮತ್ತು ದೀಪಾ ಇಬ್ಬರನ್ನೂ ಅಭಿನಂದಿಸಲು ಕ್ಯಾಬಿನೆಟ್ ನಿರ್ಣಯ ಅಂಗೀಕರಿಸಿದೆ. ಬಾನು ಮುಷ್ತಾಕ್ ಅವರು ಬಯಸಿದರೆ,

ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಸೈಟ್‌ ಕೊಡುಗೆ Read More »

ಪರಮೇಶ್ವರ್‌ ಸಂಸ್ಥೆಗಳ ಮೇಲಿನ ಇ.ಡಿ. ದಾಳಿಯಲ್ಲಿ ಕಾಂಗ್ರೆಸ್‌ ಕೈವಾಡ : ಜೋಶಿ

ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್‌ನ ಒಂದು ಗುಂಪಿನಿಂದ ದೂರು ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಕಾಲೇಜುಗಳು ಸೇರಿ ವಿವಿಧ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಲು ಕಾಂಗ್ರೆಸ್‌ ನಾಯಕರೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಪರಮೇಶ್ವರ್‌ ಕ್ರಮ ಕೈಗೊಳ್ಳುವಂತೆ ರಾಜ್ಯದ ಕಾಂಗ್ರೆಸ್ ನಾಯಕರ ಗುಂಪೊಂದು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಮಾಹಿತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಡಾ. ಪರಮೇಶ್ವರ್ ಅವರಿಗೆ

ಪರಮೇಶ್ವರ್‌ ಸಂಸ್ಥೆಗಳ ಮೇಲಿನ ಇ.ಡಿ. ದಾಳಿಯಲ್ಲಿ ಕಾಂಗ್ರೆಸ್‌ ಕೈವಾಡ : ಜೋಶಿ Read More »

ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಮೋಡೆಲ್‌ ಆಗಲು ಇದು ಕಾರಣವಂತೆ

ಭಾರಿ ವಿರೋಧ ವ್ಯಕ್ತವಾದ ಬಳಿಕ ಸ್ಪಷ್ಟನೆ ನೀಡಿದ ಸಚಿವ ಬೆಂಗಳೂರು: ರಾಜ್ಯ ಸರ್ಕಾರ ಒಡೆತನದ ಮೈಸೂರು ಸ್ಯಾಂಡಲ್‌ಸೋಪ್‌ಗೆ ಟಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಈ ನಿರ್ಧಾರವನ್ನು ಸಚಿವ ಎಂ.ಬಿ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ನಮ್ಮ ನಾಡಿನ ಹೆಮ್ಮೆಯ ಸೋಪ್ ಬ್ರ್ಯಾಂಡ್ ಮೈಸೂರು ಸ್ಯಾಂಡಲನ್ನು ಜಾಗತಿಕ ಮಟ್ಟದ ಒಂದು ಬ್ರ್ಯಾಂಡ್ ಆಗಿ ಮಾಡುವ ಇಚ್ಛಾಶಕ್ತಿಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ತಮನ್ನಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಮೋಡೆಲ್‌ ಆಗಲು ಇದು ಕಾರಣವಂತೆ Read More »

ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದ ಸರ್ಕಾರ : ಕ್ಯಾ.ಬ್ರಿಜೇಶ್‌ ಚೌಟ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಆಕ್ರೋಶ ಮಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆದೇಶದ ಮೂಲಕ ಸಿದ್ದರಾಮಯ್ಯ ಸರ್ಕಾರ ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದು ಅವರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲು ಹೊರಟಿದೆ ಎಂದಿದ್ದಾರೆ. ದೇಶಾದ್ಯಂತ ಯಶಸ್ವಿ ಮಾದರಿಯಾಗಿ ಹೊರಹೊಮ್ಮಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಕಡಿಮೆ ವೆಚ್ಚದಲ್ಲಿ ಲಕ್ಷಾಂತರ

ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದ ಸರ್ಕಾರ : ಕ್ಯಾ.ಬ್ರಿಜೇಶ್‌ ಚೌಟ Read More »

ಸೂಟ್‌ಕೇಸ್‌ ನಲ್ಲಿ ಯುವತಿಯೋರ್ವಳ ಮೃತದೇಹ ಪತ್ತೆ

ಬೆಂಗಳೂರು: ಯುವತಿಯ ಮೃತದೇಹವನ್ನು ಸೂಟ್‌ಕೇಸ್‌ ನಲ್ಲಿಟ್ಟ ಘಟನೆ ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ನಡೆದಿದ್ದು,  ಈ ಘಟನೆ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್‌ ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಸೂಟ್ ಕೇಸ್ ಹೊರಗೆ ಎಸೆದಿರಬಹುದು ಎಂದು ಅನುಮಾನವನ್ನು ವ್ಯಕ್ತಪಡಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್‌ ಕೇಸ್‌ನಲ್ಲಿ ಶವವನ್ನು ತುಂಬಿಸಿ ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ

ಸೂಟ್‌ಕೇಸ್‌ ನಲ್ಲಿ ಯುವತಿಯೋರ್ವಳ ಮೃತದೇಹ ಪತ್ತೆ Read More »

ದಿವಾಳಿ ಮಾಡೆಲ್‌ ಆಫ್‌ ಕರ್ನಾಟಕ : ಚಾರ್ಜ್‌ಶೀಟ್‌ ಬಿಡುಗಡೆಗೊಳಿಸಿ ಬಿಜೆಪಿ ಟೀಕೆ

ಜನರು ತೆರಿಗೆ ಭಾರ ಹೊತ್ತಿರುವಾಗ ಕಾಂಗ್ರೆಸ್‌ ಸಾಧನಾ ಸಮಾವೇಶ ಎಂದು ಟೀಕೆ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ‘ಕರ್ನಾಟಕದ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ’ ಎಂಬ ಶೀರ್ಷಿಕೆಯಡಿ ಎಂಟು ಪುಟಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ ಪಕ್ಷದ ಕಚೇರಿಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಶಾಸಕರಾದ ಕೆ.ಗೋಪಾಲಯ್ಯ, ಎಸ್‌.ರಘು, ಸಿ.ಕೆ.ರಾಮಮೂರ್ತಿ, ಮುಖಂಡರಾದ ಎಸ್‌.ಹರೀಶ್‌, ಮಾಳವಿಕಾ ಅವಿನಾಶ್‌, ಸಪ್ತಗಿರಿಗೌಡ ಅವರು ಜಂಟಿಯಾಗಿ ಆರೋಪಪಟ್ಟಿ

ದಿವಾಳಿ ಮಾಡೆಲ್‌ ಆಫ್‌ ಕರ್ನಾಟಕ : ಚಾರ್ಜ್‌ಶೀಟ್‌ ಬಿಡುಗಡೆಗೊಳಿಸಿ ಬಿಜೆಪಿ ಟೀಕೆ Read More »

ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ರಾಜ್ಯ ಸರಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಖಂಡನೀಯವಾಗಿದ್ದು, ದಿನೇಶ್ ಗುಂಡೂರಾವ್ ಅವರ ಹೇಳಿಕೆ ದುರದೃಷ್ಟಕರ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಂದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ಜನೌಷಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಪ್ರಭುತ್ವ ಯೋಜನೆಯಾಗಿದ್ದು, ಲಕ್ಷಾಂತರ ಬಡ ಜನರಿಗೆ ಕಡಿಮೆ ಬೆಲೆಯ, ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಒದಗಿಸುತ್ತಿತ್ತು. ಎಷ್ಟೋ

ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು Read More »

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧ ಇದೆ ಎಂಬ ಗುಸುಗುಸು ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್‌ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ Read More »

ಕೆಟ್ಟ ರಸ್ತೆಗಳಿಂದ ಬೆನ್ನು ನೋವು : 50 ಲ.ರೂ. ಪರಿಹಾರ ಕೋರಿ ಪಾಲಿಕೆಗೆ ನೋಟಿಸ್‌

ಮೂಲಸೌಕರ್ಯ ಒದಗಿಸಲು ವಿಫಲವಾಗಿರುವ ಬಿಬಿಎಂಪಿ ಅನಾರೋಗ್ಯಕ್ಕೆ ಹೊಣೆ ಎಂದ ತೆರಿಗೆದಾರ ಬೆಂಗಳೂರು: ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ನಿರಂತರ ದೈಹಿಕ ಯಾತನೆ ಅನುಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ತೆರಿಗೆದಾರರೊಬ್ಬರು 50 ಲಕ್ಷ ರೂ. ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿಯಾಗಿರುವ ದಿವ್ಯಕಿರಣ್ ಎಂಬವರು ಕಳುಹಿಸಿದ ನೋಟಿಸ್‌ನಲ್ಲಿ, ನಾನು ತೆರಿಗೆ ಪಾವತಿಸುವ ನಾಗರಿಕನಾಗಿದ್ದೇನೆ. ಆದರೆ ಬಿಬಿಎಂಪಿ ಮೂಲಸೌಕರ್ಯಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ. ಇದರಿಂದ ನಾನು ದೈಹಿಕ ಮತ್ತು ಮಾನಸಿಕ ಯಾತನೆಯನ್ನು ನಿರಂತರವಾಗಿ ಎದುರಿಸುತ್ತಿದ್ದೇನೆ. ಕೆಟ್ಟ ರಸ್ತೆಯಿಂದ

ಕೆಟ್ಟ ರಸ್ತೆಗಳಿಂದ ಬೆನ್ನು ನೋವು : 50 ಲ.ರೂ. ಪರಿಹಾರ ಕೋರಿ ಪಾಲಿಕೆಗೆ ನೋಟಿಸ್‌ Read More »

error: Content is protected !!
Scroll to Top