ರಾಜ್ಯ

ಎಸ್‌ಐಟಿ ತನಿಖೆಯಿಂದ ಬಯಲಾಯಿತು ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಯ ಅಸಲಿ ಕಾರಣ

ರಿಯಲ್‌ ಎಸ್ಟೇಟ್‌ ಉದ್ಯಮಿಯ ಆತ್ಮಹತ್ಯೆಗೆ ಇದೇ ಕಾರಣವಂತೆ ಬೆಂಗಳೂರು: ಇಡೀ ದೇಶದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಬೆಂಗಳೂರಿನ ಖ್ಯಾತ ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಹಿಂದಿನ ಕಾರಣ ಈಗ ಬಯಲಾಗಿದೆ. ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ ತನಿಖೆ ಬಹುತೇಕ ಮುಕ್ತಾಯವಾಗಿದ್ದು, ಎಸ್‌ಐಟಿ ಅಧಿಕಾರಿಗಳ ಇಲ್ಲಿಯವರೆಗಿನ ತನಿಖೆಯಲ್ಲಿ ರಾಯ್ ಆತ್ಮಹತ್ಯೆ ಹಿಂದಿನ ಕಾರಣಗಳನ್ನು ವಿವರಿಸಿದ್ದಾರೆ. ಒಂದೇ ಕಾರಣದಿಂದ ರಾಯ್ ಅವರು ನೊಂದು ಆತ್ಮಹತ್ಯೆ ಮಾಡಿಕೊಂಡಿಲ್ಲ. ಬದಲಾಗಿ ಬೇರೆ ಬೇರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಇಲ್ಲಿಯವರೆಗಿನ ಎಸ್‌ಐಟಿ ತನಿಖೆಯ ವೇಳೆ ಬಹಿರಂಗವಾಗಿದೆ […]

ಎಸ್‌ಐಟಿ ತನಿಖೆಯಿಂದ ಬಯಲಾಯಿತು ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಯ ಅಸಲಿ ಕಾರಣ Read More »

ಮಾ.11ರಿಂದ ಸರ್ಕಾರಿ ವೈದ್ಯರ ಪ್ರತಿಭಟನೆ : ವೈದ್ಯಕೀಯ ಸೇವೆ ವ್ಯತ್ಯಯವಾಗುವ ಸಾಧ್ಯತೆ

ಆಸ್ಪತ್ರೆಗಳಿಗೆ ಔಷಧ ಸಮರ್ಪಕ ಪೂರೈಕೆ, ನೇಮಕಾತಿ ನಿಯಮ ತಿದ್ದುಪಡಿ ಬೇಡಿಕೆ ಬೆಂಗಳೂರು : ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರ ರೋಗಿಗಳ ಸೇವೆಯನ್ನು (ಒಪಿಡಿ) ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ.ಮೇಟಿ ಮಾಹಿತಿ ನೀಡಿದರು. ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ

ಮಾ.11ರಿಂದ ಸರ್ಕಾರಿ ವೈದ್ಯರ ಪ್ರತಿಭಟನೆ : ವೈದ್ಯಕೀಯ ಸೇವೆ ವ್ಯತ್ಯಯವಾಗುವ ಸಾಧ್ಯತೆ Read More »

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ

ಎದೆಗೆ ಬಿದ್ದ ಏಟಿನಿಂದ ಸಾವನ್ನಪ್ಪಿದ 16ರ ಹರೆಯದ ಬಾಲಕ ಶಿವಮೊಗ್ಗ : ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಭೀಕರವಾಗಿ ಕೊಲೆಯಾದ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗದ ಸೂಳೆಬೈಲು ಬಡಾವಣೆಯ ಸಂಕೇತ್ (16) ಕೊಲೆಯಾದ ವಿದ್ಯಾರ್ಥಿ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ Read More »

ಬೀದಿ ದೀಪದ ಕಂಬ ಬಿದ್ದು ವ್ಯಕ್ತಿ ಸಾವು

ಮಂಗಳೂರು: ಬೀದಿ ದೀಪದ ಕಂಬ ಮುರಿದು ಬಿದ್ದು ಮೀನುಗಾರ ಕಾರ್ಮಿಕ ಮೃತಪಟ್ಟ ಘಟನೆ ಬಂದರು ಧಕ್ಕೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಮುರುಗನ್ (35) ಎಂಬವರೇ ಮೃತ ದುರ್ದೈವಿ. ಅವರು ಧಕ್ಕೆಯಲ್ಲಿ ಮೀನು ತುಂಬಿ ತರುವುದು, ಐಸ್ ಹಾಕುವುದು ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡುತ್ತಿದ್ದರು. ಮುರುಗನ್ ಮೀನು ಹೊತ್ತು ತಂದು ಕುಳಿತಿದ್ದ ವೇಳೆ ಬೀದಿ ದೀಪದ ಕಂಬ ಅವರ ಮೇಲೆ ಮುರಿದು ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗೆ ಅವರು ಮೃತರಾಗಿದ್ದಾರೆ. ಮೃತ ರು

ಬೀದಿ ದೀಪದ ಕಂಬ ಬಿದ್ದು ವ್ಯಕ್ತಿ ಸಾವು Read More »

ಅಂತಾರಾಜ್ಯ ‌ಡ್ರಗ್ಸ್ ಮಾರಾಟಗಾರರ ಬಂಧನ

ಮಂಗಳೂರು: ಅಂತರಾಜ್ಯ ಗಾಂಜಾ ಮಾರಾಟ ಜಾಲವನ್ನು ಬೇಧಿಸಿರುವ ಮಂಗಳೂರು ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 22 ಕೆ.ಜಿ. 250 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಹತ್ತಿರ ಅಕ್ರಮ ಗಾಂಜಾ ಮಾರಾಟ ನಡೆಯುತ್ತಿರುವ ಖಚಿತ ಮಾಹಿತಿಯನ್ವಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿರುವುದಾಗಿದೆ. ಆರೋಪಿಗಷನ್ನು ಕರಣ್ ಬಾಬು ರಾಮ್ ಜಾದವ್, ಸಮೀರ್ ಶಾ, MH ಮಯ್ಯದಿ, ಇಬ್ರಾಹಿಂ ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳ

ಅಂತಾರಾಜ್ಯ ‌ಡ್ರಗ್ಸ್ ಮಾರಾಟಗಾರರ ಬಂಧನ Read More »

ಚಿನ್ನ ಕದ್ದ ಆರೋಪ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಕಾಸರಗೋಡು: ನೆರೆಮನೆಯಿಂದ ಚಿನ್ನ ಕದ್ದ ಆರೋಪ ಹೊತ್ತಿದ್ದ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಾಲತ್ತಡ್ಕದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜಸೀಲಾ(24) ಎಂದು ಗುರುತಿಸಲಾಗಿದೆ. ಜಸೀಲಾ ಸಾವಿಗೂ ಮುನ್ನ ವಿಡಿಯೋ ಒಂದನ್ನು ಮಾಡಿದ್ದು, ಅದರಲ್ಲಿ ತಾನು ಯಾವ ಚಿನ್ನವನ್ನೂ ಕದ್ದಿಲ್ಲ. ನಾನೇನೂ ತಪ್ಪು ಮಾಡಿಲ್ಲ. ನಾನು ಚಿನ್ನ ಕದ್ದಿದ್ದಾಗಿ ಆರೋಪಿಸಿ ಪೊಲೀಸರು ಮನೆಯನ್ನು ಶೋಧಿಸಿದರು. ಇದರಿಂದ ನನ್ನ ಮನೆಯವರು ತೀವ್ರ ನೊಂದಿದ್ದಾರೆ. ನಾನು ಕದ್ದಿದ್ದರೆ ಅಲ್ಲವೇ ಕೊಡುವುದು. ಇಲ್ಲವಾದರೆ ಎಲ್ಲಿಂದ ತಂದು ಕೊಡಲಿ. ನಾನು ಸತ್ತರೆ

ಚಿನ್ನ ಕದ್ದ ಆರೋಪ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ Read More »

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌

ದೂರು ನೀಡಿದ ಎರಡು ತಿಂಗಳ ಬಳಿಕ ಎಫ್‌ಐಆರ್‌ ದಾಖಲು ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌ Read More »

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌

ಕಾಡಾನೆ ದಾಳಿಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠಿ ಚಾರ್ಜ್‌ ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದ ಪ್ರಕರಣ ಸಂಬಂಧ ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಇಂದು (ಫೆ.23) ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಖಾಂಡ್ಯ ಹೋಬಳಿ ಬಂದ್‌ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು ಬೆಳಗ್ಗೆ 8ರಿಂದ ಸಂಜೆ 5ರತನಕ ಬಂದ್‌ಗೆ ಕರೆ ನೀಡಿದ್ದು, ನಾಗರಿಕ ಹಿತ ರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕ-ಮಾಲೀಕರ ಸಂಘ,

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌ Read More »

ಬಾಗಲಕೋಟೆಯಲ್ಲಿ ಫೆ.26ರಂದು ಮತ್ತೆ ಶಿವಾಜಿ ಜಯಂತಿ ಆಚರಣೆ

ಕಲ್ಲು ತೂರಾಟದಿಂದ ಬೂದಿ ಮುಚ್ಚಿದ ಕೆಂಡದಂತಿರುವ ಬಾಗಲಕೋಟೆ ಬಾಗಲಕೋಟೆ: ಶಿವಾಜಿ ಜಯಂತಿಯ ಮೆರವಣಿಗೆಮೇಲೆ ಮಸೀದಿಯಿಂದ ಕಲ್ಲು ಮತ್ತು ಚಪ್ಪಲಿ ತೂರಿದ ಘಟನೆಯ ಬಳಿಕ ಪ್ರಕ್ಷುಬ್ಧಗೊಂಡಿರುವ ಬಾಗಲಕೋಟೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ ನಡೆಸಲು ನಿರ್ಧರಿಸಲಾಗಿದೆ. ಕಲ್ಲು ತೂರಾಟ ನಡೆದಿದ್ದ ಬಾಗಲಕೋಟೆಯ ಕಿಲ್ಲಾ ಓಣಿ ಸಹಜ ಸ್ಥಿತಿಗೆ ಬಂದಿದೆ. ಕೊತ್ತಲೇಶ್ವರ ದೇವಸ್ಥಾನ ಹಾಗೂ ಪಂಕಾ ಮಸೀದಿ ಆವರಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಆರಂಭವಾಗಿದೆ. ಈ ಬೆನ್ನಲ್ಲೇ ಹಿಂದೂ ಸರ್ವ ಸಮಾಜದ ಮುಖಂಡರು ಭಾನುವಾರ ನಡೆಸಿದ ಸಭೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ

ಬಾಗಲಕೋಟೆಯಲ್ಲಿ ಫೆ.26ರಂದು ಮತ್ತೆ ಶಿವಾಜಿ ಜಯಂತಿ ಆಚರಣೆ Read More »

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ

ರೈಲು ಹಳಿಯಲ್ಲಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಬೆಂಗಳೂರು: ಹಾಸನ ನಗರದ ಕರೀಗೌಡ ಕಾಲೋನಿಯಲ್ಲಿ ವೃದ್ಧರಿಬ್ಬರ ಶವ ರೈಲು ಹಳಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ವೃದ್ಧ ಮಹಿಳೆ ಮತ್ತು ಪುರುಷನ ಮೃತದೇಹ ರೈಲು ಹಳಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೇಲೆ ರೈಲು ಹರಿದು ಹೋಗಿದೆ. ಇವರು ವೃದ್ಧ ದಂಪತಿ ಆಗಿರಬೇಕೆಂದು ಶಂಕಿಸಲಾಗಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕತ್ತಲಿನ ವೇಳೆ ಘಟನೆ ನಡೆದಿರಬಹುದೆಂದು ತಿಳಿದುಬಂದಿದೆ. ರೈಲು ಹರಿದ ರಭಸಕ್ಕೆ ದಂಪತಿಯ

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ Read More »

error: Content is protected !!
Scroll to Top