ರಾಜ್ಯ

ಡಾ. ಆರ್.ಪಿ. ಕುರುಂಜಿ ಮತ್ತು ಪದಾಧಿಕಾರಿಗಳಿಂದ ರಾಜಕೀಯದ ಭೀಷ್ಮ ‘ದೇವೇಗೌಡ’ರ ಭೇಟಿ ಮತ್ತು ಸನ್ಮಾನ

ಬೆಂಗಳೂರು: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅವಿರೋಧವಾಗಿ ನಾಲ್ಕನೇ ಬಾರಿಗೆ ಮರು ಆಯ್ಕೆಗೊಂಡ ಡಾ. ರೇಣುಕಾಪ್ರಸಾದ್ ಕೆ. ವಿ. ಮತ್ತು ಇತರ ಪದಾಧಿಕಾರಿಗಳು ಮಾಜಿ ಪ್ರಧಾನಿ ಮಾನ್ಯ ಶ್ರೀ ದೇವೇಗೌಡರನ್ನು ಭೇಟಿ ಮಾಡಿ, ಸನ್ಮಾನಿಸಿ, ಆಶೀರ್ವಾದ ಪಡೆದರು. ನೂತನ ಪದಾಧಿಕಾರಿಗಳುಅಧ್ಯಕ್ಷ: ಎಲ್. ಶ್ರೀನಿವಾಸ್, ಉಪಾಧ್ಯಕ್ಷರು: ಡಾ. ರೇಣುಕಾಪ್ರಸಾದ್ ಕೆ. ವಿ. ಮತ್ತು ಎ. ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ: ಸಿ.ಜಿ. ಗಂಗಾಧರ್, ಸಹಾಯಕ ಕಾರ್ಯದರ್ಶಿ: ಡಾ. ಡಿ.ಕೆ. ರಮೇಶ್ ಮತ್ತು ಖಜಾಂಚಿ: ಕೆ.ವಿ. ಶ್ರೀಧರ್.

ಡಾ. ಆರ್.ಪಿ. ಕುರುಂಜಿ ಮತ್ತು ಪದಾಧಿಕಾರಿಗಳಿಂದ ರಾಜಕೀಯದ ಭೀಷ್ಮ ‘ದೇವೇಗೌಡ’ರ ಭೇಟಿ ಮತ್ತು ಸನ್ಮಾನ Read More »

ಮಕ್ಕಳಿಗೂ ಕಡ್ಡಾಯವಾಗಲಿದೆ ಹೆಲ್ಮೆಟ್‌!

9 ತಿಂಗಳಿನಿಂದ 4 ವರ್ಷದ ವಯೋಮಾನದ ಮಕ್ಕಳು ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಗೊಳಿಸಲು ಚಿಂತನೆ ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರರಾಗಿ ಪ್ರಯಾಣಿಸುವ ಸಂದರ್ಭದಲ್ಲಿ ಗರಿಷ್ಠ ವೇಗದ ಮಿತಿ ನಿಗದಿಪಡಿಸುವ ಹಾಗೂ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಕೇಂದ್ರ ಮೋಟಾರು ವಾಹನ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇತ್ತೀಚೆಗೆ ನಿರ್ದೇಶಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ​​ ಪೊಲೀಸರು ದ್ವಿಚಕ್ರ ವಾಹನ ಸವಾರಿ ಮಾಡುವಾಗ ಮಕ್ಕಳೂ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯ ಮಾಡಲು ಮುಂದಾಗಿದ್ದಾರೆ.

ಮಕ್ಕಳಿಗೂ ಕಡ್ಡಾಯವಾಗಲಿದೆ ಹೆಲ್ಮೆಟ್‌! Read More »

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಪಿಜಿಗೆ ಹೋಗಲು ಹಳಿ ದಾಟುವಾಗ ಡಿಕ್ಕಿಯಾದ ರೈಲು ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್‌ ವ್ಯಾಸಂಗ ಮಾಡ್ತಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು Read More »

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ. ಆರ್. ಪಿ. ಕುರುಂಜಿ ಪುನರಾಯ್ಕೆ.

ಬೆಂಗಳೂರು: ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯಾದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್’ನ ಕಮಿಟಿ ‘ಬಿ’ಯ ಅಧ್ಯಕ್ಷರಾದ ಡಾ ರೇಣುಕಾ ಪ್ರಸಾದ್ ಕುರುಂಜಿಯವರು ಪ್ರತಿಷ್ಠಿತ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ. ಆರ್. ಪಿ. ಕುರುಂಜಿ ಪುನರಾಯ್ಕೆ. Read More »

ಸಿದ್ದರಾಮಯ್ಯ-ಡಿಕೆಶಿ ಕುರ್ಚಿ ಫೈಟ್‌ನಲ್ಲಿ ಅಸಹಾಯಕರಾದ ಖರ್ಗೆ

ನನ್ನಿಂದ ಏನೂ ಆಗುತ್ತಿಲ್ಲ, ಹೇಳಲು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಮತ್ತೊಮ್ಮೆ ದೆಹಲಿಗೆ ಮುಖಮಾಡಿದೆ. ಜಗಳ ಬಗೆಹರಿಸಲು ಬೆಂಗಳೂರಲ್ಲೇ ಠಿಕಾಣಿ ಹೂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಕೂಡ ಹೈಕಮಾಂಡ್‌ನತ್ತ ಕೈ ತೋರಿಸಿದ್ದಾರೆ. ಹೈಕಮಾಂಡ್‌ ಎಂದರೆ ಸೋನಿಯಾ, ರಾಹುಲ್‌ ಮತ್ತು ಪ್ರಿಯಾಂಕ ಗಾಂಧಿ. ಹೀಗಾಗಿ ಅಂತಿಮ ನಿರ್ಧಾರ ದೆಹಲಿಯಲ್ಲಿ ಆಗುವ ಸಾಧ್ಯತೆ ಇದೆ. ಸರ್ಕಾರಕ್ಕೆ

ಸಿದ್ದರಾಮಯ್ಯ-ಡಿಕೆಶಿ ಕುರ್ಚಿ ಫೈಟ್‌ನಲ್ಲಿ ಅಸಹಾಯಕರಾದ ಖರ್ಗೆ Read More »

ಸಾಲ ತೀರಿಸಲು 7.11 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿಗಳು

ಜೂಜಿನ ಚಟದಿಂದ ಮೈತುಂಬ ಸಾಲ ಮಾಡಿಕೊಂಡಿದ್ದ ಪಾತಕಿಗಳು ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ಎಟಿಎಂಗೆ ಹಣ ತುಂಬಲು ಹೋಗುತ್ತಿದ್ದ ವಾಹನ ತಡೆದು ಬೆದರಿಸಿ 7.11 ಕೋಟಿ ದರೋಡೆ ಮಾಡಿದ್ದು ಮೈತುಂಬ ಮಾಡಿಕೊಂಡಿದ್ದ ಸಾಲ ತೀರಿಸಲು ಎಂಬುದಾಗಿ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ದರೋಡೆಕೋರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿಎಂಎಸ್ ಸಂಸ್ಥೆ ಮಾಜಿ ನೌಕರ ಜೇವಿಯರ್ ಎಂಬಾತ ದರೋಡೆಯ ಮಾಸ್ಟರ್‌ಮೈಂಡ್. ಗೋವಿಂದಪುರ ಪೊಲೀಸ್ ಠಾಣಾ ಕಾನ್‌ಸ್ಟೆಬಲ್ ಅಣ್ಣಪ್ಪನಾಯ್ಕ್, ಸಿಎಂಎಸ್ ಸಂಸ್ಥೆ ಸಿಬ್ಬಂದಿ ಗೋಪಿ,

ಸಾಲ ತೀರಿಸಲು 7.11 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿಗಳು Read More »

ಕಾಲ್‌ಸೆಂಟರ್‌ ಉದ್ಯೋಗಿಗಳನ್ನು ಅಪಹರಿಸಿ ಹಣ ಸುಲಿಗೆ : ಹೆಡ್‌ಕಾನ್‌ಸ್ಟೆಬಲ್‌ ಸಹಿತ 8 ಆರೋಪಿಗಳು ಸೆರೆ

ನಾಲ್ಕು ಮಂದಿಯನ್ನು ಅಪಹರಿಸಿ ಲಾಡ್ಜ್‌ನಲ್ಲಿ ಕೂಡಿ ಹಾಕಿ 18 ಲ.ರೂ. ವಸೂಲಿ ಮಾಡಿದ್ದ ಆರೋಪಿಗಳು ಬೆಂಗಳೂರು : ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ ದರೋಡೆ ಕೃತ್ಯದಲ್ಲಿ ಶಾಮೀಲಾಗಿ ಇಡೀ ಪೊಲೀಸ್‌ ಇಲಾಖೆ ತಲೆತಗ್ಗಿಸುವಂತಾದ ಬೆನ್ನಿಗೆ ಇಂಥದ್ದೇ ಮತ್ತೊಂದು ಕೃತ್ಯ ಬೆಂಗಳೂರಿನಲ್ಲಿ ಸಂಭವಿಸಿದೆ. ಕಾಲ್‌ಸೆಂಟರ್ ಉದ್ಯೋಗಿಗಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಪ್ರಕರಣ ಸಂಬಂಧ ಘಟನೆ ನಡೆದು 12 ಗಂಟೆ ಒಳಗೆ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಬಿವುಲ್ಲ ಸೇರಿದಂತೆ 8 ಆರೋಪಿಗಳನ್ನು

ಕಾಲ್‌ಸೆಂಟರ್‌ ಉದ್ಯೋಗಿಗಳನ್ನು ಅಪಹರಿಸಿ ಹಣ ಸುಲಿಗೆ : ಹೆಡ್‌ಕಾನ್‌ಸ್ಟೆಬಲ್‌ ಸಹಿತ 8 ಆರೋಪಿಗಳು ಸೆರೆ Read More »

ಯಕ್ಷಗಾನ ಕಲಾವಿದರಿಗೆ ಅವಮಾನ ಉದ್ದೇಶಪೂರ್ವಕ : ಭರತ್‌ ಶೆಟ್ಟಿ

ಪುರುಷೋತ್ತಮ ಬಿಳಿಮಲೆ ಮೂಲಕ ಕಾಂಗ್ರೆಸ್‌ ಷಡ್ಯಂತ್ರ ಎಂದು ಆರೋಪ ಮಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಯಕ್ಷಗಾನ ಕಲಾವಿದರ ಕುರಿತು ನೀಡಿರುವ ಅವಮಾನಕಾರಿ ಹೇಳಿಕೆ ಉದ್ದೇಶಪೂರ್ವಕ. ಹಿಂದೂ ಸಂಪ್ರದಾಯಯ ಆಚಾರ, ವಿಚಾರಗಳಿಗೆ ಧಕ್ಕೆ ತರುವ ಕೆಲಸ ಕರ್ನಾಟಕದ ಕಾಂಗ್ರೆಸ್ ಸರಕಾರದಿಂದ ನಿರಂತರವಾಗಿ ನಡೆಯುತ್ತಿದೆ. ಕರಾವಳಿ ಭಾಗದಲ್ಲಿ ಯಕ್ಷಗಾನಕ್ಕೆ ಅದರದ್ದೇ ಆದ ಮಹತ್ವವಿದೆ. ಯಕ್ಷಗಾನವನ್ನು ದೈವಿಕ ಕಲೆಯನ್ನಾಗಿ ಆಚರಿಸುವವರು ನಾವುಗಳು. ಯಕ್ಷಗಾನದಲ್ಲಿ ದೇವರ ವೇಷ ಹಾಕಿದ ಕಲಾವಿದರನ್ನು ಕಂಡಾಗ ಕೈಮುಗಿಯುವವರು ನಾವು. ಬಹಳ ಶ್ರದ್ದಾ ,

ಯಕ್ಷಗಾನ ಕಲಾವಿದರಿಗೆ ಅವಮಾನ ಉದ್ದೇಶಪೂರ್ವಕ : ಭರತ್‌ ಶೆಟ್ಟಿ Read More »

ಕ್ಲೈಮ್ಯಾಕ್ಸ್‌ ತಲುಪಿದ ಪವರ್‌ ಶೇರಿಂಗ್‌ ಗುದ್ದಾಟ : ಸಿಎಂ, ಡಿಸಿಎಂ ಬಣಗಳಿಂದ ತಂತ್ರಗಾರಿಕೆ

ಕಾಂಗ್ರೆಸ್‌ನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ಬೆಂಗಳೂರು : ರಾಜ್ಯ ಕಾಂಗ್ರೆಸ್‌ನ ಒಳ ಜಗಳ ಕ್ಲೈಮಾಕ್ಸ್‌ ಹಂತ ತಲುಪಿದ್ದು, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿ ಒಬ್ಬರೊಗೊಬ್ಬರು ತಂತ್ರ-ಪ್ರತಿತಂತ್ರ ಹೆಣೆಯತೊಗಿದ್ದಾರೆ. ಈ ನಾಯಕತ್ವ ಬದಲಾವಣೆ ಜಗಳ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದ್ದು, ಬಗೆಹರಿಸಲು ದಾರಿ ಕಾಣದೆ ಅಸಹಾಯಕವಾಗಿ ಕುಳಿತಿದೆ. ಇಷ್ಟು ದಿನ ತೆರೆಮರೆಯಲ್ಲಿ ನಡೆದಿದ್ದ ಗದ್ದುಗೆ ಗುದ್ದಾಟ ತೀವ್ರಗೊಂಡಿದೆ. ಆಡಳಿತ ಪಕ್ಷದ ಮೂಲಗಳ ಪ್ರಕಾರ ಸಿಎಂ ಆಪ್ತ ಬಳಗ ಸಿದ್ದರಾಮಯ್ಯನವರ ಮುಂದುವರಿಕೆಗೆ ಶಾಸಕರ

ಕ್ಲೈಮ್ಯಾಕ್ಸ್‌ ತಲುಪಿದ ಪವರ್‌ ಶೇರಿಂಗ್‌ ಗುದ್ದಾಟ : ಸಿಎಂ, ಡಿಸಿಎಂ ಬಣಗಳಿಂದ ತಂತ್ರಗಾರಿಕೆ Read More »

ತಂದೆ-ತಾಯಿ ಕಣ್ಣೆದುರೆ 5 ವರ್ಷದ ಬಾಲಕಿಯನ್ನು ಹೊತ್ತೊಯ್ದು ಸಾಯಿಸಿದ ಚಿರತೆ

ಚಿಕ್ಕಮಗಳೂರು : ತಂದೆ-ತಾಯಿಯ ಕಣ್ಣೆದುರೇ ಐದು ವರ್ಷ ಪ್ರಾಯದ ಬಾಲಕಿಯನ್ನು ಚಿರತೆ ಕೊಂಡೊಯ್ದು ಸಾಯಿಸಿದ ದಾರುಣ ಘಟನೆ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಸಂಭವಿಸಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿದ್ದ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ತಂದೆ ತಾಯಿ ಬಂದಿದ್ದಾರೆ. ಅವರ ಎದರುರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ. ಬಳಿಕ ಸ್ಥಳಿಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

ತಂದೆ-ತಾಯಿ ಕಣ್ಣೆದುರೆ 5 ವರ್ಷದ ಬಾಲಕಿಯನ್ನು ಹೊತ್ತೊಯ್ದು ಸಾಯಿಸಿದ ಚಿರತೆ Read More »

error: Content is protected !!
Scroll to Top