ರಾಜ್ಯ

ಜ್ಯೂಸ್ ಬಾಟಲಿ ತುಂಬಿದ್ದ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು

ಸುಳ್ಯ: ಜ್ಯೂಸ್ ಬಾಟಲಿಗಳನ್ನು ತುಂಬಿಕೊಂಡು ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಘಟನೆ ದೇವರಕೊಲ್ಲಿ ಫಾಲ್ಸ್ ಸಮೀಪ ನಡೆದಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಜ್ಯೂಸ್ ಬಾಟಲಿ ತುಂಬಿದ್ದ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು Read More »

ಬೆಂಗಳೂರಿನಲ್ಲಿ 7.11 ಕೋ. ರೂ. ದರೋಡೆ : ಸಿಎಂಎಸ್‌ ವಾಹನ ಸಿಬ್ಬಂದಿ ತೀವ್ರ ವಿಚಾರಣೆ

ಹಾಡಹಗಲೇ ನಗರ ಮಧ್ಯದಲ್ಲಿ ನಡೆದ ದರೋಡೆ ಕೃತ್ಯದಿಂದ ಸರ್ಕಾರಕ್ಕೆಎ ತೀವ್ರ ಮುಜುಗರ ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಹಾಡಹಗಲೇ ನಡೆದ ಸಿನಿಮೀಯ ಶೈಲಿಯ ದರೋಡೆ ಕೃತ್ಯದಲ್ಲಿ ಸಿಎಂಎಸ್‌ ವಾಹನ ಚಾಲಕ ಮತ್ತು ಸಿಬ್ಬಂದಿ ಮೇಲೆಯೇ ಅನುಮಾನ ಮೂಡಿದೆ. ಎಟಿಎಂಗೆ ಹಣ ತುಂಬುವ ಸಿಎಂಎಸ್‌ ವಾಹನವನ್ನು ಅಡ್ಡಗಟ್ಟಿ 7 ಕೋಟಿ 11 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿರುವ ಘಟನೆಯಿಂದ ಬೆಂಗಳೂರು ನಗರ ಬೆಚ್ಚಿಬಿದ್ದಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ಸರ್ಕಾರಕ್ಕೆ ಈ ದರೋಡೆ ಕೃತ್ಯದಿಂದ ಬಹಳ ಮುಜುಗರವಾಗಿದೆ.

ಬೆಂಗಳೂರಿನಲ್ಲಿ 7.11 ಕೋ. ರೂ. ದರೋಡೆ : ಸಿಎಂಎಸ್‌ ವಾಹನ ಸಿಬ್ಬಂದಿ ತೀವ್ರ ವಿಚಾರಣೆ Read More »

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ

ಕಲಾವಿದರ ನೋವನ್ನು ಕಂಡು ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟನೆ ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು. ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶದಿಂದ ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ Read More »

ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು ಎಂದ ಬಿಳಿಮಲೆ ವಿರುದ್ಧ ಆಕ್ರೋಶ

ವಿವಾದಾತ್ಮಕ ಹೇಳಿಕೆಗೆ ಕಲಾವಿದರು, ಯಕ್ಷಗಾನ ಅಭಿಮಾನಿಗಳಿಂದ ವಿರೋಧ ಮಂಗಳೂರು : ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು, ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿತ್ತು ಎಂಬುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ್ ಬಿಳಿಮಲೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಯಕ್ಷಗಾನದ ತವರು ನೆಲವಾದ ಕರಾವಳಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಫೇಸ್‌ಬುಕ್‌, ವಾಟ್ಸಪ್‌, ಇನ್‌ಸ್ಟಾಗ್ರಾಂ ಮುಂತಾದ ಸೋಷಿಯಲ್‌ ಮೀಡಿಯಾಗಳಲ್ಲಿರುವ ಯಕ್ಷಗಾನ ಗ್ರೂಪ್‌ಗಳಲ್ಲಿ ಬಿಳಿಮಲೆ ಹೇಳಿಕೆ ಭಾರಿ ಚರ್ಚೆಗೆ ಗುರಿಯಾಗಿದ್ದು, ಅನೇಕರು ಬಿಳಿಮಲೆ ವಿರುದ್ಧ

ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು ಎಂದ ಬಿಳಿಮಲೆ ವಿರುದ್ಧ ಆಕ್ರೋಶ Read More »

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಇಷ್ಟಕ್ಕೂ ಬೆದರಿಕೆ ಹಾಕಿದ ವ್ಯಕ್ತಿಯ ಬೇಡಿಕೆ ಏನು ಗೊತ್ತೆ? ಬೆಂಗಳೂರು : ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇ-ಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇ-ಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್​ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ. ಇ-ಮೇಲ್‌ನಲ್ಲಿ ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ Read More »

ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ

ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಅವರನ್ನು ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಡಾ.ಬಿ.ಸಿ. ಶ್ರೀನಿವಾಸ್ ನೇತೃತ್ವದ ವೈದ್ಯರ ಚಿಕಿತ್ಸೆ ನೀಡುತ್ತಿದೆ. ಸಿದ್ದರಾಮಯ್ಯ ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕೂಡಲೇ ಆಸ್ಪತ್ರೆಗೆ ದೌಡಾಯಿಸಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ

ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ Read More »

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು

ರಾಜ್ಯದ ಅತಿದೊಡ್ಡ ಸೈಬರ್‌ ವಂಚನೆಗೆ ಬಲಿಪಶುವಾದ ವಿದ್ಯಾವಂತ ಮಹಿಳೆ ಬೆಂಗಳೂರು : ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿವೆ. ಇಂದಿರಾನಗರದ ನಿವಾಸಿ 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಪಾತಕಿಗಳು ಆರು ತಿಂಗಳಿಗೂ ಹೆಚ್ಚು ಕಾಲ ನಿರಂತರ ಡಿಜಿಟಲ್‌ ಅರೆಟ್ಸ್‌ನಲ್ಲಿರಿಸಿ ಹಣ ದೋಚಿ

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು Read More »

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ

ಬ್ಯಾಕ್ಟೀರಿಯ ಇನ್‌ಫೆಕ್ಷನ್‌ನಿಂದ ಸಾಯುತ್ತಿರುವ ಪ್ರಾಣಿಗಳು ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಆ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ ಆಗಿದೆ. ಬ್ಯಾಕ್ಟೀರಿಯಾ ಇನ್‌ಪೆಕ್ಷನ್‌ನಿಂದಲೇ ಕೃಷ್ಣಮೃಗಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್ 13ರಂದು 8, ಶನಿವಾರ ಒಂದೇ ದಿನ 20, ತಡರಾತ್ರಿ ಒಂದು, ನಿನ್ನೆ ಸಂಜೆ ಗಂಡು ಕೃಷ್ಣಮೃಗ ಸಾವನ್ನಪ್ಪಿವೆ. ಆ ಮೂಲಕ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈವರೆಗೆ 30 ಕೃಷ್ಣಮೃಗಗಳ ಸಾವಾಗಿದೆ.

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ Read More »

ಇಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ : ಪೊಲೀಸರ ಬಿಗು ಬಂದೋಬಸ್ತು

ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಪಥಸಂಚಲನ ಕಿತ್ತಾಟ ಬೆಂಗಳೂರು: ಸಾಕಷ್ಟು ಕಾದಾಟಕ್ಕೆ ಸಾಕ್ಷಿಯಾಗಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಆರ್‌ಎಸ್‌ಎಸ್‌ ಪಥಸಂಚಲನ ಇಂದು ಅಪರಾಹ್ನ ನಡೆಯಲಿದೆ. ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ ನೀಡಿದ್ದು, ಇಡೀ ರಾಜ್ಯದ ಚಿತ್ತ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದತ್ತ ನೆಟ್ಟಿದೆ. ಅಭೂತಪೂರ್ವ ಪೊಲೀಸ್‌ ಬಂದೋಬಸ್ತಿನಲ್ಲಿ ಪಥಸಂಚಲನ ನಡೆಯಲಿದೆ. ಕಳೆದೊಂದು ತಿಂಗಳಿಂದ ರಾಷ್ಟ್ರಮಟ್ಟದಲ್ಲಿ ಚಿತ್ತಾಪುರದ ಆರ್‌ಎಸ್‌ಎಸ್‌ ಪಥಸಂಚಲನ ಸುದ್ದಿ ಮಾಡಿತ್ತು. ಬಿಹಾರದಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿಗೆ ಪ್ರಿಯಾಂಕ್‌ ಖರ್ಗೆಯ ಆರ್‌ಎಸ್‌ಎಸ್‌ ವಿರೋಧಿ ಹೇಳಿಕೆಗಳು ಒಂದು ಕಾರಣ ಎಂಬ

ಇಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ : ಪೊಲೀಸರ ಬಿಗು ಬಂದೋಬಸ್ತು Read More »

ವಿದ್ಯಾರ್ಥಿನಿಗೆ ಕಿರುಕುಳ : ಉಪನ್ಯಾಸಕನ ವಿರುದ್ಧ ಎಫ್‌ಐಆರ್‌

ಹೆಚ್ಚು ಮಾರ್ಕ್‌ ಕೊಡುತ್ತೇನೆ ಎಂದು ಕಿರುಕುಳ ನೀಡುತ್ತಿದ್ದ ಇಂಜಿನಿಯರಿಂಗ್‌ ಕಾಲೇಜು ಉಪನ್ಯಾಸಕ ಮೈಸೂರು : ನಗರದ ಪ್ರತಿಷ್ಠಿತ ಇಂಜಿನಿಯರಿಂಗ್​​ ಕಾಲೇಜಿನಲ್ಲಿ ಉಪನ್ಯಾಸಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ಕೇಸ್‌ ದಾಖಲಾಗಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿನಿ ದೂರು ನೀಡಿದ್ದು, ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಉಪನ್ಯಾಸಕ ನೀಡುತ್ತಿದ್ದ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಮಹಿಳಾ ಉಪನ್ಯಾಸಕರ

ವಿದ್ಯಾರ್ಥಿನಿಗೆ ಕಿರುಕುಳ : ಉಪನ್ಯಾಸಕನ ವಿರುದ್ಧ ಎಫ್‌ಐಆರ್‌ Read More »

error: Content is protected !!
Scroll to Top