ರಾಜ್ಯ

ಹಾವು, ನಾಯಿ ಕಡಿತಕ್ಕೆ ಮುಂಗಡ ಹಣ ಕೇಳದೆ ಚಿಕಿತ್ಸೆ : ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ

ಆ್ಯಂಟಿ ರೇಬೀಸ್ ಲಸಿಕೆ, ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಸಂಗ್ರಹ ಕಡ್ಡಾಯ ಬೆಂಗಳೂರು : ಖಾಸಗಿ ಆಸ್ಪತ್ರೆಗಳು ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಸಂಗ್ರಹ ಹೊಂದಿರಬೇಕು. ನಾಯಿ, ಹಾವು ಸೇರಿದಂತೆ ಇತರ ಪ್ರಾಣಿಗಳು ಕಚ್ಚಿದವರಿಗೆ ಉಚಿತ ಪ್ರಾಥಮಿಕ […]

ಹಾವು, ನಾಯಿ ಕಡಿತಕ್ಕೆ ಮುಂಗಡ ಹಣ ಕೇಳದೆ ಚಿಕಿತ್ಸೆ : ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ Read More »

ಮಂಗಳೂರು: ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಮೃತ

ದ.ಕ ಜಿಲ್ಲೆಯಲ್ಲಿ ಒಂದೇ ದಿನ ಎರಡು ಭೀಕರ ಅಪಘಾತ ಮಂಗಳೂರು: ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನೆಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟ ಭೀಕರ ಅಪಘಾತ ಶನಿವಾರ ಸಂಭವಿಸಿದೆ. ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದ್ಗಡೆಯಿಂದ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.ಮುಂಭಾಗದಲ್ಲಿ ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ, ಕಾರು, ಆಟೊ ರಿಕ್ಷಾ ನಿಂತಿತ್ತು.ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ

ಮಂಗಳೂರು: ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಮೃತ Read More »

ಕಾಡಿನಂಚಿನಲ್ಲಿ ಬೀಡುಬಿಟ್ಟಿವೆ 21 ಹುಲಿಗಳು : ಅರಣ್ಯಾಧಿಕಾರಿ ಎಚ್ಚರಿಕೆ

ಹುಲಿ ಸೆರೆಹಿಡಿಯುವ ಕಾರ್ಯಾಚರಣೆ ಚುರುಕು ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬರೋಬರಿ 21 ಹುಲಿಗಳು ಬಂದಿವೆ ಎಂದು ಅರಣ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ ರೈತರು ಬಲಿಯಾದ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಅರಣ್ಯ ಇಲಾಖೆ ಜನರನ್ನು ಕಾಡಿದ್ದ ಹುಲಿಯನ್ನು ಸೆರೆಹಿಡಿದಿತ್ತು. ಜೊತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಈ ನಡುವೆ ಒಂದಲ್ಲ ಎರಡಲ್ಲ ಬರೋಬ್ಬರಿ 21 ಹುಲಿಗಳು ಎಂಟ್ರಿ

ಕಾಡಿನಂಚಿನಲ್ಲಿ ಬೀಡುಬಿಟ್ಟಿವೆ 21 ಹುಲಿಗಳು : ಅರಣ್ಯಾಧಿಕಾರಿ ಎಚ್ಚರಿಕೆ Read More »

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಅನಾರೋಗ್ಯದಿಂದ ನಿಧನರಾದ ಶತಾಯುಷಿ ತಿಮ್ಮಕ್ಕ ಬೆಂಗಳೂರು : ವೃಕ್ಷಮಾತೆ ಎಂದೇ ಕರಿಯಲ್ಪಡುತ್ತಿದ್ದ ಸಾಲುಮರದ ತಿಮ್ಮಕ್ಕ ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ಪ್ರಾಯವಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಹುಲಿಕಲ್​​

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ Read More »

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ

ಹಲ್ಲೆ ಮಾಡಿ ಬಲವಂತದಿಂದ ಹೇಳಿಕೆ ಪಡೆದಿದ್ದಾರೆ ಎಂದು ಆರೋಪ ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ Read More »

ನ.16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ

ಕಾನೂನು ಹೋರಾಟದಲ್ಲಿ ಗೆದ್ದ ಆರ್‌ಎಸ್‌ಎಸ್‌; ಪ್ರಿಯಾಂಕ್‌ ಖರ್ಗೆಗೆ ಮುಖಭಂಗ ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಗೂ ಕೋರ್ಟ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದ್ದು, ಒಟ್ಟು 325 ಜನ ಮಾತ್ರ ಭಾಗಿಯಾಗಬೇಕು ಎಂದು ತಿಳಿಸಿದೆ. ನವೆಂಬರ್​ 7ರಂದು ಇದೇ ವಿಚಾರವಾಗಿ ಕಲಬುರಗಿ ವಿಭಾಗೀಯ ಪೀಠದಲ್ಲಿ ನಡೆದಿದ್ದ ವಿಚಾರಣೆ

ನ.16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ Read More »

ಗೃಹ ಸಚಿವರ ಟೀಕೆ ಆರೋಪ : ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ

ಪ್ರತಿಭಟನೆ ಸಭೆಯಲ್ಲಿ ಡಾ.ಜಿ.ಪರಮೇಶ್ವರ ಅವರನ್ನು ಟೀಕಿಸಿದ್ದಕ್ಕೆ ಬಂಧನ ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯವನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹಸಚಿವ ಡಾ.ಪರಮೇಶ್ವರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ದೂರಿನ

ಗೃಹ ಸಚಿವರ ಟೀಕೆ ಆರೋಪ : ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ Read More »

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ಆಗ್ರಹಿಸಿ ಪತ್ರ ಬರೆದ ಕಾಂಗ್ರೆಸ್‌ ಶಾಸಕ ರಾಜು ಕಾಗೆ

ಬೆಳಗಾವಿ ಅಧಿವೇಶನದಲ್ಲಿ ವಿಚಾರ ಪ್ರಸ್ತಾಪ ಮಾಡಲು ತಯಾರಿ ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ‌ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ಬಗ್ಗೆ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ. ರಾಜು ಕಾಗೆ ಪತ್ರದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆಗಳಿಗೆ ಆಗ್ರಹ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಇವನ್ನು ಈಡೇರಿಸದಿದ್ದರೆ ಸುವರ್ಣ ವಿಧಾನಸೌಧದ ಮೇಲೆ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಎಚ್ಚರಿಕೆ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ಆಗ್ರಹಿಸಿ ಪತ್ರ ಬರೆದ ಕಾಂಗ್ರೆಸ್‌ ಶಾಸಕ ರಾಜು ಕಾಗೆ Read More »

ಪಿ ಟಿ ಸಿ ಎ ಟ್ರೋಫಿ: ಆರ್ ಕ್ಯೂಬ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವಿಟ್ಲ : ಪುತ್ತೂರು ತಾಲೂಕು ಚೆಸ್ ಅಸೋಸಿಯೇಷನ್ (ರಿ) ಮತ್ತು ದ. ಕ. ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ) ಇವರ ಸಹಯೋಗದೊಂದಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆದ PTCA TROPHY , ಓಪನ್ ರಾಪಿಡ್ ಚೆಸ್ ಸ್ಪರ್ಧೆಯಲ್ಲಿ, ಆರ್ ಕ್ಯೂಬ್ ಚೆಸ್ ಅಕಾಡೆಮಿ ವಿಟ್ಲ ಇಲ್ಲಿಯ ವಿದ್ಯಾರ್ಥಿಗಳಾದ ಅಭಿನವ್ ರಾಮ್.ಎಸ್, ಅಮೃತ.ಎಸ್, ಮೋಕ್ಷಿತಾ, ಶೃತಿಕ್ ಇವರು ಪ್ರಶಸ್ತಿ ಪಡೆದಿದ್ದಾರೆ. ಇವರಿಗೆ ರೋಹಿತ್ ಕುಮಾರ್ ಟಿ. ತರಬೇತಿ ನೀಡಿದ್ದಾರೆ. ಆರ್ ಕ್ಯೂಬ್ ಚೆಸ್ ಅಕಾಡೆಮಿಯ

ಪಿ ಟಿ ಸಿ ಎ ಟ್ರೋಫಿ: ಆರ್ ಕ್ಯೂಬ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ Read More »

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿಯ ಇನ್ನೊಂದು ವಿಡಿಯೋ ಬಹಿರಂಗ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಆರೋಪ ಬೆಂಗಳೂರು : ಐಸಿಸ್‌ ಉಗ್ರ ಶಕೀಲ್‌, ವಿಕೃತಕಾಮಿ ಉಮೇಶ್ ರೆಡ್ಡಿಗೆ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಕೈದಿಗಳ ಮೋಜು ಮಸ್ತಿಯ ಮತ್ತೊಂದು ವಿಡಿಯೋ ಹೊರಬಂದಿದೆ. ಕೈದಿಗಳು ಮದ್ಯ ಸೇವಿಸಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿಯ ಇನ್ನೊಂದು ವಿಡಿಯೋ ಬಹಿರಂಗ Read More »

error: Content is protected !!
Scroll to Top