ರಾಜ್ಯ

ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ : ಮೂವರು ಬಾಲಕರು, ಶಾಲೆಯ ವಿರುದ್ಧ ಕೇಸ್‌

13ರ ಹರೆಯದ ಬಾಲಕನ ಮೇಲೆ ಸಹಪಾಠಿಗಳಿಂದ ಬರ್ಬರ ಹಲ್ಲೆ ಮೈಸೂರು : ಮೈಸೂರಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ನಡೆದ ರ‍್ಯಾಗಿಂಗ್ ಕೃತ್ಯಕ್ಕೆ ಸಂಬಂಧಿಸಿ ಪೊಲೀಸರು ಮತ್ತು ರ‍್ಯಾಗಿಂಗ್ ನಡೆಸಿದ ಬಾಲಕರು ಮತ್ತು ಶಾಲೆಯ ಆಡಳಿತ ಮಂಡಳಿ ವಿರುದ್ಧ ಕೇಸ್‌ದಾಖಲಿಸಿಕೊಂಡಿದೆ. ವಿದ್ಯಾರ್ಥಿಯೊಬ್ಬನ ಮೇಲೆ ಕೆಲವು ಹುಡುಗರು ಸೇರಿಕೊಂಡು ಬರ್ಬರವಾಗಿ ರ್‍ಯಾಗಿಂಗ್ ಮಾಡಿದ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಲ್ಲೆಗೊಳಗಾದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆಗೆ ಮುಂದಾಗಿದ್ದಾರೆ. ಮೈಸೂರಿನ […]

ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ : ಮೂವರು ಬಾಲಕರು, ಶಾಲೆಯ ವಿರುದ್ಧ ಕೇಸ್‌ Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜು : ಬಿಜೆಪಿ ಆಕ್ರೋಶ

ಗರಿಷ್ಠ ಭದ್ರತೆ ಇರುವ ನಿರ್ಬಂಧಿತ ಪ್ರದೇಶದಲ್ಲಿ ನಮಾಜು ಮಾಡಲು ಅನುಮತಿ ಕೊಟ್ಟದ್ದು ಯಾರು ಎಂದು ಪ್ರಶ್ನೆ ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ಬಂದಿದ್ದ ಕೆಲವರು ವಿಮಾನ ನಿಲ್ದಾಣದ ಟರ್ಮಿನಲ್ ಒಳಭಾಗದಲ್ಲೇ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಾಮೂಹಿಕ ನಮಾಜ್ ನಡೆಯುತ್ತಿದ್ದರೂ ಸಿಬ್ಬಂದಿ ನೋಡುತ್ತಾ ಮೌನವಾಗಿದ್ದರು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜು : ಬಿಜೆಪಿ ಆಕ್ರೋಶ Read More »

ಡಿಕೆಶಿಗಿಲ್ಲ ಕುರ್ಚಿ : ಬಿಜೆಪಿಯ ಎಐ ವಿಡಿಯೋ ವೈರಲ್‌

ಕಾಂಗ್ರೆಸ್‌ಗೆ ಮುಜುಗರ ತಂದ ವಿಡಿಯೋ ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಕುರ್ಚಿ ಕಿತ್ತಾಟದ ಹಿನ್ನೆಲೆಯಲ್ಲಿ ಬಿಜೆಪಿ ಭಾನುವಾರ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಎಕ್ಸ್‌ನಲ್ಲಿ ಬಿಡುಗಡೆಗೊಳಿಸಿದ ಕೃತಕ ಬುದ್ಧಿಮತ್ತೆ (ಎಐ) ಬಳಸಿ ತಯಾರಿಸಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿ ಕಾಂಗ್ರೆಸ್ಸನ್ನು ಮುಜುಗರಕ್ಕೀಡುಮಾಡಿದೆ. ಡಿ.ಕೆ ಶಿವಕುಮಾರ್ ಅವರಿಗೆ ‘ನೋ ಚೇರ್ ನವೆಂಬರ್’ ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಕರ್ನಾಟಕ ಎಐ ವಿಡಿಯೋವನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ

ಡಿಕೆಶಿಗಿಲ್ಲ ಕುರ್ಚಿ : ಬಿಜೆಪಿಯ ಎಐ ವಿಡಿಯೋ ವೈರಲ್‌ Read More »

ಜಾತಿ ಗಣತಿ : ಇಂದು ಆನ್‌ಲೈನ್‌ ಸಮೀಕ್ಷೆ ಮುಕ್ತಾಯ

6.13 ಕೋಟಿ ಜನರ ಸಮೀಕ್ಷೆ ಪೂರ್ಣ ಬೆಂಗಳೂರು : ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಆನ್‍ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸೋಮವಾರ(ನ.10) ಕೊನೆಯ ದಿನವಾಗಿದೆ. ಇದುವರೆಗೆ 6.13 ಕೋಟಿ ಜನರ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ಪಂಗಡ, ಇತರ ಹಿಂದುಳಿದ ವರ್ಗ ಸೇರಿ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22ರಿಂದ ಆರಂಭಿಸಲಾಗಿತ್ತು. ಅ.31ರವರೆಗೆ ಸಮೀಕ್ಷಾದಾರರನ್ನು ನೇಮಕ ಮಾಡಿ,

ಜಾತಿ ಗಣತಿ : ಇಂದು ಆನ್‌ಲೈನ್‌ ಸಮೀಕ್ಷೆ ಮುಕ್ತಾಯ Read More »

ಕಬ್ಬಿಗೆ 3,300 ರೂ. ನಿಗದಿ ಮಾಡಿರುವ ಸರ್ಕಾರದ ನಿಲುವು ಸಮ್ಮತವಲ್ಲ: ರೈತರಿಂದ ಧರಣಿ

ಬೆಳಗಾವಿ: ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮುಧೋಳ ಭಾಗದ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುವ ಎಚ್ಚರಿಕೆಯನ್ನು ಸರ್ಕಾರಕ್ಕೆ ರವಾನಿಸಿದ್ದಾರೆ. ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಸಾವಿರಾರು ರೈತರು ಸೇರಿ ಸರ್ಕಾರದ ವಿರುದ್ಧ ಧರಣಿ ಮಾಡಿದ್ದಾರೆ. ಸರ್ಕಾರ ನಿಗದಿ ಮಾಡಿರುವ ಬೆಲೆ ತಮಗೆ ಸಾಲುವುದಿಲ್ಲ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ. ಕಬ್ಬು ಟನ್‌ಗೆ 3,500 ರೂ. ಇರಲೇಬೇಕು ಎಂದು ಆಗ್ರಹಿಸಿದ್ದಾರೆ.

ಕಬ್ಬಿಗೆ 3,300 ರೂ. ನಿಗದಿ ಮಾಡಿರುವ ಸರ್ಕಾರದ ನಿಲುವು ಸಮ್ಮತವಲ್ಲ: ರೈತರಿಂದ ಧರಣಿ Read More »

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಮೀಕ್ಷೆ ನಡೆಸಲು ಸಮಿತಿ ರಚನೆ

ಶಿರಾಡಿ ಘಾಟ್​ನಲ್ಲಿ ಹೆದ್ದಾರಿ, ರೈಲ್ವೆ ಮಾರ್ಗ ನಿರ್ಮಾಣ ಸಾಧಕ-ಬಾಧಕ ಅಧ್ಯಯನ ಮಂಗಳೂರು : ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್​​ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್​ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೆ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ. ಶಿರಾಡಿ ಘಾಟ್​​ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಜಂಟಿ ಸಮೀಕ್ಷೆಗೆ ಸಮಿತಿ ರಚಿಸಲು ಕೋರಿ ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವ

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಮೀಕ್ಷೆ ನಡೆಸಲು ಸಮಿತಿ ರಚನೆ Read More »

ಮೈಸೂರಿನಲ್ಲಿ ಹುಲಿ ದಾಳಿಗೆ ಇನ್ನೋರ್ವ ವ್ಯಕ್ತಿ ಬಲಿ

ಹುಲಿ ಭೀತಿಯಿಂದ ಕಂಗೆಟ್ಟು ಹೋದ ಗ್ರಾಮಸ್ಥರು ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ಮತ್ತೊಬ್ಬ ವ್ಯಕ್ತಿಯನ್ನು ಬಲಿತೆಗೆದುಕೊಂಡಿದೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ರೈತ 8 ತಿಂಗಳ ಹಿಂದೆ ಆನೆ ದಾಳಿಗೆ ಒಳಗಾಗಿದ್ದರು ಎನ್ನಲಾಗಿದೆ. ಪದೇಪದೆ ಹುಲಿ ದಾಳಿ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಹೆದರಬೇಕಾದ ಪರಿಸ್ಥಿತಿ

ಮೈಸೂರಿನಲ್ಲಿ ಹುಲಿ ದಾಳಿಗೆ ಇನ್ನೋರ್ವ ವ್ಯಕ್ತಿ ಬಲಿ Read More »

ವಾಕಿಂಗ್‌ ಹೋಗಿ ಕಾಡಿನಲ್ಲಿ ದಾರಿ ತಪ್ಪಿ ನಾಲ್ಕು ದಿನ ಅಲೆದಾಡಿದ ಹಿರಿಯ ವೈದ್ಯ

ಶ್ವಾನ ದಳದ ನೆರವಿನಿಂದ ರಕ್ಷಣೆ ಮಾಡಿದ ಪೊಲೀಸರು ಚಿಕ್ಕಮಗಳೂರು: ವಾಯು ವಿಹಾರಕ್ಕೆಂದು ಕಾಡಿನೊಳಗೆ ಹೋಗಿದ್ದ ಹಿರಿಯ ವೈದ್ಯರೊಬ್ಬರು ದಾರಿತಪ್ಪಿ ವಾಪಸು ಬರಲಾಗದೆ ನಾಲ್ಕು ದಿನ ಕಾಡಿನಲ್ಲೇ ಅಲೆದಾಡಿದ ಘಟನೆಯೊಂದು ಕೊಪ್ಪ ತಾಲೂಕಿನ ಕಾಡಂಚಿನ ಗುಣವಂತೆ ಗ್ರಾಮದ ಬಳಿ ನಡೆದಿದೆ. ಅವರನ್ನು ಕೊನೆಗೆ ಪೊಲೀಸ್‌ ಇಲಾಖೆಯ ಶ್ವಾನ ದಳ ಪತ್ತೆ ಮಾಡಿದೆ. ನವೆಂಬರ್ 2ರಂದು ವಾಯು ವಿಹಾರಕ್ಕೆ ಹೋಗಿದ್ದ ವೈದ್ಯ ವೆಂಕಟೇಗೌಡ (75) ದಾರಿ ತಪ್ಪಿ ಕಾಡು ಸೇರಿದ್ದರು. ಮರೆವಿನ ಕಾಯಿಲೆ ಇದ್ದ ಅವರು ವಾಪಸ್ ಬರಲು ದಾರಿ

ವಾಕಿಂಗ್‌ ಹೋಗಿ ಕಾಡಿನಲ್ಲಿ ದಾರಿ ತಪ್ಪಿ ನಾಲ್ಕು ದಿನ ಅಲೆದಾಡಿದ ಹಿರಿಯ ವೈದ್ಯ Read More »

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ

74 ನಾಪತ್ತೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಿಸಿ ತನಖೆ ನಡೆಸಲು ಆಗ್ರಹ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು, ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ಮನವಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಪಿಐಎಲ್‌ನಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ Read More »

ಆರ್‌ಎಸ್‌ಎಸ್‌ಗೆ ಅಂಕುಶ ಹಾಕಲು ಹೊರಟ ಸರ್ಕಾರಕ್ಕೆ ಮತ್ತೆ ಹಿನ್ನಡೆ

ಸಾರ್ವಜನಿಕ ಸ್ಥಳ ಬಳಕೆ ಅಧಿಸೂಚನೆ ಮೇಲ್ಮನವಿ ಹೈಕೋರ್ಟಿನಲ್ಲಿ ವಜಾ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯನ್ನು ನಿಷೇಧಿಸಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ಇಂದು ಮತ್ತೊಂದು ಹಿನ್ನಡೆಯಾಗಿದೆ. ಆರ್​​ಎಸ್​ಎಸ್‌ಗೆ ಅಂಕುಶ ಹಾಕಲು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿ ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು ಧಾರವಾಡದ ವಿಭಾಗೀಯ ಪೀಠ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​​ಎಸ್​ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ

ಆರ್‌ಎಸ್‌ಎಸ್‌ಗೆ ಅಂಕುಶ ಹಾಕಲು ಹೊರಟ ಸರ್ಕಾರಕ್ಕೆ ಮತ್ತೆ ಹಿನ್ನಡೆ Read More »

error: Content is protected !!
Scroll to Top