ರಾಜ್ಯ

ಬಿಸಿಯೂಟಕ್ಕಾಗಿ ನೂಕುನುಗ್ಗಲು: ಬೆರಳು ಕಳೆದುಕೊಂಡ ಬಾಲಕಿ

ತುಮಕೂರು: ಬಿಸಿಯೂಟ ಸೇವಿಸಲು ಸರತಿ‌ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ನೂಕುನುಗ್ಗಲು ಸಂಭವಿಸಿದ್ದು, ಇದರಿಂದಾಗಿ ಒಂದನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೈ ಬೆರಳುಗಳು ಕಬ್ಬಿಣದ ಬಾಗಿಲಿಗೆ ಸಿಲುಕಿ ತುಂಡಾದ ಘಟನೆ ಗೂಳೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಚಿನ್ಮಯಿದೇವಿ ಎಂಬ ಮಗು ಈ ಘಟನೆಯಲ್ಲಿ ತನ್ನ ಕೈಯ ಎರಡು ಬೆರಳುಗಳನ್ನು ಕಳೆದುಕೊಂಡಿದೆ. ತಳ್ಳಾಟ ನೂಕಾಟದ ನಡುವೆ ತಾನು ಬೀಳುವುದನ್ನು ತಪ್ಪಿಸಿಕೊಳ್ಳುವ ಸಲುವಾಗಿ ಬಾಲಕಿ ಕಬ್ಬಿಣದ ಬಾಗಿಲನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಳೆ. ಈ ವೇಳೆ ಹಿಂದಿದ್ದ ವಿದ್ಯಾರ್ಥಿಗಳು ಬಾಗಿಲನ್ನು ನೂಕಿದ್ದು, […]

ಬಿಸಿಯೂಟಕ್ಕಾಗಿ ನೂಕುನುಗ್ಗಲು: ಬೆರಳು ಕಳೆದುಕೊಂಡ ಬಾಲಕಿ Read More »

ಫೆ. 15: ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನದಲ್ಲಿ ಶಿವರಾತ್ರಿ ಮಹೋತ್ಸವ

ಬೆಂಗಳೂರು: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 15 ರಂದು ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನ, H.A.L. ಮೂರನೇ ಹಂತ, ಹೊಸ ತಿಪ್ಪೆಸಂದ್ರದಲ್ಲಿ ಭಾನುವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನ ವರೆಗೆ 6 ನೇ ಮಹಾಶಿವರಾತ್ರಿ ಮಹೋತ್ಸವ ನಡೆಯಲಿದೆ. ಫೆ. 14 ರಂದು 10.30 ಕ್ಕೆ ಉತ್ಸವ ಸ್ಥಳಕ್ಕೆ ಶಿವಲಿಂಗವನ್ನು ಮೆರವಣಿಗೆ ಮೂಲಕ ತರಲಾಗುತ್ತದೆ. ಫೆ. 15 ರ ಶಿವರಾತ್ರಿಯಂದು ಬೆಳಗ್ಗೆ 8 ಗಂಟೆಗೆ ದೇವತಾ ಪ್ರಾರ್ಥನೆ ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾಸಂಕಲ್ಪ, ಮಹತೋಭಾರ ಶ್ರೀ

ಫೆ. 15: ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನದಲ್ಲಿ ಶಿವರಾತ್ರಿ ಮಹೋತ್ಸವ Read More »

ಕಾರಿನಲ್ಲಿ ಡ್ರಗ್ಸ್ ಮಾರಾಟ: ಐವರು ಆರೋಪಿಗಳ ಬಂಧನ

ಹಾಸನ: ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಶಿವಮೊಗ್ಗ ಮೂಲದ ಫರ್ವೀಜ್, ಸುಹೇಲ್, ಅಬ್ದುಲ್ ಯಾಸಿನ್, ಇಬ್ರತ್ ಖಾನ್ ಮತ್ತು ಹಾಸನದ ಸೈಯದ್ ಯೂಸಫ್ ಎಂದು ಗುರುತಿಸಲಾಗಿದೆ. ಹಾಸನದ ರಾಜ್‌ಕುಮಾರ್ ರಸ್ತೆಯ ಚೆಕ್ ಪೋಸ್ಟ್ ಬಳಿಯಲ್ಲಿ ಸುಮಾರು 2 ಲಕ್ಷ ರೂ. ಮೌಲ್ಯದ 40 ಗ್ರಾಂ ಗಳಷ್ಟು ಎಂಡಿಎಂಎ ಪತ್ತೆಯಾಗಿದೆ. ಪೊಲೀಸರು ಕರು ಮತ್ತು ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ.

ಕಾರಿನಲ್ಲಿ ಡ್ರಗ್ಸ್ ಮಾರಾಟ: ಐವರು ಆರೋಪಿಗಳ ಬಂಧನ Read More »

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ

ಕಚ್ಚಾಟ, ವಿವಾದ, ಸಂಘರ್ಷದ ಸುಳಿಯಲ್ಲೇ ಕಳೆದು ಹೋದ ಸಾವಿರ ದಿನಗಳು ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆಯಲ್ಲಿದೆ. 2023ರಲ್ಲಿ ಗ್ಯಾರಂಟಿ ಬಲದಿಂದ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಸರ್ಕಾರ ಆರಂಭದ ದಿನದಿಂದಲೂ ಸಂಘರ್ಷದಲ್ಲೇ ಕಳೆದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಮೊದಲ ದಿನದಿಂದ ಶುರುವಾದ ಕುರ್ಚಿ ಕಿತ್ತಾಟ ಈಗಲೂ ಮುಂದುವರಿದಿದೆ ಮಾತ್ರವಲ್ಲದೆ ಸಾವಿರ ದಿನ ಪೂರೈಸುವ ಸಂದರ್ಭದಲ್ಲೇ ತಾರಕ್ಕೇರಿರುವುದು ಗಮನಾರ್ಹ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿ ತನ್ನ ಪಾತ್ರವೇ

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ Read More »

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ

ಡಿಎಚ್‌ಒವನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ ಪತ್ರದಿಂದ ಭಾರಿ ವಿವಾದ ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೊಳಗಾಗಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ Read More »

ಹೆತ್ತ ತಾಯಿಗೆ ಚಟ್ಟ ಕಟ್ಟಿದ ಮಗಳು ಈಗ ಪೊಲೀಸರ ಅತಿಥಿ

ತುಮಕೂರು: ಅಳಿಯ ಮತ್ತು ಮಗಳ ಜೊತೆಗೆ ವಾಸವಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರು ಹೃದಯಾಘಾತದಿಂದ ಸಾವನ್ನಪ್ಪಿಲ್ಲ ಬದಲಾಗಿ ಮಗಳೇ ಅವರನ್ನು ಹತ್ಯೆ ಮಾಡಿದ್ದಾಳೆ ಎನ್ನುವ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ಸದ್ಯ ಆರೋಪಿ ಪುತ್ರಿ ಮತ್ತು ಆಕೆಯ ಪತಿ ಕ್ಯಾತಸಂದ್ರ ಪೊಲೀಸರ ವಶದಲ್ಲಿದ್ದಾರೆ. ಬಂಡೇಪಾಳ್ಯ ಸಮೀಪದ ಶ್ರೀನಗರದ ಪುಷ್ಪಲತಾ ಅವರೇ ಮೃತ ದುರ್ದೈವಿ. ಮಗಳು ಸುಚಿತ್ರಾಳೇ ತನ್ನ ಪತಿ ಸುರೇಶ್ ಸಹಾಯದೊಂದಿಗೆ ಹೆತ್ತ ಅಮ್ಮನನ್ನೇ ಕೊಂದ ಪಾಪಿ. ಈ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದು, ಆರೇಪು ಸುಚಿತ್ರಾ ದೊಡ್ಡ ಕಥೆಯೊಂದನ್ನೇ

ಹೆತ್ತ ತಾಯಿಗೆ ಚಟ್ಟ ಕಟ್ಟಿದ ಮಗಳು ಈಗ ಪೊಲೀಸರ ಅತಿಥಿ Read More »

ಫೂಟ್ಪಾತ್ ಮೇಲೆ ಪ್ರಯಾಣಿಸಲು ಯತ್ನಿಸಿದ ದ್ವಿಚಕ್ರ ಸವಾರನನ್ನು ‌ಮತ್ತೆ ರಸ್ತೆಗಿಳಿಸಿದ ಜವಾಬ್ದಾರಿಯುತ ಮಹಿಳೆ

ತಿರುವನಂತಪುರ: ಕೇರಳದ ಕೋಝಿಕ್ಕೋಡ್‌ನಲ್ಲಿ ರೂಲ್ಸ್ ಬ್ರೇಕ್ ಮಾಡಿ ಫೂಟ್ಪಾತ್‌ ಮೇಲೆ ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬರು ಪಾಠ ಕಲಿಸಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಮೆಚ್ಚುಗೆಗೂ ಪಾತ್ರವಾಗಿದೆ. ವ್ಯಕ್ತಿಯೊಬ್ಬ ರೆಡ್ ಸಿಗ್ನಲ್ ತಪ್ಪಿಸಿಕೊಳ್ಳುವ ಆತುರದಲ್ಲಿ ಜನರು ನಡೆದಾಡಲು ಇರುವ ಫೂಟ್ಪಾತ್ ಮೇಲೆ ದ್ವಿಚಕ್ರ ವಾಹನವನ್ನು ಚಲಾಯಿಸಲು ಯತ್ನಿಸಿದ್ದಾನೆ. ಆ ವೇಳೆ ಫೂಟ್ಪಾತ್ ‌ಮೇಲೆ ನಡೆದುಕೊಂಡು ಬರುತ್ತಿದ್ದ ಮಹಿಳೆ ಆತನ ವಾಹನದ ನೋಂದಣಿ ಸಂಖ್ಯೆಯನ್ನು ತಮ್ಮ ಫೋನಿನಲ್ಲಿ ‌ಸೆರೆ ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಆತನನ್ನು

ಫೂಟ್ಪಾತ್ ಮೇಲೆ ಪ್ರಯಾಣಿಸಲು ಯತ್ನಿಸಿದ ದ್ವಿಚಕ್ರ ಸವಾರನನ್ನು ‌ಮತ್ತೆ ರಸ್ತೆಗಿಳಿಸಿದ ಜವಾಬ್ದಾರಿಯುತ ಮಹಿಳೆ Read More »

ಪಿಯುಸಿ ವಿದ್ಯಾರ್ಥಿಗಳ ಜಾಲಿರೈಡ್‌ ಭೀಕರ ಅಪಘಾತಕ್ಕೆ ಕಾರಣ

ಅತಿವೇಗ, ನಿರ್ಲಕ್ಷ್ಯದ ಚಾಲನೆಗೆ ಬೆಳ್ಳಂಬೆಳಗ್ಗೆ 7 ಜೀವಗಳು ಬಲಿ ಬೆಂಗಳೂರು: ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತ ಬೆಂಗಳೂರಿನ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್‌ಯುವಿ 700 ಕಾರಿನಲ್ಲಿ ಬಂದಿದ್ದ ಆರು ವಿದ್ಯಾರ್ಥಿಗಳು ಬೆಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದವರು ಎಂಬುದು ಗೊತ್ತಾಗಿದೆ. ನೂತನ ಹೆದ್ದಾರಿಯಲ್ಲಿ ಲಾಂಗ್ ಡ್ರೈವ್‌ಗೆ ಬಂದಿದ್ದ ವೇಳೆ ಅತಿವೇಗವಾಗಿ

ಪಿಯುಸಿ ವಿದ್ಯಾರ್ಥಿಗಳ ಜಾಲಿರೈಡ್‌ ಭೀಕರ ಅಪಘಾತಕ್ಕೆ ಕಾರಣ Read More »

ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್‌ ಬದಲು ಸ್ಮಾರ್ಟ್‌ ಕಾರ್ಡ್‌

4 ಸಾರಿಗೆ ನಿಗಮಗಳಿಂದ ಸ್ಮಾರ್ಟ್‌ ಕಾರ್ಡ್‌ ವಿತರಿಸಲು ತೀರ್ಮಾನ ಬೆಂಗಳೂರು: ಸಾರಿಗೆ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯಲ್ಲಿ ತುಸು ಮಾರ್ಪಾಡು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಮುಂದೆ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್​​ನಲ್ಲಿ ಕೈಗೊಳ್ಳಲಾಗಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು

ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್‌ ಬದಲು ಸ್ಮಾರ್ಟ್‌ ಕಾರ್ಡ್‌ Read More »

ಮಾ.6ರಂದು ರಾಜ್ಯ ಬಜೆಟ್‌ ಮಂಡನೆ

ದಾಖಲೆ 17ನೇ ಬಾರಿಗೆ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು : 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಹಣಕಾಸು ಸಚಿವವರೂ

ಮಾ.6ರಂದು ರಾಜ್ಯ ಬಜೆಟ್‌ ಮಂಡನೆ Read More »

error: Content is protected !!
Scroll to Top