ರಾಜ್ಯ

ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ

5.54 ಕೋಟಿ ಜನರ ಗಣತಿ ಕಾರ್ಯ ಪೂರ್ಣ ಬೆಂಗಳೂರು : ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ತೆರೆ ಬಿದ್ದಿದೆ. ನ.10ರವರೆಗೂ ಆನ್‌ಲೈನ್ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಈವರೆಗೆ ಶೇ.97.51 (ಜಿಬಿಎ ಹೊರತುಪಡಿಸಿ)ರಷ್ಟು ಸಮೀಕ್ಷೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ. ಜಿಬಿಎ ಹೊರತುಪಡಿಸಿ 1.48 ಕೋಟಿ ಕುಟುಂಬಗಳ ಪೈಕಿ 1.46 ಕೋಟಿ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆದಿದೆ. 5.68 ಕೋಟಿ […]

ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ Read More »

ಧರ್ಮಸ್ಥಳ ವಿಚಾರದಲ್ಲಿ ವ್ಯಕ್ತಿ, ಕುಟುಂಬ, ಸಂಸ್ಥೆಗೆ ಭಾರಿ ಹಾನಿ : ಡಿಕೆಶಿ

ಬಿಜೆಪಿ ಆಂತರಿಕ ಕಲಹವೇ ಕಾರಣ ಎಂದ ಉಪಮುಖ್ಯಮಂತ್ರಿ ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಧರ್ಮಸ್ಥಳ ಪ್ರಕರಣ ವಿಚಾರದಲ್ಲಿ ವ್ಯಕ್ತಿ, ಕುಟುಂಬ ಮತ್ತು ಸಂಸ್ಥೆಗೆ ಎಷ್ಟು ಹಾನಿ ಮಾಡಬೇಕೋ ಅದನ್ನು ಈಗಾಗಲೇ ಮಾಡಲಾಗಿದೆ.

ಧರ್ಮಸ್ಥಳ ವಿಚಾರದಲ್ಲಿ ವ್ಯಕ್ತಿ, ಕುಟುಂಬ, ಸಂಸ್ಥೆಗೆ ಭಾರಿ ಹಾನಿ : ಡಿಕೆಶಿ Read More »

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು ಪಿಎಫ್‌ಐ : ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ನಿಷೇಧಿಸಲ್ಪಟ್ಟಿದ್ದರೂ ಕರಾವಳಿಯಲ್ಲಿ ಈಗಲೂ ಪಿಎಫ್‌ಐ ಗುಪ್ತವಾಗಿ ಸಕ್ರಿಯ ಎಂದು ಮಾಹಿತಿ ಮಂಗಳೂರು: ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ 1ರಂದು ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶಗಳನ್ನು ಎನ್ಐಎ ಉಲ್ಲೇಖಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸದಸ್ಯರ ಕೈವಾಡ

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು ಪಿಎಫ್‌ಐ : ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ Read More »

ಕಾಡಾನೆಯ ದಾಳಿಗೆ ಸಿಲುಕಿ ಇಬ್ಬರು ಸಾವು

ಸೊಪ್ಪು ತರಲು ಹೋದವರ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಸಲಗ ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯ ಮಾರಕ ದಾಳಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ. ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ. ಮೃತಪಟ್ಟ ಇಬ್ಬರು ದುರ್ದೈವಿಗಳು ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ

ಕಾಡಾನೆಯ ದಾಳಿಗೆ ಸಿಲುಕಿ ಇಬ್ಬರು ಸಾವು Read More »

ಇಡೀ ಕುಟುಂಬ ಆತ್ಮಹತ್ಯೆ ಯತ್ನ : ಇಬ್ಬರು ಸಾವು

ಪುರೋಹಿತ ಕುಟುಂಬದ ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ಗ್ರಾಮ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಟುಂಬವೊಂದರ ಎಲ್ಲ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ. ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿರುವುದು ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ದೇವರ ಪೂಜೆ ಮಾಡಿಕೊಂಡು ಇದ್ದ ಕುಟುಂಬದಲ್ಲಿ ಏಕಾಏಕಿ ಅದೇನಾಯಿತೋ ಗೊತ್ತಿಲ್ಲ,

ಇಡೀ ಕುಟುಂಬ ಆತ್ಮಹತ್ಯೆ ಯತ್ನ : ಇಬ್ಬರು ಸಾವು Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ

ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌ ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಕೇಸ್ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ರಿಲೀಫ್​ ನೀಡಿದೆ. ಧರ್ಮಸ್ಥಳದ ಠಾಣೆಯ FIR 39/2025 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಾಲನ್​,

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ Read More »

ದೂರು ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ಮೊರೆಯಿಟ್ಟ ಬುರುಡೆ ಗ್ಯಾಂಗ್‌ : ಇಂದು ಅರ್ಜಿ ವಿಚಾರಣೆ

ತಾವೇ ಹೋರಾಟ ಮಾಡಿ, ದುಂಬಾಲು ಬಿದ್ದು ಮಾಡಿಸಿದ್ದ ತನಿಖೆಯೇ ಬೇಡ ಎನ್ನುತ್ತಿರುವ ಹೋರಾಟಗಾರರು ಬೆಂಗಳೂರು : ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಸಿರುವ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬುರುಡೆ ಗ್ಯಾಂಗ್

ದೂರು ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ಮೊರೆಯಿಟ್ಟ ಬುರುಡೆ ಗ್ಯಾಂಗ್‌ : ಇಂದು ಅರ್ಜಿ ವಿಚಾರಣೆ Read More »

ಬಿಹಾರ ಚುನಾವಣೆಗೆ ರಾಜ್ಯದಿಂದ 300 ಕೋ. ರೂ. ಕಪ್ಪ : ಶ್ರೀರಾಮುಲು ಆರೋಪ

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸಚಿವರಿಂದ ಹಣ ಸಂಗ್ರಹಸಿ ಕೊಟ್ಟಿದ್ದಾರೆಂದು ಆರೋಪ ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಹಣಕಾಸು ಒದಗಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಚಿವರಿಂದ 300 ಕೋಟಿ ರೂ. ಸಂಗ್ರಹಿಸಿದ್ದಾರೆ. ಈ ಹಣ ಸಿದ್ದರಾಮಯ್ಯ ಕುರ್ಚಿಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾಗಿದೆ ಎಂದು ಎಂದು ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ಭೋಜನ ಸಭೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗಿದೆ

ಬಿಹಾರ ಚುನಾವಣೆಗೆ ರಾಜ್ಯದಿಂದ 300 ಕೋ. ರೂ. ಕಪ್ಪ : ಶ್ರೀರಾಮುಲು ಆರೋಪ Read More »

ಬಿಜೆಪಿಯವರ ಅಸೂಯೆಗೆ ಮದ್ದಿಲ್ಲ : ಖಾದರ್‌ ತಿರುಗೇಟು

ಭ್ರಷ್ಟಾಚಾರದ ಬಗ್ಗೆ ದೂರುಗಳಿದ್ದರೆ ಕಚೇರಿಗೆ ಬಂದು ಮಾತನಾಡಿ ಎಂದು ಸವಾಲು ಮಂಗಳೂರು : ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಮಾಜಿ ಸ್ಪೀಕರ್​, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಂಗಳೂರು ಉತ್ತರದ ಶಾಸಕ ಡಾ.ಭರತ್‌ ಶೆಟ್ಟಿ ಅವರಿಗೆ ತಿರುಗೇಟು ನೀಡಿರುವ ವಿಧಾನಸಭೆ ಸ್ಪೀಕರ್​ ಯು.ಟಿ.ಖಾದರ್ ಬಿಜೆಪಿಯವರ ಅಸೂಯೆಗೆ ಮದ್ದಿಲ್ಲ ಎಂದಿದ್ದಾರೆ. ನಿನ್ನೆಯಷ್ಟೇ ಅಮೆರಿಕ ಪ್ರವಾಸದಿಂದ ಹಿಂದಿರುಗಿದ ಖಾದರ್‌ ಮಂಗಳೂರಿನಲ್ಲಿ ಆರೋಪಗಳಿಗೆ ಪ್ರತಿಕ್ರಿಯಿಸಿ, ಭ್ರಷ್ಟಾಚಾರದ ಆರೋಪ ವಿಚಾರ ನನ್ನ ಗಮನಕ್ಕೆ ಬಂದಿದೆ. ಎಲ್ಲ ರೋಗಕ್ಕೆ ಮದ್ದಿದೆ, ಆದರೆ

ಬಿಜೆಪಿಯವರ ಅಸೂಯೆಗೆ ಮದ್ದಿಲ್ಲ : ಖಾದರ್‌ ತಿರುಗೇಟು Read More »

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಭಟ್ ರವರು ದೀಪ ಬೆಳಗುವುದರೊಂದಿಗೆ ಚಾಲನೆ ನೀಡಿದರು. ವಲಯದ 7 ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಜನಜಾಗೃತಿ ವಲಯಾಧ್ಯಕ್ಷ ರಾಜಾರಾಮ ಶೆಟ್ಟಿ, ಸದಸ್ಯರಾದ ಬಾಲಕೃಷ್ಣ ಆಳ್ವ, ತನಿಯಪ್ಪಗೌಡ, ವೇಣು ಗೋಪಾಲ್, ಸುರೇಶ್ ಮುಕ್ಕುಡ

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ Read More »

error: Content is protected !!
Scroll to Top